Sunday, March 15, 2026
Home Blog Page 112

ನಾಲ್ಕು ಕಾಲುಗಳ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

0

ಗ್ವಾಲಿಯರ್‌ನಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಭೋಪಾಲ್: ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಾಲ್ಕು ಕಾಲುಗಳ ಹೆಣ್ಣು ಮಗು  ಜನಿಸಿದೆ. ಹೆಣ್ಣು ಮಗುವಿನ ತೂಕ 2.3 ಕೆ.ಜಿ. ಜನನದ ನಂತರ, ಗ್ವಾಲಿಯರ್‌ನ ಜಯರೋಗ ಆಸ್ಪತ್ರೆಯ ಅಧೀಕ್ಷಕರೊಂದಿಗೆ ವೈದ್ಯರ ತಂಡವು ಶಿಶುವನ್ನು ಪರೀಕ್ಷಿಸಿತು.

ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಜನರಲ್ಲಿ ಕುತೂಹಲ ಮೂಡಿಸಿದೆ. ಇಲ್ಲಿನ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಅವರು ಬುಧವಾರ ಮಗುವಿಗೆ ಜನ್ಮ ನೀಡಿದ್ದಾರೆ. ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

“ಮಗುವಿಗೆ ಜನನದಲ್ಲಿ ನಾಲ್ಕು ಕಾಲುಗಳಿವೆ, ಆಕೆಗೆ ದೈಹಿಕ ವಿಕಲತೆ ಇದೆ. ಕೆಲವು ಭ್ರೂಣಗಳು ಹೆಚ್ಚುವರಿಯಾಗುತ್ತವೆ, ಇದನ್ನು ವೈದ್ಯಕೀಯ ವಿಜ್ಞಾನದ ಭಾಷೆಯಲ್ಲಿ ಇಶಿಯೋಪಾಗಸ್ ಎಂದು ಕರೆಯಲಾಗುತ್ತದೆ. ಭ್ರೂಣವು ಎರಡು ಭಾಗಗಳಾಗಿ ವಿಭಜನೆಯಾದಾಗ, ದೇಹವು ಎರಡು ಸ್ಥಳಗಳಲ್ಲಿ ಬೆಳವಣಿಗೆಯಾಗುತ್ತದೆ, ಈ ಹೆಣ್ಣು ಮಗುವಿನ ಸೊಂಟದ ಕೆಳಗಿನ ಭಾಗವು ಎರಡು ಹೆಚ್ಚುವರಿ ಕಾಲುಗಳೊಂದಿಗೆ ಅಭಿವೃದ್ಧಿಗೊಂಡಿದೆ, ಆದರೆ ಆ ಕಾಲುಗಳು ನಿಷ್ಕ್ರಿಯವಾಗಿವೆ ಎಂದು ಜಯರೋಗ್ಯ ಆಸ್ಪತ್ರೆ ಸಮೂಹದ ಸೂಪರಿಂಟೆಂಡೆಂಟ್ ಡಾ.ಆರ್.ಕೆ.ಎಸ್.ಧಕಡ್ ಎಎನ್‌ಐಗೆ ತಿಳಿಸಿದರು,

”ಇದೀಗ ಮಕ್ಕಳ ವಿಭಾಗದ ವೈದ್ಯರು ದೇಹದ ಯಾವುದೇ ಭಾಗದಲ್ಲಿ ಬೇರೆ ಯಾವುದೇ ಅಂಗವಿಕಲತೆ ಇದೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಪರೀಕ್ಷೆ ಬಳಿಕ ಆಕೆ ಆರೋಗ್ಯವಾಗಿದ್ದರೆ ಶಸ್ತ್ರಚಿಕಿತ್ಸೆ ಮೂಲಕ ಆ ಕಾಲುಗಳನ್ನು ಹೊರತೆಗೆಯಲಾಗುತ್ತದೆ. ಇದರಿಂದ ಆಕೆ ಸಹಜ ಜೀವನ ನಡೆಸಬಹುದು. “ಧಕಡ್ ಹೇಳಿದರು.

“ಸದ್ಯ ಕಮಲರಾಜ ಆಸ್ಪತ್ರೆಯ ಶಿಶುವೈದ್ಯಕೀಯ ವಿಭಾಗದ ವಿಶೇಷ ನವಜಾತ ನಿಗಾ ಘಟಕದಲ್ಲಿ ಹೆಣ್ಣು ಶಿಶುವನ್ನು ದಾಖಲಿಸಲಾಗಿದೆ. ಶಿಶುವಿನ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಆಕೆಯ ಹೆಚ್ಚುವರಿ ಕಾಲುಗಳನ್ನು ತೆಗೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಸದ್ಯ ಹೆಣ್ಣು ಮಗು ಸಂಪೂರ್ಣ ಆರೋಗ್ಯವಾಗಿದೆ’ ಎಂದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

0

ಪುತ್ತೂರು, ಡಿ 15 : ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ‘ಕೈಗಾರಿಕಾ ಭೇಟಿ’ ಕಾರ್ಯಕ್ರಮ ನಡೆಯಿತು. ಪದವಿ ಪೂರ್ವ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಮಂಗಳೂರಿನ ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳ ಘಟಕ ಮಂಗಳೂರು ಡೇರಿಗೆ ಭೇಟಿ ನೀಡಿದರು.

ಅದೇ ರೀತಿ ಮಂಗಳೂರಿನ ಬೈಕಂಪಾಡಿಯ ಗೇರುಬೀಜ ಸಂಸ್ಕರಣೆ ಹಾಗೂ ರಫ್ತು ಘಟಕವಾದ ಅಚಲ್ ಇಂಡಸ್ಟ್ರೀಸ್, ವಾಹನಗಳ ಸಸ್ಪೆಷನ್ಸ್ ತಯಾರಿಕಾ ಘಟಕ ಲಾಮಿನಾ ಸಸ್ಪೆಷನ್ಸ್ ಮತ್ತು ಒಡ್ಡೂರು ಫಾರ್ಮ್ಸ್ಗೆ ಭೇಟಿ ನೀಡಿ ಮಾಹಿತಿ ಪಡೆದರು.

ಘಟಕದಲ್ಲಿ ಉತ್ಪಾದಿಸಿದ ವಿವಿಧ ಬಗೆಯ ಉತ್ಪನ್ನಗಳನ್ನು ದೇಶದ ವಿವಿಧೆಡೆ ವಿತರಣೆ ಹಾಗೂ ಹೊರ ರಾಷ್ಟ್ರಗಳಿಗೆ ರಫ್ತು ಮಾಡಲಾಗುವ ವಿಧಾನಗಳ ಬಗ್ಗೆ ಮಾಹಿತಿಯನ್ನು ಪಡೆದರು.

ಸುಮಾರು 70 ವಿದ್ಯಾರ್ಥಿಗಳೊಂದಿಗೆ ವಾಣಿಜ್ಯ ಸಂಘದ ಸಂಯೋಜಕಿ ಉಷಾ ಎ. ಎಂ., ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀಧರ ಶೆಟ್ಟಿಗಾರ್ ಹಾಗೂ ವಿಭಾಗದ ಉಪನ್ಯಾಸಕರು ಭೇಟಿ ನೀಡಿದರು.

ಇಂದು ಆಟ ಎಲ್ಲೆಲ್ಲಿ? (16-12-2022, ಶುಕ್ರವಾರ)

ಮೇಳಗಳ ಇಂದಿನ (16.12.2022) ಯಕ್ಷಗಾನ ಪ್ರದರ್ಶನಗಳ ವಿವರ

ಶ್ರೀ ಧರ್ಮಸ್ಥಳ ಮೇಳ == ಹಳ್ಳಿಹೊಳೆ ಅಕ್ಕಿನಕೊಡ್ಲು – ಶ್ರೀ ದೇವಿ ಮಹಾತ್ಮೆ 

ಕಟೀಲು ಒಂದನೇ ಮೇಳ == ಶ್ರೀ ಜನಾರ್ದನ ದೇವಸ್ಥಾನ ಎರ್ಮಾಳ್ ವಯಾ ಪಡುಬಿದ್ರಿ 

ಕಟೀಲು ಎರಡನೇ ಮೇಳ == ಕಟೀಲು ಕ್ಷೇತ್ರದಲ್ಲಿ ಸರಸ್ವತಿ ಸದನ 

ಕಟೀಲು ಮೂರನೇ ಮೇಳ== ಕಟೀಲು ಕ್ಷೇತ್ರದಲ್ಲಿ ಮಹಾಲಕ್ಷ್ಮಿ ಸದನ 

ಕಟೀಲು ನಾಲ್ಕನೇ ಮೇಳ  == ‘ಪಂಚ ಪುಷ್ಪ’ ಹಳೆಯಂಗಡಿ 

ಕಟೀಲು ಐದನೇ ಮೇಳ == ಶ್ರೀರಾಮ ಸೇವಾ ಟ್ರಸ್ಟ್ ಅಲ್ಲಿಪಾದೆ ಬಂಟ್ವಾಳ 

ಕಟೀಲು ಆರನೇ ಮೇಳ == ರೌದ್ರನಾಥೇಶ್ವರ ಭಜನಾ ಮಂಡಳಿ ನಡಿಬೆಟ್ಟು ಬಂಟ್ವಾಳ 

ಮಂದಾರ್ತಿ ಒಂದನೇ ಮೇಳ  == ಸಿರಿಧಾಮ ಹಸಿಕೊಡ್ಲು ಕಿರಾಡಿ 

ಮಂದಾರ್ತಿ ಎರಡನೇ ಮೇಳ   == ಸಿರಿಧಾಮ ಹಸಿಕೊಡ್ಲು ಕಿರಾಡಿ 

ಮಂದಾರ್ತಿ ಮೂರನೇ ಮೇಳ  ==  ಸಿರಿಧಾಮ ಹಸಿಕೊಡ್ಲು ಕಿರಾಡಿ 

ಮಂದಾರ್ತಿ ನಾಲ್ಕನೇ ಮೇಳ   == ಸಿರಿಧಾಮ ಹಸಿಕೊಡ್ಲು ಕಿರಾಡಿ 

ಮಂದಾರ್ತಿ ಐದನೇ ಮೇಳ  == ಸಿರಿಧಾಮ ಹಸಿಕೊಡ್ಲು ಕಿರಾಡಿ 

ಹನುಮಗಿರಿ ಮೇಳ == ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದ ಹೊರಾಂಗಣ – ಅಭಿಮನ್ಯು ಕಾಳಗ, ದುಶ್ಶಾಸನ ವಧೆ, ಕರಂಡಕಾಸುರ ಕಾಳಗ 

ಶ್ರೀ ಸಾಲಿಗ್ರಾಮ ಮೇಳ == ಮೂಡಬಿದ್ರೆ ಸ್ವರಾಜ್ ಮೈದಾನ – ಚಿತ್ರಾ ನಕ್ಷತ್ರ 

ಶ್ರೀ ಪೆರ್ಡೂರು ಮೇಳ == ಶ್ರೀ ಮಹಾಗಣಪತಿ ಭಜನಾ ಮಂಡಳಿ ಬಡಾಕೇರಿ – ಕೃಷ್ಣ ಕಾದಂಬಿನಿ 

ಶ್ರೀ ಮಾರಣಕಟ್ಟೆ ಮೇಳ ‘ಎ’ == ಹುಣ್ಸೆಕಟ್ಟೆಮನೆ ನೈಕಂಬ್ಳಿ ಚಿತ್ತೂರು 

ಶ್ರೀ ಮಾರಣಕಟ್ಟೆ ಮೇಳ ‘ಬಿ ==  ನಾವುಂದ ಚಾತನಕೇರಿ ಬೊಬ್ಬರ್ಯ ದೇವಸ್ಥಾನ ವಠಾರ 

ಶ್ರೀ ಮಾರಣಕಟ್ಟೆ ಮೇಳ ‘ಸಿ == ಹುಣ್ಸೆಕಟ್ಟೆಮನೆ ನೈಕಂಬ್ಳಿ ಚಿತ್ತೂರು 

ಶ್ರೀ ಪಾವಂಜೆ ಮೇಳ ==  ಶ್ರೀ ಕ್ಷೇತ್ರ ಪಾವಂಜೆ – ವಧು ವೈಶಾಲಿನಿ 

ಶ್ರೀ ಕಮಲಶಿಲೆ ಮೇಳ == ಕಾಡಯ್ಯ ಕುಪ್ಪಳ್ಳಿ ತೀರ್ಥಹಳ್ಳಿ 

ಶ್ರೀ ಅಮೃತೇಶ್ವರೀ ಮೇಳ, ಕೋಟ == ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನ ಬೆಣ್ಣೆಕುದ್ರು ಬಾರ್ಕೂರು 

ಶ್ರೀ ಸೌಕೂರು ಮೇಳ == ಕೋಟತಟ್ಟು ಪಡುಕೆರೆ ಶ್ರೀ ನಂದಿಕೇಶ್ವರ ದೇವಸ್ಥಾನ ವಠಾರ – ಧರ್ಮದೈವ ನಂದಿಕೇಶ್ವರ 

ಶ್ರೀ ಮಡಾಮಕ್ಕಿ ಮೇಳ == ಸೋಮೇಶ್ವರ ಈಶ್ವರ ದೇವಸ್ಥಾನ ಪೇಟೆ ಆಟ – ಪಂಚಗಿರಿ ಪಂಜುರ್ಲಿ 

ಶ್ರೀ ಕ್ಷೇತ್ರ ಗೋಳಿಗರಡಿ ಮೇಳ == ಕುಂಭಾಸಿ ಕೊರವಡಿ ಶ್ರೀ ಮಲಸಾವರಿ ಶ್ರೀ ಮಾಂಕಾಳಿ ದೇವಸ್ಥಾನ ವಠಾರ – ಮಂತ್ರಮಾಂಗಲ್ಯ 

ಶ್ರೀ ಹಿರಿಯಡಕ ಮೇಳ == ಸರಳೀಕಟ್ಟೆ ಹೊಸಮೊಗ್ರು ತೆಕ್ಕಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ – ಮಂತ್ರದ ಮಾಂಗಲ್ಯ (ತುಳು)

ಶ್ರೀ ಶನೀಶ್ವರ ಮೇಳ == ಅಂಪಾರು 

ಶ್ರೀ ನೀಲಾವರ ಮೇಳ  == ಕೊಕ್ಕರ್ಣೆ ಸಾಸ್ತಾವು 

ಶ್ರೀ ಮೇಗರವಳ್ಳಿ ಮೇಳ ==  ಮೇಗರವಳ್ಳಿ ಶ್ರೀ ಕ್ಷೇತ್ರದಲ್ಲಿ – ಶ್ರೀ ಚೌಡೇಶ್ವರಿ ಮಹಾತ್ಮೆ 

ಶ್ರೀ ಹಟ್ಟಿಯಂಗಡಿ ಮೇಳ == ಶ್ರೀ ಚಿಕ್ಕಮ್ಮ ದೈವಸ್ಥಾನ ನೈಲಾಡಿ 

ಶ್ರೀ ಹಾಲಾಡಿ ಮೇಳ == ಸಿದ್ಧಾಪುರ ಮೇಲ್ ಕಡ್ರಿ  – ಸಂಪೂರ್ಣ ಶ್ರೀ ದೇವಿ ಮಹಾತ್ಮೆ 

ಶ್ರೀ ಬೋಳಂಬಳ್ಳಿ ಮೇಳ== ಗುಡಿ ಮಹಾಲಿಂಗೇಶ್ವರ ದೇವಸ್ಥಾನ ವಠಾರ – ಯಮಲೀಲೆ 

ಶ್ರೀ ಬಪ್ಪನಾಡು ಮೇಳ == ಕಲ್ಲುಮುಂಡ್ಕೂರು ದೈಲಬೆಟ್ಟು ದೈವಸ್ಥಾನದ ವಠಾರ 

ಶ್ರೀ ಸಸಿಹಿತ್ಲು ಭಗವತೀ ಮೇಳ == ನರಿಂಗಾನ ಮಲರಾಯ ಪಿಲಿಚಾಮುಂಡಿ ದೈವಸ್ಥಾನದ ವಠಾರ – ಶ್ರೀ ಶಬರಿಮಲೆ ಅಯ್ಯಪ್ಪ 

ಶ್ರೀ ಸುಂಕದಕಟ್ಟೆ ಮೇಳ ಬಜಪೆ  == ಪಂಜಿಕಲ್ಲು ಪಾಂಗಳಬೆಟ್ಟು ಐಸ್ರಗೋಳಿ – ಅಮರ ಶಿಲ್ಪಿ ವೀರ ಶಂಭು ಕಲ್ಕುಡ 

ಶ್ರೀ ದೇಂತಡ್ಕ ಮೇಳ == ಶ್ರೀ ಆದಿಶಕ್ತಿ ಭಜನಾ ಮಂದಿರ ಬೇರಿಕೆ ಪಡ್ನೂರು – ಮಂತ್ರದೇವತೆ 

ಶ್ರೀ ತಲಕಳ ಮೇಳ == ಮುರನಗರ – ಮಾಯಕೊದ ಬಿನ್ನೆದಿ  

ಶ್ರೀ ಗೆಜ್ಜೆಗಿರಿ ಮೇಳ ==  ಮಾರ್ನಾಡು ಏರಾಡಿ ಶ್ರೀ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನ ವಠಾರ – ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ 

ವೀಡಿಯೊ – ಕೇಸರಿ ಬಣ್ಣದ ಬಿಕಿನಿಯಲ್ಲಿ ಬೇಷರಂ ರಂಗ್ ಹಾಡಿಗೆ ಅಶ್ಲೀಲವಾಗಿ ನರ್ತಿಸಿದ ದೀಪಿಕಾ ಪಡುಕೋಣೆ – ಪಠಾಣ್ ಚಿತ್ರವನ್ನು ಬಾಯ್ಕಾಟ್ ಮಾಡಲು ಕರೆ ನೀಡಿದ ಸಂಘಟನೆಗಳು

0

ನಟಿ ದೀಪಿಕಾ ಪಡುಕೋಣೆ, ಕೇಸರಿ ಬಣ್ಣದ ಬಿಕಿನಿಯಲ್ಲಿ ಪಠಾಣ್ ಹಿಂದಿ ಸಿನಿಮಾದ ಬೇಷರಂ ರಂಗ್ ಹಾಡಿಗೆ ಅಶ್ಲೀಲವಾಗಿ ನರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ  ಪಠಾಣ್ ಚಿತ್ರವನ್ನು ಬಾಯ್ಕಾಟ್ ಮಾಡಲು ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿವೆ. ಚಿತ್ರದ ಮೊದಲ ಹಾಡು ಸೋಮವಾರ ಬಿಡುಗಡೆಯಾಗಿದೆ. ‘ಬೇಷರಂ ರಂಗ್’ ಹಾಡಿನಲ್ಲಿ ದೀಪಿಕಾ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.

ಇದೀಗ ಈ ಹಾಡಿನ ವಿರುದ್ಧ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹರಿಹಾಯ್ದಿದ್ದಾರೆ. ಹಾಡಿನ ದೃಶ್ಯಗಳಿಗೆ ಕೆಲವು ತಿದ್ದುಪಡಿಗಳನ್ನು ಮಾಡದೆ ಮಧ್ಯಪ್ರದೇಶದಲ್ಲಿ ಚಿತ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

“ಪಠಾನ್’ ಚಿತ್ರವು ದೋಷಗಳಿಂದ ತುಂಬಿದೆ ಮತ್ತು ವಿಷಕಾರಿ ಮನಸ್ಥಿತಿಯನ್ನು ಆಧರಿಸಿದೆ. ಹಾಡಿನಲ್ಲಿ ಬಳಸಿರುವ ಬಿಕಿನಿ ತುಂಬಾ ಆಕ್ಷೇಪಾರ್ಹವಾಗಿದೆ. ‘ಬೇಷರಂ ರಂಗ್’ ಹಾಡಿನ ಸಾಹಿತ್ಯ, ಹಾಡಿನಲ್ಲಿ ಧರಿಸಿರುವ ಕೇಸರಿ ಮತ್ತು ಹಸಿರು ಬಟ್ಟೆಗಳನ್ನು ಬದಲಾಯಿಸಬೇಕಾಗಿದೆ.

