Saturday, August 1, 2026
Home Blog Page 103

ಯಕ್ಷರಂಗದ ಭೀಷ್ಮ, ತೆಂಕುತಿಟ್ಟಿನ ಮೇರು ಭಾಗವತ, ಬಲಿಪ ಶೈಲಿಯ ಅದ್ವಿತೀಯ ಕಲಾವಿದ,  ಪರಂಪರೆಯ ಕೊಂಡಿ ಬಲಿಪ ನಾರಾಯಣ ಭಾಗವತ ನಿಧನ 

ಯಕ್ಷರಂಗದ ಭೀಷ್ಮ, ತೆಂಕುತಿಟ್ಟಿನ ಮೇರು ಭಾಗವತ, ಬಲಿಪ ಶೈಲಿಯ ಅದ್ವಿತೀಯ ಕಲಾವಿದ,  ಪರಂಪರೆಯ ಕೊಂಡಿ ಬಲಿಪ ನಾರಾಯಣ ಭಾಗವತರು ನಿಧನರಾಗಿದ್ದಾರೆ.  ಇಂದು ಸಂಜೆ 6.30ಕ್ಕೆ ಸರಿಯಾಗಿ ಅವರು ಮೂಡಬಿದಿರೆಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂಬ ಮಾಹಿತಿಯಿದೆ. ಯಕ್ಷಗಾನದ ಭಾಗವತಿಕೆಯ ಬಗ್ಗೆ ಕರಾರುವಾಕ್ಕಾಗಿ ಹೀಗೆಯೇ ಎಂದು ಹೇಳಬಲ್ಲ ಕಲಾವಿದರನ್ನು ನಾವಿಂದು ಕಳೆದುಕೊಂಡಿದ್ದೇವೆ.

ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹಾಗೂ ಬಲಿಪ ಮನೆತನದ ಅಭಿಮಾನಿಗಳು ಹಾಗೂ ಯಕ್ಷಗಾನದ ಅಭಿಮಾನಿಗಳನ್ನು ಅವರಿಂದು ಅಗಲಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ. ಬಲಿಪ ನಾರಾಯಣ ಭಾಗವತರ ನಿಧನದಿಂದ ತೆಂಕುತಿಟ್ಟು ಭಾಗವತಿಕೆಯ ಪರಂಪರೆಯ ಕೊಂಡಿಯೊಂದು ಕಳಚಿಕೊಂಡಂತಾಗಿದೆ. ಅವರ ಅಂತ್ಯಕ್ರಿಯೆಯನ್ನು ಇಂದು ಮಧ್ಯರಾತ್ರಿ 1.30 ಘಂಟೆಗೆ ಸರಿಯಾಗಿ ಅವರ ಸ್ವಗೃಹದಲ್ಲಿ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. 

ಬಲಿಪ ನಾರಾಯಣ ಭಾಗವತರು ನಡೆದುಬಂದ ಹಾದಿ:
ಹೆಸರು: ಬಲಿಪ ನಾರಾಯಣ ಭಾಗವತರು
ಪತ್ನಿ: ದಿ। ಜಯಲಕ್ಷ್ಮಿ
ಜನನ: 19.03.1938
ಜನನ ಸ್ಥಳ: ಕಾಸರಗೋಡು ಜಿಲ್ಲೆಯ ಎಣ್ಮಕಜೆ ಗ್ರಾಮದ ಪಡ್ರೆ ಎಂಬಲ್ಲಿ
ತಂದೆ ತಾಯಿ: ಶ್ರೀ ಬಲಿಪ ಮಾಧವ ಭಟ್ಟ ಮತ್ತು ಶ್ರೀಮತಿ ಸರಸ್ವತಿ ಅಮ್ಮ
ಯಕ್ಷಗಾನ ಗುರುಗಳು: ಅಜ್ಜ ಹಿರಿಯ ಬಲಿಪ ನಾರಾಯಣ ಭಟ್ಟ ಮತ್ತು ತಂದೆ ಬಲಿಪ ಮಾಧವ ಭಟ್ಟ
ರಂಗಮಾಹಿತಿ: ಆ ಕಾಲದ ಪ್ರಸಿಧ್ಧ ಮದ್ದಳೆಗಾರರಾದ ದಿ| ಕುದ್ರೆಕೋಡ್ಲು ರಾಮ ಭಟ್ಟ, ವೇಷಧಾರಿಗಳಾದ ದಿ| ಕುಂಬಳೆ ತಿಮ್ಮಪ್ಪ ಮತ್ತು ದಿ| ಅಗಲ್ಪಾಡಿ ಕುಂಞಿ ಕೃಷ್ಣ ಮಣಿಯಾಣಿ
ಅನುಭವ: 55 ವರ್ಷಕ್ಕೂ ಮೇಲ್ಪಟ್ಟು (ಕೂಡ್ಲು, ಕುಂಡಾವು, ರೆಂಜಾಳ, ಮೂಲ್ಕಿ, ಭಗವತಿ ಮೇಳಗಳಲ್ಲಿ ಅಲ್ಲದೆ ಕಟೀಲು ಮೇಳವೊಂದರಲ್ಲೇ 25 ವರ್ಷಕ್ಕೂ ಮೇಲ್ಪಟ್ಟು ತಿರುಗಾಟ ನಡೆಸಿದ್ದಾರೆ.
ಮಕ್ಕಳು: ನಾಲ್ಕು ಜನ ಗಂಡುಮಕ್ಕಳು (ಬಲಿಪ ಮಾಧವ ಭಟ್ಟ, ಕಟೀಲು ಮೇಳದ ಭಾಗವತ ಬಲಿಪ ಶಿವಶಂಕರ ಭಟ್ಟ, ಬಲಿಪ ಶಶಿಧರ ಭಟ್ಟ, ಹಾಗೂ ಕಟೀಲು ಮೇಳದಲ್ಲಿ ಭಾಗವತರಾಗಿದ್ದ ದಿ| ಬಲಿಪ ಪ್ರಸಾದ ಭಟ್ಟ)

ರಚಿಸಿದ ಪ್ರಸಂಗಗಳು: 35ಕ್ಕೂ ಮಿಕ್ಕಿ 
ಪ್ರಶಸ್ತಿ/ಅಭಿನಂದನೆ/ಸನ್ಮಾನಗಳು: ಸುಮಾರು 200 ಕ್ಕೂ ಹೆಚ್ಚು.  ಅದರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2010, ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ 2010, ಆಳ್ವಾಸ್ ನುಡಿಸಿರಿ 2010, ಕರ್ನಾಟಕ ಸಂಘ ದುಬೈ 1988, ಶ್ರೀ ಎಡನೀರು ಮಠ 1994, ಕರಾವಳಿ ಯಕ್ಷಗಾನ ಸಮ್ಮೇಳನ 2000, ಕರ್ನಾಟಕ ಜನಪದ ಪರಿಷತ್ತು ಬೆಂಗಳೂರು 2002, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ, 2002, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಬೆಂಗಳೂರು 2004, ಕೇರಳ ಸಂಗೀತ ನಾಟಕ ಅಕಾಡೆಮಿ ತಿರುವನಂತಪುರ 2007, ಕರ್ನಾಟಕ ಜಾನಪದ ಕಲಾ ಅಧ್ಯಯನ ಕೇಂದ್ರ ಉಡುಪಿ 2008, ಕಲ್ಕೂರ ಪ್ರತಿಷ್ಠಾನ 2015, ಪಾರ್ತಿಸುಬ್ಬ ಪ್ರಶಸ್ತಿ ಹಾಗೂ ಇನ್ನೂ ಹಲವಾರು.  

ಯಕ್ಷಗಾನ ಕಂಡ ಮಹಾನ್ ಕಲಾವಿದ ಬಲಿಪ ನಾರಾಯಣ ಭಾಗವತರಿಗೆ ಎಲ್ಲಾ ಯಕ್ಷಗಾನ ಅಭಿಮಾನಿಗಳ ಪರವಾಗಿ ಗೌರವಪೂರ್ವಕ ಶ್ರದ್ಧಾಂಜಲಿ. 

ಕೆ. ಗೋವಿಂದ ಭಟ್ಟರಿಗೆ ಕಲಾಸಂಗಮ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ, ʼಭಸ್ಮಾಸುರ ಮೋಹಿನಿʼ ಯಕ್ಷಗಾನ

ಕಲಾಸಂಗಮ ಚಾರಿಟೇಬಲ್‌ ಟ್ರಸ್ಟ್‌ ಇದರ ದಶಮಾನೋತ್ಸವ ಆಚರಣೆಯ ಪ್ರಯುಕ್ತ ಮಂಗಳೂರು ಪುರಭವನದಲ್ಲಿ ಕೆ. ಗೋವಿಂದ ಭಟ್ಟರಿಗೆ ಕಲಾಸಂಗಮ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ, ʼಭಸ್ಮಾಸುರ ಮೋಹಿನಿʼ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.

ವಿವರಗಳಿಗೆ ಚಿತ್ರ ನೋಡಿ.

ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಅವರಿಗೆ ಬೊಂಡಾಲ ಪ್ರಶಸ್ತಿ: ಫೆಬ್ರವರಿ 17ರಂದು ಪ್ರಶಸ್ತಿ ಪ್ರದಾನ

ಮಂಗಳೂರು: ಹಳೆ ತಲೆಮಾರಿನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ಧನ ಶೆಟ್ಟಿ ಮತ್ತು ಅವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ದಿ.ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ನೀಡಲಾಗುವ ಬೊಂಡಾಲ ಪ್ರಶಸ್ತಿಗೆ ಕಟೀಲು ಮೇಳದ ಭಾಗವತ, ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಆಯ್ಕೆಯಾಗಿದ್ದಾರೆ.

ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆಸಲ್ಲಿಸಿದ ಕಲಾವಿದರಿಗಾಗಿ ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆಸಮಿತಿ 2022 – 23 ನೇ ಸಾಲಿಗೆ ಪುಂಡಿಕಾಯಿ ಅವರ ಹೆಸರನ್ನು ಸೂಚಿಸಿದೆ. ಪ್ರಶಸ್ತಿಯು ರೂ. 10,000/- ನಗದು; ಶಾಲು,ಸ್ಮರಣಿಕೆ, ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ.

ಪುಂಡಿಕಾಯಿ ಗೋಪಾಲಕೃಷ್ಣ ಭಟ್:

      ಬಲಿಪ ಪರಂಪರೆಯ ಪ್ರಮುಖ ಕೊಂಡಿಯಾಗಿರುವ ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಜನಿಸಿದ್ದು 1973 ಮೇ 14ರಂದು; ತಂದೆ ಗೋವಿಂದ ಭಟ್, ತಾಯಿ ಭವಾನಿ. ಅಡ್ಯನಡ್ಕದಲ್ಲಿ ತಮ್ಮ ಪ್ರಾಥಮಿಕ ಮತ್ತು ಪ್ರೌಢ ವಿದ್ಯಾಭ್ಯಾಸ ಪೂರೈಸಿ ವಿಟ್ಲ ಜೂನಿಯರ್ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಪಡೆದರು. ಬಳಿಕ ಮೂಡಬಿದ್ರೆ ಮಹಾವೀರ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದರು.

     ಯಕ್ಷಗಾನದ ಹಾಡುಗಾರಿಕೆಯಲ್ಲಿ ಆಸಕ್ತರಾದ ಗೋಪಾಲಕೃಷ್ಣ ಭಟ್ಟರಿಗೆ ಮಾವ ಬಲಿಪ ನಾರಾಯಣ ಭಾಗವತರೇ ಆರಂಭಿಕ ಗುರುಗಳು. ಬಲಿಪ ವಿಶ್ವೇಶ್ವರ ಭಟ್ ಮತ್ತು ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಂದ ಭಾಗವತಿಕೆಯ ವಿವಿಧ ಆಯಾಮಗಳನ್ನು ಕಲಿತ ಅವರು ಕುಬಣೂರು ಶ್ರೀಧರಾಯರ ಮಾರ್ಗದರ್ಶನದಲ್ಲಿ ಯಕ್ಷಗಾನವನ್ನು ವೃತ್ತಿಯನ್ನಾಗಿ ಸ್ವೀಕರಿಸಿದರು. ಪ್ರಥಮವಾಗಿ ಬಪ್ಪನಾಡು ಮೇಳದಲ್ಲಿ ಒಂದು ವರ್ಷ ತಿರುಗಾಟ ನಡೆಸಿದ ಪುಂಡಿಕಾಯಿ ಬಳಿಕ ಕಾಟಿಪಳ್ಳ ಮೇಳದಲ್ಲಿ ಮತ್ತೊಂದು ವರ್ಷ ದುಡಿದರು. ಕಟೀಲು ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿಯಲ್ಲಿ 27 ವರ್ಷಗಳನ್ನು ಪೂರೈಸಿ ಕಳೆದ ಆರು ವರ್ಷಗಳಿಂದ ಪ್ರಧಾನ ಭಾಗವತರಾಗಿ ಪ್ರಸ್ತುತ ಆರನೇ ಮೇಳದಲ್ಲಿ ಕಲಾ ಸೇವೆಯನ್ನು ಮುಂದುವರಿಸುತ್ತಿದ್ದಾರೆ

     ಯಕ್ಷಗಾನದ ಘರಾನವೆನಿಸಿದ ಬಲಿಪ ಶೈಲಿಯ ಹಾಡುಗಾರಿಕೆಯಲ್ಲಿ ಜನಪ್ರಿಯತೆ ಗಳಿಸಿರುವ ಪುಂಡಿಕಾಯಿ ಗೋಪಾಲಕೃಷ್ಣ ಭಟ್ಟರು ಯಕ್ಷಗಾನದ ಸಂಪ್ರದಾಯಗಳನ್ನು ತಿಳಿದ ಕೆಲವೇ ಭಾಗವತರಲ್ಲಿ ಒಬ್ಬರು. ಪತ್ನಿ ಹೇಮಲತಾ ಹಾಗೂ ಮಕ್ಕಳಾದ ದುರ್ಗಾ ಕಿರಣ್ ಮತ್ತು ಶ್ರೀಭವಾನಿಯವರನ್ನೊಳಗೊಂಡ ಸಂತೃಪ್ತ ಸಂಸಾರ ಹೊಂದಿದ್ದಾರೆ.

ಫೆ. 17 ಕ್ಕೆ ಪ್ರಶಸ್ತಿ ಪ್ರದಾನ :

        ಫೆಬ್ರವರಿ 16 ರಂದು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಮತ್ತು ಹತ್ತು ಸಮಸ್ತರ ವತಿಯಿಂದ ‘ದಾನಶೂರ ಕರ್ಣ’  ಹಾಗೂ 17ರಂದು ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಶ್ರೀದೇವಿ ಮಹಾತ್ಮೆ’ ಸೇವಾ ಬಯಲಾಟಗಳು ಜರಗಲಿವೆ.

      ಫೆಬ್ರವರಿ 17 ರಂದು ಶುಕ್ರವಾರ ರಾತ್ರಿ ರಂಗಸ್ಥಳದಲ್ಲಿ ಜರಗುವ ದಿ.ಬೊಂಡಾಲ ಜನಾರ್ಧನ ಶೆಟ್ಟಿ ಮತ್ತು ದಿ.ಬೊಂಡಾಲ ರಾಮಣ್ಣ ಶೆಟ್ಟಿ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು ಅವರ ಅಧ್ಯಕ್ಷತೆಯಲ್ಲಿ ಕಟೀಲು ಕ್ಷೇತ್ರದ ಆರ್ಚಕ ಅನಂತಪದ್ಮನಾಭ ಆಸ್ರಣ್ಣ ಆಶೀರ್ವಚನ ನೀಡುವರು. ಮಾಜಿ ಸಚಿವ ಬಿ. ರಮಾನಾಥ ರೈ, ಯಕ್ಷಗಾನ ವಿದ್ವಾಂಸ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅತಿಥಿಗಳಾಗಿ ಭಾಗವಹಿಸುವರು ಎಂದು  ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಕ್ಷಗಾನ ಸಮ್ಮೇಳನದ ಆಮಂತ್ರಣ ಪತ್ರ – ಯಕ್ಷಗಾನ ಪಿ.ಎಚ್.ಡಿ ಪದವೀಧರೆ ಡಾ. ಮಾರ್ತಾ ಅವರಿಗೆ

