ಪಾಂಡವರ ಸೂತರ ಕುರಿತು ಕುಮಾರವ್ಯಾಸ ಭಾರತದ ಸಭಾಪರ್ವದಲ್ಲಿ ಮಾಹಿತಿ ಸಿಗುತ್ತದೆ. ರಾಜಸೂಯ ಯಾಗದ ಸಂದರ್ಭದಲ್ಲಿ ಅವರು ಮಹತ್ತರ ಪಾತ್ರವನ್ನು ವಹಿಸಿದ್ದಾರೆ.
ಧರಣಿಪತಿ ಕೇಳ್ ಶೂದ್ರ ಮೊದಲಾ
ಗಿರೆ ಸಮಸ್ತ ಪ್ರಜೆ ವಿಧಾವಂ
ತರಿಗೆ ಭೋಜನ ಗಂಧ ಮಾಲ್ಯಾಂಬರ ವಿಲೇಪನದ
ಉರು ನಿಯೋಗಿಗಳಿಂದ್ರಸೇನನು
ವರ ವಿಶೋಕನು ರುಗ್ಮನತಿ ಬಂ
ಧುರ ಸಮೀರ ಪತಾಕಸೇನನು ಸೂತರೈವರಿಗೆ (ಕು,ವ್ಯಾ. ಸ,ಪ. 7-19)
ಧರ್ಮರಾಯ – ಇಂದ್ರಸೇನ. ಭೀಮಸೇನ- ವಿಶೋಕ. ಪಾರ್ಥ-ರುಗ್ಮ. ನಕುಲ-ಸಮೀರ. ಸಹದೇವ- ಪತಾಕಸೇನ. ಈ ಇಂದ್ರಸೇನನೇ ರಾಜಸೂಯಯಾಗದ ಕುರಿತು ಸಮಾಲೋಚಿಸಲು ಕೃಷ್ಣನನ್ನು ಕರೆದುಕೊಂಡು ಬರಲು ದ್ವಾರಕೆಗೆ ಹೋದವನು.
ಕಳುಹಿದನು ಸಾರಥಿಯನಾ ರಥ
ಕೆಲವು ದಿವಸಕೆ ಕೃಷ್ಣಭವನ
ಸ್ಥಳದ ಹೊರಬಾಹೆಯಲಿ ಚಾಚಿತು ಚಪಳಗಮನದಲಿ (ಸ.ಪ. 2-6, ಪೂರ್ವಾರ್ಧ)
ಎಂದು ವಸುದೇವಾದಿ ಯಾದವ
ವೃಂದವನು ಬಲಭದ್ರರಾಮನ
ಹಿಂದಿರಿಸಿ ಬಳಿಕಿಂದ್ರಸೇನನ ಕೂಡೆ ವೊಲವಿನಲಿ
ಬಂದನಿದ್ರಪ್ರಸ್ಥ ಪಟ್ಟಣ
ಕಂದು ವೊಸಗೆಯ ಗುಡಿಯ ತೋರಣ
ದಿಂದ ಕನ್ನಡಿ ಕಳಶದಲಿ ಕೊಂಡಾಡಿದರು ಹರಿಯ (ಸ.ಪ. 2-8)
ಭೀಮಸೇನನು ಬಿಲ್ಲನ್ನು ಹಿಡಿದು (ಸುಪಾರ್ಶ್ವ) ಕಾಳಗ ಮಾಡಿದಾಗ ಸಾರಥಿಯಾದ ವಿಶೋಕನು ಮಹತ್ತರ ಪಾತ್ರವನ್ನು ವಹಿಸಿದ ಮಾಹಿತಿ ಕುಮಾರವ್ಯಾಸ ಭಾರತದಲ್ಲೇ ಬರುತ್ತದೆ. ನೋಡಿ ದ್ರೋಣಪರ್ವ 12-5; 13-32 ಮತ್ತು ಈ ಮಧ್ಯೆ ಅಲ್ಲಲ್ಲಿ ಬರುತ್ತದೆ. ಅಂತೆಯೇ ಕರ್ಣಪರ್ವದ 12-23, 13-8, 18-19ರಲ್ಲೂ ಬಂದಿದೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

