ಉದ್ಯಾವರ ಮಾಧವ ಆಚಾರ್ಯ ರಂಗ ನಿರ್ದೇಶಕ, ಕಥೆಗಾರ, ಕವಿ, ನಟ, ಪ್ರಸಿದ್ಧ ಗುಡ್ಡೆದ ಭೂತ ಧಾರಾವಾಹಿಯ ನಟ, ಉಡುಪಿಯ ಸಮೂಹ ಸಂಸ್ಥೆಯ ಸಂಸ್ಥಾಪಕ, ನಾಟಕ, ನೃತ್ಯರೂಪಕ ಮೂಲಕ ರಾಜ್ಯಾದ್ಯಂತ ಜನಮನ್ನಣೆ ಗಳಿಸಿದ ಸಾಧಕ.
ನಾಡಿನಾದ್ಯಂತ 50ಕ್ಕೂ ಹೆಚ್ಚು ನಾಟಕ, ನೃತ್ಯರೂಪಕಗಳಿಗೆ ನಿರ್ದೇಶನಗೈದ ಇವರು ರಾಜ್ಯ ರಾಜ್ಯೋತ್ಸವ, ರಂಗ ವಿಶಾರದ ಪ್ರಶಸ್ತಿಗೆ ಭಾಜನರಾಗಿದ್ದರು. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಉಪನ್ಯಾಸಕರಾಗಿದ್ದ ಇವರು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಇಂದು (07-12-2020) ಮಧ್ಯಾಹ್ನ ನಿಧನರಾದರು.ಇವರು ಪತ್ನಿ, ಓರ್ವ ಪುತ್ರ,ಮೂವರು ಪುತ್ರಿಯರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಯಕ್ಷಗಾನ ಕಲಾರಂಗದ ಸದಸ್ಯರಾಗಿದ್ದ ಇವರು ಯಕ್ಷಗಾನ ವೃತ್ತಿಕಲಾವಿದರಿಗಾಗಿ ಆರಂಭಗೊಂಡ ‘ಪ್ರೊ. ಬಿ. ವಿ. ಆಚಾರ್ಯ ಯಕ್ಷನಿಧಿ’ಯ ಆರಂಭ ಕಾಲದಲ್ಲಿ ವಿಶೇಷವಾಗಿ ಕಾರ್ಯನಿರ್ವಹಿಸಿದ್ದರು. 2004ರಲ್ಲಿ ಇವರ ನೇತೃತ್ವದಲ್ಲಿ ಯಕ್ಷಗಾನ ಕಲಾರಂಗದ ತಂಡ ಅಮೇರಿಕಾದಲ್ಲಿ ಜರುಗಿದ‘ಅಕ್ಕ ಸಮ್ಮೇಳನ’ದಲ್ಲಿ ಭಾಗವಹಿಸಿ ಅಮೇರಿಕದಾದ್ಯಂತ 11 ಕಡೆಗಳಲ್ಲಿ ಪ್ರದರ್ಶನ ನೀಡಿತ್ತು.

ಆಚಾರ್ಯರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