ಇದೇ ಫೆಬ್ರವರಿ 11 ಮತ್ತು 12ರಂದು ಉಡುಪಿಯಲ್ಲಿ ನಡೆಯಲಿರುವ ಕರ್ನಾಟಕ ಸಮಗ್ರ ಯಕ್ಷಗಾನ ಸಮ್ಮೇಳನದ ಸಂದರ್ಭದಲ್ಲಿ 75 ಜನ ಸಾಧಕರಿಗೆ ‘ಸಮ್ಮೇಳನ ಸಮ್ಮಾನ’ ನೀಡಲಿದ್ದು,

ಯಕ್ಷಗಾನದಲ್ಲಿ ಸಂಶೋಧನೆ ಮಾಡಿ ಪ್ರಥಮ ಪಿ.ಎಚ್.ಡಿ ಪದವೀಧರೆ ಎನಿಸಿಕೊಂಡ ಡಾ. ಮಾರ್ತಾ ಏಸ್ಟನ್ ಸಿಕೋರ ಸಂಮಾನಿತರಲ್ಲಿ ಓರ್ವರಾಗಿದ್ದು, ಇವರು ತೀವ್ರ ಅಸೌಖ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು,

ಅವರ ಪತಿ ಶ್ರೀ ಬಾಬ್ ಸಿಕೋರ ಇವರಿಗೆ ಇಂದು ಶ್ರೀ ಆನಂದ ಹಾಸ್ಯಗಾರ ಅವರು ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿರುವ ಅವರ ಮನೆಗೆ ಹೋಗಿ ಆಮಂತ್ರಣ ಪತ್ರವನ್ನು ನೀಡಿದರು.

ವಿವಾದಗಳ ಕಿಚ್ಚನ್ನು ನಂದಿಸಿ – ಅನಗತ್ಯ ಪಾತ್ರಗಳ ಪೋಷಣೆ ಅಗತ್ಯವಿದೆಯೇ?  

ಕೆಲವೊಂದು ವಿಚಾರಗಳನ್ನು ಇಲ್ಲಿ ಯಾರಿಗೂ ನೋವಾಗದಂತೆ ಬರೆಯಬೇಕಾಗಿದೆ. ಯಾಕೆಂದರೆ ಹೆಚ್ಚಿನ ಕಲಾವಿದರು ನಾನು ತಿಳಿದಿರುವಂತೆ ಸೂಕ್ಷ್ಮ  ಮನೋಭಾವದವರಾಗಿರುತ್ತಾರೆ. ಇತ್ತೀಚಿನ ಕೆಲವು ವಿದ್ಯಮಾನಗಳನ್ನು ಗಮನಿಸುವಾಗ ಯಕ್ಷಗಾನ ಕಲಾವಿದರು ಅನಗತ್ಯ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದಂತೆ ಜಾಗ್ರತೆಯಿಂದಿರುವುದು ಒಳ್ಳೆಯದು ಎಂದು ಅನಿಸುತ್ತದೆ. ಯಾಕೆಂದರೆ ಈಗ ನಿಮ್ಮ ಪ್ರದರ್ಶನಗಳನ್ನು ಸಾಮಾಜಿಕ ಜಾಲತಾಣವೆಂಬ ಹದ್ದಿನ ಕಣ್ಣು ತದೇಕಚಿತ್ತದಿಂದ ನೋಡುತ್ತಿರುತ್ತದೆ. ಆದುದರಿಂದ ಕಲಾವಿದರು ತಮ್ಮ ಅಭಿನಯ ಮತ್ತು ಮಾತುಗಳ ಮೇಲೆ ಸ್ವಲ್ಪ ನಿಯಂತ್ರಣವನ್ನು ಅವರವರೇ ಸಾಧಿಸಬೇಕಾಗಿದೆ. 

ಒಂದು ಮಾತನ್ನು ಖೇದದಿಂದ ಹಾಗೂ ವಿಷಾದದಿಂದ ಹೇಳಬಯಸುತ್ತೇನೆ. ನಾವು ಈಗ ಇಪ್ಪತ್ತೊಂದನೇ ಶತಮಾನದಲ್ಲಿದ್ದೇವೆ. ಜಾತಿ ಪದ್ಧತಿಯನ್ನು ಹೊಡೆದೋಡಿಸಿದ್ದೇವೆ ಎಂದು ಯಾರಾದರೂ ಧೈರ್ಯದಿಂದ ಎದೆತಟ್ಟಿ ಹೇಳಬಹುದೇ?

ಅದು ಸಾಧ್ಯವಿಲ್ಲ. ಈಗ ಜಾತಿಯ ಭೂತ ಬೃಹದಾಕಾರವಾಗಿ ಬೆಳೆಯುತ್ತಿದೆ. ಅದು ಮತ್ತೂ ಬೆಳೆಯಬಹುದು. ಈ ಜಾತಿ ಎಂಬ ಭೂತವನ್ನು ಸಾಕುತ್ತಿರುವವರು ಹಲವಾರು ಮಂದಿ ಇದ್ದಾರೆ. ಓಟಿನ ಬೇಟೆಗೆ, ಮತವನ್ನು ಗಳಿಸುವುದಕ್ಕೋಸ್ಕರ ಈ ಜಾತಿ ಎಂಬುದು ಜೀವಂತವಿರಲೇ ಬೇಕು. ನಮ್ಮ ಧರ್ಮ, ನಮ್ಮ ಜಾತಿ, ನಮ್ಮ ಮಠ, ನಮ್ಮ ಸ್ವಾಮಿಗಳು (ಸ್ವಾಮಿಗಳು ಎಂತಹವರೇ ಇರಲಿ, ಅದು ನಗಣ್ಯ) ಈ ಮನೋಭಾವ ಈಗ ಜನರಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ.

