ಶ್ರೀ ಮಹಾಲಕ್ಷ್ಮಿ ಭಜನಾ ಮಂದಿರ, ದೊಡ್ಡಡ್ಕ ಇದರ 28 ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬೆಳಿಗ್ಗೆ ಗಣಪತಿ ಹವನ, ಮಹಾಲಕ್ಷ್ಮಿ ಪೂಜೆ, ಶ್ರೀ ನರಹರಿ ಭಟ್ ಪಾಲೆಚ್ಚಾರು ಇವರಿಂದ ಕಥಾವಾಚನ , ಮಹಾಪೂಜೆ, ಅನ್ನಸಂತರ್ಪಣೆ ,ಭಜನಾ ಕಾರ್ಯಗಳು ನಡೆದವು.
ಧಾರ್ಮಿಕ ಸಭಾ ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ನಿವೃತ್ತ ಅಧ್ಯಾಪಕ ಶ್ರೀ ನರಹರಿ ಭಟ್ ಪಾಲೆಚ್ಚಾರು ವಹಿಸಿದ್ದರು. ಅತಿಥಿಗಳಾಗಿ ನ್ಯಾಯವಾದಿ ಶ್ರೀ ಚೇತನ್ ನಾಯಕ್ ಸಾಮೇತಡ್ಕ, ಸಂಚಾರಿ ಪೊಲೀಸ್ ಉಪ-ನಿರೀಕ್ಷಕರಾದ ಶ್ರೀ ರಾಮ ನಾಯ್ಕ ಗೆಣಸಿನಕುಮೇರು,
ಉಪಸ್ಥಿತರಿದ್ದರು.
ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಜಗದೀಶ್ ಭಂಡಾರಿ, ಗೆಣಸಿನ ಕುಮೇರು ಪ್ರಸ್ತಾವಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀ ವೆಂಕಟಕೃಷ್ಣ ಭಟ್ ವರದಿ ವಾಚಿಸಿ , ಲೆಕ್ಕಪತ್ರ ಮಂಡಿಸಿದರು. ಮಂದಿರದ ಸೇವಾಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಸೇಸಪ್ಪ ನಾಯ್ಕ್ ವಂದನಾರ್ಪಣೆಗೈದರು.

ಆ ಬಳಿಕ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಇವರಿಂದ ‘ಓಂ ನಮಃ ಶಿವಾಯ, ರಕ್ತರಾತ್ರಿ’ ಎಂಬ ಯಕ್ಷಗಾನ ಬಯಲಾಟ ಜರಗಿತು.
- 7th Standard, English – Unit 1 Prose – A Tiger in the House
- 7th Standard, Social – HISTORY CHAPTER 1 – MAJOR DEVELOPMENTS IN THE WORLD
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH