ಶ್ರೀ ಸುಬ್ರಾಯ ದೇವಸ್ಥಾನ, ಕಾಟುಕುಕ್ಕೆ ಶ್ರೀ ಪುರಂದರದಾಸ ಆರಾಧನೋತ್ಸವ ಸಮಿತಿ, ಕಾಟುಕುಕ್ಕೆ 5-2-2021ನೇ ಶುಕ್ರವಾರದಿಂದ ತೊಡಗಿ 11.02.2021 ವರೆಗೆ ನಡೆಯುತ್ತಿರುವ ವರ್ಷದ ಶ್ರೀ ಪುರಂದರದಾಸ ಆರಾಧನೋತ್ಸವದಲ್ಲಿ ಭಾಗವತ ಸಪ್ತಾಹದ ನಾಲ್ಕನೇ ದಿನ 8-2-2021ನೇ ಸೋಮವಾರ ‘ಶ್ರೀಮಾತಾ ಮಹಿಳಾ ಭಜನಾ ಮಂಡಳಿ’ ಬದಿಯಡ್ಕ ಇದರ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.



ಮುಂಜಾನೆ ಭಾಗವತ ಪೂಜೆಯ ಬಳಿಕ ಭಾಗವತ ಪಾರಾಯಣ ಪ್ರಾರಂಭ. ಅಪರಾಹ್ಣದ ಪ್ರವಚನದ ನಡುವಿನ ಬಿಡುವಿನಲ್ಲಿ ಭಜನಾ ಗುರುಗಳ ಜೊತೆಗೆ ಗೋವಿಂದಗಾನವೂ ನೆರವೇರಿತು. 4ನೇ ದಿನದ ಪ್ರವಚನದಲ್ಲಿ ಮನ್ವಂತರಗಳು, ಗಜೇಂದ್ರಮೋಕ್ಷ, ಸಮುದ್ರಮಥನ, ವಾಮನಾವತಾರ, ಭಕ್ತ ಅಂಬರೀಶ ಈ ಕಥಾಭಾಗಗಳ ಹೃದ್ಯ ನಿರೂಪಣೆ ನಡೆಯಿತು. ಸಂಜೆ ಕೀರ್ತನೆಗಳ ಗಾಯನದ ಬಳಿಕ ಮಂಗಳಾರತಿಯೊಂದಿಗೆ ದಿನದ ಕಾರ್ಯಕ್ರಮಗಳು ಸಂಪನ್ನಗೊಂಡವು.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