ಇತ್ತೀಚೆಗೆ ಯಕ್ಷಗಾನದಲ್ಲೂ ಜಾತಿ ವಿಪರೀತ ಸದ್ದು ಮಾಡುತ್ತಿದೆ. ಪುರಾಣ ಪ್ರಸಂಗಗಳಲ್ಲಿ ಸಾಧಾರಣವಾಗಿ ಎಲ್ಲಾ ಜಾತಿಯ ಪಾತ್ರಗಳು ಬರುತ್ತವೆ. ಅದರಲ್ಲಿ ಕೆಲವೊಂದು ಜಾತಿಯ ಪಾತ್ರಗಳು ಹೆಚ್ಚಾಗಿ ಕಾಣಸಿಗುತ್ತವೆ. ಇಂತಹಾ ಸಂದರ್ಭದಲ್ಲಿ ಈ ಪಾತ್ರಗಳನ್ನು ನಿರ್ವಹಿಸುವ ಕಲಾವಿದರು ಎಚ್ಚರ ವಹಿಸದಿದ್ದರೆ ವಿವಾದ ಕಟ್ಟಿಟ್ಟ ಬುತ್ತಿ.

ಮೊದಲಾಗಿ ಪಾತ್ರೋಚಿತವಾಗಿ ಮಾತನಾಡುವುದು ಮುಖ್ಯವಾಗುತ್ತದೆ. ಅನಗತ್ಯವಾಗಿ ಕೆಲವು ಶಬ್ದಗಳನ್ನು ಉಪಯೋಗಿಸುವುದು, ಜಾತಿಯ ಹೆಸರುಗಳನ್ನು ಎತ್ತಿ ಹೇಳುವುದು ಮೊದಲಾದುವುಗಳನ್ನು ಮಾಡದಿದ್ದರೆ ಒಳ್ಳೆಯದು. ಚಪ್ಪಾಳೆ ಹೊಡೆಯುವವರು, ವಿಸಿಲ್ ಹಾಕುವವರು ಹಲವಾರು ಮಂದಿ ಇರುತ್ತಾರೆ. ಆದರೆ ಅದರಿಂದ ಕಲಾವಿದರು ಪ್ರೇರಿತರಾಗಬಾರದು. ಅಲ್ಲಿ ಚಪ್ಪಾಳೆ ಹೊಡೆದವರೇ ಆಮೇಲೆ ವಿವಾದಗಳುಂಟಾದಾಗ “ಅವನಿಗೆ ಇದು ಬೇಕಿತ್ತಾ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದದ್ದನ್ನೂ ಕಂಡಿದ್ದೇವೆ.

ಇನ್ನೂ ಒಂದು ಮುಖ್ಯವಾದ ವಿಚಾರ. ಕೆಲವೊಂದು ಹಿಂದಿನಿಂದ ಬಂದ ಪಾತ್ರ ಹಾಗೂ  ಸಂಪ್ರದಾಯ ಸನ್ನಿವೇಶಗಳನ್ನು ಕಲಾವಿದರು ಈಗ ಪ್ರದರ್ಶನದಲ್ಲಿ ಮಾಡದೆ ಬಿಡುವುದು ಒಳಿತು. ಇಲ್ಲದಿದ್ದರೆ ಅದು ವಿವಾದಕ್ಕೆಡೆಯಾಗಬಹುದು. ಹಿಂದಿನ ಹಿರಿಯ ಕಲಾವಿದರು ಹೀಗೆ ಹೇಳಿದ್ದಾರೆ, ಅಥವಾ ಅವರು ಮಾಡಿದ್ದಾರೆ ಎಂದು ಈಗ ಅದನ್ನೇ ಮುಂದುವರಿಸಲು ಸಾಧ್ಯವಿಲ್ಲ. ಯಾಕೆಂದರೆ ಕೆಲವು ಪುರಾಣಗಳಲ್ಲಿಲ್ಲದ ವಿಚಾರ ಹಾಗೂ ಪಾತ್ರಗಳನ್ನು ಮನೋರಂಜನೆ ಮತ್ತು ಹಾಸ್ಯಕ್ಕಾಗಿ ಯಕ್ಷಗಾನದಲ್ಲಿ ಸೇರಿಸಲಾಗಿದೆ. ಇವುಗಳನ್ನು ಭವಿಷ್ಯದಲ್ಲಿ ಬಿಡಬೇಕಾಗಿ ಬರಬಹುದು.

ಹೆಚ್ಚಿನ ಕ್ಷೇತ್ರ ಮಹಾತ್ಮೆ ಪ್ರಸಂಗಗಳು ಪುರಾಣಗಳಲ್ಲಿ ಇಲ್ಲದ ವಿಚಾರಗಳಾದ್ದರಿಂದ ಅವುಗಳನ್ನು ಪ್ರದರ್ಶಿಸುವಾಗ ಕಲಾವಿದರು ಹೆಚ್ಚು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಯಕ್ಷಗಾನದ ಕಾಲ್ಪನಿಕ ಪ್ರಸಂಗಗಳಲ್ಲಿ ಹಾಸ್ಯಕ್ಕಾಗಿ ಅನಗತ್ಯ ಜಾತಿಯ ಪಾತ್ರಗಳನ್ನು ದಯವಿಟ್ಟು ತುರುಕಬೇಡಿ ಎಂದು ಪ್ರಸಂಗಕರ್ತರಲ್ಲಿ ವಿನಂತಿಸುತ್ತೇನೆ. ಪುರಾಣ ಪ್ರಸಂಗಗಳಲ್ಲಿಯೂ ಅನಗತ್ಯ ಪಾತ್ರಗಳನ್ನು ಮುಂದುವರಿಸುವ ಅಗತ್ಯ ಇಲ್ಲ.

