‘ನಿವಾತ’ ಎಂದರೆ ವಾಯು; ಗಾಳಿ. ವಾಯುವೇ ಕವಚವಾಗಿ ಉಳ್ಳವರು ನಿವಾತ ಕವಚರು; ದಾನವರು. ಇವರು ಪ್ರಹ್ಲಾದನ ತಮ್ಮನಾದ ಸಂಹ್ಲಾದನ ಸುತರು. ಹಿರಣ್ಯನಗರಿಯವರು. ಪಾತಾಳವಾಸಿಗಳು. ಪಾರ್ಥನು ಇಂದ್ರಕೀಲ ಪರ್ವತಾಗ್ರದಲ್ಲಿ ಶಿವನನ್ನು ಕುರಿತು ತಪಸ್ಸು ಮಾಡಿ ಪಾಶುಪತಾಸ್ತ್ರವನ್ನು ಪಡೆದ ಮೇಲೆ ಇಂದ್ರನ ಆಹ್ವಾನದ ಮೇರೆಗೆ ದೇವಲೋಕಕ್ಕೆ ಹೋಗುತ್ತಾನೆ.
ಅರಸ ಕೇಳೈ ಪಾರ್ಥನಿದ್ದನು
ವರುಷವೈದರೊಳಿಂದ್ರ ಭವನದ
ಸಿರಿಯ ಸಮ್ಮೇಳದ ಸಗಾಢದ ಸೌಮನಸ್ಯದಲಿ (ಕು.ವ್ಯಾ ಅ.ಪ 9-1 ಪೂರ್ವಾರ್ಧ)
ಆಗೊಮ್ಮೆ ಇಂದ್ರನು,
ಅರಿಗಳೆವಗೆ ನಿವಾತಕವಚರು ಸುರಪದವಿಸೋಪದ್ರವದ ನಿ ಷ್ಠುರವಿದೆಂದು ರಹಸ್ಯದಲಿ ನನಗೆಂದನಮರೇಂದ್ರ (12-2 ಪೂರ್ವಾರ್ಧ)ಎಂಬುದಾಗಿ ಹಿಂದಣ ಘಟನೆಯನ್ನು ಪಾರ್ಥ ಧರ್ಮರಾಯನಿಗೆ ಹೇಳಿದನು.
‘ದಾನವರ ಮರ್ದಿಸಿ ದೇವಲೋಕವನೆವಗೆ ನಿರುಪದ್ರವದಲೆಡೆ ಮಾಡೆಂದನಮರೇಂದ್ರ’ (12-8) ದೇವತೆಗಳೊಂದಿಗೆ ಸೇರಿಕೊಂಡು ಅರ್ಜುನ ನಿವಾತಕವಚರೊಂದಿಗೆ ಯುದ್ಧ ಮಾಡುತ್ತಾನೆ. ಕೊನೆಗೆ,
ತೊಡಚಿದನು ಬೊಮ್ಮಾಸ್ತ್ರವನು ಹುರಿ
ಯೊಡೆದುದಸುರರು ಮರೆತವರನಿ
ಕ್ಕಡಿಯ ಮಾಡಿತು ಬಂದುದಳಿವು ನಿವಾತಕವಚರಿಗೆ (ಅರಣ್ಯ ಪರ್ವ – 12-46)
(ನಿವಾತ ಕವಚರ ಉಪಾಖ್ಯಾನ ಗದುಗು ಭಾರತದ ಅರಣ್ಯ ಪರ್ವದ ಹನ್ನೆರಡನೆಯ ಸಂಧಿಯಲ್ಲಿ ವಿಸ್ತಾರವಾಗಿ ಬಂದಿದೆ. ಪೂರ್ವಭಾವಿಯಾಗಿ ಒಂಭತ್ತನೆಯ ಸಂಧಿಯನ್ನು ಓದಿದರೆ ಒಳ್ಳೆಯದು. ವ್ಯಾಸಭಾರತದ ವನಪರ್ವದ ಸಂಧಿ 168-86, 169-24, 170-39, 171-40, 172-35, ಇಲ್ಲಿ ವಿವರವಾಗಿ ಇವೆ)

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

