ಅರ್ಥಧಾರಿ, ವೇಷಧಾರಿಯಾಗಿ, ಶಾಸಕರಾಗಿ, ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿಯ ಅಧ್ಯಕ್ಷರಾಗಿ ಸಮಾಜದ ಹಿತ ಚಿಂತನೆಯಲ್ಲಿ ತೊಡಗಿದ್ದ ಕಲಾವಿದ ಕುಂಬ್ಳೆ ಸುಂದರ್ ರಾವ್ ಅವರು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ.
ಇವರು ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿದ್ದಾಗ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸಂಘಕ್ಕೆ ಅಕಾಡೆಮಿ ವತಿಯಿಂದ ಹಿಮ್ಮೇಳ ಪರಿಕರಗಳಿಗಾಗಿ ಆರ್ಥಿಕ ನೆರವನ್ನು ನೀಡಿರುವುದನ್ನು ಇಲ್ಲಿ ಸ್ಮರಿಸುವುದಾಗಿ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ತಿಳಿಸಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಹೊರಮಾವು ಎಂಬಲ್ಲಿ ಯುವತಿ ಕೃಷ್ಣಕುಮಾರಿಯನ್ನು ಆಕೆಯ ಲೈವ್ ಇನ್ ಜೀವನ ಸಂಗಾತಿ ಸಂತೋಷ್ ಧಾಮಿ ಅವರು ತೀವ್ರ ಜಗಳದ ನಂತರ ಗೋಡೆಗೆ ತಲೆ ಬಡಿದು ಹತ್ಯೆ ಮಾಡಿದ್ದಾನೆ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಎಸ್ ಗುಳೇದ್ ಹೇಳಿದ್ದಾರೆ.
ಜಗಳದ ನಂತರ ನೇಪಾಳಿ ಪ್ರಜೆಯೊಬ್ಬ ತನ್ನ ಸಂಗಾತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ರಾಮಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಬುಧವಾರ ನಡೆದಿದೆ.
ಮೃತರನ್ನು ಕೃಷ್ಣಕುಮಾರಿ (23) ಮತ್ತು ಆರೋಪಿ ಸಂತೋಷ್ ಧಾಮಿ (27) ಎಂದು ಗುರುತಿಸಲಾಗಿದೆ. ಕೃಷ್ಣಕುಮಾರಿ ಹೊರಮಾವುನಲ್ಲಿರುವ ಯುನಿಸೆಕ್ಸ್ ಸಲೂನ್ನಲ್ಲಿ ಕೆಲಸ ಮಾಡುತ್ತಿದ್ದರೆ, ಸಂತೋಷ್ ಟಿಸಿ ಪಾಳ್ಯದ ಪುರುಷರ ಸಲೂನ್ನಲ್ಲಿ ಕೆಲಸ ಮಾಡುತ್ತಿದ್ದ.
ಇಬ್ಬರೂ ಪ್ರೀತಿಸುತ್ತಿದ್ದು, ಟಿಸಿ ಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೂಲತಃ ನೇಪಾಳ ದೇಶದವರಾಗಿದ್ದ ಇಬ್ಬರೂ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದರು.
ಬುಧವಾರ ಬೆಳಗ್ಗೆ ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೋಪದ ಭರದಲ್ಲಿ ಸಂತೋಷ್ ಕೃಷ್ಣಕುಮಾರಿಯನ್ನು ಕೊಂದಿದ್ದಾನೆ. ಪೊಲೀಸರು ಸ್ಥಳದಲ್ಲಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Bengaluru, Karnataka | A woman Krishna Kumari, was killed by her live-in partner Santosh Dhami as he banged her head against the wall after a heated argument, in Horamavu in Bengaluru: Bheemashankar S Guled, DCP, East division, Bengaluru
ಕನ್ಯಾಕುಮಾರಿ ಅಂಗಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕಣ್ಮರೆಯಾಗಿದ್ದು, ಕೋತಿ ಅವುಗಳನ್ನು ಕದಿಯುತ್ತಿರುವ ದೃಶ್ಯಗಳು ಕಂಡುಬಂದಿವೆ.
ವಿಲಕ್ಷಣ ಘಟನೆಯೊಂದರಲ್ಲಿ, ಕನ್ಯಾಕುಮಾರಿಯ ಪ್ಲೈವುಡ್ ಕಂಪನಿಯಿಂದ ಕೋತಿಯೊಂದು ಸಿಸಿಟಿವಿ ಕ್ಯಾಮೆರಾಗಳನ್ನು ಕದಿಯುತ್ತಿರುವಾಗ ಸಿಕ್ಕಿಬಿದ್ದಿದೆ. ಆದರೆ, ಒಂದು ಫೂಟೇಜ್ನಲ್ಲಿ ಕೋತಿಯ ಉಲ್ಲಾಸದ ಮುಖವನ್ನು ಸೆರೆಹಿಡಿಯಲಾಗಿದೆ.
ಕನ್ಯಾಕುಮಾರಿಯ ಪ್ಲೈವುಡ್ ಕಂಪನಿಯೊಂದರ ಮಾಲೀಕನಿಗೆ ಮಂಗವೊಂದು ಸಿಸಿಟಿವಿ ಕ್ಯಾಮೆರಾಗಳನ್ನು ಕದಿಯುತ್ತಿರುವುದನ್ನು ಕಂಡು ಆಶ್ಚರ್ಯಕ್ಕೊಳಗಾಗಿದ್ದಾನೆ.
ಆ ವ್ಯಕ್ತಿ ತನ್ನ ಅಂಗಡಿಯ ಸುತ್ತಮುತ್ತಲಿನ ಪರಿಸರವನ್ನು ವೀಕ್ಷಿಸಲು ಸಿಸಿಟಿವಿ ಅಳವಡಿಸಿದ್ದನು ಆದರೆ ಕಳ್ಳತನ ತಪ್ಪಿಸಲು ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳು ಒಂದರ ಹಿಂದೆ ಒಂದರಂತೆ ಕಳ್ಳತನವಾಗುತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾನೆ.