ಯಕ್ಷಗಾನದಲ್ಲಿ ಎಷ್ಟೆಲ್ಲಾ ಬದಲಾವಣೆ ತಂದಿದ್ದೇವೆ. ಈ ವಿಚಾರದಲ್ಲಿಯೂ ಸಮಾಜದ ಹಾಗೂ ಕಲಾವಿದರ ಒಳಿತಿಗಾಗಿ ಕೆಲವು ಆರೋಗ್ಯಕರ ಬದಲಾವಣೆಗಳನ್ನು ತರಬಾರದೇಕೆ? ವೃಥಾ ವಿವಾದಕ್ಕೆಡೆಯಾಗದಂತೆ ಸುಮ್ಮನಿರುವುದೇ ಒಳ್ಳೆಯದು. ಯಾವುದೇ ಜಾತಿ, ಹಾಗೂ ಸಂಬಂಧಿತ ವಿಚಾರಗಳನ್ನು ಅನಗತ್ಯವಾಗಿ ಅಪಹಾಸ್ಯ ಮಾಡದಿರುವುದರಿಂದ ವಿವಾದಗಳಿಂದ ದೂರವಿರಬಹುದು.  ಜಾತಿಯ ವಿಚಾರ ಬೇಡ. ಜಾತಿಯ ವಿವಾದದ ಕಿಚ್ಚನ್ನು ನೀರೆರೆದು ನಂದಿಸಿ.

ಬರಹ: ಯಕ್ಷರಸಿಕ

ನಾಳೆಯಿಂದ ತಾಳಮದ್ದಳೆ ಸಪ್ತಾಹ – ಯಜ್ಞ ಸಂರಕ್ಷಣೆ-ಅಹಲ್ಯೋದ್ಧಾರ-ಸೀತಾಕಲ್ಯಾಣ, ವನಗಮನ-ಪಾದುಕಾಪ್ರದಾನ, ಮಾರೀಚನೀತಿ-ಸೀತಾಪಹಾರ, ರಾಮದರ್ಶನ-ಸುಗ್ರೀವಸಖ್ಯ, ವಾಲಿಮೋಕ್ಷ-ಚೂಡಾಮಣಿ-ವಿಭೀಷಣ ಪ್ರಪತ್ತಿ, ಕುಂಭಕರ್ಣ-ಅತಿಕಾಯ-ಇಂದ್ರಜಿತು-ರಾವಣವಧೆ, ಅಗ್ನಿಪರೀಕ್ಷೆ-ರಾಮೇಶ್ವರ ಕ್ಷೇತ್ರ ಮಹಾತ್ಮೆ-ನಿಜಪಟ್ಟಾಭಿಷೇಕ 

ನಾಳೆ ದಿನಾಂಕ 07.02.2023, ಮಂಗಳವಾರದಿಂದ ರಾಮಾಯಣದ ವಿವಿಧ ಪ್ರಸಂಗಗಳ ತಾಳಮದ್ದಳೆ ಸಪ್ತಾಹ ನಡೆಯಲಿದೆ.

ಅಶ್ವತ್ಥಪುರದ ಶ್ರೀ ಬಹ್ಮಾನಂದ ಸದನದಲ್ಲಿ ನಾಳೆಯಿಂದ ( 07.02.2023) ಏಳು ದಿನಗಳ ಕಾಲ ಪ್ರತಿದಿನ ಸಂಜೆ 4.45 ಘಂಟೆಗೆ ತಾಳಮದ್ದಳೆ ಆರಂಭವಾಗಲಿದೆ. 

ರಾಮಾಯಣದ ವಿವಿಧ ಪ್ರಸಂಗಗಳಾದ  ಯಜ್ಞ ಸಂರಕ್ಷಣೆ-ಅಹಲ್ಯೋದ್ಧಾರ-ಸೀತಾಕಲ್ಯಾಣ, ವನಗಮನ-ಪಾದುಕಾಪ್ರದಾನ, ಮಾರೀಚನೀತಿ-ಸೀತಾಪಹಾರ, ರಾಮದರ್ಶನ-ಸುಗ್ರೀವಸಖ್ಯ, ವಾಲಿಮೋಕ್ಷ-ಚೂಡಾಮಣಿ-ವಿಭೀಷಣ ಪ್ರಪತ್ತಿ, ಕುಂಭಕರ್ಣ-ಅತಿಕಾಯ-ಇಂದ್ರಜಿತು-ರಾವಣವಧೆ, ಅಗ್ನಿಪರೀಕ್ಷೆ-ರಾಮೇಶ್ವರ ಕ್ಷೇತ್ರ ಮಹಾತ್ಮೆ-ನಿಜಪಟ್ಟಾಭಿಷೇಕ ಎಂಬ ಕಥಾನಕಗಳು ತಾಳಮದ್ದಳೆ ರೂಪದಲ್ಲಿ ಪ್ರಸ್ತುತಿಯಾಗಲಿದೆ.

ಕಲಾವಿದರ ವಿವರಗಳಿಗೆ ಚಿತ್ರ ನೋಡಿ 

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ಮೇಲೆ ಆಂಬ್ಯುಲೆನ್ಸ್‌ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಆಸ್ಪತ್ರೆ ಸಿಬ್ಬಂದಿ ಬಂಧನ

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದ ಮಹಿಳೆಯ ಮೇಲೆ ಆಂಬ್ಯುಲೆನ್ಸ್‌ನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

ತನ್ನ ಜೀವನವನ್ನು ಕೊನೆಗೊಳಿಸಲು ವಿಷ ಸೇವಿಸಿದ ಮಹಿಳೆ ಅಪರಿಚಿತನೊಬ್ಬನ ಕೈಯಲ್ಲಿ ಹೆಚ್ಚಿನ ಚಿತ್ರಹಿಂಸೆಯನ್ನು ಅನುಭವಿಸಿದ್ದಾಳೆ.

