ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ.

ಉಜಿರೆಯ ಧರ್ಮಸ್ಥಳ ಸಮೀಪ ನೀರಚಿಲುಮೆ ಎಂಬಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೈಕ್ ಸಹಸವಾರರಾಗಿದ್ದ ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಎಸ್ಆರ್ ಟಿಸಿ ಬಸ್ ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿತ್ತು. ಉಜಿರೆಯಿಂದ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಬೈಕ್ ರಭಸವಾಗಿ ಬಸ್ ಗೆ ಢಿಕ್ಕಿ ಹೊಡೆಯಿತು.
ಢಿಕ್ಕಿಯ ರಭಸಕ್ಕೆ ಬೈಕ್ ಅಪ್ಪಚ್ಚಿಯಾಗಿದೆ. ಬಸ್ ನ ಮುಂಭಾಗಕ್ಕೆ ಕೂಡ ಭಾಗಶಃ ಹಾನಿಯಾಗಿದೆ.
ಅಪಘಾತದಲ್ಲಿ ಬೈಕ್ ಸವಾರ ಸನತ್(30) ಎಂಬ ಯುವಕ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಉಜಿರೆಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಸಹಸವಾರನಿಗೂ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

