Friday, September 20, 2024
Homeಸುದ್ದಿದೇಶಕೊರೋನಾ ಮತ್ತೊಮ್ಮೆ ಹರಡುವ ಭೀತಿ - ಐದು ರಾಜ್ಯಗಳಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಕೇಂದ್ರದ ಸೂಚನೆ 

ಕೊರೋನಾ ಮತ್ತೊಮ್ಮೆ ಹರಡುವ ಭೀತಿ – ಐದು ರಾಜ್ಯಗಳಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಕೇಂದ್ರದ ಸೂಚನೆ 

ಈಗಾಗಲೇ ಕೆಲವು ರಾಜ್ಯಗಳಲ್ಲಿ ಕೊರೋನಾ ವೈರಸ್ ಭಾದಿತರ ಸಂಖ್ಯೆ ಗಣನೀಯವಾಗಿ ಇಳಿಯುತ್ತಿದೆ. ಕರ್ನಾಟಕ ರಾಜ್ಯದಲ್ಲಿಯೂ ಸೋಂಕಿತರ ಪ್ರಮಾಣ ಇಳಿಕೆಯಲ್ಲಿದೆ.

ಆದರೆ ದೇಶದ ಕೆಲವು ರಾಜ್ಯಗಳಲ್ಲಿ ದ್ವಿತೀಯ ಹಂತದ ಕೊರೋನಾ ಅಲೆ ಹರಡುತ್ತಲಿದ್ದು ಕೇಂದ್ರ ಸರಕಾರ ಆ ರಾಜ್ಯಗಳಿಗೆ ತೀವ್ರ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಕಟ್ಟಿನಿಟ್ಟಿನ ಸೂಚನೆಯನ್ನು ನೀಡಿದೆ. 

ಜಮ್ಮು ಕಾಶ್ಮೀರವು ಪ್ರವಾಸಿಗರು ಹೆಚ್ಚಾಗಿ ಬರುವ ತಾಣವಾಗಿದ್ದು ಅಲ್ಲಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಕೇಂದ್ರ ಸರಕಾರ ಎಚ್ಚರಿಸಿದೆ.

ಆರ್ಟಿಪಿಆರ್ ಪರೀಕ್ಷೆಗಳನ್ನು ಹೆಚ್ಚಿಸುವಂತೆಯೂ ಕೇಂದ್ರವು ರಾಜ್ಯ ಸರಕಾರಗಳಿಗೆ ಸುತ್ತೋಲೆ ಹೊರಡಿಸಿದೆ. 

ಮಹಾರಾಷ್ಟ್ರ, ಪಂಜಾಬ್, ಕೇರಳ, ಛತ್ತೀಸ್ ಗಢ ಮತ್ತು ಮಧ್ಯಪ್ರದೇಶ ರಾಜ್ಯಗಳನ್ನು ಗುರುತಿಸಿದ ಕೇಂದ್ರವು ಈ ರಾಜ್ಯಗಳಿಗೆ ಎಚ್ಚರ ವಹಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಚ್ಚರಿಸಿದೆ.

ಈ ರಾಜ್ಯಗಳ ನೆರೆ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಒಡಿಸ್ಸಾ,ಗುಜರಾತ್ ರಾಜ್ಯಗಳಲ್ಲೂ ಎಚ್ಚರ ವಹಿಸುವಂತೆ ಕೇಂದ್ರ ಸೂಚಿಸಿದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments