63 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಅಂಬಲಪಾಡಿಯ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯು ನಿರ್ಮಿಸುತ್ತಿರುವ ನೂತನ ರಂಗಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೆಂದ್ರ ಹೆಗ್ಗೆಡೆಯವರು ಪ್ರಸಾದ ರೂಪವಾಗಿ 5 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿ ಹರಸಿದ್ದಾರೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕರಾದ ಶ್ರೀ ಬಿ. ಗಣೇಶ್ರವರು ಮಂಡಳಿಯ ಅಧ್ಯಕ್ಷ ಮುರಲಿ ಕಡೆಕಾರ್ ಅವರಿಗೆ ಡಿ.ಡಿ.ಯನ್ನು ದಿನಾಂಕ 06-01-2021ರಂದು ಹಸ್ತಾಂತರಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಈ ಸಮಯದಲ್ಲಿ ಗ್ರಾಮಾಭಿವೃದ್ಧಿಯೋಜನೆಯ ಅಂಬಲಪಾಡಿ ಒಕ್ಕೂಟದ ಅಧ್ಯಕ್ಷ ಪ್ರಕಾಶ್ ಆಚಾರ್, ಮೇಲ್ವಿಚಾರಕರಾದ ಜಯಕರ್, ಸಹಾಯಕಿ ಗೀತಾ ಪಾಲನ್, ಪಂಚಾಯತ್ ಸದಸ್ಯರಾದ ಹರೀಶ ಪಾಲನ್, ಯುವಕ ಮಂಡಲದ ಗೌರವ ಅಧ್ಯಕ್ಷ ಕೀರ್ತಿ ಶೆಟ್ಟಿ, ಅಂಬಲಪಾಡಿ ಲಕ್ಷ್ಮೀಜನಾರ್ದನ ಯಕ್ಷಗಾನ ಮಂಡಳಿಯ ನಾರಾಯಣ ಎಮ್. ಹೆಗಡೆ, ಕೆ. ಜೆ. ಗಣೇಶ, ಕೆ. ಅಜಿತ್ಕುಮಾರ್, ನಟರಾಜ ಉಪಾಧ್ಯ, ಪ್ರವೀಣ ಉಪಾಧ್ಯ, ಜಯ ಕೆ., ಪ್ರಣಿತ್ ಉಪಸ್ಥಿತರಿದ್ದರು. ಮಂಡಳಿ ಅಧ್ಯಕ್ಷ ಮುರಲಿ ಕಡೆಕಾರ್ ಸ್ವಾಗತಿಸಿ, ಕಾರ್ಯದರ್ಶಿ ಕೆ.ಜೆ. ಕೃಷ್ಣ ಧನ್ಯವಾದ ಸಮರ್ಪಿಸಿದರು.
