ಎರಡು ತಿಂಗಳ ಗಂಡು ಮಗು ತನ್ನ ಅಜ್ಜನೊಂದಿಗೆ ಹಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊವನ್ನು ಗುಡ್ನ್ಯೂಸ್ ಮೂವ್ಮೆಂಟ್ನ Instagram ಹ್ಯಾಂಡಲ್ನಿಂದ ಹಂಚಿಕೊಳ್ಳಲಾಗಿದೆ ಮತ್ತು ಸಾವಿರಾರು ವೀಕ್ಷಣೆಗಳನ್ನು ಹೊಂದಿದೆ.
ಎರಡು ತಿಂಗಳ ಗಂಡು ಮಗು ತನ್ನ ಅಜ್ಜನೊಂದಿಗೆ ಹಾಡುತ್ತಿರುವ ವೀಡಿಯೊವನ್ನು ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಇದು ನಾವು ಪ್ರತಿನಿತ್ಯ ಕಾಣುತ್ತಿರುವ ಸಂಗತಿಯಲ್ಲವಾದುದರಿಂದ ಇಲ್ಲಿ ಹಂಚಿಕೊಳ್ಳಲಾಗಿದೆ.
ಅಜ್ಜ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಹಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಗುವೂ ಅಜ್ಜನನ್ನು ಅನುಕರಿಸಲು ಪ್ರಯತ್ನಿಸಿದನು ಮತ್ತು ಅವನೊಂದಿಗೆ ಹಾಡಿದನು.
ವೀಡಿಯೊ ಸಂಪೂರ್ಣವಾಗಿ ಆಕರ್ಷಕವಾಗಿದೆ. ಹಾಗೆಂದು ಇಂತಹಾ ಮಕ್ಕಳು ಹಾಡುವ ವೀಡಿಯೊಗಳು ಭಾರತದಲ್ಲಿ ಹಿಂದೆಯೂ ಹಲವಾರು ಬಾರಿ ಸಂಭವಿಸಿದೆ.
“ಅಜ್ಜನಿಗೆ ಸುಂದರವಾದ ಧ್ವನಿ ಇದೆ ಮತ್ತು ಮಗು ಅವನೊಂದಿಗೆ ಹಾಡಲು ಪ್ರಯತ್ನಿಸುತ್ತಿದೆ. ಆ ಮಗುವಿಗೆ ಎಷ್ಟು ದೊಡ್ಡ ಸ್ಮರಣೆ ಇದೆ! ” ಎಂದು ಹಲವಾರು ಮಂದಿ ಪ್ರತಿಕ್ರಿಯಿಸಿದ್ದಾರೆ.
2-month-old sings a duet with grandpa. 🎶👶🏽❤️👴🏽🎵 (🎥:tinaburtonmiddlet)
ಶ್ರೀ ನಾಗೇಂದ್ರ ಮೂರೂರು ಅವರು ಬಡಗುತಿಟ್ಟಿನ ಯುವ, ಅನುಭವೀ ಕಲಾವಿದರು. ಪ್ರಸ್ತುತ ಹಾಸ್ಯಗಾರರಾಗಿ ಯಕ್ಷಗಾನ ಕ್ಷೇತ್ರದಲ್ಲಿ ವ್ಯವಸಾಯ ಮಾಡುತ್ತಿದ್ದಾರೆ. ಹಾಸ್ಯಗಾರನಾದರೂ ಇವರು ಎಲ್ಲಾ ರೀತಿಯ ಪಾತ್ರಗಳನ್ನೂ ಮಾಡಬಲ್ಲ ಸಾಮರ್ಥ್ಯ ಉಳ್ಳವರು. ಆದುದರಿಂದ ತಂಡಕ್ಕೆ ಅನಿವಾರ್ಯ ಸಂದರ್ಭಗಳಲ್ಲಿ ಇವರು ಆಪದ್ಬಾಂಧವರಾಗಿ ಒದಗಬಲ್ಲವರು. ಇವರಲ್ಲಿರುವ ಹಾಸ್ಯಪ್ರಜ್ಞೆಯನ್ನು ಗುರುತಿಸಿ ಹಾಸ್ಯ ಪಾತ್ರಗಳನ್ನು ನಿರ್ವಹಿಸಲು ಪ್ರೇರಣೆ ನೀಡಿ ಅವಕಾಶ ನೀಡಿದವರು ಕೊಂಡದಕುಳಿ ಶ್ರೀ ರಾಮಚಂದ್ರ ಹೆಗಡೆಯವರು.
‘ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನ’ ತಂಡದ ಸದಸ್ಯನಾಗಿ ವೇಷಗಳನ್ನು ಮಾಡುತ್ತಿದ್ದಾಗ ಪ್ರೇಕ್ಷಕರು ಇವರಲ್ಲಿರುವ ಪ್ರತಿಭೆಯನ್ನು ಗುರುತಿಸಿದ್ದರು. ಗುಂಡಬಾಳಾ ಮೇಳ, ಕೊಂಡದಕುಳಿ ಶ್ರೀ ರಾಮಚಂದ್ರ ಹೆಗಡೆಯವರ ‘ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನ’ ಕುಂಭಾಶಿ, ಶ್ರೀ ಸುಬ್ರಹ್ಮಣ್ಯ ಚಿಟ್ಟಾಣಿಯವರ ವೀರಾಂಜನೇಯ ಯಕ್ಷಮಿತ್ರ ಮಂಡಳಿ, ಶ್ರೀ ಬಳ್ಕೂರು ಕೃಷ್ಣಯಾಜಿ ಅವರ ಯಾಜಿ ಯಕ್ಷಮಿತ್ರ ಮಂಡಳಿ, ಇಟಗಿ ಶ್ರೀ ಮಹಾಬಲೇಶ್ವರ ಭಟ್ ಅವರ ಕಲಾಭಾಸ್ಕರ ಮೊದಲಾದ ತಂಡಗಳಲ್ಲಿ ವ್ಯವಸಾಯ ಮಾಡಿದ ಅನುಭವಿ ಇವರು. ಅನಿವಾರ್ಯ ಸಂದರ್ಭಗಳಲ್ಲಿ ಸಾಲಿಗ್ರಾಮ ಮೇಳದಲ್ಲಿ ವೇಷ ಮಾಡಿದ್ದೂ ಇದೆ. ಯಕ್ಷಗಾನ ಕ್ಷೇತ್ರದಲ್ಲಿ ಇವರು ಸುಮಾರು ಮೂವತ್ತು ವರ್ಷಗಳ ಅನುಭವಿ.
ಬಡಗುತಿಟ್ಟಿನ ಅನುಭವೀ ಹಾಸ್ಯಗಾರರಾದ ಶ್ರೀ ನಾಗೇಂದ್ರ ಅವರ ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅಳವಳ್ಳಿ ಗ್ರಾಮದ ಮೂರೂರು. 1977ನೇ ಇಸವಿ ಸೆವ್ಟೆಂಬರ್ 30ರಂದು ಶ್ರೀ ವೆಂಕಟ್ರಮಣ ಭಟ್ ಮತ್ತು ಶ್ರೀಮತಿ ಮಹಾದೇವಿ ದಂಪತಿಗಳ ಪುತ್ರನಾಗಿ ಜನನ. ಕೃಷಿ ಕುಟುಂಬ ಇವರದ್ದು. ಮನೆಯ ಸದಸ್ಯರೆಲ್ಲರೂ ಯಕ್ಷಗಾನ ಕಲಾಸಕ್ತರು. ವಿದ್ಯಾರ್ಜನೆ ಎಸ್. ಎಸ್. ಎಲ್. ಸಿ ವರೆಗೆ. 7ನೇ ತರಗತಿ ವರೆಗೆ ಅಳವಳ್ಳಿ ಶಾಲೆಯಲ್ಲಿ. ಬಳಿಕ ಹತ್ತನೇ ತರಗತಿ ವರೆಗೆ ಕವಲಕ್ಕಿ ಜೂನಿಯರ್ ಕಾಲೇಜಿನಲ್ಲಿ. ಬಾಲ್ಯದಲ್ಲಿಯೇ ಯಕ್ಷಗಾನ ಕಲೆಯತ್ತ ಆಕರ್ಷಿತರಾಗಿ ಪ್ರದರ್ಶನಗಳನ್ನು ನೋಡುತ್ತಾ ಬೆಳೆದವರು.
ಶಾಲಾ ವಿದ್ಯಾರ್ಥಿಯಾಗಿದ್ದಾಗ ಕೆರೆಮನೆ ಶಂಭು ಹೆಗಡೆ, ಕೆರೆಮನೆ ಮಹಾಬಲ ಹೆಗಡೆ, ಮೂರೂರು ದೇವರು ಹೆಗಡೆ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಎಂ.ಎ ನಾಯ್ಕ್, ಬಳ್ಕೂರು ಕೃಷ್ಣಯಾಜಿ, ಕೊಂಡದಕುಳಿ ರಾಮಚಂದ್ರ ಹೆಗಡೆ, ಕುಂಜಾಲು ರಾಮಕೃಷ್ಣ, ಬೆಳಿಯೂರು ಕೃಷ್ಣಮೂರ್ತಿ ಮೊದಲಾದ ಖ್ಯಾತ ಕಲಾವಿದರ ವೇಷಗಳನ್ನು ನೋಡುವ ಅವಕಾಶವಾಗಿತ್ತು. ಶ್ರೀ ನಾಗೇಂದ್ರ ಅವರಿಗೆ ಬೆಳಿಯೂರು ಕೃಷ್ಣಮೂರ್ತಿಯವರ ಹಾಸ್ಯ ಎಂದರೆ ಬಲು ಇಷ್ಟ. ಇವರ ವೇಷಗಳನ್ನು ನೋಡುತ್ತಾ ತಾನೂ ಕಲಾವಿದನಾಗಬೇಕೆಂಬ ಆಸೆಯು ಚಿಗುರೊಡೆದಿತ್ತು. ಶ್ರೀ ನಾಗೇಂದ್ರ ಮೂರೂರು ಅವರಿಗೆ ನಾಟಕದಲ್ಲೂ ಆಸಕ್ತಿ ಇತ್ತು.
ಯಕ್ಷಗಾನ ಕಲಾವಿದನಾಗುವುದಕ್ಕಿಂತ ಮೊದಲೇ ಇವರು ನಾಟಕದಲ್ಲಿ ವೇಷ ಮಾಡಿದ್ದರು. ಶ್ರೇಷ್ಠ ಕಲಾವಿದರಾದ ಕೆಕ್ಕಾರು ಜಿ.ಡಿ ಭಟ್ಟರ ಜತೆ ನಾಟಕದಲ್ಲಿ ಪಾತ್ರ ಮಾಡಿದ್ದರು. ಕೆಕ್ಕಾರು ಜಿ.ಡಿ ಭಟ್ಟರು ಕಲಾವಿದರೂ ಚಿತ್ರ ಕಲಾಕಾರರೂ ಆಗಿದ್ದರು. ಮಣ್ಣಿನಿಂದ ವಿವಿಧ ಮೂರ್ತಿಗಳನ್ನು ರಚಿಸುವ ಕಲೆಯೂ ಅವರಿಗೆ ತಿಳಿದಿತ್ತು. ಶ್ರೀ ನಾಗೇಂದ್ರ ಮೂರೂರು ಅವರು ನಾಟ್ಯ ಕಲಿತು ಯಕ್ಷಗಾನ ಕಲಾವಿದನಾಗಲು ನಿರ್ಧರಿಸಿದ್ದರು. ಮನೆಯಲ್ಲಿ ಬಡತನವಿತ್ತು. ಹಣ ಸಂಪಾದನೆ ಅಷ್ಟು ಸುಲಭವಿರಲಿಲ್ಲ. ಅಡುಗೆ ಕೆಲಸಕ್ಕೆ ತೆರಳಿ ಹಣ ಸಂಪಾದಿಸಿದ್ದರು.
