ಬಡಗುತಿಟ್ಟಿನ ಪ್ರಸಿದ್ಧ ಕಲಾವಿದ ಸುಬ್ರಾಯ ಭಟ್ ಗುಂಡಿಬೈಲ್ ನಿನ್ನೆ(08-01-2021) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.ಅವರಿಗೆ 71 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು
ಗುಂಡುಬಾಳ, ಇಡಗುಂಜಿ, ಕೊಳಗಿಬೀಸ್, ಅಮೃತೇಶ್ವರೀ, ಸಾಲಿಗ್ರಾಮ, ಬಚ್ಚಗಾರು ಮತ್ತು ಶಿರಸಿ ಮೇಳಗಳಲ್ಲಿ ಐದು ದಶಕಗಳ ಕಾಲ ಕಲಾಸೇವೆಗೈದಿದ್ದರು. ಬಬ್ರುವಾಹನ, ಅತಿಕಾಯ, ಇಂದ್ರಜಿತು, ಸುಗ್ರೀವ ಹೀಗೆ ಅನೇಕ ಪೌರಾಣಿಕ ಪಾತ್ರಗಳನ್ನು ರಂಗದಲ್ಲಿ ಮೆರೆಸಿದ್ದರು.ಯಕ್ಷಗಾನ ಗುರುಗಳಾಗಿ, ಪ್ರಸಂಗಕರ್ತರಾಗಿ, ಅರ್ಥಧಾರಿಯಾಗಿಯೂ ಈ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು
ಅನೇಕ ಪ್ರಶಸ್ತಿಗಳಿಂದ ಪುರಸ್ಕೃತರಾದ ಇವರಿಗೆ ಉಡುಪಿಯ ಯಕ್ಷಗಾನ ಕಲಾರಂಗ 2016ರಲ್ಲಿ ಶಿರಿಯಾರ ಮಂಜುನಾಥ ನಾಯ್ಕ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಸಸ್ತಿ’ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಮ್.ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.