ಕೋವಿಡ್ ನ ಉಪಟಳದಿಂದ ನಿಂತ ನೀರಾಗಿದ್ದ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಕಲಾವಿದರ ಬದುಕು ಮತ್ತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವ ವಾತಾವರಣ ರೂಪುಗೊಳ್ಳುತ್ತಿರುವುದರ ಮೂಲಕ ನಿಧಾನವಾಗಿ ಚೇತರಿಕೊಳ್ಳುತ್ತಾ ಸಾಗಿದೆ. ಕಲಾಕದಂಬ ಆರ್ಟ್ ಸೆಂಟರ್ ನಿರಂತರ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಸಂಸ್ಥೆ. ಕೋವಿಡ್ ನ ಪ್ರಭಾವ ಕಡಿಮೆಯಾಗುತ್ತಿರುವ ಈ ಸಂಧರ್ಭದಲ್ಲಿ ಮತ್ತೆ ಸಾಂಸ್ಕೃತಿಕ ಲೋಕದತ್ತ ಪಯಣ ಬೆಳೆಸುತ್ತಿದೆ.
ಪ್ರಸಿದ್ದ ಯಕ್ಷಗಾನ, ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದರಾದ ಡಾ. ರಾಧಾಕೃಷ್ಣ ಉರಾಳರ ನಿರ್ದೇಶಕತ್ವದ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ಕೊಮ್ಮಘಟ್ಟದ ಓಂ ಯೋಗಧಾಮ ಟ್ರಸ್ಟ್ ನ ಸಹಯೋಗದೊಂದಿಗೆ ಸಮತ್ವಂ ಯೋಗ ಮತ್ತು ಕಲಾಶಾಲೆಯ ಸಭಾಂಗಣದಲ್ಲಿ ದಿನಾಂಕ 17-01-2021 ರ ಸಂಜೆ 5 ಘಂಟೆಗೆ ನಡೆಯಲಿರುವ ಸಂಕ್ರಾಂತಿ ಕಲೋತ್ಸವದಲ್ಲಿ ಕಲಾಕದಂಬ ಆರ್ಟ್ ಸೆಂಟರ್ ನ ಕಲಾ ವಿದ್ಯಾರ್ಥಿಗಳಿಂದ ದಕ್ಷ ಯಜ್ಞ ಎಂಬ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಲಿದೆ.

ಈ ಒಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಮೋಹಳ್ಳಿಯ ಶ್ರೀ ಸಿದ್ಧಾ ಆರೂಢ ಮಿಷನ್ ಆಶ್ರಮದ ಡಾ.ಶ್ರೀ ಆರೂಢಭಾರತೀ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ನೀಲಮ್ಮ, ಕರಬ ಪ್ರತಿಷ್ಟಾನದ ದೇವರಾಜ ಕರಬ ಹಾಗೂ ಓಂ ಯೋಗಧಾಮ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಮತಿ ಸ್ವಪ್ನ ಪ್ರದೀಪ್ ಆಗಮಿಸಲಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಕಾರ್ಯಕ್ರಮದ ನಿರ್ವಹಣೆಯನ್ನು ಮುರಳೀಧರ ನಾವಡ, ನಿತ್ಯಾನಂದ ನಾಯಕ್ ಹಾಗೂ ವಿಶ್ವನಾಥ ಉರಾಳ ನಿಭಾಯಿಸಲಿದ್ದಾರೆ. ಸರಕಾರದ ಕೋವಿಡ್ ಕುರಿತಾಗಿನ ನಿಯಮಗಳನ್ನು ಪಾಲಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಮೂಲಕ ಕಾರ್ಯಕ್ರಮಗಳನ್ನು ನಡೆಸಲಿದ್ದು ಸೀಮಿತ ಜನರಿಗೆ ಮಾತ್ರ ಪ್ರವೇಶವಿರುತ್ತದೆ.
ಈ ಒಂದು ಯಕ್ಷಗಾನ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿಸುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ- 9886066732, 9448510582