ಈ ತಿದ್ದುಪಡಿಗಳನ್ನು ಮಾಡಲು ನಾನು ತಯಾರಕರನ್ನು ವಿನಂತಿಸಲು ಬಯಸುತ್ತೇನೆ. ಇಲ್ಲವಾದಲ್ಲಿ ಮಧ್ಯಪ್ರದೇಶದಲ್ಲಿ ಈ ಚಿತ್ರಕ್ಕೆ ಅವಕಾಶ ನೀಡಬೇಕೋ ಬೇಡವೋ ಎಂಬುದು ಪ್ರಶ್ನೆಯಾಗಲಿದೆ,’’ ಎಂದು ಅವರು ಹೇಳಿದ್ದಾರೆ.

ಮುಕ್ತ ಚೆಸ್ ಟೂರ್ನಿಯಲ್ಲಿ ಧನುಷ್ ರಾಮ್ ಗೆ ಪ್ರಶಸ್ತಿ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿಗಳು

0

ಕುದುರೆಮುಖ ಕಬ್ಬಿಣ ಅದಿರು ಕಂಪೆನಿ ಮಂಗಳೂರಿನಲ್ಲಿ ಆಯೋಜಿಸಿದ್ದ 5ನೇ ರಾಷ್ಟ್ರೀಯ ಮುಕ್ತ  ರಾಪಿಡ್ ಚೆಸ್ ಟೂರ್ನಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಧನುಷ್ ರಾಮ್ ( ಶ್ರೀ ದಿನೇಶ್ ಪ್ರಸನ್ನ ಹಾಗೂ ಶ್ರೀಮತಿ ಉಮಾ.ಡಿ.ಪ್ರಸನ್ನ ದಂಪತಿ ಪುತ್ರ) ಕರ್ನಾಟಕವನ್ನು ಪ್ರತಿನಿಧಿಸಿ ಮುಕ್ತ ವಿಭಾಗದಲ್ಲಿ ಟೈಬ್ರೇಕರ್ ನಲ್ಲಿ ತೃತೀಯ ಬಹುಮಾನ ಪಡೆದಿರುತ್ತಾರೆ.

ಈ ವಿಭಾಗದಲ್ಲಿ ವಿವಿಧ ರಾಜ್ಯಗಳ 416 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು..

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ,  ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಜಂಟಿ ಆಶ್ರಯದಲ್ಲಿ

ದಶಂಬರ್ 13ರಂದು ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ ಪ್ರೌಢ ವಿಭಾಗದ ಭಾವಗೀತೆಯಲ್ಲಿ ತೃತೀಯ ಬಹುಮಾನ ಗಳಿಸಿರುತ್ತಾರೆ.

ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ 7ನೇ ತರಗತಿಯ ಕುಮಾರಿ ನಿಲಿಷ್ಕಾ ದ್ವಿತೀಯ ಬಹುಮಾನ ಹಾಗೂ ಲಘು ಸಂಗೀತದಲ್ಲಿ 7ನೇ ತರಗತಿಯ ಕುಮಾರಿ ಸುಪ್ರಜಾ ರಾವ್ ತೃತೀಯ ಬಹುಮಾನ ಗಳಿಸಿರುತ್ತಾರೆ.

ಸ್ವಸ್ತಿಕ್‌ ಶರ್ಮ ಯಕ್ಷಪ್ರತಿಭಾ ಪ್ರಶಸ್ತಿಗೆ ಆಯ್ಕೆ

0

ಪುತ್ತೂರು, ಡಿ 15: ಯಕ್ಷಗಾನಾಚಾರ್ಯ ಪಾರ್ತಿಸುಬ್ಬನ ತವರುನೆಲ ಕುಂಬ್ಳೆಯ ಶೇಡಿಕಾವಿನಲ್ಲಿ ಡಿಸೆ0ಬರ್ 18ರ0ದು ನಡೆಯಲಿರುವ ಕಣಿಪುರ ಯಕ್ಷೋತ್ಸವದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಸ್ವಸ್ತಿಕ್‌ ಶರ್ಮ ಪಿ ಯಕ್ಷಪ್ರತಿಭಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕುಂಬ್ಳೆ ಸೀಮೆಯ ಬಳ್ಳಂಬೆಟ್ಟು ಮೂಲದ ಖ್ಯಾತ ಪುಂಡುವೇಷಧಾರಿ ದಿ. ಶ್ರೀಧರ ಭಂಡಾರಿ ಸ್ಮರಣಾರ್ಥ ಪ್ರಶಸ್ತಿ ನೀಡಲಿದ್ದು, ಪ್ರಶಸ್ತಿಯು ಐದು ಸಾವಿರ ರೂ ನಗದು ಮತ್ತು ಸ್ಮರಣಿಕೆ, ಸನ್ಮಾನ ಪತ್ರ, ಪಾರಿತೋಷಕವನ್ನೊಳಗೊಂಡಿದೆ.