ತುರ್ತು ಕಾರ್ಯಾಚರಣೆಯಲ್ಲಿ ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನಲ್ಲಿ ಈ ಭೀಕರ ಘಟನೆ ನಡೆದಿದೆ.

ತ್ರಿಶೂರ್ ಸಮೀಪ ನಡೆದ ಈ ಘಟನೆಯಲ್ಲಿ ಕೊಡುಂಗಲ್ಲೂರು ತಾಲೂಕು ಆಸ್ಪತ್ರೆಯಲ್ಲಿ ಹಂಗಾಮಿ ಸಿಬ್ಬಂದಿಯಾಗಿರುವ ದಯಾಲಾಲ್ ಅವರನ್ನು ಬಂಧಿಸಲಾಗಿದೆ.

16 ವರ್ಷದ ಬಾಲಕಿಯ ಮೇಲೆ ಶಾರ್ಕ್ ದಾಳಿ – ಬಾಲಕಿ ಸಾವು

0

ಡಾಲ್ಫಿನ್‌ಗಳೊಂದಿಗೆ ಈಜುವಾಗ 16 ವರ್ಷದ ಬಾಲಕಿಯು ಅಪಾಯಕಾರಿ ಜಲಚರ ಶಾರ್ಕ್‌ ದಾಳಿಯಿಂದ ಸಾವಿಗೀಡಾಗಿದ್ದಾಳೆ.

ಶಾರ್ಕ್ ದಾಳಿ ಸಂಭವಿಸಿದಾಗ ಹುಡುಗಿ ನದಿಯಲ್ಲಿ ಡಾಲ್ಫಿನ್‌ಗಳ ಪಾಡ್‌ನೊಂದಿಗೆ ಈಜಲು ಜೆಟ್ ಸ್ಕೀಯಿಂದ ಜಿಗಿದಿದ್ದಾಳೆ ಎಂದು ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪ್ ಭಾನುವಾರ ವರದಿ ಮಾಡಿದೆ. ಪಶ್ಚಿಮ ಆಸ್ಟ್ರೇಲಿಯಾದ ರಾಜ್ಯ ರಾಜಧಾನಿ ಪರ್ತ್‌ನಲ್ಲಿ ನದಿಯಲ್ಲಿ ಶಾರ್ಕ್‌ನಿಂದ 16 ವರ್ಷದ ಬಾಲಕಿಯೊಬ್ಬಳು ಶನಿವಾರ ಸಾವನ್ನಪ್ಪಿದ್ದಾಳೆ.

ಶನಿವಾರ (0745 GMT) ಪರ್ತ್‌ನ ಫ್ರೀಮೆಂಟಲ್ ಬಂದರು ಪ್ರದೇಶದಲ್ಲಿ ಸ್ವಾನ್ ನದಿಯ ಸಂಚಾರ ಸೇತುವೆಯ ಬಳಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶಾರ್ಕ್ ದಾಳಿ ಸಂಭವಿಸಿದಾಗ ಯುವತಿಯು ನದಿಯಲ್ಲಿ ಡಾಲ್ಫಿನ್‌ಗಳ ಪಾಡ್‌ನೊಂದಿಗೆ ಈಜಲು ಜೆಟ್ ಸ್ಕೀಯಿಂದ ಹಾರಿದ್ದರು ಎಂದು ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪ್ ಭಾನುವಾರ ವರದಿ ಮಾಡಿದೆ.

ಯಾವ ರೀತಿಯ ಶಾರ್ಕ್ ಬಾಲಕಿಯ ಮೇಲೆ ದಾಳಿ ಮಾಡಿದೆ ಎಂದು ಅಧಿಕಾರಿಗಳಿಗೆ ಖಚಿತವಾಗಿಲ್ಲ ಎಂದು ಎಬಿಸಿ ವರದಿ ಮಾಡಿದೆ.

ಗುರುದಕ್ಷಿಣೆ, ಪಾಂಚಜನ್ಯ, ದಕ್ಷಯಜ್ಞ – ತೆಂಕುತಿಟ್ಟು, ಬಡಗುತಿಟ್ಟುಗಳ ಯಕ್ಷಗಾನ ಪ್ರದರ್ಶನ 

ಕರಾವಳಿ ಯಕ್ಷಗಾನ ಕೇಂದ್ರದ ಹನ್ನೆರಡನೆಯ ವಾರ್ಷಿಕೋತ್ಸವದ ಅಂಗವಾಗಿ  ತೆಂಕುತಿಟ್ಟು, ಬಡಗುತಿಟ್ಟುಗಳ  ಯಕ್ಷಗಾನ ಪ್ರದರ್ಶನ ನಡೆಯಲಿದೆ. 

