31.01.2021ರ ಆದಿತ್ಯವಾರ ಬೆಳಗ್ಗೆ ೧೦ ಘಂಟೆಗೆ ಸರಿಯಾಗಿ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ನಿರ್ಮಾಣದ ಸಮಾಲೋಚನಾ ಸಭೆ ಮತ್ತು ‘ಶಲ್ಯ ಸಾರಥ್ಯ’ ತಾಳಮದ್ದಳೆ ನಡೆಯಲಿದೆ. ಯಕ್ಷಗಾನ ಮತ್ತು ಇನ್ನಿತರ ಕಲಾ ಪ್ರಾಕಾರಗಳ ನಿರಂತರ ಅಧ್ಯಯನದ ಸದುದ್ದೇಶಕ್ಕಾಗಿ ನಿರ್ಮಾಣಗೊಳ್ಳುತ್ತಿರುವ ಈ ಬೃಹತ್ ಸಾಂಸ್ಕೃತಿಕ ಭವನಕ್ಕೆ ಎಲ್ಲಾ ಪ್ರದೇಶಗಳ ಸಹಭಾಗಿತ್ವವನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಸಮಾಲೋಚನಾ ಸಭೆ ನಡೆಯುತ್ತಿದೆ.
ಈ ಸಮಾಲೋಚನಾ ಸಭೆಯಲ್ಲಿ ಶ್ರೀ ಹರಿಕೃಷ್ಣ ಪುನರೂರು, ಡಾ. ಎಂ. ಮೋಹನ ಆಳ್ವ, ಶ್ರೀ ಶ್ರೀಪತಿ ಭಟ್, ಶ್ರೀ ಅಭಯಚಂದ್ರ ಜೈನ್, ಶ್ರೀ ಪ್ರದೀಪ್ ಕುಮಾರ್ ಕಲ್ಕೂರ, ಶ್ರೀ ಎಂ. ಶಾಂತಾರಾಮ ಕುಡ್ವ, ಶ್ರೀ ಸುಬ್ರಹ್ಮಣ್ಯ ಭಟ್, ಶ್ರೀ ಪ್ರೇಮನಾಥ ಮಾರ್ಲ, ಪ್ರೊ| ಸದಾಶಿವ ಶೆಟ್ಟಿಗಾರ್, ಶ್ರೀ ಸದಾಶಿವ ರಾವ್ ಮೊದಲಾದ ಗಣ್ಯರು ಭಾಗವಹಿಸಲಿರುವರು. ಸಮಾಲೋಚನಾ ಸಭೆಯ ನಂತರ ಪ್ರಸಿದ್ಧ ಕಲಾವಿದರಿಂದ ‘ಶಲ್ಯ ಸಾರಥ್ಯ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