ಗೊಂದಲಕ್ಕೊಳಗಾದ ಮಾಲೀಕರು ಆರೋಪಿಯನ್ನು ಹಿಡಿಯಲು ಪ್ರಯತ್ನಿಸುತ್ತಿರುವಾಗ, ಕಳ್ಳತನವಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಒಂದನ್ನು ಕೋತಿಯೊಂದು ಕದಿಯುತ್ತಿರುವ ದೃಶ್ಯವು ಆತನ ಕಂಪ್ಯೂಟರ್ ನಲ್ಲಿ ಸೆರೆಯಾಗಿತ್ತು.
ಮಾಲಿಕರು ಇದುವರೆಗೆ 13 ಸಿಸಿಟಿವಿ ಕ್ಯಾಮೆರಾಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಕೋತಿ ಸಿಸಿಟಿವಿ ಕ್ಯಾಮೆರಾಗಳನ್ನು ಕದ್ದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಮಂಗಳೂರು: ‘ಭಾರತೀಯ ಪುರಾಣ ಹಾಗೂ ಇತಿಹಾಸ ಕಥನಗಳನ್ನು ಜನರ ಮನಸ್ಸಿಗೆ ಮುಟ್ಟುವ ಹಾಗೆ ಪ್ರಸ್ತುತಪಡಿಸುವ ಯಕ್ಷಗಾನ ಕರಾವಳಿ ವೈಭವವನ್ನು ಜಗತ್ತಿಗೆ ಸಾರಿ ಹೇಳಿದೆ. ಬಯಲಾಟ ಮತ್ತು ತಾಳಮದ್ದಳೆ ಕೂಟಗಳ ಮೂಲಕ ನಮ್ಮ ಭಾಷೆ – ಸಂಸ್ಕೃತಿಯನ್ನು ಎತ್ತಿ ಹಿಡಿದಿರುವ ಯಕ್ಷಗಾನ ಕರುನಾಡಿನ ಸಮೃದ್ಧ ಕಲೆ’ ಎಂದು ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಹೇಳಿದ್ದಾರೆ.
ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯಾದ ಯಕ್ಷಾಂಗಣ ಮಂಗಳೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಡಾ.ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಕೇಂದ್ರ, ಕರ್ನಾಟಕ ಯಕ್ಷ ಭಾರತಿ ಪುತ್ತೂರು ಸಹಯೋಗದೊಂದಿಗೆ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ ಹತ್ತನೇ ವರ್ಷದ ನುಡಿ ಹಬ್ಬದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು
ಕಿಲ್ಲೆ ಸಂಸ್ಮರಣ:
ಇದೇ ಸಂದರ್ಭದಲ್ಲಿ ಗತಿಸಿ ಹೋದ ಹಿರಿಯ ಅರ್ಥಧಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ದೇಶಭಕ್ತ ನಾರಾಯಣ ಶೆಟ್ಟಿ ಕಿಲ್ಲೆ ಅವರ ಸಂಸ್ಮರಣ ಕಾರ್ಯಕ್ರಮ ಜರಗಿತು.ಪುತ್ತೂರಿನ ದಿ.ಎನ್.ಎಸ್. ಕಿಲ್ಲೆ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷ ಕಡಮಜಲು ಸುಭಾಷ್ ರೈ ನುಡಿ ನಮನ ಸಲ್ಲಿಸಿದರು. ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಸ್ಮರಣಾ ಭಾಷಣದ ಮೂಲಕ ಪ್ರಸ್ತಾವನೆಗೈದರು. ಪ್ರತಿಷ್ಠಾನದ ಕಾರ್ಯದರ್ಶಿ ಪ್ರಶಾಂತ ರೈ ಪುತ್ತೂರು, ಪ್ರಮುಖರಾದ ಸುಧಾಕರ ಹೆಗಡೆ ಮತ್ತು ಕಿಲ್ಲೆಯವರ ಕುಟುಂಬಿಕರು ಉಪಸ್ಥಿತರಿದ್ದರು
ಯಕ್ಷಾಂಗಣ ಗೌರವ ಪ್ರಶಸ್ತಿ:
ತೆಂಕು-ಬಡಗು ಉಭಯ ತಿಟ್ಟುಗಳ ಪ್ರಸಿದ್ಧ ಯಕ್ಷಗಾನ ಸ್ತ್ರೀ ವೇಷಧಾರಿ ಎಂ.ಕೆ.ರಮೇಶ ಆಚಾರ್ಯ ಅವರಿಗೆ ಎನ್.ಎಸ್ ಕಿಲ್ಲೆ ಸ್ಮರಣಾರ್ಥ ‘ಯಕ್ಷಾಂಗಣ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಹ್ಮದ್ ನಗರದ ಉದ್ಯಮಿ ಹಾಗೂ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ.ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯೊಂದಿಗೆ ಯಕ್ಷಾಂಗಣ ವತಿಯಿಂದ ಫಲ,ಸ್ಮರಣಿಕೆ,ಮಾನಪತ್ರ ಮತ್ತು ರೂ.10,000/- ಗೌರವ ನಿಧಿಯನ್ನು ಸಮರ್ಪಿಸಲಾಯಿತು. ನಿವೇದಿತ ಎನ್.ಶೆಟ್ಟಿ ಪ್ರಶಸ್ತಿ ಫಲಕ ವಾಚಿಸಿದರು.
ಸನ್ಮಾನಕ್ಕೆ ಉತ್ತರಿಸಿ ಮಾತನಾಡಿದ ಎಂ.ಕೆ. ರಮೇಶಾಚಾರ್ಯ ‘ಕಲಾವಿದನಾಗಿ ಹಲವಾರು ಹಿರಿಯ ಕಲಾವಿದರ ಒಡನಾಟ ಗಳಿಸಿದ್ದ ತನಗೆ ಮಾನ ಸನ್ಮಾನಗಳು ಹೆಚ್ಚಾಗಿ ಲಭಿಸಿರುವುದು ಕರಾವಳಿ ಭಾಗದಲ್ಲಿ. ಘಟ್ಟದಲ್ಲಿ ಹುಟ್ಟುವುದಕ್ಕಿಂತ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹುಟ್ಟುತ್ತಿದ್ದರೆ ಇನ್ನಷ್ಟು ಸಂತೋಷಪಡುತ್ತಿದ್ದೆ’ ಎಂದು ಭಾವುಕರಾಗಿ ನುಡಿದರು. ಹಿರಿಯ ಲೆಕ್ಕ ಪರಿಶೋಧಕ ಸಿಎ ಎಸ್.ಎಸ್.ನಾಯಕ್, ಉದ್ಯಮಿ ಸೌಂದರ್ಯ ರಮೇಶ್,ವಿ.ವಿ.ಸಂಧ್ಯಾ ಕಾಲೇಜು ಪ್ರಾಂಶುಪಾಲೆ ಡಾ.ಸುಭಾಷಿಣಿ ಶ್ರೀವತ್ಸ ಮುಖ್ಯ ಅತಿಥಿಗಳಾಗಿದ್ದರು
ಕಾರ್ಯಕ್ರಮ ಸಂಘಟಕ ಮತ್ತು ಅಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಯಕ್ಷಾಂಗಣದ ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಪ್ರಾರ್ಥನೆ ಸಲ್ಲಿಸಿ, ನಿರೂಪಿಸಿದರು. ಜೊತೆ ಕಾರ್ಯದರ್ಶಿ ಕೆ.ಲಕ್ಷ್ಮೀನಾರಾಯಣ ರೈ ಹರೇಕಳ ವಂದಿಸಿದರು. ಸಮಿತಿ ಪ್ರಮುಖರಾದ ಎಂ.ಸುಂದರ ಶೆಟ್ಟಿ ಬೆಟ್ಟಂಪಾಡಿ, ಕೆ.ರವೀಂದ್ರ ರೈ ಕಲ್ಲಿಮಾರು, ಸುಧಾಕರ ರಾವ್ ಪೇಜಾವರ, ಡಾ. ದಿನಕರ ಎಸ್. ಪಚ್ಚನಾಡಿ, ಸಿದ್ದಾರ್ಥ ಅಜ್ರಿ, ಸುಮಾಪ್ರಸಾದ್ ವೇದಿಕೆಯಲ್ಲಿದ್ದರು.
ಯಕ್ಷಗಾನ ತಾಳಮದ್ದಳೆ:
ಸಮಾರೋಪದ ಅಂಗವಾಗಿ ‘ಸಪ್ತ ವಿಜಯ’ ಸರಣಿಯ ಕೊನೆಯಲ್ಲಿ ಭಾಗವತರಾದ ಪ್ರಶಾಂತ ರೈ ಪುತ್ತೂರು ಮತ್ತು ಧೀರಜ್ ರೈ ಸಂಪಾಜೆ ಅವರ ಭಾಗವತಿಕೆಯಲ್ಲಿ ‘ಸಿರಿಕಟ್ಣ ವಿಜಯೊ’ (ತುಳು) ಹಾಗೂ ‘ಯಕ್ಷ ಲೋಕ ವಿಜಯ’ (ಕನ್ನಡ) ಯಕ್ಷಗಾನ ತಾಳಮದ್ದಳೆ ಜರಗಿತು.
ಖ್ಯಾತ ಯಕ್ಷಗಾನ ಕಲಾವಿದ, ತಾಳಮದ್ದಳೆ ಕೂಟದ ವಾಗ್ಮಿ, ಮಾಜಿ ಶಾಸಕ ಕುಂಬಳೆ ಸುಂದರ ರಾವ್ ನಿಧನರಾಗಿದ್ದಾರೆ. ಮಂಗಳೂರಿನ ಪಂಪ್ ವೆಲ್ ಸಮೀಪ ವಾಸವಾಗಿದ್ದ ಕುಂಬಳೆ ಸುಂದರ ರಾವ್ (88) ಅವರು ಇಂದು (ಬುಧವಾರ) ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ತಾಳಮದ್ದಳೆ ಮತ್ತು ಬಯಲಾಟ ಎಂಬ ಯಕ್ಷಗಾನದ ಎರಡೂ ವಿಭಾಗಗಳಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದ ಅವರು 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಶಾಸಕರಾಗಿ ಗೆದ್ದು ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಒಂದು ಅವಧಿಗೆ ಅವರು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಕುಂಬಳೆ ಸುಂದರ ರಾವ್ ನಡೆದು ಬಂದ ದಾರಿ:
ಕೂರ್ಮಾವತಾರದಲ್ಲಿ ಇವನಾಗಿದ್ದ ನನ್ನ ಚಿಪ್ಪು. ನೀನು ಇದನ್ನು ಒಪ್ಪು. ನರಸಿಂಹಾವತಾರದಲ್ಲಿ ಅವನು ನನ್ನ ನಖ, ಈಗ ನನ್ನ ಸಖ, ಒಪ್ಪದಿದ್ದರೆ ನಿನಗಿಲ್ಲ ಸುಖ. ಇಂತಹಾ ಪ್ರಾಸಬದ್ಧ ಮಾತುಗಳನ್ನು ಕೇಳಿದ ಯಕ್ಷರಸಿಕರು ಎಲ್ಲರೂ ಅವರು ಯಾರೆಂದು ಖಂಡಿತಾ ಊಹಿಸಬಹುದು.
