Friday, September 20, 2024
Homeಯಕ್ಷಗಾನ31.01.2021ರಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ನಿರ್ಮಾಣದ ಸಮಾಲೋಚನಾ ಸಭೆ ಮತ್ತು 'ಶಲ್ಯ ಸಾರಥ್ಯ' ತಾಳಮದ್ದಳೆ 

31.01.2021ರಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ನಿರ್ಮಾಣದ ಸಮಾಲೋಚನಾ ಸಭೆ ಮತ್ತು ‘ಶಲ್ಯ ಸಾರಥ್ಯ’ ತಾಳಮದ್ದಳೆ 

31.01.2021ರ ಆದಿತ್ಯವಾರ ಬೆಳಗ್ಗೆ ೧೦ ಘಂಟೆಗೆ ಸರಿಯಾಗಿ ಮೂಡಬಿದಿರೆಯ ಸಮಾಜ ಮಂದಿರದಲ್ಲಿ  ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ನಿರ್ಮಾಣದ ಸಮಾಲೋಚನಾ ಸಭೆ ಮತ್ತು ‘ಶಲ್ಯ ಸಾರಥ್ಯ’ ತಾಳಮದ್ದಳೆ ನಡೆಯಲಿದೆ. ಯಕ್ಷಗಾನ ಮತ್ತು ಇನ್ನಿತರ ಕಲಾ ಪ್ರಾಕಾರಗಳ ನಿರಂತರ ಅಧ್ಯಯನದ ಸದುದ್ದೇಶಕ್ಕಾಗಿ ನಿರ್ಮಾಣಗೊಳ್ಳುತ್ತಿರುವ ಈ ಬೃಹತ್  ಸಾಂಸ್ಕೃತಿಕ ಭವನಕ್ಕೆ ಎಲ್ಲಾ ಪ್ರದೇಶಗಳ ಸಹಭಾಗಿತ್ವವನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಸಮಾಲೋಚನಾ ಸಭೆ ನಡೆಯುತ್ತಿದೆ.

ಈ ಸಮಾಲೋಚನಾ ಸಭೆಯಲ್ಲಿ ಶ್ರೀ ಹರಿಕೃಷ್ಣ ಪುನರೂರು, ಡಾ. ಎಂ. ಮೋಹನ ಆಳ್ವ, ಶ್ರೀ ಶ್ರೀಪತಿ ಭಟ್, ಶ್ರೀ ಅಭಯಚಂದ್ರ ಜೈನ್, ಶ್ರೀ ಪ್ರದೀಪ್ ಕುಮಾರ್ ಕಲ್ಕೂರ, ಶ್ರೀ ಎಂ. ಶಾಂತಾರಾಮ ಕುಡ್ವ, ಶ್ರೀ ಸುಬ್ರಹ್ಮಣ್ಯ ಭಟ್, ಶ್ರೀ ಪ್ರೇಮನಾಥ ಮಾರ್ಲ, ಪ್ರೊ| ಸದಾಶಿವ ಶೆಟ್ಟಿಗಾರ್, ಶ್ರೀ ಸದಾಶಿವ ರಾವ್ ಮೊದಲಾದ ಗಣ್ಯರು ಭಾಗವಹಿಸಲಿರುವರು. ಸಮಾಲೋಚನಾ ಸಭೆಯ ನಂತರ ಪ್ರಸಿದ್ಧ ಕಲಾವಿದರಿಂದ ‘ಶಲ್ಯ ಸಾರಥ್ಯ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments