Friday, September 20, 2024
Homeಯಕ್ಷಗಾನಯಕ್ಷತೂಣೀರ ಸಂಪ್ರತಿಷ್ಠಾನದ ವತಿಯಿಂದ ಶ್ರದ್ಧಾಂಜಲಿ ಸಭೆ

ಯಕ್ಷತೂಣೀರ ಸಂಪ್ರತಿಷ್ಠಾನದ ವತಿಯಿಂದ ಶ್ರದ್ಧಾಂಜಲಿ ಸಭೆ


ಇತ್ತೀಚಿಗೆ ಪರಮೈಕ್ಯರಾದ ಹಿರಿಯ ವಿದ್ವಾಂಸರೂ ಯಕ್ಷಗಾನ ಕಲಾವಿದರೂ  ಆದ ಉಡುಪುಮೂಲೆ  ಶ್ರೀ ಗೋಪಾಲಕೃಷ್ಣ ಭಟ್,  ಹಿರಿಯ ಯಕ್ಷಗಾನ ಭಾಗವತರಾದ ತೆಂಕಬಯಲು ತಿರುಮಲೇಶ್ವರ ಶಾಸ್ತ್ರಿ , ಪ್ರಸಿದ್ಧ ಯಕ್ಷಗಾನ ಕಲಾವಿದರಾದ ರಘುರಾಮ ಗೋಳಿಯಡ್ಕ  ಅವರಿಗೆ ಕೋಟೂರು ಯಕ್ಷತೂಣೀರ ಸಂಪ್ರತಿಷ್ಠಾನದ ವತಿಯಿಂದ ನುಡಿನಮನ ಸಮರ್ಪಿಸಿ ಅವರ ದಿವ್ಯಾತ್ಮಕ್ಕೆ ಚಿರ ಶಾಂತಿ ದೊರೆಯುವಂತೆ ಪ್ರಾರ್ಥಿಸಲಾಯಿತು.ಕೋವಿದ್ 19 ರ ಮಾನದಂಡಗಳನ್ನು ಪಾಲಿಸಿಕೊಂಡು ಸಭೆ ಜರಗಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಅಡ್ಕ ಗೋಪಾಲಕೃಷ್ಣ ಭಟ್ಟರ ಮನೆಯಲ್ಲಿ  ಕಾರ್ಯಕ್ರಮ ಜರಗಿತು.  ಅಗಲಿದ  ಚೇತನಗಳಿಗೆ ಶ್ರದ್ಧಾಂಜಲಿ  ಹೇಳುತ್ತಾ ಶ್ರೀ ಅಡ್ಕ ಗೋಪಾಲಕೃಷ್ಣ ಭಟ್ಟರು   ನುಡಿ ನಮನದ  ಮಾತುಗಳನ್ನಾಡಿದರು.   ಮುಳಿಯಾರು ಶ್ರೀ ಸುಬ್ರಹ್ಮಣ್ಯಸ್ವಾಮೀ ಕ್ಷೇತ್ರ ಮೆನೇಜರ್ ಶ್ರೀ  ಸೀತಾರಾಮ ಬಳ್ಳುಳ್ಳಾಯ , ಪ್ರತಿಷ್ಠಾನದ ಗೌರವಾಧ್ಯಕ್ಷ ಗೋವಿಂದ ಬಳ್ಳಮೂಲೆ,    ಪ್ರತಿಷ್ಠಾನದ ಅಧ್ಯಕ್ಷ ಸುಬ್ರಹ್ಮಣ್ಯ ಅಡ್ಕ , ಸಹಕಾರ್ಯದರ್ಶಿ ಡಾ. ಶಿವಕುಮಾರ್ ಅಡ್ಕ ನುಡಿನಮನಗಳನ್ನು ಅರ್ಪಿಸಿದರು.ಕಾರ್ಯದರ್ಶಿ ಮುರಳಿಕೃಷ್ಣ ಸ್ಕಂದ ಸ್ವಾಗತಿಸಿ ಕೋಶಾಧಿಕಾರಿ ಕೃಷ್ಣ ಭಟ್ ಅಡ್ಕ ಧನ್ಯವಾದ ಸಮರ್ಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments