Saturday, August 1, 2026
Home Blog Page 114

ಕೋಳ್ಯೂರು ರಾಮಚಂದ್ರ ರಾಯರಿಗೆ ಕೀರಿಕ್ಕಾಡು ಪ್ರಶಸ್ತಿ

ಯಕ್ಷಗಾನದ ಮಹಾನ್ ಸಾಧಕ ಗುರು ಪ್ರಸಂಗಕರ್ತೃ ಅರ್ಥಧಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಸಂಸ್ಮರಣಾರ್ಥ ಕೊಡಲಾಗುತ್ತಿರುವ 2022ರ ಸಾಲಿನ ಕೀರಿಕ್ಕಾಡು ಪ್ರಶಸ್ತಿಗೆ ಸುಪ್ರಸಿದ್ಧ ಸ್ತ್ರೀ ಪಾತ್ರಧಾರಿ ಕೋಳ್ಯೂರು ರಾಮಚಂದ್ರ ರಾಯರು ಆಯ್ಕೆಯಾಗಿದ್ದಾರೆ.

ಕೋಳ್ಯೂರು ಎಂಬ ಹೆಸರಿನಿಂದಲೇ ಯಕ್ಷಗಾನ ವಲಯದಲ್ಲಿ ಮನೆಮಾತಾಗಿ ನೆಲೆನಿಂತಿರುವ ರಾಮಚಂದ್ರ ರಾಯರು ಸುದೀರ್ಘ ಕಾಲ ಶ್ರೇಷ್ಠ ಪಾತ್ರಧಾರಿಯಾಗಿ ರಂಗದಲ್ಲಿ ಮೆರೆದವರು. ಕೂಟಗಳಲ್ಲಿಯೂ ಭಾಗವಹಿಸಿದವರು.

‘90ರ ತಾರುಣ್ಯ’ದಲ್ಲಿ ಈಗಲೂ ಗರತಿಯ ವೇಷದಲ್ಲಿ ಸಾರ್ಥಕ್ಯವನ್ನು ತಂದುಕೊಡಬಲ್ಲ ಕಲಾವಂತಿಕೆಯನ್ನು ಹೊಂದಿದವರು. ಅವರ ಪರಿಪಕ್ವವೂ ಮೌಲಿಕವೂ ಆದ ಸಾಧನೆಯನ್ನು ಪರಿಗಣಿಸಿ ಕೀರಿಕ್ಕಾಡು ಪ್ರಶಸ್ತಿಯನ್ನು ಪ್ರದಾನ ಮಾಡಿ ದಿನಾಂಕ 25-12-2022 ಆದಿತ್ಯವಾರ ನಡೆಯಲಿರುವ 78ನೆಯ ವಾರ್ಷಿಕೋತ್ಸವದಂದು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಗುವುದು ಎಂದು ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ. ರಮಾನಂದ ಬನಾರಿ ಮಂಜೇಶ್ವರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ. ರಮಾನಂದ ಬನಾರಿ ಮಂಜೇಶ್ವರ, ಅಧ್ಯಕ್ಷರು, ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ, ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘ (ರಿ) ದೇಲಂಪಾಡಿ, ಅಂಚೆ: ಪಂಜಿಕಲ್ಲು 671543, ಕಾಸರಗೋಡು ಜಿಲ್ಲೆ ಮೊಬೈಲ್: 9446297226

ಇಂದು ಆಟ ಎಲ್ಲೆಲ್ಲಿ? (12-12-2022, ಸೋಮವಾರ)

ಮೇಳಗಳ ಇಂದಿನ (12.12.2022) ಯಕ್ಷಗಾನ ಪ್ರದರ್ಶನಗಳ ವಿವರ

ಶ್ರೀ ಧರ್ಮಸ್ಥಳ ಮೇಳ == ತಂತ್ರಾಡಿ ಬಾಯಾರ್ ಬೆಟ್ಟಿನ ಶ್ರೀ ಲಕ್ಷ್ಮಿ ನಿಲಯದ ವಠಾರದಲ್ಲಿ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ 

ಕಟೀಲು ಒಂದನೇ ಮೇಳ == ಕಟೀಲು ಕ್ಷೇತ್ರದಲ್ಲಿ ಮಹಾಲಕ್ಷ್ಮಿ ಸದನ 

ಕಟೀಲು ಎರಡನೇ ಮೇಳ == ಲಲಿತಾನಿವಾಸ, ಆದ್ಯಪಾಡಿ ಬಜಪೆ ಮುರನಗರದಲ್ಲಿ 

ಕಟೀಲು ಮೂರನೇ ಮೇಳ== ಶ್ರೀ ಮಹಮ್ಮಾಯೀ ದೇವಸ್ಥಾನ ಮೂರುಕಾವೇರಿ 

ಕಟೀಲು ನಾಲ್ಕನೇ ಮೇಳ  == ರವಿ ನಿವಾಸ, ಎರ್ಮಾಳು ತೆಂಕ ವಯಾ ಪಡುಬಿದ್ರಿ 

ಕಟೀಲು ಐದನೇ ಮೇಳ == ಕಟೀಲು ಕ್ಷೇತ್ರದಲ್ಲಿ ಸರಸ್ವತಿ ಸದನ 

ಕಟೀಲು ಆರನೇ ಮೇಳ == ಅನುಗ್ರಹ ಹೌಸ್, ಎ. ಎಲ್. ಎನ್ ಲೇಔಟ್ ಎಕ್ಕಾರು ಗುಡ್ಡೆಸಾನದ ಬಳಿ 

ಮಂದಾರ್ತಿ ಒಂದನೇ ಮೇಳ  == ಶ್ರೀ ಕ್ಷೇತ್ರದಲ್ಲಿ 

ಮಂದಾರ್ತಿ ಎರಡನೇ ಮೇಳ   == ಶ್ರೀ ಕ್ಷೇತ್ರದಲ್ಲಿ 

ಮಂದಾರ್ತಿ ಮೂರನೇ ಮೇಳ  == ಶ್ರೀ ಕ್ಷೇತ್ರದಲ್ಲಿ  

ಮಂದಾರ್ತಿ ನಾಲ್ಕನೇ ಮೇಳ   == ಶ್ರೀ ಕ್ಷೇತ್ರದಲ್ಲಿ 

ಮಂದಾರ್ತಿ ಐದನೇ ಮೇಳ  == ರತ್ನಗಿರಿ ಶೇರ್ಡಿ ಕಕ್ಕಂಜೆ  

ಹನುಮಗಿರಿ ಮೇಳ == ಶ್ರೀ ಬಡಗು ಮಹಾಗಣಪತಿ ದೇವಸ್ಥಾನ ಆಲಂಗಾರು ಮೂಡಬಿದಿರೆ – ಶ್ರೀಮತಿ ಪರಿಣಯ, ಉಷಾ ಪರಿಣಯ

ಶ್ರೀ ಪೆರ್ಡೂರು ಮೇಳ == ಯಡಾಡಿ ಮತ್ಯಾಡಿ ಅರುಣ್ ಕುಮಾರ್ ಹೆಗ್ಡೆ ಮನೆ ವಠಾರ – ಸುಧನ್ವ, ಸುದರ್ಶನ, ಕನಕಾಂಗಿ ಕಲ್ಯಾಣ 

ಶ್ರೀ ಮಾರಣಕಟ್ಟೆ ಮೇಳ ‘ಎ’ == ಬೆಳ್ಳಾಡಿ ಹುಣ್ಸೆಡಿ ಮನೆ, ಸೇನಾಪುರ 

ಶ್ರೀ ಮಾರಣಕಟ್ಟೆ ಮೇಳ ‘ಬಿ ==  ಬೆಳ್ಳಾಡಿ ಹುಣ್ಸೆಡಿ ಮನೆ, ಸೇನಾಪುರ 

ಶ್ರೀ ಮಾರಣಕಟ್ಟೆ ಮೇಳ ‘ಸಿ == ವಾಲ್ತೂರು ಮೇಲ್ ಜೋರ್ ಮಕ್ಕಿ ಮನೆ – ಮಾರಣಕಟ್ಟೆ ಮತ್ತು ಸೌಕೂರು ಮೇಳಗಳ ಜೋಡಾಟ 

ಶ್ರೀ ಪಾವಂಜೆ ಮೇಳ == ವಿಷ್ಣುಮೂರ್ತಿ ದೇವಸ್ಥಾನ ಕಳಂಜ – ಶ್ರೀ ದೇವಿ ಮಹಾತ್ಮೆ 

ಶ್ರೀ ಕಮಲಶಿಲೆ ಮೇಳ == ಹೊಸ್ಮೆಂದು ಯಳಬೇರು 

ಶ್ರೀ ಅಮೃತೇಶ್ವರೀ ಮೇಳ, ಕೋಟ == ಗುಡ್ಡಿ ಶಾಲೆ ವಠಾರ, ಪಾರಂಪಳ್ಳಿ ಪಡುಕೆರೆ 

ಶ್ರೀ ಸೌಕೂರು ಮೇಳ == ವಾಲ್ತೂರು ಮೇಲ್ ಜೋರ್ ಮಕ್ಕಿ ಮನೆ – ಮಾರಣಕಟ್ಟೆ ಮತ್ತು ಸೌಕೂರು ಮೇಳಗಳ ಜೋಡಾಟ 

ಶ್ರೀ ಬೆಂಕಿನಾಥೇಶ್ವರ ಮೇಳ ಕಳವಾರು  == ನೀರ್ಚಾಲು ಶಾಲಾ ವಠಾರ – ನಾಗರಪಂಚಮಿ 

ಶ್ರೀ ಕ್ಷೇತ್ರ ಗೋಳಿಗರಡಿ ಮೇಳ == ಹೊರ್ಲಾಳಿ ಶ್ರೀ ಚಿತ್ತೇರಿ ದೇವಸ್ಥಾನ ವಠಾರ – ಮಂತ್ರ ಮಾಂಗಲ್ಯ 

ಶ್ರೀ ಹಿರಿಯಡಕ ಮೇಳ == ಅಂಜಾರು ಮಠದ ಬಳಿ – ಮಂತ್ರದ ಮಾಂಗಲ್ಯ (ತುಳು)

ಶ್ರೀ ಶನೀಶ್ವರ ಮೇಳ == ಶ್ರೀ ಕ್ಷೇತ್ರದಲ್ಲಿ 

ಶ್ರೀ ಸಿಗಂದೂರು ಮೇಳ == ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರ ಉಪ್ಪುಂದ

ಶ್ರೀ ನೀಲಾವರ ಮೇಳ  == ಕುಂಜಾಲು ಆರೂರು ಕ್ರಾಸ್ ರಿಕ್ಷಾ ಸ್ಟಾಂಡ್ ಬಳಿ – ರಕ್ತ ನೈವೇದ್ಯ 

ಶ್ರೀ ಹಟ್ಟಿಯಂಗಡಿ ಮೇಳ == ಕುಂಭಾಶಿ ಕೊರವಡಿ – ನೂತನ ಪ್ರಸಂಗ 

ಶ್ರೀ ಹಾಲಾಡಿ ಮೇಳ == ಶ್ರೀ ದೇವಿ ದೇವಸ್ಥಾನ ಉದಯನಗರ – ಗಗನ ತಾರೆ 

ಶ್ರೀ ಬೋಳಂಬಳ್ಳಿ ಮೇಳ== ಗುಡಿ ಮಹಾಲಿಂಗೇಶ್ವರ ದೇವಸ್ಥಾನ ಕಾಲ್ತೋಡು – ಯಮಲೀಲೆ 

ಶ್ರೀ ಬಪ್ಪನಾಡು ಮೇಳ == ಪಂಜುರ್ಲಿ ಭಂಡಾರದ ಮನೆ, ಬೊಂಡಾಲ – ಶ್ರೀ ದೇವಿ ಮಹಾತ್ಮೆ 

ಶ್ರೀ ಗೆಜ್ಜೆಗಿರಿ ಮೇಳ == ಬೆಳುವಾಯಿ – ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ 

ವಿ.ಸೂ: ದಿನನಿತ್ಯದ ಆಟದ ವಿವರಗಳನ್ನು ಮಾಹಿತಿಗಳು ಲಭ್ಯವಿದ್ದಲ್ಲಿ ಮಾತ್ರ ಪ್ರಕಟಿಸಲಾಗುವುದು. 

ಮನೆಗೆ ನುಗ್ಗಿ ಯುವತಿಯನ್ನು ಅಪಹರಿಸಿದ 100ಕ್ಕೂ ಹೆಚ್ಚು ಪುರುಷರು, ಕುಟುಂಬದವರ ಮೇಲೆ ಹಲ್ಲೆ | ವೀಡಿಯೊ

0

ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಶುಕ್ರವಾರ 24 ವರ್ಷದ ಮಹಿಳೆಯನ್ನು ಆಕೆಯ ಮನೆಯಿಂದ ಅಪಹರಿಸಲಾಗಿದೆ, ನಂತರ 100 ಕ್ಕೂ ಹೆಚ್ಚು ಪುರುಷರು ಆಕೆಯ ಮನೆಗೆ ನುಗ್ಗಿ ಬಲವಂತವಾಗಿ ಕರೆದೊಯ್ದಿದ್ದಾರೆ.

ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಆದಿಬಟ್ಲಾದಲ್ಲಿ ಶುಕ್ರವಾರ 24 ವರ್ಷದ ಮಹಿಳೆಯನ್ನು ಆಕೆಯ ಮನೆಯಿಂದ ಅಪಹರಿಸಲಾಗಿದೆ ಎಂದು ಹೇಳಲಾಗಿದ್ದು, ಕನಿಷ್ಠ 100 ಪುರುಷರು ಆಕೆಯ ಮನೆಗೆ ನುಗ್ಗಿ ಬಲವಂತವಾಗಿ ಕರೆದೊಯ್ದಿದ್ದಾರೆ.

ವೈಶಾಲಿ ಎಂದು ಗುರುತಿಸಲಾದ ಮಹಿಳೆಯ ಪೋಷಕರ ಪ್ರಕಾರ, ಸುಮಾರು 100 ಪುರುಷರು ಅವರ ಮನೆಗೆ ನುಗ್ಗಿ ತಮ್ಮ ಮನೆಯನ್ನು ಧ್ವಂಸಗೊಳಿಸಿದ ನಂತರ ಬಲವಂತವಾಗಿ ಮಗಳನ್ನು ಕರೆದೊಯ್ದಿದ್ದಾರೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪುರುಷರು ಮಹಿಳೆಯ ಸಂಬಂಧಿಕರಿಗೆ ಥಳಿಸುವ ದೃಶ್ಯ ಕಂಡು ಬರುತ್ತಿದೆ.

ಈ ಸಂಬಂಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ತೆಲಂಗಾಣದಲ್ಲಿ ಮಹಿಳೆಯನ್ನು ಅಪಹರಿಸಲು ಮನೆಗೆ ನುಗ್ಗಿದ 100ಕ್ಕೂ ಹೆಚ್ಚು ಪುರುಷರು, ಕುಟುಂಬದವರ ಮೇಲೆ ಹಲ್ಲೆ | ವೀಡಿಯೊ

ನಿನ್ನೆ ಕಾಡಾನೆ ದಾಳಿಗೆ 50ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಕೊಯಮತ್ತೂರು| ಗುಡಲೂರಿನಲ್ಲಿ ನಿನ್ನೆ ಕಾಡಾನೆ ದಾಳಿಗೆ 50ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ

ತಮಿಳುನಾಡಿನ ಕೊಯಮತ್ತೂರು ಸಮೀಪದ ಗುಡಲೂರಿನಲ್ಲಿ ನಿನ್ನೆ ಕಾಡಾನೆ ದಾಳಿಗೆ 50ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಯಕ್ಷಾಂಗಣ ಹೊಸ ಪ್ರಯೋಗದಲ್ಲಿ ಇತಿಹಾಸದ ಪುನರ್ಮನನ
ಸಪ್ತಾಹದಲ್ಲಿ ರಂಜಿಸಿದ ‘ಸ್ವಾತಂತ್ರ್ಯ ವಿಜಯ’ ತಾಳಮದ್ದಳೆ


ಮಂಗಳೂರು: ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ವತಿಯಿಂದ ಮಂಗಳೂರು ವಿವಿ ಡಾ. ದಯಾನಂದ ಪೈ ಮತ್ತು ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಸಹಯೋಗದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಏರ್ಪಡಿಸಿದ್ದ ದಶಮಾನ ಸಡಗರದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ ದಲ್ಲಿ ಯಕ್ಷಾಂಗಣವು ಒಂದು ಹೊಸ ಪ್ರಯೋಗದ ಮೂಲಕ ಪ್ರಜ್ಞಾವಂತರ ಗಮನ ಸೆಳೆದಿದೆ.


ಸ್ವಾತಂತ್ರ್ಯ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಮಂಗಳೂರು ಆಕಾಶವಾಣಿಗಾಗಿ ಸಿದ್ಧಪಡಿಸಿದ್ದ ‘ಕ್ರಾಂತಿ ಕಹಳೆ’ ಮತ್ತು ‘ಸ್ವಾತಂತ್ರ್ಯ ವಿಜಯ’ ಎಂಬ ಕಿರು ಪ್ರಸಂಗಗಳನ್ನು ಪ್ರಸ್ತುತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಲುವಾಗಿ ‘ಸ್ವರಾಜ್ಯ ಸ್ವಾತಂತ್ರ್ಯ ವಿಜಯ’ ಎಂಬ ಪೂರ್ಣಾವಧಿ ತಾಳಮದ್ದಳೆ ರೂಪದಲ್ಲಿ ಪ್ರಯೋಗಿಸಿ ಅದು ಇತಿಹಾಸದ ಪುನರ್ಮನನ ಮಾಡಿದ ಸಾಧನೆಗೆ ಸಾಕ್ಷಿಯಾಗಿದೆ.


ಕಥಾ ಸಾರ :
ಭಾರತದ ಸ್ವಾತಂತ್ರ್ಯ ಸಂಗ್ರಾಮ ಇತಿಹಾಸವನ್ನಾಧರಿಸಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರು ಸಂಯೋಜಿಸಿದ್ದ ಕಥಾ ಹಂದರಕ್ಕೆ ಡಾ.ದಿನಕರ ಎಸ್. ಪಚ್ಚನಾಡಿ ಪದ್ಯಗಳನ್ನು ರಚಿಸಿದ್ದು ಪುತ್ತೂರಿನ ಕರ್ನಾಟಕ ಯಕ್ಷ ಭಾರತಿ ತಂಡ ಅವುಗಳನ್ನು ಎರಡು ಕಂತುಗಳಲ್ಲಿ ಮಂಗಳೂರು ಬಾನುಲಿ ಕೇಂದ್ರ ಮೂಲಕ ಈ ಹಿಂದೆ ರೇಡಿಯೋ ಪ್ರಸಾರ ಮಾಡಿತ್ತು.


ವಿದೇಶೀ ಪೋರ್ಚುಗೀಸರೊಡನೆ ಹೋರಾಡಿದ ಪ್ರಪ್ರಥಮ ಸ್ವಾತಂತ್ರ್ಯ ಸೇನಾನಿ ಉಳ್ಳಾಲದ ಅಬ್ಬಕ್ಕ ರಾಣಿಯ ಪ್ರವೇಶದೊಂದಿಗೆ ಆರಂಭವಾಗುವ ಈ ಪ್ರಸಂಗದಲ್ಲಿ ಮೈಸೂರಿನ ಕದನ, 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ, ವಂಗ ಭಂಗ – ಚಳುವಳಿ, ಜಲಿಯನ್ ವಾಲಾಬಾಗ್ ದುರಂತ, ಆಜಾದ್ – ಭಗತ್ ಸಿಂಗ್ ಬಲಿದಾನ, ಗಾಂಧಿ ಯುಗ, ಸತ್ಯಾಗ್ರಹ, ಸ್ವದೇಶೀ ಆಂದೋಲನ ಹಾಗೂ ಅಂತಿಮವಾಗಿ ಸ್ವಾತಂತ್ರ್ಯ ಘೋಷಣೆಯ ವರೆಗಿನ ಘಟನೆಗಳನ್ನು ಪ್ರಸ್ತುತ ‘ಸ್ವರಾಜ್ಯ ಸ್ವಾತಂತ್ರ್ಯ ವಿಜಯ’ ಪ್ರಸಂಗದಲ್ಲಿ ಆಯ್ದುಕೊಳ್ಳಲಾಗಿದೆ.


ಭಾಗವಹಿಸಿದ ಕಲಾವಿದರು :
ಇದೇ 2022 ನವಂಬರ್ 25 ರಂದು ಸಾಕಷ್ಟು ರಂಜನೀಯವಾಗಿ ಹಾಗೂ ಅಷ್ಟೇ ಬೋಧಪ್ರದವಾಗಿ ಜರಗಿದ ಈ ಐತಿಹಾಸಿಕ ತಾಳಮದ್ದಳೆಯಲ್ಲಿ ಭಾಗವತರಾಗಿ ಅಮೃತ ಅಡಿಗ, ಚಂಡೆ-ಮದ್ದಳೆಗಳಲ್ಲಿ ಮಯೂರ್ ನಾಯಗ ಮತ್ತು ಕೌಶಲ್ ರಾವ್ ಪುತ್ತಿಗೆ ಭಾಗವಹಿಸಿದ್ದರು.


ಭಾಸ್ಕರ ರೈ ಕುಕ್ಕುವಳ್ಳಿ (ಗಾಂಧೀಜಿ/ಭಗತ್ ಸಿಂಗ್), ಮಹಾಬಲ ಶೆಟ್ಟಿ ಕೂಡ್ಲು (ಬಾಲಗಂಗಾಧರ ತಿಲಕ್), ಜಿ.ಕೆ.ಭಟ್ ಸೇರಾಜೆ (ತಾತ್ಯಾ ಟೋಪೆ), ಗಣರಾಜ ಕುಂಬಳೆ (ಬಹದ್ದೂರ್ ಶಾ/ ಚಂದ್ರಶೇಖರ ಆಜಾದ್), ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು (ರಾಣಿ ಅಬ್ಬಕ್ಕ/ ವಿದ್ಯಾವತಿ), ಸರಪಾಡಿ ಅಶೋಕ್ ಶೆಟ್ಟಿ (ಸುಭಾಷ್ ಚಂದ್ರ ಬೋಸ್/ ಟಿಪ್ಪು ಸುಲ್ತಾನ್), ಉಮೇಶ್ ಆಚಾರ್ಯ ಗೇರುಕಟ್ಟೆ (ವಿಪಿನ್ ಚಂದ್ರ ಪಾಲ್/ ಮೌಂಟ್ ಬ್ಯಾಟನ್), ಸದಾಶಿವ ಆಳ್ವ ತಲಪಾಡಿ (ಜವಾಹರ್ ಲಾಲ್ ನೆಹರು/ಕಾರ್ನವಾಲೀಸ್), ಎಂ.ಎಂ.ಸಿ. ರೈ ( ಪೋರ್ಚುಗೀಸ್ ನೊರೋನ್ಹಾ/ ಬ್ರಿಟಿಷ್ ಅಧಿಕಾರಿ) ಮತ್ತು ಹರಿಶ್ಚಂದ್ರ ನಾಯಗ (ಬ್ರಿಟಿಷ್ ಸೈನಿಕ) ಅರ್ಥಧಾರಿಗಳಾಗಿದ್ದರು.

ಇಂದು ಆಟ ಎಲ್ಲೆಲ್ಲಿ? (09-12-2022, ಶುಕ್ರವಾರ)

ಮೇಳಗಳ ಇಂದಿನ (09.12.2022) ಯಕ್ಷಗಾನ ಪ್ರದರ್ಶನಗಳ ವಿವರ

ಶ್ರೀ ಧರ್ಮಸ್ಥಳ ಮೇಳ == ಇಡೂರು ಕಾಡಿನಕಲ್ಲು – ಅಮರವಾಹಿನಿ

ಕಟೀಲು ಒಂದನೇ ಮೇಳ == ಕಟೀಲು ಕ್ಷೇತ್ರದಲ್ಲಿ ಸರಸ್ವತಿ ಸದನ 

ಕಟೀಲು ಎರಡನೇ ಮೇಳ == ಕಾನ ರಸ್ತೆ ಪಣಿಯೂರು ಉಚ್ಚಿಲ ಕಾಪು 

ಕಟೀಲು ಮೂರನೇ ಮೇಳ== MSEZ ಕಾಲನಿ, 62ನೇ ತೋಕೂರು ಜೋಕಟ್ಟೆ 

ಕಟೀಲು ನಾಲ್ಕನೇ ಮೇಳ  == ಶ್ರೀಮಾತಾ, ಮಾಧವ ಪೈ ಪಾಲಿಟೆಕ್ನಿಕ್ ಬಳಿ,  ಈಶ್ವರನಗರ ಮಣಿಪಾಲ 

ಕಟೀಲು ಐದನೇ ಮೇಳ == ತಿರುವಾಲೆ ಇರಾ ಬಂಟ್ವಾಳ 

ಕಟೀಲು ಆರನೇ ಮೇಳ == ಹೋಡಿಮುಂಡೇವು ಮನೆ ಮಾಂಟ್ರಾಡಿ 

ಮಂದಾರ್ತಿ ಒಂದನೇ ಮೇಳ  == ಶ್ರೀ ಕ್ಷೇತ್ರದಲ್ಲಿ 

ಮಂದಾರ್ತಿ ಎರಡನೇ ಮೇಳ   == ಮಂಜುನಾಥ ಕೃಪಾ ಆಲೂರು ಹರ್ಕೂರು 

ಮಂದಾರ್ತಿ ಮೂರನೇ ಮೇಳ  == ಹೋರ್ವರಮನೆ ಯಡಾಲಬೆಟ್ಟು ಮೊಳಹಳ್ಳಿ 

ಮಂದಾರ್ತಿ ನಾಲ್ಕನೇ ಮೇಳ   == ಅಲೆವೂರು 

ಮಂದಾರ್ತಿ ಐದನೇ ಮೇಳ  == ಶ್ರೀ ಕ್ಷೇತ್ರದಲ್ಲಿ 

ಹನುಮಗಿರಿ ಮೇಳ == ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣ – ಭಾರತ ಜನನಿ

ಶ್ರೀ ಸಾಲಿಗ್ರಾಮ ಮೇಳ == ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಜಾತ್ರೆ – ಚಿತ್ರಾ ನಕ್ಷತ್ರ 

ಶ್ರೀ ಪೆರ್ಡೂರು ಮೇಳ == ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಜಾತ್ರೆ – ಪಾವನ ತುಳಸಿ 

ಶ್ರೀ ಮಾರಣಕಟ್ಟೆ ಮೇಳ ‘ಎ’ == ಶಿವಕೃಪಾ ನಿಲಯ ನೂಜಾಡಿ 

ಶ್ರೀ ಮಾರಣಕಟ್ಟೆ ಮೇಳ ‘ಬಿ ==  ಶ್ರೀ ಕ್ಷೇತ್ರದಲ್ಲಿ 

ಶ್ರೀ ಮಾರಣಕಟ್ಟೆ ಮೇಳ ‘ಸಿ ==  ಶಿವಕೃಪಾ ನಿಲಯ ನೂಜಾಡಿ 

ಶ್ರೀ ಪಾವಂಜೆ ಮೇಳ == ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಟೀಲು ಎಕ್ಕಾರು ಘಟಕ – ಶ್ರೀ ದೇವಿ ಮಹಾತ್ಮೆ 

ಶ್ರೀ ಕಮಲಶಿಲೆ ಮೇಳ == ರಿಪ್ಪನ್ ಪೇಟೆ 

ಶ್ರೀ ಅಮೃತೇಶ್ವರೀ ಮೇಳ, ಕೋಟ == ಸಾಲಿಗ್ರಾಮ ರಥಬೀದಿ 

ಶ್ರೀ ಸೌಕೂರು ಮೇಳ == ದೇವಲ್ಕುಂದ ಮೇಲ್ಮನೆ – ಪೌರಾಣಿಕ ಪ್ರಸಂಗ 

ಶ್ರೀ ಬೆಂಕಿನಾಥೇಶ್ವರ ಮೇಳ ಕಳವಾರು  == ಹಳೆಯಂಗಡಿ ಹೋಟೆಲ್ ಪೂಜಾ ಪರಿವಾರ್ ಮುಂಭಾಗ – ನಾಗತಂಬಿಲ 

ಶ್ರೀ ಕ್ಷೇತ್ರ ಗೋಳಿಗರಡಿ ಮೇಳ == ಕರ್ಜೆ ಪೇಟೆ – ಮಂತ್ರಮಾಂಗಲ್ಯ 

ಶ್ರೀ ಹಿರಿಯಡಕ ಮೇಳ == ಪೆರ್ಡೂರು ಶ್ರೀ ಅನಂತಪದ್ಮನಾಭ ದೇವರ ಸನ್ನಿಧಿಯಲ್ಲಿ – ದ್ವಿತೀಯ ಸೇವೆ ಆಟ 

ಶ್ರೀ ಶನೀಶ್ವರ ಮೇಳ == ವೀರ ಹನುಮಾನ್ ಮತ್ತು ಶನೀಶ್ವರ ದೇವಸ್ಥಾನ ವಠಾರ ನಾಗೂರು

ಶ್ರೀ ಸಿಗಂದೂರು ಮೇಳ == ತಾಳಗುಪ್ಪ 

ಶ್ರೀ ನೀಲಾವರ ಮೇಳ  == ತೆಕ್ಕಟ್ಟೆ ಜನಪ್ರಿಯ ಕಾಂಪ್ಲೆಕ್ಸ್ 

ಶ್ರೀ ಹಟ್ಟಿಯಂಗಡಿ ಮೇಳ ==  ಸಂತೆಕಟ್ಟೆ ಕಳ್ತೂರು – ದೀಕ್ಷಾ ಸಾಗರಿ 

ಶ್ರೀ ಹಾಲಾಡಿ ಮೇಳ == ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ನಂಚಾರು – ಗಗನ ತಾರೆ 

ಶ್ರೀ ಬೋಳಂಬಳ್ಳಿ ಮೇಳ== ಕೂಡ್ಲಿ ದುರ್ಗಾಂಬಾ ಅಮ್ಮನವರ ದೇವಸ್ಥಾನ ರಂಗನಕೆರೆ – ಶಿವದುರ್ಗಾ ಮಹಾತ್ಮೆ 

ಶ್ರೀ ಸಸಿಹಿತ್ಲು ಭಗವತೀ ಮೇಳ == ಕೃಷ್ಣಾಪುರ ಕಾಟಿಪಳ್ಳ 9ನೇ ಬ್ಲಾಕ್ – ಶ್ರೀ ಭಗವತೀ ಮಹಾತ್ಮೆ 

ಶ್ರೀ ಗೆಜ್ಜೆಗಿರಿ ಮೇಳ == ಶ್ರೀ ಕ್ಷೇತ್ರ ಕಟೀಲು – ವಿಶ್ವವ್ಯಾಪಕ ನಾಮ ಶ್ರೀರಾಮ 

ವಿ.ಸೂ: ದಿನನಿತ್ಯದ ಆಟದ ವಿವರಗಳನ್ನು ಮಾಹಿತಿಗಳು ಲಭ್ಯವಿದ್ದಲ್ಲಿ ಮಾತ್ರ ಪ್ರಕಟಿಸಲಾಗುವುದು. 

ಯಕ್ಷತೂಣೀರ ಸಂಪ್ರತಿಷ್ಠಾನ ಕೋಟೂರು – ಮಲ್ಲ ಕ್ಷೇತ್ರದಲ್ಲಿ ಯಕ್ಷಗಾನ ಬಯಲಾಟ

ಯಕ್ಷತೂಣೀರ ಸಂಪ್ರತಿಷ್ಠಾನ, ಕೋಟೂರು ಇವರಿಂದ ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಯಕ್ಷಗಾನ ಬಯಲಾಟ ಸೇವೆ

ಕೋಟೂರು ಯಕ್ಷತೂಣೀರ ಸಂಪ್ರತಿಷ್ಠಾನದ ಆಶ್ರಯದಲ್ಲಿ  ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸೇವಾರೂಪವಾಗಿ ಅಜಪುರದ ಸುಬ್ಬ ವಿರಚಿತ, ಹರಿಕೃಷ್ಣ ಹೊಳ್ಳ ಬ್ರಹ್ಮಾವರ ಇವರಿಂದ ಪರಿಷ್ಕರಿಸಲ್ಪಟ್ಟ ಪಾರಿಜಾತ ಪ್ರಸಂಗದ ಭಾಗವಾದ “ನರಕಾಸುರ ಮೋಕ್ಷ” ಕಾಲಮಿತಿಯ ಯಕ್ಷಗಾನ ಬಯಲಾಟವು ಜರಗಿತು. 

ಪ್ರತಿಷ್ಠಾನದ ಕಲಾವಿದರು ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಹಾಡುಗಾರಿಕೆಯಲ್ಲಿ ತಲ್ಪಣಾಜೆ ಸಹೋದರರಾದ ವೆಂಕಟ್ರಮಣ ಭಟ್ ಹಾಗೂ ಶಿವಶಂಕರ ಭಟ್, ಹಿಮ್ಮೇಳದಲ್ಲಿ ಅಡ್ಕ ಕೃಷ್ಣ ಭಟ್, ಅಂಬೆಮೂಲೆ ಶಿವಶಂಕರ ಭಟ್, ಬೇಂಗ್ರೋಡಿ ಲಕ್ಷ್ಮೀಶ, ಗಿರೀಶ್ ಕೋಳಿಯಡ್ಕ ಸಹಕರಿಸಿದರು. 

ಪಾತ್ರವರ್ಗದಲ್ಲಿ ಅಡ್ಕ ಸುಬ್ರಹ್ಮಣ್ಯ ಭಟ್, ಡಾ. ಶಿವಕುಮಾರ್ ಅಡ್ಕ, ಧರ್ಮೇಂದ್ರ ಮಾಸ್ಟರ್ ಕೂಡ್ಲು, ಮಹೇಶ್ ಎಡನೀರು, ಪೃಥ್ವಿ ಪೆರುವೋಡಿ, ನಿರಂಜನ ಬಳ್ಳುಳ್ಳಾಯ ಮುಳಿಯಾರು, ಗುರುಪ್ರಸಾದ್ ಮುಳಿಯಾರು, ಶರತ್ ರಾವ್ ಕಾರಡ್ಕ,ಯತಿರಾಜ್ ಅಮಕ್ಕಾರು, ಮನೀಶ್ ಮುಳಿಯಾರು, ದೀಕ್ಷಾ ಅಂಬುಕುಂಜೆ, ಯಶಸ್ ಮಜಕ್ಕಾರು, ಅದ್ವೈತ್ ಅಗ್ನಿಹೋತ್ರಿ ಹಾಗೂ ಚೈತ್ರ ಅಮಕ್ಕಾರು ಭಾಗವಹಿಸಿದರು. 

ವರ್ಣಾಲಂಕಾರ ಮತ್ತು ವಸ್ತ್ರಾಲಂಕಾರದಲ್ಲಿ ರಾಕೇಶ್ ಗೋಳಿಯಡ್ಕ ಹಾಗೂ ಬಳಗದವರು ಸಹಕರಿಸಿದರು.

ವೇದಿಕೆ, ಧ್ವನಿ ಹಾಗೂ ಬೆಳಕಿನ ವ್ಯವಸ್ಥೆಯನ್ನು ಶ್ರೀ ಕ್ಷೇತ್ರದ ಆಶ್ರಯದಲ್ಲಿರುವ ಮಲ್ಲ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾಮಂಡಳಿಯವರು ಒದಗಿಸಿದ್ದಾರೆ. ಕಾರ್ಯಕ್ರಮದಲ್ಲಿ ಗೋವಿಂದ ಬಳ್ಳಮೂಲೆ ಸ್ವಾಗತಿಸಿ ಮುರಳಿಕೃಷ್ಣ ಸ್ಕಂದ ಧನ್ಯವಾದವಿತ್ತರು.

ಧರ್ಮಸ್ಥಳ, ಕಟೀಲು, ಹನುಮಗಿರಿ ಮೇಳ – ಇಂದು ಆಟ ಎಲ್ಲೆಲ್ಲಿ?

ಶ್ರೀ ಧರ್ಮಸ್ಥಳ ಮೇಳ == ಪಡುಕೋಣೆ ಹಡವು – ಶ್ರೀಕೃಷ್ಣ ಪಾರಿಜಾತ, ನರಕಾಸುರ, ಅಗ್ರಪೂಜೆ 

ಕಟೀಲು ಒಂದನೇ ಮೇಳ == ನಡ್ಯೋಡಿಗುತ್ತು ದಂಡೆಗೋಳಿ ವಾಮದಪದವು – ರುಕ್ಮಿಣಿ ಕಲ್ಯಾಣ, ಶ್ರೀನಿವಾಸ ಕಲ್ಯಾಣ 

ಕಟೀಲು ಎರಡನೇ ಮೇಳ == ದುರ್ಗಾಕೃಪಾ ಕೊಲತರು ಮುಚ್ಚೂರು ನಿಡ್ಡೋಡಿ – ಶ್ರೀ ದೇವಿ ಮಹಾತ್ಮೆ 

ಕಟೀಲು ಮೂರನೇ ಮೇಳ== ಹೊಸಮನೆ ಕೇಪುಲು ಪಾಲಡ್ಕ – ಶ್ರೀ ದೇವಿ ಮಹಾತ್ಮೆ 

ಕಟೀಲು ನಾಲ್ಕನೇ ಮೇಳ  == ಕಟೀಲು ಕ್ಷೇತ್ರ ಸರಸ್ವತಿ ಸದನ – ಶ್ರೀ ಗಾಯತ್ರಿ ಮಹಾತ್ಮೆ  

ಕಟೀಲು ಐದನೇ ಮೇಳ == ದುರ್ಗಾ ಕಾಂಪ್ಲೆಕ್ಸ್ ಬಳಿ ಪಾವೂರು – ಶ್ರೀ ದೇವಿ ಮಹಾತ್ಮೆ 

ಕಟೀಲು ಆರನೇ ಮೇಳ == ಕಟೀಲು ಕ್ಷೇತ್ರ ಮಹಾಲಕ್ಷ್ಮಿ ಸದನ – ಶ್ರೀಕೃಷ್ಣ ಗಾರುಡಿ, ವೀರವರ್ಮ ಕಾಳಗ 

ಹನುಮಗಿರಿ ಮೇಳ == ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರ – ನಮೋ ರಘುವಂಶದೀಪ 

ಯಕ್ಷಗಾನ ಕಲೆಯ ಪೋಷಕ, ನಿರ್ದೇಶಕ ಟಿ, ಶ್ಯಾಮ ಭಟ್ – ಜನ್ಮದಿನದ ಶುಭಾಶಯಗಳು 

ಯಕ್ಷಗಾನ ಕಲೆಯ ಪೋಷಕ, ನಿರ್ದೇಶಕ ಟಿ, ಶ್ಯಾಮ ಭಟ್ ಅವರನ್ನು ತಿಳಿಯದವರು ಯಕ್ಷಗಾನ ಲೋಕದಲ್ಲಿ  ಇರಲಾರರು. ಆದುದರಿಂದ ಅವರನ್ನು ಪರಿಚಯ ಮಾಡುವುದು ಇಲ್ಲಿ ಅಪ್ರಸ್ತುತವೆಂದು ಭಾವಿಸುತ್ತೇನೆ. ಯಕ್ಷಗಾನ ಮತ್ತು ಅವರಿಗೆ ಅವಿನಾಭಾವ ಸಂಬಂಧ. ಇಂದು ಅವರ ಜನ್ಮದಿನ.  ಆದ ಕಾರಣ ಅವರ ವಿಶೇಷತೆಗಳಲ್ಲಿ ಕೆಲವನ್ನು ತಿಳಿದುಕೊಳ್ಳೋಣ. 

ಡಾ. ಶ್ಯಾಮ್ ಭಟ್ ಅವರ ವಿಶೇಷತೆಗಳು ಮತ್ತು ವಿಸ್ಮಯಗಳು:

ಕಲೆಯ ಸೆಳೆತ ಎನ್ನುವುದು ಹಾಗೆಯೇ. ಅದೊಂದು ಭಾವದೊಳಗಿನ ತುಡಿತ. ಪಂಡಿತ, ಪಾಮರ ಅಥವಾ ಬಡವ, ಬಲ್ಲಿದನೆಂಬ ಭೇದಭಾವವನ್ನು ತೋರದೆ ಕಲೆಯು ಶ್ರದ್ಧೆಯನ್ನು ತೋರಿದವನಿಗೆ ಒಲಿಯುತ್ತದೆ. ಎಷ್ಟೇ ಕಲಿತು ವಿದ್ಯಾವಂತನಾಗಿ ಉನ್ನತ ಹುದ್ದೆಯಲ್ಲಿದ್ದವರಲ್ಲಿ ಇಂದ ಹಲವಾರು ಮಂದಿ ತಾನೊಂದು ಕಲೆಯ ಜೊತೆಗೆ ಗುರುತಿಸಿಕೊಳ್ಳಲು ಇಷ್ಟಪಡುತ್ತಾರೆ. ಅಂತಹ ಸೆಳೆತ ಸಂಗೀತಾದಿ ಕಲೆಗಳಿವೆ.

ಹೆಚ್ಚಿನ ಕಲೆಗಳಿಗೆ ಮೂಲ ಸಂಗೀತವಾದರೂ ಸಂಗೀತವಲ್ಲದ  ಚಿತ್ರಕಲೆ, ಶಿಲ್ಪಕಲೆ ಮುಂತಾದ ಇತರ ಕಲೆಗಳೂ ಇವೆ. ಕಲೆಗಳ ಮೇಲಿನ ವ್ಯಾಮೋಹ ಹೀಗೇಕೆ ಎಂಬ ಪ್ರಶ್ನೆಗೆ ಉತ್ತರವನ್ನು ಹುಡುಕುವುದು ಕಷ್ಟಕರ. ಅದು ಕೇವಲ ಮನರಂಜನೆಯೂ ಹವ್ಯಾಸವೋ ಜನಪ್ರಿಯತೆಯನ್ನು ಪಡೆಯುವ ಹಂಬಲವೋ ಎಂದು ಹೇಳುವ ಹಾಗಿಲ್ಲ. ಕಲೆಯ ತುಡಿತ ಮಿಡಿತಗಳು ಮನುಷ್ಯನ ರಕ್ತದ ಕಣಕಣದಲ್ಲಿಯೂ ಅಡಗಿರಬಹುದೇನೋ ಎಂಬ ಭಾವನೆಗಳು ಮೂಡಿದರೆ ಅಚ್ಚರಿಯೇನಿಲ್ಲ.  

ಕಲೆ ಎಂಬುದು ಮಾನವನಿಗೆ ಅದರಲ್ಲೂ ಭಾರತೀಯರಿಗೆ ಮಾನಸಿಕ ನೆಮ್ಮದಿಯನ್ನು ಕೊಡುತ್ತದೆ. ದಿನನಿತ್ಯದ ಕರ್ತವ್ಯದ ನಿಬಿಡ ಜಂಜಾಟಗಳಿಂದ ಒಂದರೆಕ್ಷಣ ಬದಲಾವಣೆಯ ಶಾಂತಿಯನ್ನು ಕೊಡುತ್ತದೆ. ಆದ ಕಾರಣ ಎಷ್ಟೋ ಉನ್ನತ ಉದ್ಯೋಗಸ್ಥರು ಕಲಾಸೇವೆಯಲ್ಲಿ ನಿರತರಾಗಿದ್ದುದನ್ನು ನಾವು ಕಾಣುತ್ತೇವೆ. ರಾಜಕಾರಣಿಗಳು, ವಿಜ್ಞಾನಿಗಳು, ರಕ್ಷಣಾ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರು, ಭಾರತೀಯ ಆಡಳಿತ ಸೇವೆಯ(ಇಂಡಿಯನ್ ಸಿವಿಲ್ ಸರ್ವಿಸ್) ಉನ್ನತ ಉದ್ಯೋಗಸ್ಥರು ಹೀಗೆ ಈ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. 

ಆದರೆ ಕಲೆಯ ಬಗ್ಗೆ ಅಪಾರ ಜ್ಞಾನವನ್ನು ಹೊಂದಿದ್ದುದು ಮಾತ್ರವಲ್ಲದೆ ಅಂತಹ ಕಲೆಗಳ ಏಳಿಗೆಗಾಗಿ ನಿರಂತರ ಪ್ರೋತ್ಸಾಹವನ್ನು ಕೊಡುತ್ತಾ ಜೊತೆಗೆ ಅದರ ಬಗ್ಗೆ ನಿರ್ದಿಷ್ಟವಾದ ನಿರ್ದೇಶನವನ್ನೂ ಕೊಡಬಲ್ಲ ಮಹಾನುಭಾವರುಗಳಿರುವುದು ಅಪರೂಪ. ಕೇವಲ ಬೆರಳೆಣಿಕೆಯಲ್ಲಿ ಮಾತ್ರವೇ ಅಂತಹವರು ಕಾಣಸಿಗಬಹುದಷ್ಟೆ. ಅವರೊಲ್ಲಬ್ಬರು ಡಾ. ಟಿ. ಶ್ಯಾಮ ಭಟ್.  

ಜಿಲ್ಲಾಧಿಕಾರಿ, ಸಾರಿಗೆ ಇಲಾಖೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು, ಕರ್ನಾಟಕ ಲೋಕಸೇವಾ ಆಯುಕ್ತರೇ ಮೊದಲಾದ ಉನ್ನತ ಹುದ್ದೆಗಳನ್ನು ಅಲಂಕರಿಸಿದ ಶ್ಯಾಮ್ ಭಟ್ಟರ ಕಲಾಪ್ರೀತಿ ಅನನ್ಯವಾದದ್ದು. ಎಷ್ಟೋ ಕಲಾವಿದರಿಗೆ ಮತ್ತು ಕಲಾಪ್ರದರ್ಶನಗಳಿಗೆ ಸಹಾಯಹಸ್ತ ನೀಡಿದುದು ಇವರ ಹೆಚ್ಚುಗಾರಿಕೆ. ಹಾಗೆಂದು ಅದನ್ನು ಅವರು ಎಂದೂ ಹೇಳಿಕೊಂಡಿಲ್ಲ. ತನ್ನ ಕರ್ತವ್ಯದ ಒಂದು ಭಾಗವೆಂದೇ ಭಾವಿಸಿದ್ದಾರೆ. ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಮತ್ತು ಸಂಪಾಜೆ ಯಕ್ಷೋತ್ಸವದ ಮುಖಾಂತರ ಅವರು ನಡೆಸಿದ ಕಲಾಸೇವೆ ಕಲಾಭಿಮಾನಿಗಳು, ಪ್ರೇಕ್ಷಕರು ಮತ್ತು ಕಲಾವಿದರು ಅನಾವರತವೂ ನೆನಪಿನಲ್ಲಿಡಬೇಕಾದುದು. ಎಲ್ಲರಿಗೂ ತಿಳಿದ ವಿಚಾರವಾದ್ದರಿಂದ ಅದರ ಬಗ್ಗೆ ಮತ್ತೆ ಮತ್ತೆ ನಾನು ಇಲ್ಲಿ ಉಲ್ಲೇಖಿಸಲು ಹೋಗುವುದಿಲ್ಲ.

ಆದರೆ ಎಲ್ಲರಿಗೂ ತಿಳಿದಿರದ ಅವರನ್ನು ಹತ್ತಿರದಿಂದ ಬಲ್ಲವರು ಮಾತ್ರ ತಿಳಿದಿರುವ ವಿಚಾರವನ್ನು ನಾನಿಲ್ಲಿ ಹೇಳಲೇಬೇಕು. ಡಾ. ಶ್ಯಾಮ ಭಟ್ಟರು ಕೇವಲ ಯಕ್ಷಗಾನದ  ಪ್ರೋತ್ಸಾಹಕ ಅಥವಾ ಯಕ್ಷಗಾನದ ಪ್ರೇಕ್ಷಕ, ಆರಾಧಕ ಎಂದು ತಿಳಿದುಕೊಂಡರೆ ಅದು ನಮ್ಮ ಅಜ್ಞಾನ ಎಂದು ಹೇಳಬಹುದು. ಅವರೊಬ್ಬ ಯಕ್ಷಗಾನದ ಶ್ರೇಷ್ಠ ನಿರ್ದೇಶಕ ಎಂದು ತಿಳಿದರೆ ಹಲವರಿಗೆ ಆಶ್ಚರ್ಯವಾಗಬಹುದು. ಪ್ರದರ್ಶನಗಳಲ್ಲಿ ಕೆಲವೊಮ್ಮೆ ಕಲಾವಿದರಿಂದಲೋ ಅಥವಾ ಇತರರಿಂದಲೋ ತಪ್ಪುಗಳು ಘಟಿಸಿ ಹೋದಾಗ ಅವರೊಳಗಿನ ನಿರ್ದೇಶಕ ಜಾಗೃತನಾಗುತ್ತಾನೆ.

ಹೀಗೆಯೇ ಪ್ರದರ್ಶನ ನಡೆಯಬೇಕೆಂದು ಅವರು ನಿರ್ದೇಶಿಸಬಲ್ಲರು. ಆಶ್ಚರ್ಯವೆಂದರೆ ಅವರಿಗೆ ಹೆಚ್ಚಿನ ಎಲ್ಲಾ ಪ್ರಸಂಗಗಳ ನಡೆ ಗೊತ್ತಿದೆ. ಯಾವ ದೃಶ್ಯದ ನಂತರ ಮುಂದಿನ ದೃಶ್ಯ ಎಂದು ಕರಾರುವಾಕ್ಕಾಗಿ ಹೇಳುತ್ತಾರೆ. ಮಾತ್ರವಲ್ಲದೆ ಸಮಯದ ಅಭಾವವಿದ್ದಾಗ ಯಾವ ದೃಶ್ಯವನ್ನು ಬಿಡಬಹುದು ಯಾವುದನ್ನೂ ಪ್ರದರ್ಶಿಸಬೇಕೆಂದು ಭಾಗವತರಿಗೆ ತಿಳಿಹೇಳಬಲ್ಲರು.

ಅವರನ್ನು ಹತ್ತಿರದಿಂದ ಬಲ್ಲವರು ಹೇಳುವಂತೆ ಅವರಿಗೆ ಹೆಚ್ಚಿನೆಲ್ಲಾ ಯಕ್ಷಗಾನ ಪ್ರಸಂಗಗಳ ನಡೆ ಗೊತ್ತಿದೆ. ಇತ್ತೀಚಿಗೆ ಪ್ರದರ್ಶನಗಳನ್ನು ಕಾಣದೆ ಮೂಲೆಯಲ್ಲಿ ಬಿದ್ದ ಪ್ರಸಂಗಗಳ ನಡೆ ಹೇಗಿರಬೇಕೆಂದು ಅವರು ನಿರ್ದೇಶನ ಮಾಡಿದ್ದೂ ಇದೆಯಂತೆ. ಅಂತಹಾ ಚಾಲ್ತಿಯಲ್ಲಿಲ್ಲದ ಪ್ರಸಂಗಗಳೂ ಅದರ ಪದ್ಯಗಳೂ ಅವರಿಗೆ ಕಂಠಪಾಠ! ಇಂತಹ ಪ್ರಸಂಗಗಲ್ಲಿ ಇಂತದ್ದೇ ಪದ್ಯಗಳನ್ನು ಹೇಳಬೇಕೆಂದೂ ಇಂತಹುದೇ ಪದ್ಯಗಳನ್ನು ಬಿಡಬೇಕೆಂದೂ ಕರಾರುವಕ್ಕಾಗಿ ಅವರು ನಿರ್ದೇಶಿಸುತ್ತಾರೆ ಎಂದು ಹೇಳುವುದನ್ನೂ ಕೇಳಿದ್ದೇನೆ.

ಕಥೆಯಲ್ಲಿ ಲೋಪವಾದರೆ, ಮಾತಿನಲ್ಲಿ ಆಭಾಸಗಳು ಉಂಟಾದರೆ, ದೃಶ್ಯ ಸಂಯೋಜನೆಯಲ್ಲಿ ತಪ್ಪುಗಳು ಸಂಭವಿಸಿದರೆ ಅವರದನ್ನು ತಿದ್ದಿ ತಿಳಿಹೇಳಬಲ್ಲರು. ಆದುದರಿಂದ ಡಾ. ಶ್ಯಾಮ್ ಭಟ್ಟರು ಕೇವಲ ಒಬ್ಬ ಕಲಾಪೋಷಕ, ಕಲಾಪ್ರೇಮಿಯಲ್ಲ. ಬದಲಾಗಿ ಯಕ್ಷಗಾನದ ಶ್ರೇಷ್ಠ ನಿರ್ದೇಶಕರೂ ಹೌದು. ಆದುದರಿಂದ ಶ್ರೇಷ್ಠ ವಿದ್ವಾಂಸರೂ ಕಲಾ ನಿರ್ದೇಶಕರೂ ಆದ ಅವರಿಂದ ಈ ಕಲಾಜಗತ್ತು ಬಹಳಷ್ಟು ಶ್ರೀಮಂತವಾಗಿದೆ. 

ಟಿ. ಶ್ಯಾಮ್ ಭಟ್ಟರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು 

ಬರಹ: ಮನಮೋಹನ್ ವಿ. ಎಸ್. 

ಯಾವುದೇ ಆರ್ಥಿಕ ವ್ಯವಹಾರಕ್ಕೆ ಖಾತೆ ತೆರೆಯುವುದು ಅಗತ್ಯ – ಬ್ಯಾಂಕಿಂಗ್ ಬಗೆಗೆ ಉಪನ್ಯಾಸ

ಪುತ್ತೂರು: ಆಧುನಿಕ ದಿನಮಾನಗಳಲ್ಲಿ ಬ್ಯಾಂಕಿಂಗ್ ವ್ಯವಹಾರ ಅತ್ಯಂತ ಸುಲಭಸಾಧ್ಯವೆನಿಸಿದೆ. ಬೆರಳ ತುದಿಯಲ್ಲಿ ಹಣ ವರ್ಗಾವಣೆ ಮಾಡುವ ವ್ಯವಸ್ಥೆ ಜಾರಿಗೆ ಬಂದಿದೆ. ಎಟಿಎಂ ಕೇಂದ್ರಗಳಲ್ಲಿ ಹಣ ಪಡೆಯುವುದು ಮಾತ್ರವಲ್ಲದೆ ಜಮಾ ಮಾಡುವುದಕ್ಕೂ ಸಾಧ್ಯವಾಗಿದೆ. ಆದರೆ ಈ ರೀತಿ ಯಾವುದೇ ವ್ಯವಹಾರ ಮಾಡಬೇಕಿದ್ದರೂ ಬ್ಯಾಂಕ್‌ನಲ್ಲಿ ಖಾತೆ ಹೊಂದಿರಬೇಕಾದದ್ದು ಅಗತ್ಯ ಎಂದು ಪುತ್ತೂರಿನ ಕೆನರಾ ಬ್ಯಾಂಕ್‌ನ ಹಿರಿಯ ಪ್ರಬಂಧಕ ವಸಂತ ಬಿ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಮಂಗಳವಾರ ಬ್ಯಾಂಕ್ ಖಾತೆ ಆರಂಭಿಸುವ ಬಗೆಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.


ವಿವಿಧ ಬಗೆಯ ಉದ್ಯಮಗಳು ಇಂದು ಮೊಬೈಲ್ ಬ್ಯಾಂಕಿಂಗ್ ಮೂಲಕವೇ ಕಾರ್ಯನಿರ್ವಹಿಸುತ್ತಿವೆ. ಖಾತೆಯೊಂದನ್ನು ಆರಂಭಿಸಿದ ನಂತರ ಮನೆಯಲ್ಲಿದ್ದೇ ವ್ಯವಹಾರ ನಡೆಸುವುದು ಇಂದು ಸಹಜ ಪ್ರಕ್ರಿಯೆಯಾಗಿ ನಡೆಯುತ್ತಿದೆ. ವಿದ್ಯಾಥಿಗಳು ಉನ್ನತ ಶಿಕ್ಷಣಕ್ಕೆ ಅಡಿಯಿಡುವ ಸಂದರ್ಭದಲ್ಲಿ ಸಾಲ ಪಡೆಯುವುದಕ್ಕೂ ಖಾತೆ ಹೊಂದಿರಲೇಬೇಕು. ಹಾಗಾಗಿ ಆದಷ್ಟು ಬೇಗ ಖಾತೆ ಆರಂಭಿಸಿದರೆ ಮುಂದಿನ ದಿನಗಳಲ್ಲಿ ಸಾಲ ಪಡೆಯುವುದಕ್ಕೂ ಸಹಕಾರಿ ಎನಿಸಲಿದೆ ಎಂದರು.


ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ ಪ್ರತಿಯೊಬ್ಬನೂ ಬ್ಯಾಂಕ್ ಖಾತೆ ಹೊಂದಿರಬೇಕಾದ್ದು ಇಂದಿನ ಅಗತ್ಯ. ಒಂದಕ್ಕಿಂತ ಹೆಚ್ಚು ಬ್ಯಾಂಕ್‌ಗಳಲ್ಲಿ ಖಾತೆಗಳಿದ್ದರೆ ನಾನಾ ಬಗೆಯ ವ್ಯವಹಾರಗಳಿಗೆ ಅನುಕೂಲವೆನಿಸುತ್ತದೆ. ನಿರ್ದಿಷ್ಟ ಬ್ಯಾಂಕ್‌ನ ಖಾತೆಯನ್ನು ನಿರ್ದಿಷ್ಟ ವ್ಯವಹಾರಕ್ಕಷ್ಟೇ ಬಳಸಿದಾಗ ವೈಯಕ್ತಿಕ ಬದುಕಿನ ಆರ್ಥಿಕ ಲೆಕ್ಕಾಚಾರಗಳನ್ನು ಸುಲಭವಾಗಿ ನಿರ್ವಹಿಸುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ಕೆನರಾ ಬ್ಯಾಂಕ್ ಉದ್ಯೋಗಿ ಅನೂಷಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾಹಿತಿ ನೀಡಿದರು.