ಯಾವುದೇ ಒಬ್ಬ ಪಾತ್ರಧಾರಿಯು ಪಾತ್ರವೊಂದರಲ್ಲಿ ಆತನು ಮೂಡಿಸಿದ ಶೈಲಿ ಚಿತ್ರಣಗಳನ್ನು ಆತನ ನಿವೃತ್ತಿಯ ನಂತರವೂ ಇತರ ಪಾತ್ರಧಾರಿಗಳು ಅನುಸರಿಸಿಕೊಂಡು ಹೋಗುತ್ತಾರೆ ಎಂದಾದರೆ ಅದು ಆ ಪಾತ್ರಧಾರಿಯ ದೊಡ್ಡ ಗೆಲುವು ಎಂದೇ ಅರ್ಥ. ಉದಾಹರಣೆಯಾಗಿ ಸುದರ್ಶನ ವಿಜಯ ಪ್ರಸಂಗದ ವಿಷ್ಣುವಿನ ಪಾತ್ರವೇ ಜ್ವಲಂತ ಸಾಕ್ಷಿ. ವಿಷ್ಣುವಾಗಿ ಕುಂಬಳೆ ಸುಂದರ ರಾಯರು ಕಟ್ಟಿದ ಪಾತ್ರಚಿತ್ರಣ ಈಗಲೂ ಹಾಗೆಯೇ ಇದೆ. ಅಲ್ಲಿ ಕುಂಬಳೆ ಸುಂದರ ರಾಯರು ಹೇಳುತ್ತಿದ್ದ ಪ್ರಾಸಬದ್ಧ ಮಾತುಗಳನ್ನು ಬೇರೆ ಕಲಾವಿದರು ಈಗಲೂ ಉಪಯೋಗಿಸುತ್ತಿದ್ದಾರೆ. ಇದು ಕುಂಬಳೆಯವರ ದೊಡ್ಡ ಗೆಲುವು.
ಕುಂಬಳೆ ಸುಂದರ ರಾವ್ ಅವರ ಭರತಾಗಮನದ ಭರತ, ವಿರಾಟ ಪರ್ವದ ಉತ್ತರ ಕುಮಾರ ಮೊದಲಾದುವುಗಳೆಲ್ಲಾ ಅವರಿಗೇ ಹೇಳಿ ಮಾಡಿಸಿದ ಪಾತ್ರಗಳು. ಕೃಷ್ಣ ಸಂಧಾನದ ಕರ್ಣ, ಕರ್ಣಪರ್ವದ ಕರ್ಣ, ಮಹಾಬ್ರಾಹ್ಮಣದಲ್ಲಿ ವಿಶ್ವಾಮಿತ್ರ (ವಿಶ್ವಾಮಿತ್ರ-ಮೇನಕೆ) ಸಮುದ್ರಮಥನದ ವಿಷ್ಣು, ದಕ್ಷಯಜ್ಞದ ಈಶ್ವರ ವಿವಿಧ ಪ್ರಸಂಗಗಳಲ್ಲಿ, ಭೀಷ್ಮ, ಕೃಷ್ಣ, ರಾಮ, ವಿಷ್ಣು, ಚ್ಯವನ, ಪರೀಕ್ಷಿತ, ಧರ್ಮಸ್ಥಳ ಕ್ಷೇತ್ರ ಮಹಾತ್ಮ್ಯೆಯ ಗೋವಿಂದ ದೀಕ್ಷಿತರ ಪಾತ್ರ ಇವರಿಗೆ ಬಹಳಷ್ಟು ಪ್ರಸಿದ್ಧಿಯನ್ನು ತಂದುಕೊಟ್ಟಿದೆ. ತ್ರಿಪುರ ಮಥನದ ‘ಚಾರ್ವಾಕ’ ಪಾತ್ರ ನಿರ್ವಹಣೆಯಂತೂ ಅದ್ಭುತ.
ಕುಂಬಳೆ ಸುಂದರ ರಾವ್ ಅವರ ಕುಟುಂಬದ ವೃತ್ತಿ ಮಗ್ಗ ನೇಯುವುದು ಮತ್ತು ಬಟ್ಟೆಯ ವ್ಯಾಪಾರ. ಮನೆಮಾತು ಮಲೆಯಾಳ. ಎಳವೆಯಲ್ಲೇ ವಿದ್ಯಾಭ್ಯಾಸಕ್ಕೆ ತಿಲಾಂಜಲಿ, ಯಕ್ಷಗಾನದ ಆಸಕ್ತಿ ಸೆಳೆಯಿತು. ಕೆಲಸಕ್ಕೆ ಬಾರದವನೆಂಬ ಭಾವನೆ ಅಪ್ಪನಲ್ಲಿದ್ದರೂ ಅಮ್ಮನ ಪ್ರೀತಿಯಿತ್ತು. ಶಾಲೆಯಲ್ಲಿ ಓದಿದ್ದು ಕಡಿಮೆಯಾದರೂ ಕುಂಬಳೆ ಸುಂದರ ರಾಯರು ಕನ್ನಡ, ಮಲಯಾಳ, ತುಳು, ಸಂಸ್ಕೃತ, ಹವ್ಯಕ, ತಮಿಳು ಭಾಷೆಗಳಲ್ಲಿ ಪಾಂಡಿತ್ಯವನ್ನು ಹೊಂದಿದ್ದರು.
ತಂದೆಯ ಬಟ್ಟೆ ಮಿಲ್ ಇರುವ ಕುಂಬಳೆ ಸಮೀಪದ ನಾಯ್ಕಾಪು ಎಂಬಲ್ಲಿ ನಡೆಯುತ್ತಿದ್ದ ತಾಳಮದ್ದಲೆಯನ್ನು ನೋಡಿ ಅರ್ಥ ಹೇಳುತ್ತಾ ಆಸಕ್ತಿ ಬೆಳೆಸಿಕೊಂಡ ಕುಂಬಳೆಯವರಿಗೆ ಚಿಕ್ಕಂದಿನಲ್ಲಿಯೇ ಯಕ್ಷಗಾನದ ಆಸಕ್ತಿ ಅತೀವವಾಗಿತ್ತು. ಕುಂಬಳೆ ಸುಂದರ ರಾಯರ ತಂದೆಯ ಮಗ್ಗದ ಕೆಲಸ ಅಲ್ಲಿ ನಡೆಯುತ್ತಿತ್ತು. ಅಲ್ಲಿ ಪ್ರತಿ ವಾರವೂ ತಾಳಮದ್ದಳೆ ನಡೆಯುತ್ತಿತ್ತು. ಅವರು ಶಾಲೆ ಬಿಟ್ಟ ನಂತರ ಅಲ್ಲಿ ಹೋಗಿ ಕುಳಿತುಕೊಳ್ಳುತ್ತಿದ್ದರು. ಒಂದು ದಿನ ಅಲ್ಲಿದ್ದ ಬೋನಂತಾಯ ಶಂಭಟ್ಟರು ಎನ್ನುವವರು ‘‘ಒಂದು ಅರ್ಥ ಹೇಳೋ ಸುಂದರಾ’’ ಎಂದು ಕುಂಬಳೆಯವರಲ್ಲಿ ದೂತನ ಅರ್ಥ ಹೇಳಿಸಿದರು.
