ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಪ್ರಜ್ಞಾ ಎಜುಕೇಶನ್ ಟ್ರಸ್ಟ್ ಸುಳ್ಯ ಇವರ ಸಹಯೋಗದಲ್ಲಿ ಯಕ್ಷಗಾನ ಪಠ್ಯಪುಸ್ತಕಾಧಾರಿತ ‘ಹೆಜ್ಜೆ’ ವೀಡಿಯೊ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದ ನಂತರ ಇಂಗ್ಲಿಷ್ ಯಕ್ಷಗಾನ ಬಯಲಾಟವೂ ನಡೆಯಲಿದೆ. ಈ ಸಂದರ್ಭದಲ್ಲಿ ‘ಪ್ರಜ್ಞಾ ಯಕ್ಷಗಾನ ಕಲಾಶಾಲೆ’ಯ ಉದ್ಘಾಟನಾ ಕಾರ್ಯಕ್ರಮವೂ ಜರಗಲಿರುವುದು.
ಇಂದು ದಿನಾಂಕ 21.02.2021ರ ಆದಿತ್ಯವಾರ ಸಂಜೆ ಘಂಟೆ 4.30ಕ್ಕೆ ಆರಂಭವಾಗುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವರಾದ ಎಸ್. ಅಂಗಾರ ಅವರು ನೆರವೇರಿಸಲಿದ್ದಾರೆ.
ಯಕ್ಷಗಾನ ರಂಗದ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಉದ್ಘಾಟನಾ ಮತ್ತು ಬಿಡುಗಡೆ ಕಾರ್ಯಕ್ರಮಗಳ ನಂತರ Disgraced Sudarshana ಎಂಬ ಇಂಗ್ಲಿಷ್ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಈ ಪ್ರಸಂಗದ ಪದ್ಯಗಳೂ ಇಂಗ್ಲಿಷ್ ಭಾಷೆಯಲ್ಲಿಯೇ ಇರುತ್ತವೆ. ಹಾಡುಗಾರಿಕೆ ಮತ್ತು ಅರ್ಥಗಾರಿಕೆಯೆರಡೂ ಇಂಗ್ಲಿಷ್ ಭಾಷೆಯಲ್ಲಿರುವುದು ವಿಶೇಷ. ಕಾರ್ಯಕ್ರಮದ ವಿವರವನ್ನು ಕೆಳಗಡೆ ನೀಡಲಾಗಿದೆ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

