ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಮತ್ತು ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಇವರು ನೀಡುತ್ತಿರುವ 2021ನೆಯ ಸಾಲಿನ “ಅಕಾಡೆಮಿ ಬಾಲ ಗೌರವ ಪ್ರಶಸ್ತಿ”ಗೆ ಯಕ್ಷಗಾನದ ಉದಯೋನ್ಮುಖ ಪ್ರತಿಭೆ, ಬಾಲ ಕಲಾವಿದ ಸ್ವಸ್ತಿಕ್ ಶರ್ಮ ಪಳ್ಳತ್ತಡ್ಕ ಆಯ್ಕೆಯಾಗಿದ್ದಾರೆ.
ಗಡಿನಾಡು ವಿಭಾಗದ ಬಹುಮುಖ ಪ್ರತಿಭೆ ಎಂಬ ವಿಭಾಗದಲ್ಲಿ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪದ ಪಳ್ಳತ್ತಡ್ಕದ ಸ್ವಸ್ತಿಕ್ ಶರ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ, ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರವರಿ 28ರಂದು ಧಾರವಾಡದ ಡಾ. ಮಲ್ಲಿಕಾರ್ಜುನ ಮುನ್ಸೂರ್ ಕಲಾಭವನದಲ್ಲಿ ನಡೆಯಲಿದೆ.
ಅತಿ ಸಣ್ಣ ವಯಸ್ಸಿನಲ್ಲಿಯೇ ಯಕ್ಷಗಾನದಲ್ಲಿ ಸಾಧನೆ ಮಾಡುವತ್ತ ದಾಪುಗಾಲು ಹಾಕುತ್ತಿರುವ ಸ್ವಸ್ತಿಕ್ ಶರ್ಮಾ ಇದುವರೆಗೆ ಸುಮಾರು 500ಕ್ಕಿಂತಲೂ ಅಧಿಕ ಯಕ್ಷಗಾನ ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ.
ಪಳ್ಳತ್ತಡ್ಕ ಕೇಶವ ಶರ್ಮ ಮತ್ತು ದಿವ್ಯ ದಂಪತಿಯ ಪುತ್ರ ಸ್ವಸ್ತಿಕ್ ವಿವಿಧ ಮೇಳಗಳ ಪ್ರದರ್ಶನಗಳಲ್ಲಿಯೂ ಭಾಗವಹಿಸಿ ವೃತ್ತಿಪರ ಕಲಾವಿದರ ಜೊತೆ ಪಾತ್ರನಿರ್ವಹಣೆ ಮಾಡುವ ಅನುಭವವನ್ನೂ ಗಳಿಸಿಕೊಂಡಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