ಗುರುದಕ್ಷಿಣೆ, ಪಾಂಚಜನ್ಯ, ದಕ್ಷಯಜ್ಞ ಎಂಬ ಪ್ರಸಂಗಗಳ ಪ್ರದರ್ಶನ ಮೈಸೂರಿನಲ್ಲಿ ನಡೆಯಲಿದೆ. ವಿವರಗಳಿಗಾಗಿ ಚಿತ್ರ ನೋಡಿ 

ಅಕ್ರಮ ಸಂಬಂಧ ಹಿನ್ನೆಲೆ, ಕತ್ತು ಹಿಸುಕಿ ಪತಿಯನ್ನು ಹತ್ಯೆ ಮಾಡಿದ ಪತ್ನಿ, ಪ್ರಿಯಕರನ ಪಾತ್ರದ ಶಂಕೆ ಬಗ್ಗೆ ತನಿಖೆ

ಪ್ರಿಯಕರನೊಂದಿಗೆ ಬಾಳಲು ಮಹಿಳೆಯೊಬ್ಬರು ತನ್ನ ಪತಿಯನ್ನೇ ಕತ್ತು ಹಿಸುಕಿ ಕೊಂದ ಘಟನೆಯಲ್ಲಿ ಪ್ರಿಯಕರನ ಪಾತ್ರವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ.

ಮಲಪ್ಪುರಂ ವೆಂಗಾರ ಇರಿಂಗಲ್ಲೂರು ಕೊಟ್ಟೈಕಲ್ ರಸ್ತೆಯ ಯರಮ್ ಪಾಡಿ ಪಿಕೆ ಕ್ವಾರ್ಟರ್ಸ್‌ನಲ್ಲಿ ವಾಸವಾಗಿರುವ ಬಿಹಾರ ಮೂಲದ ಪೂನಂ ದೇವಿ (30) ಎಂಬುವರು ಪತಿ ಸಂಜಿತ್ ಪಾಸ್ವಾನ್ (33) ಅವರನ್ನು ಸೀರೆಯಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾರೆ. ಜನವರಿ 31ರ ರಾತ್ರಿ ಈ ಘೋರ ಕೃತ್ಯ ನಡೆದಿದೆ.

ಶುಕ್ರವಾರ ಬಂಧಿತ ಮಹಿಳೆಯನ್ನು ರಿಮಾಂಡ್ ಮಾಡಲಾಗಿದ್ದು, ಮಂಜೇರಿ ಉಪ ಕಾರಾಗೃಹದಲ್ಲಿದ್ದಾರೆ. ಕೊಲೆಯ ಹಿಂದೆ ಮಹಿಳೆಯ ಕೈವಾಡವಿದೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಬಿಹಾರದಲ್ಲಿರುವ ಆಕೆಯ ಪ್ರಿಯಕರನ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ವೆಂಗರಾ ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

ಪೂನಂ ದೇವಿ ಮದುವೆಯಾಗಿ ಮಕ್ಕಳಿರುವ ತನ್ನ ಊರಿನ ಯುವಕನೊಂದಿಗೆ ಸಂಬಂಧ ಹೊಂದಿದ್ದಳು. ಈ ಸಂಬಂಧದಿಂದ ಪತ್ನಿಯನ್ನು ದೂರವಿಡಲು ಪಾಸ್ವಾನ್ ತನ್ನ ಪತ್ನಿ ಮತ್ತು ಐದು ವರ್ಷದ ಮಗನನ್ನು ಎರಡು ತಿಂಗಳ ಹಿಂದೆ ತನ್ನ ಕೆಲಸದ ಸ್ಥಳವಾದ ವೆಂಗಾರಾಕ್ಕೆ ಕರೆತಂದಿದ್ದ. ಆದರೂ ಸೀಕ್ರೆಟ್ ಫೋನ್ ಬಳಸಿ ಸಂಬಂಧ ಮುಂದುವರಿಸಿದ್ದಾಳೆ.

ಆಕೆ ಪತಿಯನ್ನು ಕೊಲ್ಲಲು ನಿರ್ಧರಿಸಿದ್ದಳು. ಅವನು ಮಲಗಿದ್ದಾಗ ಅವನ ಕೈಗಳನ್ನು ಟವೆಲ್‌ನಿಂದ ಕಟ್ಟಿ ನಂತರ ತನ್ನ ಸೀರೆಯನ್ನು ಬಳಸಿ ಗಂಟು ಹಾಕಿ ಕತ್ತು ಹಿಸುಕಿ ಸಾಯಿಸಿದ್ದಾಳೆ.

ಅವನನ್ನು ಹಾಸಿಗೆಯಿಂದ ಕೆಳಕ್ಕೆ ತಳ್ಳಿ, ಅವಳು ಅವನ ಸಾವನ್ನು ಖಚಿತಪಡಿಸಿದ ನಂತರ ಅವನ ಕುತ್ತಿಗೆ ಮತ್ತು ಕೈಗಳ ಗಂಟು ಬಿಚ್ಚಿ ಮತ್ತು ಅವನು ಅನಾರೋಗ್ಯದಿಂದ ಬಳಲುತ್ತಿದ್ದಾನೆ ಎಂದು ಪಕ್ಕದ ಕೋಣೆಯಲ್ಲಿದ್ದ ಜನರಿಗೆ ತಿಳಿಸಿದಳು. ಅವರ ಸಹಾಯದಿಂದ ತಿರುರಂಗಡಿ ತಾಲೂಕು ಆಸ್ಪತ್ರೆಗೆ ಕರೆತಂದಾಗ ಮುಖ ಮತ್ತು ಹಣೆಯ ಮೇಲೆ ಗಾಯಗಳಾಗಿದ್ದು, ಕತ್ತು ಹಿಸುಕಿದ ಗುರುತು ಕಂಡುಬಂದಿದೆ.

ಮರಣೋತ್ತರ ಪರೀಕ್ಷೆಯಲ್ಲಿ ಕತ್ತಿನ ಮೂಳೆ ಮುರಿದಿರುವುದು ಪತ್ತೆಯಾಗಿದೆ. ಪೊಲೀಸರು ಪೂನಂ ದೇವಿಯನ್ನು ಕೂಲಂಕುಷವಾಗಿ ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾಳೆ.