ಕೋವಿಡ್-19, ರಿಂದಾಗಿ ಕಲಾವಿದರ ಸಂಕಷ್ಟವನ್ನರಿತು ಕರ್ನಾಟಕ ಘನ ಸರಕಾರ ಆರ್ಥಿಕ ನೆರವನ್ನು ಘೋಷಿಸಿದ್ದು ಸಮಸ್ತ ಯಕ್ಷಗಾನ ಕಲಾವಿದರ ಪರವಾಗಿ ಸರಕಾರವನ್ನು ಅಭಿನಂದಿಸುತ್ತಿದ್ದೇವೆ.
ಯಕ್ಷಗಾನ ಕರಾವಳಿ ಕರ್ನಾಟಕದ ಒಂದು ಅಪೂರ್ವ ಕಲಾ ಪ್ರಕಾರ. ವಿಶ್ವದಾದ್ಯಂತ ಕಲಾವಿವಿಮರ್ಶಕರು ಇದರ ಶ್ರೇಷ್ಠತೆಗೆ ಬೆರಗಾಗಿ ತಲೆಬಾಗಿರುತ್ತಾರೆ. ಇಂತಹ ಕಲೆಯನ್ನು ಉಳಿಸಿ ಬೆಳೆಸಿದವರು ಕಲಾವಿದರು. ಹೆಚ್ಚಿನ ಕಲಾವಿದರು 15ರ ಹರೆಯದಲ್ಲಿ ಮೇಳವನ್ನು ಸೇರಿ ಬಾಲಗೋಪಾಲದಿಂದ ಯಕ್ಷ ಶಿಕ್ಷಣವನ್ನು ಮೇಳದಲ್ಲಿ ಪಡೆಯುತ್ತಾ ಬೆಳೆದವರು. ಸರಕಾರದ ಈಗಿನ ನಿಬಂಧನೆ ಪ್ರಕಾರ ಕೋವಿಡ್-19 ನೆರವು ಪಡೆಯಲು 35 ವರ್ಷ ಕನಿಷ್ಠ ವಯಸ್ಸಾಗಿರಬೇಕಾಗಿದೆ. ಇದರಿಂದ 10 ರಿಂದ 20 ವರ್ಷ ಸೇವೆಗೈದ 40 ವೃತ್ತಿ ಮೇಳಗಳ ಸುಮಾರು 200 ಕಲಾವಿದರು ನೆರವಿನಿಂದ ವಂಚಿತರಾಗುತ್ತಾರೆ. ಇವರೆಲ್ಲಾ ನಿರಂತರ 6-7 ತಿಂಗಳು ರಾತ್ರಿಯಿಡೀ ವೇಷಮಾಡಿ ಕಲಾಸೇವೆ ಗೈದ ಪ್ರತಿಭಾನ್ವಿತ ಯುವ ಕಲಾವಿದರು.
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಇವರಲ್ಲಿ ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಅರವಿಂದ ಲಿಂಬಾವಳಿಯವರ ಮೂಲಕ ವಿನಂತಿ.
ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ತಾವು ಈ ಸಹಾಯ ಪಡೆಯುವಲ್ಲಿರುವ ನಿಬಂಧನೆಯನ್ನು 35 ವರ್ಷದಿಂದ 25 ವರ್ಷಕ್ಕೆ ಇಳಿಸಿ ಪ್ರತಿಭಾವಂತ ಯುವ ಕಲಾವಿದರಿಗೂ (ಕನಿಷ್ಟ ಕರಾವಳಿ ಕರ್ನಾಟಕದ ವೃತ್ತಿ ಮೇಳದಲ್ಲಿ ಕಲಾಸೇವೆಗೈಯುತ್ತಿರುವ ಯಕ್ಷಗಾನ ಕಲಾವಿದರಿಗೆ) ಇದರ ಪ್ರಯೋಜನ ಸಿಗುವಂತೆ ಸಮಸ್ತ ಕಲಾಭಿಮಾನಿಗಳ ಪರವಾಗಿ ನಾವು ವಿನಂತಿಸಿಕೊಳ್ಳುತ್ತಿದ್ದೇವೆ.
ಈಗಾಗಲೇ ಈ ಮನವಿಯನ್ನು ಮಾನ್ಯ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉಡುಪಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಇವರಲ್ಲಿ ನೀಡಲಾಗಿದೆ ಎಂಬುದಾಗಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
