ಇತ್ತೀಚೆಗೆ ಕರ್ನಾಟಕ ಸರಕಾರ ಕೊರೋನಾ ಸಂಕಷ್ಟದ ನಿಮಿತ್ತ ಯಕ್ಷಗಾನ ಕಲಾವಿದರಿಗೆ ಸಹಾಯಧನ ನೀಡುವ ಭರವಸೆ ನೀಡಿ ಆ ಸಲುವಾಗಿ ಕಲಾವಿದರು ಅರ್ಜಿ ಸಲ್ಲಿಸುವಂತೆ ತಿಳಿಸಿತ್ತು. ಅರ್ಜಿ ಸಲ್ಲಿಸುವ ಹಾಗೂ ಅದರ ಮುಂದಿನ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದೆ. ಈ ನಡುವೆ ಗಡಿನಾಡು ಕಾಸರಗೋಡಿನ ಕಲಾವಿದರು ತಮ್ಮನ್ನೂ ಕರ್ನಾಟಕದ ಈ ಸವಲತ್ತಿನ ವ್ಯಾಪ್ತಿಯೊಳಗೆ ತರಬೇಕೆಂಬ ಮನವಿ ಸಲ್ಲಿಸಿದ್ದಾರೆ. ಯಾಕೆಂದರೆ ಹೆಚ್ಚಿನ ಗಡಿನಾಡಿನ ಯಕ್ಷಗಾನ ಕಲಾವಿದರೂ ಕಲಾಸೇವೆ ಮಾಡುತ್ತಿರುವುದು ಕರ್ನಾಟಕದ ಪ್ರದೇಶಗಳಲ್ಲಿ ಮತ್ತು ಕರ್ನಾಟಕ ರಾಜ್ಯಕ್ಕೆ ಸಂಬಂಧಪಟ್ಟ ಮೇಳಗಳಲ್ಲಿ. ಆದುದರಿಂದ ಅವರ ಈ ಕೇಳಿಕೆ ಸಾಧುವಾದುದೇ ಆಗಿರುತ್ತದೆ.
1. ಹೆಚ್ಚಿನ ಕಲಾವಿದರು ಕಲಾಸೇವೆ ಮಾಡುತ್ತಿರುವುದು ಕರ್ನಾಟಕದಲ್ಲಿ.
2. ಬಹುತೇಕ ಕಲಾವಿದರು ದುಡಿಯುತ್ತಿರುವ ಮೇಳಗಳು ಕರ್ನಾಟಕ ರಾಜ್ಯಕ್ಕೆ ಸೇರಿದವುಗಳು.
3. ಅಂತಹಾ ಮೇಳಗಳ ಮಾಲಕತ್ವವೂ ಕರ್ನಾಟಕ ರಾಜ್ಯದ ಮಹನೀಯರಿಗೆ ಸೇರಿದುದಾಗಿದೆ.
ಆದುದರಿಂದ ಕಾಸರಗೋಡಿನ ಕಲಾವಿದರು ಈ ಸಹಾಯಧನವನ್ನು ಅಪೇಕ್ಷೆಪಟ್ಟರೆ ಅದು ಅನುಚಿತವಾಗಲಾರದು. ಬದಲಾಗಿ ಈ ಸಂಕಷ್ಟ ಸಮಯದಲ್ಲಿ ಉಚಿತವೂ ಸಾಧುವೂ ಆಗಿರುತ್ತದೆ ಎಂದು ಕಲಾವಿದರ ಹಾಗೂ ಯಕ್ಷಾಭಿಮಾನಿಗಳ ಅಭಿಪ್ರಾಯವಾಗಿದೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