ಆಮೇಲೆ ಸಂಬಂಧಿಕರೂ ನೆರೆಯವರೂ ಆದ ಬಣ್ಣದ ಕುಟ್ಯಪ್ಪು ಅವರ ಕಾಳಜಿಯಿಂದ ಮೇಳದಲ್ಲಿ ವೇಷ ಮಾಡತೊಡಗಿದರು. ಆಟಕ್ಕಿಂತ ತಾಳಮದ್ದಳೆಗೇ ಹೆಚ್ಚು ಒಗ್ಗುವವನು ಎಂದು ಭಾವಿಸಿದ ಸುಂದರ ರಾಯರು ಮಳೆಗಾಲದಲ್ಲಿ ನಡೆಯುತ್ತಿದ್ದ ತಾಳಮದ್ದಳೆಗಳಲ್ಲಿ ಶೇಣಿಯವರು, ವೆಂಕಪ್ಪ ಶೆಟ್ಟಿಯವರು, ಸಾಮಗರೇ ಮೊದಲಾದವರಿದ್ದ ಕೂಟಗಳಲ್ಲಿ ಸಣ್ಣ ಸಣ್ಣ ಪಾತ್ರಗಳಲ್ಲಿ ಅರ್ಥ ಹೇಳಲು ಪ್ರಾರಂಭಿಸಿ ತಾಳಮದ್ದಳೆ ಕೂಟಗಳಿಗೆ ಅನಿವಾರ್ಯ ಸದಸ್ಯರಾದರು.
ರಾಜಕೀಯದಲ್ಲಿ ಕುಂಬಳೆಯವರಿಗೆ ಯಾವುದೇ ಆಕಾಂಕ್ಷೆಯಿರಲಿಲ್ಲ. ಕೇವಲ ಭಾಷಣಗಾರನಾಗಿ ರಾಜಕೀಯದಲ್ಲಿದ್ದರು. ಪ್ರಚಾರ ಭಾಷಣಕ್ಕಾಗಿ ಕರೆಯುತ್ತಿದ್ದರು. ಆದರೆ ಒಂದು ಅನಿರೀಕ್ಷಿತ ಸಂದರ್ಭದಲ್ಲಿ ಚುನಾವಣೆಗೆ ಸ್ಪರ್ಧಿಸಲು ಒತ್ತಾಯದ ಕರೆಬಂತು. ಸ್ಪರ್ಧಿಸಿ ಗೆದ್ದು ಶಾಸಕರಾದರು. ಶಾಸಕನಾದ ಮೇಲೆಯೂ ಯಕ್ಷಗಾನದ ವೇಷ ಮಾಡಿದ್ದಾರೆ. ತಾಳಮದ್ದಳೆಯಲ್ಲೂ ಭಾಗವಹಿಸಿದ್ದಾರೆ. ಧರ್ಮಸ್ಥಳ ಮೇಳದಲ್ಲಿ ಚೌಕಿಯಲ್ಲಿ ಅವರ ವೇಷದ ಪೆಟ್ಟಿಗೆ ಶಾಸಕನಾದ ಮೇಲೂ ಹಾಗೆಯೇ ಇತ್ತಂತೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಗಾನ ಪ್ರೇಕ್ಷಕರಿಂದ ಸ್ವಚ್ಛತೆಗೆ ತೊಂದರೆಯಾಗುತ್ತದೆ ಎಂಬ ನೆಪವೊಡ್ಡಿ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ್ದರು.ಇದರಿಂದ ಕೆರಳಿದ ಕುಂಬಳೆಯವರು ಸದನದ ಬಾವಿಗಿಳಿದು ಧರಣಿ ನಡೆಸಿ ಅನಂತರ ಮುಖ್ಯಮಂತ್ರಿ ಜೆ. ಎಚ್. ಪಟೇಲ್ ಮಧ್ಯಸ್ಥಿಕೆಯಲ್ಲಿ ಪುನಃ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ದೊರಕಿಸಿಕೊಟ್ಟಿದ್ದರು.
“ಅವರಿಗೆ ಪ್ರಾಸ ಬಿಟ್ಟು ಏನು ಗೊತ್ತಿದೆ” ಎಂಬ ಟೀಕೆಗಳಿಗೆ ಉತ್ತರವಾಗಿಯೋ ಎಂಬಂತೆ ಹಠಕ್ಕೆ ಬಿದ್ದ ಅವರು ಒಂದು ಕೂಡಾ ಪ್ರಾಸವನ್ನು ಹೇಳದೆ ಎರಡು ವರ್ಷ ತಿರುಗಾಟ ಮಾಡಿದ್ದರು.
ಇದು ಕುಂಬಳೆಯವರ ವೈಶಿಷ್ಟ್ಯ. ಹಲವಾರು ಪ್ರಶಸ್ತಿ ಸನ್ಮಾನಗಳನ್ನು ಪಡೆದು ಯಕ್ಷಗಾನದಲ್ಲಿ ತನ್ನದೇ ಆದ ಪ್ರಸಿದ್ಧಿ, ಅಭಿಮಾನಿಗಳನ್ನು ಸಂಪಾದಿಸಿದ ಕುಂಬಳೆ ಸುಂದರ ರಾವ್ ಇಂದು ನಮ್ಮೊಡನಿಲ್ಲ ಎಂಬುದು ದುಃಖಕರ ಮತ್ತು ವಿಷಾದನೀಯ. ಆದರೆ ಯಕ್ಷಗಾನ ಕ್ಷೇತ್ರಕ್ಕೆ ಅವರು ಕೊಟ್ಟ ಕೊಡುಗೆ ಸದಾ ಜೀವಂತವಾಗಿರುತ್ತದೆ. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ವಿಭಿನ್ನ ಕೌಶಲಗಳನ್ನು ಹೊಂದಿದ್ದು, ಸೂಕ್ತ ವೇದಿಕೆ ಲಭಿಸಿದಾಗ ಪ್ರತಿಭೆಯನ್ನು ಪ್ರದರ್ಶಿಸಬೇಕು. ಇದರಿಂದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯೆಯ ಪ್ರಸರಣದ ಜತೆಗೆ ವಿದ್ಯಾರ್ಥಿಗಳಲ್ಲಿರುವ ವಿಶೇಷ ಸಾಮರ್ಥ್ಯವೂ ಹೊರಬರಲು ಸಾಧ್ಯವಾಗುತ್ತದೆ. ವಿದ್ಯಾಲಯಗಳಲ್ಲಿ ಲಭಿಸುವ ಅವಕಾಶಗಳ ಸದ್ಬಳಕೆ ಮಾಡಿದಾಗ ಆತ್ಮವಿಶ್ವಾಸ ಮೂಡಿ ಹೆಚ್ಚಿನ ಸಾಧನೆ ಮಾಡಲು ಪ್ರೇರೇಪಣೆ ದೊರಕುತ್ತದೆ ಎಂದು ಅಂಬಿಕಾ ಮಹಾವಿದ್ಯಾಲಯದ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಗಣೇಶ್ ಪ್ರಸಾದ್ ಎ. ಹೇಳಿದರು.
ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗ ರೂಪಿಸಿದ ‘ಅನುಪಮ ಪ್ರತಿಭಾ ವೇದಿಕೆ’ಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಕ್ರವಾರ ಮಾತನಾಡಿದರು.
ಆಧುನಿಕ ದಿನಮಾನದ ಶೈಕ್ಷಣಿಕ ವ್ಯವಸ್ಥೆ ವಿದ್ಯಾರ್ಥಿಗಳು ಪಠ್ಯ ವಿಷಯಕ್ಕಷ್ಟೇ ಗಮನಹರಿಸುವಂತೆ ರೂಪುಗೊಳ್ಳುತ್ತಿವೆ. ಇದರಿಂದಾಗಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಿಂದ ದೂರ ಉಳಿಯುವಂತಾಗಿದೆ. ಆದಾಗ್ಯೂ ವಿದ್ಯಾರ್ಥಿಗಳು ಅವಕಾಶ ಸೃಷ್ಟಿಸಿಕೊಂಡು ನೃತ್ಯ, ಹಾಡುಗಾರಿಕೆ, ಕ್ರೀಡೆ ಮುಂತಾದವುಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ನಮ್ಮನ್ನು ನಾವು ಮಾನಸಿಕವಾಗಿ ಸದೃಢವಾಗಿರಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ರಾಕೇಶ ಕುಮಾರ್ ಕಮ್ಮಜೆ, ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ಸಿಗುವ ಅವಕಾಶಗಳ ಸದ್ಬಳಕೆ ಮಾಡಿಕೊಳ್ಳುವುದು ಅಗತ್ಯ. ವಿವಿಧ ವೇದಿಕೆಗಳು ಹೊಸ ಪ್ರತಿಭೆಗಳನ್ನು ಹೊರತರುವ ಕಾರ್ಯ ನಡೆಸುತ್ತವೆ. ನಾನಾ ಬಗೆಯ ಸ್ಪರ್ಧೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲೂ ಇಂತಹ ವೇದಿಕೆಗಳು ಸಹಕಾರಿಯಾಗುತ್ತವೆ ಎಂದರು.
ವಿದ್ಯಾರ್ಥಿಗಳಾದ ಶೇಖರ್, ವಿಕ್ರಂ, ವೈಭವ್, ಗುರುಪ್ರಸಾದ್ ಕವನ ವಾಚನ, ಭಾಷಣ ಹಾಗೂ ಗಾಯನದಲ್ಲಿ ತಮ್ಮ ಪ್ರತಿಭೆ ವ್ಯಕ್ತಪಡಿಸಿದರೆ ವಿದ್ಯಾರ್ಥಿನಿಯರಾದ ಶ್ರಾವ್ಯಶ್ರೀ, ನಯನಾ, ವರೇಣ್ಯ, ಲೇಖಾ, ಚೈತನ್ಯ ಹಾಗೂ ಅಪೂರ್ವ ಹಾಡು, ಚರ್ಚೆ ಮತ್ತು ಮೆಹೆಂದಿ ವಿನ್ಯಾಸ ರಚಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.
ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿನಿಯರಾದ ಪಂಚಮಿ ಬಾಕಿಲಪದವು ಸ್ವಾಗತಿಸಿ, ಜಯಶ್ರೀ ವಂದಿಸಿದರು. ಪ್ರತಿಭಾ ವೇದಿಕೆ ಕಾರ್ಯದರ್ಶಿ ಅಂತಿಮ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿನಿ ಮೇಘಾ ಡಿ. ನಿರೂಪಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಉಪನಿರ್ದೇಶಕರು(ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾರವಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉತ್ತರಕನ್ನಡ ಇವರ ಜಂಟಿ ಆಶ್ರಯದಲ್ಲಿ ಸೈಂಟ್ ಮೈಕೆಲ್ ಕಾನ್ವೆಂಟ್ ಕಾರವಾರ
ಇಲ್ಲಿ ನವೆಂಬರ್ 24 ರಿಂದ 26 ವರೆಗೆ ನಡೆದ ರಾಜ್ಯಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಚೆಸ್ ಪಂದ್ಯಾವಳಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಕೆ.ಧನುಷ್ ರಾಮ್, ಕೆ.ಪ್ರಣೀಲ್ ರೈ ಹಾಗೂ 9ನೇ ತರಗತಿಯ ಸುಶ್ಮಿತಾ ರಾವ್ ಭಾಗವಹಿಸಿದ್ದು,
ಇವರ ಪೈಕಿ ಧನುಷ್ ರಾಮ್ (ಶ್ರೀ ದಿನೇಶ್ ಪ್ರಸನ್ನ ಹಾಗೂ ಶ್ರೀಮತಿ ಉಮಾ.ಡಿ. ಪ್ರಸನ್ನ ದಂಪತಿ ಪುತ್ರ) ಪ್ರೌಢ ಶಾಲಾ ಬಾಲಕರ ವಿಭಾಗದಲ್ಲಿ ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿರುತ್ತಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ದಿನಾಂಕ 26-11-2022ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಇದರ 2022-23ರ ಸಾಲಿನ ವಾರ್ಷಿಕ ಕ್ರೀಡಾಕೂಟ -“ವಿವೇಕ ಕ್ರೀಡಾ ಸಂಭ್ರಮ-2022”ದ ಉದ್ಘಾಟನಾ ಕಾರ್ಯಕ್ರಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಶಿವಪ್ರಕಾಶ್ .ಎಂ ಸಭಾಧ್ಯಕ್ಷತೆ ವಹಿಸಿ ಮಾತನಾಡಿ ಒಳ್ಳೆಯ ಆರೋಗ್ಯ, ಸಂಸ್ಕೃತಿ ಸಂಸ್ಕಾರವನ್ನು ಪಡೆಯಲು ಆರೋಗ್ಯವೇ ಮುಖ್ಯ ಕ್ರೀಡೆ ಗುಣ, ಆತ್ಮ ವಿಶ್ವಾಸ, ಬದುಕಿಗೆ ಸ್ಪೂರ್ತಿ ನೀಡಬಲ್ಲದ್ದು ಮತ್ತು ಸಾಧನೆಯ ಉತ್ತುಂಗಕ್ಕೆ ಕ್ರೀಡೆಯ ಒಂದು ಪ್ರಮುಖ ಹಂತ ಎಂದರು.
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿಯ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ವಿಶ್ವಾಸ್ ಶೆಣೈ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಪರಿಪೂರ್ಣ ಹಾಗೂ ದೇಶಭಕ್ತಿ, ಸದೃಢ ಯುವ ಜನರಾಗಿ ರೂಪಿಸುವಲ್ಲಿ ಕ್ರೀಡೆಯ ಮಹತ್ವವನ್ನು ತಿಳಿಸಿದರು. ಈ ಶೈಕ್ಷಣಿಕ ವರ್ಷದಲ್ಲಿ ಕ್ರೀಡಾ ವಿಭಾಗದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಶಿಸಿದರು. ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ತೀರಾ ಅನಿವಾರ್ಯವಾಗಿ ಬೇಕಾಗಿರುವ 400ಮೀ ನ ಟ್ರಾಕ್ ನ ಅವಶ್ಯಕತೆಯನ್ನು ಪೂರೈಸುವ ನಿಟ್ಟಿನಲ್ಲಿ ತಮ್ಮ ಸಹಕಾರದ ಭರವಸೆಯನ್ನು ನೀಡಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಧ್ವಜ ವಂದನೆ ಸ್ವೀಕರಿಸಿದ ಪುತ್ತೂರಿನ ಖ್ಯಾತ ಉದ್ಯಮಿ ಶ್ರೀ ಶಿವಪ್ರಸಾದ್ ರೈಯವರು ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.
ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಸತೀಶ್ ಬಪ್ಪಳಿಗೆ ಇವರು ಧ್ವಜಾರೋಹಣಗೈದು ಮಾತನಾಡಿ, ಪೋಷಕರಾಗಿ ಶಾಲಾ ಹಿರಿಮೆ-ಗರಿಮೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಸಂಸ್ಥೆಗೆ ಮತ್ತು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀ ನಾಗೇಶ್ ಪ್ರಭು ಇವರು ಕ್ರೀಡಾ ಜ್ಯೋತಿ ಬೆಳಗುವುದರ ಮೊಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ರೀಡಾ ಕಾರ್ಯದರ್ಶಿ ಕು.ಯುಕ್ತಶ್ರೀ ಕ್ರೀಡಾ ಪ್ರತಿಜ್ಞಾ ವಿಧಿ ನೆರವೇರಿಸಿದಳು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರುಗಳು, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಶಾಂತಿ ಶೆಣೈ, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಭಾಸ್ಕರ್ ಗೌಡ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕಿರಾದ ವಾಣಿಶ್ರೀ.ಎನ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಬೈಕ್ ಟ್ಯಾಕ್ಸಿ ಚಾಲಕ, ಸಹಚರನಿಂದ ಕೇರಳ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ದೂರಿನ ಆಧಾರದ ಮೇಲೆ ಬೆಂಗಳೂರಿನ ಇಬ್ಬರು ಆರೋಪಿಗಳು ಮತ್ತು ಪಶ್ಚಿಮ ಬಂಗಾಳದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ಬೆಂಗಳೂರು: ಕೇರಳ ಮೂಲದ 22 ವರ್ಷದ ಯುವತಿಯೊಬ್ಬಳ ಮೇಲೆ ಬೈಕ್ ಟ್ಯಾಕ್ಸಿ ಚಾಲಕ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಯುವತಿ ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಳು.
22 ವರ್ಷದ ಅತ್ಯಾಚಾರ ಸಂತ್ರಸ್ತೆ ತನ್ನ ದೂರಿನಲ್ಲಿ, ಮಧ್ಯರಾತ್ರಿಯ ಸುಮಾರಿಗೆ ಇನ್ನೊಬ್ಬ ಸ್ನೇಹಿತೆಯನ್ನು ಭೇಟಿ ಮಾಡಲು ಬೈಕ್ ಟ್ಯಾಕ್ಸಿ ಬುಕ್ ಮಾಡುವ ಮೊದಲು ಶುಕ್ರವಾರ ತನ್ನ ಸ್ನೇಹಿತೆಯ ಮನೆಯಲ್ಲಿದ್ದಳು. ಪೊಲೀಸರ ಪ್ರಕಾರ, ರೈಡ್-ಶೇರಿಂಗ್ ಅಪ್ಲಿಕೇಶನ್ ‘ರಾಪಿಡೋ’ ನಲ್ಲಿ ಬೈಕ್ ಬುಕ್ ಮಾಡುವಾಗ ಮಹಿಳೆ ಪಾನಮತ್ತಳಾಗಿದ್ದಳು.
ಚಾಲಕ ಶಹಾಬುದ್ದೀನ್ ಮಹಿಳೆಯನ್ನು ಆಕೆಯ ಗಮ್ಯಸ್ಥಾನಕ್ಕೆ ಕರೆದೊಯ್ದರೂ ಆಕೆ ಬೈಕ್ ನಿಂದ ಇಳಿಯುವ ಸ್ಥಿತಿಯಲ್ಲಿ ಇರಲಿಲ್ಲ. ಪರಿಸ್ಥಿತಿಯ ಲಾಭ ಪಡೆದ ಚಾಲಕ ಶಹಾಬುದ್ದೀನ್ ಮಹಿಳೆಯನ್ನು ತನ್ನ ಮನೆಗೆ ಕರೆದೊಯ್ದನು, ಅಲ್ಲಿ ಈಗಾಗಲೇ ಇನ್ನೊಬ್ಬ ಮಹಿಳೆ ಇದ್ದಳು.
ಸ್ವಲ್ಪ ಸಮಯದ ನಂತರ, ಚಾಲಕನ ಸಹವರ್ತಿ ಅಖ್ತರ್ ಕೂಡ ಇಬ್ಬರೊಂದಿಗೆ ಸೇರಿಕೊಂಡರು. ಅತ್ಯಾಚಾರ ಸಂತ್ರಸ್ತೆಯ ದೂರಿನ ಪ್ರಕಾರ, ಇಬ್ಬರೂ ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮರುದಿನ, ಮಹಿಳೆಗೆ ಪ್ರಜ್ಞೆ ಬಂದಾಗ, ಅವಳು ಭಯಾನಕ ನೋವಿನಿಂದ ಬಳಲುತ್ತಿದ್ದಳು.
ಆಕೆ ಆರೋಪಿಯ ಮನೆಯಿಂದ ಹೊರಬಂದು ಸೇಂಟ್ ಜಾನ್ಸ್ ಆಸ್ಪತ್ರೆಗೆ ತೆರಳಿದಳು, ಆಕೆಯ ಗುದದ್ವಾರದಿಂದ ರಕ್ತಸ್ರಾವವಾಗುತ್ತಿತ್ತು. ಅಲ್ಲಿ ವೈದ್ಯರು ಅವಳನ್ನು ಪರೀಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದರು.
ದೂರಿನ ಆಧಾರದ ಮೇಲೆ ಘಟನೆ ಬಗ್ಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ರ್ಯಾಪಿಡೋ ಬೈಕ್ ಸವಾರ ಶಹಾಬುದ್ದೀನ್ ಮತ್ತು ಆತನ ಸ್ನೇಹಿತ ಅಖ್ತರ್ ಹಾಗೂ ಅತ್ಯಾಚಾರ ನಡೆದರೂ ಏನೂ ಮಾಡದೆ ರೂಮಿನಲ್ಲಿದ್ದ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಥಮ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ಕಾರಣಕ್ಕೆ 17 ವರ್ಷದ ಬಾಲಕಿಯೊಬ್ಬಳು ನ.28ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಡೂರಿನ ತನ್ನ ನಿವಾಸದಲ್ಲಿ ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಮೃತಳನ್ನು ಪೆರ್ಡೂರಿನ ನಿವಾಸಿ ತೃಪ್ತಿ (17) ಎಂದು ಗುರುತಿಸಲಾಗಿದೆ. ಹೆಬ್ರಿಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು.
ಪೊಲೀಸರ ಪ್ರಕಾರ, ತೃಪ್ತಿ ತನ್ನ ಅಧ್ಯಯನದಲ್ಲಿ ನಿಪುಣೆಯಾಗಿದ್ದಳು. ಆದರೆ ಇತ್ತೀಚಿನ ಪರೀಕ್ಷೆಯಲ್ಲಿ ಅವಳು ಕಡಿಮೆ ಅಂಕಗಳನ್ನು ಗಳಿಸಿದ್ದಳು. ಭಾನುವಾರ ಬೆಳಗ್ಗೆ ವಿಶೇಷ ತರಗತಿಗೆ ಹೋಗಿ ಮನೆಗೆ ಮರಳಿದ್ದಳು.
ಬಳಿಕ ಕೊಠಡಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಳಿಕ ಪಾಲಕರು ತೃಪ್ತಿ ತನ್ನ ಕೊಠಡಿಯ ಸೀಲಿಂಗ್ಗೆ ನೇಣು ಬಿಗಿದುಕೊಂಡಿರುವುದನ್ನು ಗಮನಿಸಿದ್ದಾರೆ.
ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
“ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ರೀತಿಯ ಸಮಸ್ಯೆಗಳಿಗೆ ಒಳಗಾಗಿದ್ದರೆ ದಯವಿಟ್ಟು ಮಾನಸಿಕ ತಜ್ಞರ ಸಹಾಯವನ್ನು ಪಡೆದುಕೊಳ್ಳಿ“