ಬೆಂಗಳೂರಿನ ಹೆಸರಾಂತ ತಂಡವಾದ ಯಕ್ಷಕಲಾ ಅಕಾಡೆಮಿಯು ಇದೀಗ ಯಕ್ಷಗಾನ ಉತ್ಸವವನ್ನು ಹಮ್ಮಿಕೊಂಡಿದೆ. ಇದೇ ತಿಂಗಳ 15 ರ ಸಂಜೆ 6.30 ಕ್ಕೆ ಗುಂಡ್ಮಿ ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ನಡೆಯಲಿದೆ.
ಅಂದು ಮುಖ್ಯ ಅಭ್ಯಾಗತರಾಗಿ, ರಾಷ್ಟ್ರೀಯ, ಅಂತರರಾಷ್ಟ್ರೀಯ ಮನ್ನಣೆ ಗಳಿಸಿದ ನಟ ಗೋಪಾಲಕೃಷ್ಣ ನಾಯರಿ ಹಾಗೂ ವೃತ್ತಿಯಲ್ಲಿ ವೈದ್ಯರಾದರೂ ಕೂಡಾ, ಸಾಹಿತ್ಯದಲ್ಲಿ ಅಭಿರುಚಿಯನ್ನು ಹೊಂದಿ, ಕಲಾಕ್ಷೇತ್ರದಲ್ಲಿ ಸಾಕಷ್ಟು ಪಳಗಿರುವ ಬೆಂಗಳೂರಿನ ಶೇಖರ್ ಹಾಸ್ಪಿಟಲಿನ ಸಂಸ್ಥಾಪಕ ನಿರ್ದೇಶಕರಾಗಿರುವ ಡಾ. ಪಿ.ವಿ.ಐತಾಳರು, ಹಾಗೂ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಸಕ್ರಿಯ ಕಾರ್ಯದರ್ಶಿಯೂ , ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯರೂ ಆದ ಶ್ರೀ ರಾಜಶೇಖರ್ ಹೆಬ್ಬಾರ್ ಅವರು ಪಾಲುಗೊಳ್ಳಲಿದ್ದಾರೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
ತದನಂತರ ತಂಡದ ಕಲಾವಿದರಿಂದ ‘ಭೀಷ್ಮ ಪ್ರತಿಜ್ಞೆ’ ಎನ್ನುವ ಕಥಾನಕವು ಪ್ರದರ್ಶನಗೊಳ್ಳಲಿದೆ ಎಂದು ಯಕ್ಷಗಾನ ಗುರುಗಳಾದ ಶ್ರೀ ಕೃಷ್ಣಮೂರ್ತಿ ತುಂಗರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