ಈತನು ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮದ ಪಳ್ಳತ್ತಡ್ಕದ ಕೇಶವ ಪಿ ಮತ್ತು ದಿವ್ಯಾ ಪಿ ದಂಪತಿ ಪುತ್ರ.

ಚಾಕಲೇಟ್ ಉತ್ಪಾದನೆ ಹಾಗೂ ಪ್ಯಾಕೇಜಿಂಗ್ ಬಗೆಗೆ ಸವಿವರ ವೀಕ್ಷಣೆ

0

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ‘ಕೈಗಾರಿಕಾ ಭೇಟಿ’ ಕಾರ್ಯಕ್ರಮ ನಡೆಯಿತು. ಪದವಿ ಪೂರ್ವ ವಾಣಿಜ್ಯ ವಿದ್ಯಾರ್ಥಿಗಳು ಕೆಮ್ಮಿಂಜೆಯ ಕ್ಯಾಂಪ್ಕೋ ಚಾಕಲೇಟು ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು.


ಕ್ಯಾಂಪ್ಕೋ ಚಾಕಲೇಟು ತಯಾರಿಕಾ ಘಟಕದ ಆಡಳಿತ ವಿಭಾಗದ ರಾಧೇಶ್ ಮಾಹಿತಿ ನೀಡಿ, ಕ್ಯಾಂಪ್ಕೋ ಮೂಲಕ ಕೃಷಿಕರಿಂದ ಕೋಕೋ ಖರೀದಿಸಿ ಅದನ್ನು ಸಂಸ್ಕರಣೆ ಮಾಡಿ ಕೋಕೋ ಪೌಡರ್ ಹಾಗೂ ಕೋಕೋ ಬಟರ್ ಉತ್ಪಾದನೆ ಮಾಡಲಾಗುತ್ತದೆ. ಕೋಕೋ ಬಟರ್‌ಗೆ ಕೆ.ಜಿ.ಗೆ 700 ರೂಪಾಯಿಗೂ ಹೆಚ್ಚು ಮೌಲ್ಯವಿದ್ದು, ದೇಶದ ವಿವಿಧ ಘಟಕಗಳಿಗೆ ಮಾರಾಟ ಮಾಡಲಾಗುತ್ತಿದೆ.

ಘಟಕದಲ್ಲಿ ಉತ್ಪಾದಿಸಿದ ವಿವಿಧ ಬಗೆಯ ಉತ್ಪನ್ನಗಳನ್ನು ದೇಶದ ವಿವಿಧೆಡೆ ವಿತರಣೆ ಹಾಗೂ ದಕ್ಷಿಣ ಆಫ್ರಿಕಾ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.


ವಿದ್ಯಾರ್ಥಿಗಳು ಚಾಕಲೇಟ್ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಕೋ ಕೋ ಬೀನ್ ಸಂಸ್ಕರಣೆ ಹೊಂದಿ ಕೋ ಕೋ ಪೌಡರ್ ಹಾಗೂ ಬಟರ್ ಆಗುವ ವಿಧಾನದ ಬಗೆಗೆ, ಸಕ್ಕರೆ ಹಾಗೂ ವಿವಿಧ ವಸ್ತುಗಳನ್ನು ಬಳಸಿಕೊಂಡು ಚಾಕಲೇಟ್ ಉತ್ಪಾದನೆಯಾಗುವ ಬಗೆ ಹಾಗೂ ಅದನ್ನು ಪ್ಯಾಕೇಜಿಂಗ್ ಮಾಡುವ ಪ್ರಕ್ರಿಯೆಯ ಕುರಿತಾದ ಮಾಹಿತಿಯನ್ನು ಪಡೆದುಕೊಂಡರು.


ರಾಧೇಶ್ ಅವರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. 63 ವಿದ್ಯಾರ್ಥಿಗಳು ಕ್ಯಾಂಪ್ಕೋ ಘಟಕಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.


ಈ ವೇಳೆ ನೆಲ್ಲಿಕಟ್ಟೆ ಅಂಬಿಕಾ ಪಿಯು ವಿದ್ಯಾಲಯ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅಕ್ಷತಾ, ಉಪನ್ಯಾಸಕರಾದ ವಿದ್ಯಾ ಸರಸ್ವತಿ, ಕಾವ್ಯಾ, ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ಉಪನ್ಯಾಸಕ ಹರ್ಷಿತ್ ಪಿಂಡಿವನ ಉಪಸ್ಥಿತರಿದ್ದರು.

ಮಹಿಳೆಯನ್ನು ಕೊಂದ ಯುವಕ –  ಮಹಿಳೆ ಸಿಂಧು ಹತ್ತಿದ ಬಸ್ಸಿನಲ್ಲಿ ಆರೋಪಿ ಹಿಂಬಾಲಿಸಿದ್ದ – ತನ್ನಿಂದ ದೂರವಾಗಿದ್ದಾಳೆ ಎಂಬ ಭಾವನೆಯೇ ಕೊಲೆಗೆ ಕಾರಣ

0

ತಿರುವನಂತಪುರಂ: ಪೆರೂರ್ಕಡದಲ್ಲಿ ನಡುರಸ್ತೆಯಲ್ಲಿ ಮಹಿಳೆಯೋರ್ವಳ ಕೊಲೆ ಯೋಜಿತ ಕೊಲೆ ಎಂದು ಪೊಲೀಸರು ತಿಳಿಸಿದ್ದಾರೆ. ವಝೈಲ ನಿವಾಸಿ ಸಿಂಧು (50) ಎಂಬುವರನ್ನು ನಂದಿಯೋಡು ಮೂಲದ ರಾಜೇಶ್ (46) ಎಂಬಾತ ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹನ್ನೆರಡು ವರ್ಷಗಳಿಂದ ಒಟ್ಟಿಗೆ ವಾಸಿಸುತ್ತಿದ್ದ ಇಬ್ಬರೂ ಜಗಳದ ನಂತರ ಒಂದು ತಿಂಗಳ ಕಾಲ ಬೇರ್ಪಟ್ಟರು. ಇತ್ತೀಚಿಗೆ ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ಜಗಳ ನಡೆದಿದೆ. ಸಿಂಧು ತನ್ನಿಂದ ದೂರವಾಗಿದ್ದಾಳೆ ಎಂಬ ಭಾವನೆಯೇ ಕೊಲೆಗೆ ಕಾರಣ ಎಂದು ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

ಪೊಲೀಸರ ಪ್ರಕಾರ, ಸಿಂಧು ಕೆಲಸಕ್ಕೆ ಹೋಗುವ ಬಗ್ಗೆ ಅವರ ನಡುವೆ ಜಗಳವೂ ಇತ್ತು. ರಾಜೇಶ್ ಕೂಡ ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ. ಇಂದು ಬೆಳಗ್ಗೆ ಪಾಲೊಡೆಯಲ್ಲಿ ನಿಂತಿದ್ದ ರಾಜೇಶ್ ಸಿಂಧು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದುದನ್ನು ನೋಡಿದ್ದಾರೆ. ನಂತರ ನೆಡುಮಂಗಾಡು ತಲುಪಿ ಆಕೆ ಪ್ರಯಾಣಿಸುತ್ತಿದ್ದ ಬಸ್ಸಿಗೆ ಹತ್ತಿದರು.

ಪೊಲೀಸರ ಪ್ರಕಾರ, ಸಿಂಧು ಬಸ್‌ನಿಂದ ಇಳಿದಾಗ, ರಾಜೇಶ್ ಆಕೆಯನ್ನು ಹಿಂಬಾಲಿಸಿ ಕಡಿಮೆ ಜನಸಂದಣಿ ಇರುವ ಸ್ಥಳಕ್ಕೆ ತಲುಪಿದ ನಂತರ ಚಾಕುವಿನಿಂದ ಇರಿದಿದ್ದಾನೆ. ಸಿಂಧು ಕುತ್ತಿಗೆ ಮತ್ತು ತಲೆಗೆ ಕತ್ತಿಯಿಂದ ಇರಿಯಲಾಗಿದೆ.

ಘಟನೆಯ ನಂತರ ಸ್ಥಳೀಯರು ಮತ್ತು ಪೊಲೀಸರು ಸಿಂಧುವನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದರು ಆದರೆ ಅವರು ಸಾವನ್ನಪ್ಪಿದ್ದಾರೆ. ಆಕೆಗೆ ಎರಡಕ್ಕಿಂತ ಹೆಚ್ಚು ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿ ಹೇಳುತ್ತಾರೆ.

ಸ್ಥಳೀಯರು ರಾಜೇಶ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಖ್ಯಾತ ಯಕ್ಷಗಾನ ಭಾಗವತರಾದ ತಿಮ್ಮಪ್ಪ ಭಾಗವತ ಬಾಳೆಹದ್ದ ನಿಧನ – ನಿನ್ನೆ ಸಂಜೆ ರಸ್ತೆ ಅಫಘಾತದಲ್ಲಿ ಮೃತ್ಯು 

ಖ್ಯಾತ ಯಕ್ಷಗಾನ ಭಾಗವತರಾದ ತಿಮ್ಮಪ್ಪ ಭಾಗವತ ಬಾಳೆಹದ್ದ ಅವರು ನಿನ್ನೆ ನಿಧನರಾಗಿದ್ದಾರೆ. ಅವರು ನಿನ್ನೆ ಸಂಜೆ ಆಕಸ್ಮಿಕವಾಗಿ ಮೃತ್ಯುವಶರಾಗಿದ್ದಾರೆ.

