ಯಕ್ಷಗಾನ ಕಲಾರಂಗದ, ಯಕ್ಷನಿಧಿಯ ವೃತ್ತಿ ಕಲಾವಿದರಿಗೆ ಕಳೆದ ಎರಡು ದಶಕಗಳಿಂದ ಕೆನರಾ ಬಸ್ ಮಾಲಕರ ಸಂಘವು ನೀಡುತ್ತಾ ಬಂದ 50% ರಿಯಾಯತಿಯ ಬಸ್ಪಾಸ್ ಸೌಲಭ್ಯದ ವಿತರಣೆ ಇಂದು (13.12.2024) ಐವೈಸಿ ಸಭಾಭವನದಲ್ಲಿ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಸಂಸ್ಥೆಯ ಉಪಾಧ್ಯಕ್ಷರೂ, ಬಹುಮೇಳಗಳ ಯಜಮಾನರೂ ಆದ ಪಿ. ಕಿಶನ್ ಹೆಗ್ಡೆ, ಉಪಾಧ್ಯಕ್ಷರಾದ ವಿ. ಜಿ. ಶೆಟ್ಟಿಯವರು

ಧರ್ಮಸ್ಥಳ, ಮಂದಾರ್ತಿ ಮೇಳಗಳ ಕಲಾವಿದರುಗಳಾದ ಧರ್ಮಸ್ಥಳ ಚಂದ್ರಶೇಖರ, ಬಿ. ಮಹಾಬಲ ನಾಯ್ಕ್ ಹಾಗೂ ಆನಂದ ಕನ್ನಾರು ಇವರಿಗೆ ಸಾಂಕೇತಿಕವಾಗಿ ವಿತರಿಸಿದರು.
ಕಾರ್ಯದರ್ಶಿ ಮುರಲಿ ಕಡೆಕಾರ್ ಬಸ್ಮಾಲಕರ ಸಂಘದ ಸಹಕಾರವನ್ನು ಸ್ಮರಿಸಿಕೊಂಡು, ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಕಾರ್ಯಕಾರಿ ಸಮಿತಿಯ ಸದಸ್ಯರಾದ ನಾರಾಯಣ ಎಂ. ಹೆಗಡೆ, ವಿಜಯಕುಮಾರ್ ಮುದ್ರಾಡಿ, ಗಣೇಶ್ ಬ್ರಹ್ಮಾವರ ಹಾಗೂ ಕಿಶೋರ್ ಸಿ. ಉದ್ಯಾವರ ಉಪಸ್ಥಿತರಿದ್ದರು.
30 ಮೇಳಗಳ ಸುಮಾರು 600 ಕಲಾವಿದರು ಇದರ ಫಲಾನುಭವಿಗಳಾಗಿದ್ದಾರೆ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

