Saturday, October 5, 2024
Homeಯಕ್ಷಗಾನಬೊಟ್ಟಿಕೆರೆ ಪುರುಷೋತ್ತಮ ಪೂಂಜ‌ ನಿಧನ - ಯಕ್ಷಗಾನ ಕಲಾರಂಗ ಗಾಢ ಸಂತಾಪ

ಬೊಟ್ಟಿಕೆರೆ ಪುರುಷೋತ್ತಮ ಪೂಂಜ‌ ನಿಧನ – ಯಕ್ಷಗಾನ ಕಲಾರಂಗ ಗಾಢ ಸಂತಾಪ

ಯಕ್ಷಗಾನ ಭಾಗವತ, ಪ್ರಸಂಗಕರ್ತ ಪುರುಷೋತ್ತಮ ಪೂಂಜರು ಅಸೌಖ್ಯದಿಂದ 14-8-2021 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನ ಹೊಂದಿದರು. ಅವರಿಗೆ 68ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.


ಬಿ.ಎಸ್ಸಿ ಪದವಿ ಮುಗಿಸಿ ಮುಂಬಯಿಯಲ್ಲಿ ಉದ್ಯೋಗಿಯಾಗಿ ಅಲ್ಲಿರುವಾಗಲೇ ವೇಷಗಳನ್ನು ಮಾಡುತ್ತಾ ಮುಂದೆ ಯಕ್ಷಗಾನದ ಮೇಲಿನ ಸೆಳೆತದಿಂದ ಊರಿಗೆ ಬಂದು‌ ಭಾಗವತರಾಗಿ ಪುತ್ತೂರು, ಕರ್ನಾಟಕ ಮೇಳಗಳಲ್ಲಿ‌ ಏಳು ವರ್ಷ ತಿರುಗಾಟ ಮಾಡಿ ಕಳೆದ ಮೂರು ದಶಕದಿಂದ ಕಟೀಲು  ಮೇಳದಲ್ಲಿ ಪ್ರಧಾನ ಭಾಗವತರಾಗಿದ್ದರು. ತುಳು ಮತ್ತು ಕನ್ನಡದಲ್ಲಿ ಹತ್ತಾರು ಶ್ರೇಷ್ಠ ಪ್ರಸಂಗಗಳನ್ನು ರಚಿಸಿದ್ದಾರೆ. ಮಾನಿಷಾದವಂತೂ‌ ಆಟಕೂಟಳಲ್ಲಿ ಸಾವಿರಾರು ಪ್ರದರ್ಶನ ಕಂಡಿದೆ. ಯಕ್ಷಗಾನ ಗುರುಗಳಾಗಿ‌ ಅತ್ಯುತ್ತಮ ನಿರ್ದೇಶಕರಾಗಿ‌ ಮಾನಿತರಾಗಿದ್ದಾರೆ.‌ ಹಲವು ಪುರಸ್ಕಾರಗಳಿಗೆ ಭಾಜನರಾದ ಅವರಿಗೆ ಉಡುಪಿಯ ಯಕ್ಷಗಾನ ಕಲಾರಂಗ ಎರಡು ವರ್ಷದ ಹಿಂದೆ ಯಕ್ಷಗಾನ ವಿದ್ವಾಂಸರಿಗಾಗಿರುವ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್‌, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments