ಶ್ರೀ ಮಹಾಲಕ್ಷ್ಮಿ ಭಜನಾ ಮಂದಿರ, ದೊಡ್ಡಡ್ಕ ಇದರ 28 ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬೆಳಿಗ್ಗೆ ಗಣಪತಿ ಹವನ, ಮಹಾಲಕ್ಷ್ಮಿ ಪೂಜೆ, ಶ್ರೀ ನರಹರಿ ಭಟ್ ಪಾಲೆಚ್ಚಾರು ಇವರಿಂದ ಕಥಾವಾಚನ , ಮಹಾಪೂಜೆ, ಅನ್ನಸಂತರ್ಪಣೆ ,ಭಜನಾ ಕಾರ್ಯಗಳು ನಡೆದವು.
ಧಾರ್ಮಿಕ ಸಭಾ ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ನಿವೃತ್ತ ಅಧ್ಯಾಪಕ ಶ್ರೀ ನರಹರಿ ಭಟ್ ಪಾಲೆಚ್ಚಾರು ವಹಿಸಿದ್ದರು. ಅತಿಥಿಗಳಾಗಿ ನ್ಯಾಯವಾದಿ ಶ್ರೀ ಚೇತನ್ ನಾಯಕ್ ಸಾಮೇತಡ್ಕ, ಸಂಚಾರಿ ಪೊಲೀಸ್ ಉಪ-ನಿರೀಕ್ಷಕರಾದ ಶ್ರೀ ರಾಮ ನಾಯ್ಕ ಗೆಣಸಿನಕುಮೇರು,
ಉಪಸ್ಥಿತರಿದ್ದರು.
ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಜಗದೀಶ್ ಭಂಡಾರಿ, ಗೆಣಸಿನ ಕುಮೇರು ಪ್ರಸ್ತಾವಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀ ವೆಂಕಟಕೃಷ್ಣ ಭಟ್ ವರದಿ ವಾಚಿಸಿ , ಲೆಕ್ಕಪತ್ರ ಮಂಡಿಸಿದರು. ಮಂದಿರದ ಸೇವಾಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಸೇಸಪ್ಪ ನಾಯ್ಕ್ ವಂದನಾರ್ಪಣೆಗೈದರು.

ಆ ಬಳಿಕ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಇವರಿಂದ ‘ಓಂ ನಮಃ ಶಿವಾಯ, ರಕ್ತರಾತ್ರಿ’ ಎಂಬ ಯಕ್ಷಗಾನ ಬಯಲಾಟ ಜರಗಿತು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

