ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ 7ನೇ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 4ರಂದು ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ವಸಂತ ಗೌಡ ಕಾಯರ್ತಡ್ಕ ಅವರೊಂದಿಗೆ ಮಾತುಕತೆ ನಡೆಯಲಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ. 2020ನೇ ಸೆಪ್ಟೆಂಬರ್ 04 ಶುಕ್ರವಾರ ಸಂಜೆ ಘಂಟೆ 6.30ರಿಂದ 7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ. ಮಾತಿನ ಮಂಟಪ ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ.
