ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ನೀಡುವ ಕಾಳಿಂಗ ನಾವಡ ಪ್ರಶಸ್ತಿ 2020ರ ಕಾರ್ಯಕ್ರಮವು ಕಾಳಿಂಗ ನಾವಡರ ಮೂಲ ಮನೆಯಾದ ಗುಂಡ್ಮಿಯ ಭಾಗವತರ ಮನೆಯಲ್ಲಿ ಈ ದಿನ ಸಂಜೆ ಯಶಸ್ವಿಯಾಗಿ ನಡೆಯಿತು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ಯಕ್ಷಗಾನದ ಹಿರಿಯ ಕಲಾವಿದರಾದ ಹಂದಟ್ಟು ಗೋವಿಂದ ಉರಾಳರು ಈ ಒಂದು ಪ್ರಶಸ್ತಿಗೆ ಭಾಜನರಾದರು. ಈ ಒಂದು ಸಮಾರಂಭದಲ್ಲಿ ಹಿರಿಯ ಪುರೋಹಿತರಾದ ಶ್ರೀ ವೆಂಕಪ್ಪಯ್ಯ ಭಟ್ಟರು, ಕನ್ನಡ ಪ್ರಾಧ್ಯಾಪಕರಾದ ಡಾ.ಶ್ರೀಕಾಂತ್ ಸಿದ್ದಾಪುರ, ಯಕ್ಷಗಾನ ಭಾಗವತರಾದ ಶ್ರೀ ಸುರೇಂದ್ರ ಫಣಿಯೂರ್, ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಕಾರ್ಯದರ್ಶಿಗಳಾದ ಶ್ರೀ ರಾಜಶೇಖರ ಹೆಬ್ಬಾರ್, ಕಾಳಿಂಗ ನಾವಡರ ಸಹೋದರ ಶ್ರೀ ಗಣಪಯ್ಯ ನಾವಡ, ಕಲಾಕದಂಬ ಆರ್ಟ್ ಸೆಂಟರ್ ನ ಅಂಬರೀಷ ಭಟ್ ಹಾಗೂ ಕಲಾಕದಂಬ ಆರ್ಟ್ ಸೆಂಟರ್ ನ ನಿರ್ದೇಶಕರಾದ ಡಾ.ರಾಧಾಕೃಷ್ಣ ಉರಾಳ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಸಭಾ ಕಾರ್ಯಕ್ರಮದ ನಂತರ ಲಂಬೋದರ ಹೆಗ್ಡೆ ಹಾಗೂ ಸುಜಯೀಂದ್ರ ಹಂದೆ ತಂಡದವರು ಯಕ್ಷ ಗಾನ ವೈಭವದ ಮೂಲಕ ಪ್ರೇಕ್ಷಕರ ಮನರಂಜಿಸಿದರು. ಈ ಸಂಪೂರ್ಣ ಕಾರ್ಯಕ್ರಮದ ನಿರ್ವಹಣೆಯನ್ನು ಮುರಳೀಧರ ನಾವಡ ಹಾಗೂ ವಿಶ್ವನಾಥ ಉರಾಳರು ಯಶಸ್ವಿಯಾಗಿ ನಿರ್ವಹಿಸಿದರು.