ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ಕಾರ್ಯ ಪ್ರಗತಿಯಲ್ಲಿದ್ದು ಆಬಗೆಗೆ ಅವಲೋಕನಾ ಸಭೆ ಇತ್ತೀಚೆಗೆ ಸಿರಿಬಾಗಿಲಿನಲ್ಲಿ ಜರಗಿತು. ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅಧ್ಯಕ್ಷತೆ ವಹಿಸಿ ಸಭೆಗೆ ಭವನ ನಿರ್ಮಾಣ ಕಾಮಗಾರಿಯ ಪ್ರಗತಿ ಮಾಹಿತಿ ನೀಡಿದರು. ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಭವ್ಯ ಮಂದಿರ ನಿರ್ಮಾಣ ಕಾರ್ಯದಲ್ಲಿ ಆರ್ಥಿಕವಾಗಿ ನಾಡಿನ ದೇಶವಿದೇಶಗಳ ಯಕ್ಷಗಾನ ಅಭಿಮಾನಿಗಳು ಕಲಾಸೇವಕರು ಕೈ ಜೋಡಿಸಬೇಕು ಎಂದು ವಿನಂತಿಸಿಕೊಂಡರು.
ಸಭೆಯಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ನಿರ್ಮಾಣ ಯೋಜನೆ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಹಿತೈಷಿಗಳಾಗಿರುವ ಲಕ್ಷ್ಮೀನಾರಾಯಣ ಕಾವು ಮಠ, ಯೋಗೀಶ ರಾವ್ ಚಿಗುರುಪಾದೆ, ರಾಜಾರಾಮ ರಾವ್ ಮೀಯಪದವು, ಸತೀಶ ಅಡಪ ಸಂಕಬೈಲು, ಶಿವರಾಮ ಕಾಸರಗೋಡು, ಜಗದೀಶ್ ಕೂಡ್ಲು, ಜಯರಾಮ ಕಾರಂತ ದೇಶಮಂಗಲ, ತಿಮ್ಮಪ್ಪ ಮಜಲು, ವಿಷ್ಣು ಶ್ಯಾನುಭೋಗ್ ಕೂಡ್ಲು, ಚಂದ್ರಶೇಖರ ಹೊಳ್ಳ ಕುದ್ರೆಪ್ಪಾಡಿ, ಜಯರಾಮ ರೈ ಸಿರಿಬಾಗಿಲು, ಸುಮನ್ ರಾಜ್ ನೀಲಂಗಳ, ರಾಧಾಕೃಷ್ಣ ಭಟ್ ಕೊಂಗೊಟ್ಟು, ಸುಮಿತ್ರಾ ಆರ್ ಮಯ್ಯ, ಯಸ್ ಯನ್ ರಾಮ ಶೆಟ್ಟಿ ನಿವೃತ್ತ ಅಧ್ಯಾಪಕ, ಸದಾಶಿವ ಭಟ್ ಎದ್ರುಕಳ, ವೆಂಕಟರಮಣ ಹೊಳ್ಳ ಸಿರಿಬಾಗಿಲು, ಶ್ರೀಮತಿ ಉಮಾ ಭಟ್ ಕೋಂಗೋಟ್ಟು ಮೊದಲಾದ ಗಣ್ಯರು ಭಾಗವಹಿಸಿದ್ದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