ಇಂದು, ಫೆಬ್ರವರಿ 28 ಆದಿತ್ಯವಾರ ಸಂಜೆ 6.30ಕ್ಕೆ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ. ಪುತ್ತೂರಿನ ಪರ್ಲಡ್ಕದ ಖ್ಯಾತ ವೈದ್ಯ ಡಾ. ಹರಿಕೃಷ್ಣ ಪಾಣಾಜೆಯವರ ಎಸ್.ಡಿ.ಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್ ಆವರಣದಲ್ಲಿ ಸಾಲಿಗ್ರಾಮ ಮೇಳದವರು ‘ಚಿತ್ರಾಕ್ಷಿ ಕಲ್ಯಾಣ, ಮೀನಾಕ್ಷಿ ಕಲ್ಯಾಣ’ ಎಂಬ ಪ್ರಸಂಗವನ್ನು ಪ್ರದರ್ಶಿಸಲಿದ್ದಾರೆ.
ಡಾ. ಹರಿಕೃಷ್ಣ ಪಾಣಾಜೆಯವರ ಎಸ್.ಡಿ.ಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್ ಕಳೆದ 16 ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ಈ ವರ್ಷದ ಕಾರ್ಯಕ್ರಮ ಇಂದಿನಿಂದ ಅಂದರೆ ಫೆಬ್ರವರಿ 27ರಿಂದ ಆರಂಭವಾಗಲಿದ್ದು ಮಾರ್ಚ್ 1ರ ವರೆಗೆ ನಡೆಯಲಿದೆ.
ಕೊನೆಯ ದಿನ ಮಾರ್ಚ್ 1, ಸೋಮವಾರದಂದು ಸಂಜೆ 6.30ಕ್ಕೆ ತೆಂಕುತಿಟ್ಟಿನ ಯಕ್ಷಗಾನ ಕಾರ್ಯಕ್ರಮ ಇರುತ್ತದೆ. ಹನುಮಗಿರಿ ಮೇಳದವರಿಂದ ‘ಶುಕ್ರನಂದನೆ’ ಎಂಬ ಪ್ರಸಂಗದ ಪ್ರದರ್ಶನ ನಡೆಯಲಿದೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
