ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಕಳೆದ ಏಳು ವರ್ಷಗಳಿಂದ ನೀಡುತ್ತಾ ಬಂದ ಮೇಲಿನ ಎರಡು ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮ ನವಂಬರ್ 7 ರಂದು ಸಂಜೆ 5.15 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ.

ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀವೇಷಧಾರಿ ಮೂರೂರು ವಿಷ್ಣು ಭಟ್ಟರಿಗೂ, ಅಭಿಮಾನಿ ಬಳಗದ ಗೌರವಾಧ್ಯಕ್ಷರಾಗಿದ್ದ ಟಿ. ವಿ.ರಾವ್ ಪ್ರಶಸ್ತಿಯನ್ನು

ಹವ್ಯಾಸಿ ಹಿಮ್ಮೇಳ ವಾದಕ, ವೇಷಧಾರಿ ಅಜಿತ್ಕುಮಾರ್ ಅಂಬಲಪಾಡಿ ಇವರಿಗೂ ಪ್ರದಾನ ಮಾಡಲಾಗುವುದೆಂದು ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮತ್ತು ಕಾರ್ಯದರ್ಶಿ ಶ್ರೀ ಎಂ. ಗೋಪಿಕೃಷ್ಣ ರಾವ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