ನಿನ್ನೆ ದಿನಾಂಕ 13.12.2022ರ ಮಂಗಳವಾರ ಸಂಜೆ ಘಟಿಸಿದ ರಸ್ತೆ  ಅಫಘಾತವೊಂದರಲ್ಲಿ ಅವರು ದುರದೃಷ್ಟಕರವಾಗಿ ಸಾವನ್ನಪ್ಪಿದ್ದಾರೆ. ಯಲ್ಲಾಪುರ ತಾಲೂಕಿನ ಬಾಳೆಹದ್ದ ಮೂಲದವರಾಗಿದ್ದ ಅವರು ಬಡಗುತಿಟ್ಟಿನ ಭಾಗವತರಾಗಿ ಜನಪ್ರಿಯರಾಗಿದ್ದರು.

ಯಲ್ಲಾಪುರ ಮತ್ತು ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಎರಡು  ಕಾರುಗಳ ನಡುವೆ ಉಂಟಾದ ಅಫಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಅವರನ್ನು ಕೂಡಲೇ ಶಿರಸಿಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿನ್ನೆ ಮಧ್ಯರಾತ್ರಿ ಮೃತಪಟ್ಟಿದ್ದಾರೆ.

ತಿಮ್ಮಪ್ಪ ಬಾಳೆಹದ್ದ ಅವರು ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದರು ಮತ್ತು ಬಡಗುತಿಟ್ಟಿನ ಭಾಗವತಿಕೆಯ ರಾಗ ಮತ್ತು ಮಟ್ಟುಗಳಲ್ಲಿ ವಿಶೇಷ ಪ್ರಾವೀಣ್ಯತೆಯನ್ನು ಪಡೆದಿದ್ದರು.

ಅವರ ನಿಧನಕ್ಕೆ ಯಕ್ಷಗಾನ ಕಲಾಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ವಿಸ್ಮಯ ಎಂಬ ಯುವತಿಯ ಸಾವಿನ ಪ್ರಕರಣ: ಶಿಕ್ಷೆಯ ಅಮಾನತು ಕೋರಿ ಕಿರಣ್ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಹೈಕೋರ್ಟ್

0

ವಿಸ್ಮಯ ಪ್ರಕರಣದ ಆರೋಪಿ ಕಿರಣ್ ಕುಮಾರ್ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ. ಶಿಕ್ಷೆಯನ್ನು ಅಮಾನತುಗೊಳಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅವರ ಮನವಿಯನ್ನು ನ್ಯಾಯಮೂರ್ತಿಗಳಾದ ಅಲೆಕ್ಸಾಂಡರ್ ಥಾಮಸ್ ಮತ್ತು ಸೋಫಿ ಥಾಮಸ್ ನೇತೃತ್ವದ ವಿಭಾಗೀಯ ಪೀಠ ತಿರಸ್ಕರಿಸಿದೆ.

ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಕೋರಿರುವ ಮನವಿಯ ಕುರಿತು ನಿರ್ಧಾರ ಕೈಗೊಳ್ಳುವವರೆಗೆ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಆರೋಪಿಗಳು ಒತ್ತಾಯಿಸಿದರು.

ವರದಕ್ಷಿಣೆ ಕಿರುಕುಳದಿಂದ ಪತ್ನಿ ವಿಸ್ಮಯಾ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಪತಿ ಕಿರಣ್‌ಗೆ ನ್ಯಾಯಾಲಯ ಮೇ 24ರಂದು ಶಿಕ್ಷೆ ವಿಧಿಸಿತ್ತು. ಕಿರಣ್ ಸದ್ಯ ಪೂಜಾಪುರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಕಿರಣ್ ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498A (ವರದಕ್ಷಿಣೆಗಾಗಿ ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವುದು), 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು 304B (ವರದಕ್ಷಿಣೆ ಸಾವು) ಮತ್ತು ವರದಕ್ಷಿಣೆ ನಿಷೇಧ ಕಾಯಿದೆ, 1961 ರ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

ಪ್ರಕರಣದಲ್ಲಿ 42 ಸಾಕ್ಷಿಗಳು, 120 ದಾಖಲೆಗಳು ಮತ್ತು 12 ಪ್ರಮುಖರಿದ್ದಾರೆ. ವಿಸ್ಮಯಾ 2021 ರ ಜೂನ್ 21 ರಂದು ಸಾಸ್ತಾಮಕೋಟಾದಲ್ಲಿರುವ ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.

ಪ್ರಕರಣದ ವಿಚಾರಣೆ ಜನವರಿ 10 ರಂದು ಪ್ರಾರಂಭವಾಯಿತು. ಪ್ರಕರಣದ ಪ್ರಮುಖ ಸಾಕ್ಷಿಗಳು ಆಕೆಯ ತಂದೆ ತ್ರಿವಿಕ್ರಮನ್ ನಾಯರ್ ಮತ್ತು ಸಹೋದರ ವಿಜಿತ್.