ರವಿವಾರ ಕರ್ನಾಟಕ ರಾಜಧಾನಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅದ್ಧೂರಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2018 ನೇ ಸಾಲಿನ ಪುಸ್ತಕ ಗೌರವ ಪ್ರಶಸ್ತಿಯನ್ನು ಶ್ರೀಮತಿ ರಾಜಶ್ರೀ ಟಿ ರೈ ಪೆರ್ಲ ಇವರಿಗೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದರು ಅರವಿಂದ ಲಿಂಬಾವಳಿ ಮತ್ತು ಸಚಿವರಾದ ಎಸ್ ಅಂಗಾರ ಅವರು ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಿದರು.
ವರ್ಷದ ಅತ್ಯುತ್ತಮ ತುಳು ಕಾದಂಬರಿಯಾಗಿ ರಾಜಶ್ರೀ ಟಿ ರೈ ಪೆರ್ಲ ಅವರ “ಕೊಂಬು” ಕಾದಂಬರಿ ಪ್ರಶಸ್ತಿಗೆ ಪಾತ್ರವಾಗಿದೆ. ಕಲ್ಲಡ್ಕ ಪ್ರಭಾಕರ ಭಟ್, ಉಡುಪಿ ಪೇಜಾವರ ಮಠದ ಪರಮ ಪೂಜ್ಯ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್, ಕಾಂತಿ ಶೆಟ್ಟಿ ಮತ್ತು ಅಕಾಡೆಮಿಯ ಸದಸ್ಯರು ಮತ್ತಿತರು ಉಪಸ್ಥಿತರಿದ್ದರು.

ಪ್ರಶಸ್ತಿಯು 25 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ರಾಜಶ್ರೀ ಟಿ ರೈ ಪೆರ್ಲ ಅವರ ಯಕ್ಷಗಾನ ಕಲಾವಿದರ ಜೀವನಾಧರಿತ ತುಳು ಕಾದಂಬರಿ “ಚೌಕಿ” ಪನಿಯಾಡಿ ಪ್ರಶಸ್ತಿ ಪಡೆದುಕೊಂಡಿತ್ತು.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
