ಯಕ್ಷಗಾನದ ಹಿರಿಯ ವೇಷಧಾರಿ, ಅರ್ಥಧಾರಿ, ಸಂಘಟಕ ಎಂ.ಆರ್.ವಾಸುದೇವ ಸಾಮಗ ಇಂದು (07-11-2020) ಬೆಳಗಿನ ಜಾವ 3.00 ಘಂಟೆಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮೀರಾ ಸಾಮಗ, ಪುತ್ರ ಪ್ರದೀಪ ಸಾಮಗ ಸಹಿತ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಮಲ್ಪೆ ರಾಮದಾಸ ಸಾಮಗ ನಾಗರತ್ನ ದಂಪತಿ ಸುಪುತ್ರರಾಗಿ ಜನಿಸಿದ ಅವರು 19ರ ಹರೆಯದಲ್ಲೆ ಯಕ್ಷಗಾನ ರಂಗ ಪ್ರವೇಶಿಸಿ ಐದು ದಶಕಗಳ ಕಾಲ ಅಮೃತೇಶ್ವರಿ, ಪೆರ್ಡೂರು, ಧರ್ಮಸ್ಥಳ, ಕದ್ರಿ, ಸಾಲಿಗ್ರಾಮ, ಶಿರಸಿ, ಸುರತ್ಕಲ್ ಮೇಳಗಳಲ್ಲಿ ಕಲಾಸೇವೆಗೈದಿದ್ದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ತಾಳಮದ್ದಲೆ, ಅರ್ಥಧಾರಿಯಾಗಿ ಅಪಾರ ಸಿದ್ಧಿ-ಪ್ರಸಿದ್ಧಿ ಪಡೆದಿದ್ದರು.‘ಸಂಯಮಂ’ ಸಂಘಟನೆಯ ಮೂಲಕ ಕರ್ನಾಟಕದಾದ್ಯಂತ ತಾಳಮದ್ದಲೆ ಪರಿಚಯಿಸಿದ್ದರು. ತಾಳಮದ್ದಲೆಗೆ ಅನುಕೂಲವಾಗುವಂತೆ ತಾಳಮದ್ದಲೆಯ 80 ಪ್ರಸಂಗಗಳನ್ನು ಸಂಪಾದಿಸಿದ್ದರು. 30ಕ್ಕೂ ಹೆಚ್ಚು ಪ್ರಸಂಗಗಳಿಗೆ ಅರ್ಥ ಬರೆದು ಅದನ್ನು ಪ್ರಕಟಣೆಗೆ ಸಿದ್ಧಪಡಿಸುತ್ತಿದ್ದರು.
ಎರಡು ವರ್ಷದ ಹಿಂದೆ ಅವರ ಸುಪುತ್ರ ಡಾ.ಪ್ರದೀಪ್ ವಿ.ಸಾಮಗ ಅವರು ಸಪ್ತತಿ ಕಾರ್ಯಕ್ರಮವನ್ನು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ದಿನ ಪೂರ್ತಿ ಕಾರ್ಯಕ್ರಮ ನಡೆಸಿ ಸಾಮಗಾಥೆ ಅಭಿನಂದನಾ ಗ್ರಂಥ ಪ್ರಕಟಿಸಿದ್ದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಕಿಲಾರು ಗೋಪಾಲಕೃಷ್ಣಯ್ಯ ಪ್ರಶಸ್ತಿ, ಉಡುಪಿಯ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ಅವರು ಪ್ರತೀ ವರ್ಷ ‘ಸಂಯಮಂ’ ತಿರುಗಾಟದ ನಂತರ ಒಬ್ಬ ಕಲಾವಿದನನ್ನು ಸಮ್ಮಾನಿಸುವ, ಸಂಘ ಸಂಸ್ಥೆಗಳಿಗೆ ‘ನಿಧಿ’ ಸಮರ್ಪಿಸುವ ಸತ್ಸಂಪ್ರದಾಯ ನಡೆಸಿಕೊಂಡು ಬಂದಿದ್ದರು. ಅವರ ಅಗಲಿಕೆಗೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತ ಪಡಿಸಿದ್ದಾರೆ.