Friday, September 20, 2024
Homeಯಕ್ಷಗಾನಯಕ್ಷಗಾನ ಕಲಾವಿದ ಲಕ್ಷ್ಮಣ ಕಾಂಚನ್ ನಿಧನ

ಯಕ್ಷಗಾನ ಕಲಾವಿದ ಲಕ್ಷ್ಮಣ ಕಾಂಚನ್ ನಿಧನ

ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಲಕ್ಷ್ಮಣ ಕಾಂಚನ್ ಇಂದು(19-10-2020) ನಿಧನ ಹೊಂದಿದರು.ಅವರಿಗೆ 70 ವರ್ಷ ವಯಸ್ಸಾಗಿತ್ತು.ಉಡುಪಿ ಜಿಲ್ಲೆಯ ಮಣೂರಿನವರಾದ ಇವರು ತಮ್ಮ 15ನೇ ವಯಸ್ಸಿಗೆ ಅಮೃತೇಶ್ವರೀ ಮೇಳದಲ್ಲಿ ಕಲಾವಿದರಾಗಿ ಸೇರಿಕೊಂಡು ವೃತ್ತಿ ಬದುಕು ಆರಂಭಿಸಿದರು.

ಸಾಲಿಗ್ರಾಮ, ಕಮಲಶಿಲೆ, ಸೌಕೂರು, ಗೋಳಿಗರಡಿ, ಕಳವಾಡಿ, ಪೆರ್ಡೂರು, ಹಾಲಾಡಿ, ಮಡಾಮಕ್ಕಿ ಬಗ್ವಾಡಿಮೇಗರವಳ್ಳಿ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು.ಒಟ್ಟು ಸುದೀರ್ಘ 51 ವರ್ಷಗಳ ಕಲಾಸೇವೆಗೈದ ಹಿರಿಮೆಗೆ ಪಾತ್ರರು. ಕಳೆದ 25 ವರ್ಷಗಳಿಂದ ಮಳೆಗಾಲದಲ್ಲಿ ಅಮೃತೇಶ್ವರೀ ಪ್ರವಾಸಿ ಯಕ್ಷಗಾನ ಮಂಡಳಿಯ ಖಾಯಂ ಕಲಾವಿದರಾಗಿ ಕರ್ನಾಟಕ ಮತ್ತು ಹೊರಾಜ್ಯಗಳಲ್ಲಿ ಕಲಾಪ್ರದರ್ಶನ ನೀಡಿದ್ದಾರೆ. ಪೌರಾಣಿಕ ಪ್ರಸಂಗಗಳಲ್ಲಿ ಲವ-ಕುಶ, ಜಮದಗ್ನಿ, ಅರ್ಜುನ, ವೀರಮಣಿ, ಜಾಂಬವ, ಕೃಷ್ಣ, ಕಮಲಭೂಪ, ಕೌಂಡ್ಲಿಕ, ಸಾಲ್ವನ ಪಾತ್ರಗಳು ಕಲಾರಸಿಕರ ಮೆಚ್ಚುಗೆಗೆ ಪಾತ್ರವಾಗಿದ್ದವು. ಯಕ್ಷಗಾನ ಕಲಾರಂಗವು ಮೂರು ವರ್ಷಗಳ ಹಿಂದೆ ‘ಯಕ್ಷಗಾನಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು.ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಇವರಿಗೆ ಸಂಸ್ಥೆ ಐದು ತಿಂಗಳ ಹಿಂದೆ 25000/- ನೆರವು ನೀಡಿರುವುದನ್ನು ಸ್ಮರಿಸಿಕೊಂಡ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರರಾವ್‍ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್‍ ಲಕ್ಷ್ಮಣ್‍ ಕಾಂಚನ್‍ರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments