ಯಕ್ಷಗಾನ ಕಲಾರಂಗ 16 ವರ್ಷಗಳ ಹಿಂದೆ ಕಲಾವಿದರಿಗಾಗಿ ಆರಂಬಿಸಿದ ‘ಜೀವನ ಆನಂದ’ ವಿಮೆಯ ಪಾಲಸಿದಾರರಾದ ಮಂದಾರ್ತಿ ಮೇಳದ ಕಲಾವಿದರಾದ ಸಾಧು ಕೊಠಾರಿಯವರು ಇತ್ತೀಚೆಗೆ ಮೇಳದ ಚೌಕಿಯಲ್ಲಿ ನಿಧನಹೊಂದಿದ್ದು, ಅವರ ವಿಮಾ ಮೊತ್ತ 1 ಲಕ್ಷರೂ, ಜತೆಗೆ ಬೋನಸ್ 65 ಸಾವಿರ ರೂಪಾಯಿಯನ್ನು ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಸಾಧು ಕೊಠಾರಿಯವರ ಪತ್ನಿ ಶಕುಂತಲಾ ಕೊಠಾರಿಯವರಿಗೆ ಹಸ್ತಾಂತರಿಸಿದರು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ವಾರ್ಷಿಕ ಪ್ರೀಮಿಯಮ್ನ ಭಾಗಶಃ ಹಣವನ್ನು ಸಂಸ್ಥೆ ನೀಡುತ್ತಾ ಬಂದಿದ್ದು, 53 ಕಲಾವಿದರು ಈ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರೊಂದಿಗೆ ನೆರವಿನ ರೂಪದಲ್ಲಿ ಸಂಸ್ಥೆಯ ವತಿಯಿಂದ 20 ಸಾವಿರ ರೂಪಾಯಿಯನ್ನು ಫೆಬ್ರವರಿ 08, 2021ರಂದು ಕಲಾರಂಗದ ಕಛೇರಿಯಲ್ಲಿ ನೀಡಿ ನೊಂದ ಕುಟುಂಬವನ್ನು ಸಂತೈಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಮುರಲಿ ಕಡೆಕಾರ್, ಕೋಶಾಧಿಕಾರಿ ಮನೋಹರ ಕೆ., ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಹಾಗೂ ಸಾಧು ಕೊಠಾರಿಯವರ ಪುತ್ರಿ ಮಾಧುರಿ ಉಪಸ್ಥಿತರಿದ್ದರು.