ಮೂರೂರು ದೇವರು ಹೆಗಡೆ ಸ್ಮಾರಕ ಪ್ರತಿಷ್ಠಾನ ಸಂಸ್ಥೆಯಡಿ ಮೂರೂರು ಸುಬ್ರಹ್ಮಣ್ಯ ಮತ್ತು ಸರ್ವೇಶ್ವರ ಮೂರೂರು ಅವರಿಂದ ನಾಟ್ಯ ಅಭ್ಯಾಸ. ಮೂರೂರಿನಲ್ಲಿ ನಡೆದ ಪ್ರದರ್ಶನ, ಕಂಸ ವಧೆ ಪ್ರಸಂಗದಲ್ಲಿ ಕಂಸನಾಗಿ ರಂಗಪ್ರವೇಶ. ಬಳಿಕ ಗಿರಿಜಾ ಕಲ್ಯಾಣ ಪ್ರಸಂಗದಲ್ಲಿ ದಕ್ಷ, ಗಯ ಚರಿತ್ರೆ ಪ್ರಸಂಗದಲ್ಲಿ ಗಯ ಮೊದಲಾದ ಪಾತ್ರಗಳನ್ನು ಮಾಡಿದ್ದರು.
ಶ್ರೀ ನಾಗೇಂದ್ರ ಮೂರೂರು ಅವರು ಮೊದಲು ವ್ಯವಸಾಯ ಮಾಡಿದ್ದು ಗುಂಡಬಾಳಾ ಮೇಳದಲ್ಲಿ. ಸದ್ರಿ ಮೇಳದಲ್ಲಿ ಒಂದು ವರ್ಷ ವ್ಯವಸಾಯ. ಬಳಿಕ ಕೊಂಡದಕುಳಿ ಶ್ರೀ ರಾಮಚಂದ್ರ ಹೆಗಡೆ ನೇತೃತ್ವದ ಪೂರ್ಣಚಂದ್ರ ಯಕ್ಷ ಕಲಾ ಪ್ರತಿಷ್ಠಾನ ತಂಡದಲ್ಲಿ ನಿರಂತರ 14 ವರ್ಷ ವ್ಯವಸಾಯ. ಈ ತಂಡದಲ್ಲಿ ಖ್ಯಾತ ಕಲಾವಿದರ ಒಡನಾಟವೂ ಸಿಕ್ಕಿತ್ತು. ಮೊದಲು ಕಟ್ಟು ವೇಷ, ಒಡ್ಡೋಲಗ ವೇಷಗಳನ್ನು ಮಾಡುತ್ತಾ ಸಾಗಿದ್ದರು. ಬಳಿಕ ಕೊಂಡದಕುಳಿಯವರು ಕಾರ್ತವೀರ್ಯ, ಕೀಚಕ, ಈಶ್ವರನ ಪಾತ್ರಗಳನ್ನು ನಿರ್ವಹಿಸಿದಾಗ ಅವರ ಜತೆ ರಾವಣ, ವಲಲ, ಮಹೋಗ್ರ ಪಾತ್ರಗಳನ್ನು ಮಾಡಲು ಅವಕಾಶವು ಸಿಕ್ಕಿತ್ತು.
ಇವರಲ್ಲಿರುವ ಹಾಸ್ಯ ಪ್ರಜ್ಞೆಯನ್ನು ಗುರುತಿಸಿದ ಕೊಂಡದಕುಳಿಯವರು ಹಾಸ್ಯ ಪಾತ್ರಗಳನ್ನು ಮಾಡಲು ಸಲಹೆ ನೀಡಿ ಪ್ರೋತ್ಸಾಹಿಸಿದ್ದರು. ಈ ತಂಡದ ಹಾಸ್ಯಗಾರನಾಗಿ ಮಂಥರೆ, ನಕ್ಷತ್ರಿಕ, ಚಿತ್ರಗುಪ್ತ, ಚಿತ್ರಾಕ್ಷಿ ಕಲ್ಯಾಣದ ಪ್ರಸಂಗದ ಅಜ್ಜಿ, ಚಂದ್ರಾವಳೀ ವಿಲಾಸ ಪ್ರಸಂಗದ ಗೋಪಾಲಕರು, ಚಂದಗೋಪ, ಅತ್ತೆ ಮೊದಲಾದ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ಅವಕಾಶವಾಗಿತ್ತು. ಕೊಂಡದಕುಳಿ ಶ್ರೀ ರಾಮಚಂದ್ರ ಹೆಗಡೆ ಮತ್ತು ಬೆಳಿಯೂರು ಸಂಜಯಕುಮಾರರ ಬಣ್ಣಗಾರಿಕೆಯಿಂದ ಪ್ರೇರಿತರಾಗಿ ನಾಗೇಂದ್ರ ಮೂರೂರು ಅವರು ನೇಪಥ್ಯದಲ್ಲಿ ಸಿದ್ಧರಾಗುತ್ತಾರೆ. ಕೊಂಡದಕುಳಿ ಅವರ ನಿರ್ದೇಶನದಲ್ಲಿ ಸ್ತ್ರೀ ಪಾತ್ರಗಳನ್ನೂ ನಿರ್ವಹಿಸಿದ್ದಾರೆ.
“ನಾನು ಕಲಾವಿದನಾಗಿ ಕಾಣಿಸಿಕೊಳ್ಳಲು ಅವರೇ ಕಾರಣರು. ಬಣ್ಣ ಹಾಕಲು, ಶೃತಿಬದ್ಧವಾಗಿ ಮಾತನಾಡಲು, ವೇಷಭೂಷಣಗಳನ್ನು ಧರಿಸಲು, ಸಮಯಪಾಲನೆ ಮತ್ತು ಶಿಸ್ತನ್ನು ಅವರಿಂದಲೇ ಕಲಿತೆ. ಮನೆಯ ಸದಸ್ಯನಂತೆ ನನ್ನನ್ನು ನೋಡಿಕೊಂಡಿದ್ದಾರೆ” ಎಂದು ಹೇಳುವ ಮೂಲಕ ಕೊಂಡದಕುಳಿ ಶ್ರೀ ರಾಮಚಂದ್ರ ಹೆಗಡೆಯವರನ್ನು ಶ್ರೀ ನಾಗೇಂದ್ರ ಮೂರೂರು ಅವರು ಗೌರವಿಸುತ್ತಾರೆ.
ಶ್ರೀ ನಾಗೇಂದ್ರ ಮೂರೂರು ಅವರು ವೀರಾಂಜನೇಯ ಯಕ್ಷಮಿತ್ರ ಮಂಡಳಿ ಬಂಗಾರಮಕ್ಕಿ ಮತ್ತು ಯಾಜಿ ಯಕ್ಷಮಿತ್ರ ಮಂಡಳಿ ತಂಡಗಳಲ್ಲೂ ವ್ಯವಸಾಯ ಮಾಡಿರುತ್ತಾರೆ. ಇಟಗಿ ಶ್ರೀ ಮಹಾಬಲೇಶ್ವರ ಭಟ್ ಅವರ ‘ಕಲಾಭಾಸ್ಕರ’ ತಂಡದಲ್ಲಿ ಆರಂಭದಿಂದ ಇಂದಿನ ತನಕವೂ ಎಲ್ಲಾ ಪ್ರದರ್ಶನಗಳಲ್ಲೂ ಭಾಗವಹಿಸಿರುತ್ತಾರೆ. (ಹಾಸ್ಯ ಪಾತ್ರಗಳಲ್ಲಿ) ಶಿರಸಿ, ಸಿದ್ಧಾಪುರ ಪ್ರದೇಶದ ಪ್ರೇಕ್ಷಕರು ಇವರನ್ನು ಗುರುತಿಸಲು ಇದರಿಂದ ಅನುಕೂಲವಾಗಿತ್ತು.
ಸತ್ಯ ಹರಿಶ್ಚಂದ್ರ ಪ್ರಸಂಗದಲ್ಲಿ ಕೊಂಡದಕುಳಿ ಶ್ರೀ ರಾಮಚಂದ್ರ ಹೆಗಡೆಯವರು ಹರಿಶ್ಚಂದ್ರನಾಗಿಯೂ ತೋಟಿಮನೆ ಗಣಪತಿ ಹೆಗಡೆಯವರು ವಿಶ್ವಾಮಿತ್ರನಾಗಿಯೂ ಅಭಿನಯಿಸಿದಾಗ ಅವರ ಜತೆಯಲ್ಲಿ ನಕ್ಷತ್ರಿಕನಾಗಿ ಅಭಿನಯಿಸಲು ಅವಕಾಶವಾಗಿತ್ತು. ‘ದುಷ್ಯಂತ-ಶಕುಂತಲಾ’ ಪ್ರಸಂಗದ ತುಕ್ರ ಅಂಬಿಗನ ಹೆಂಡತಿ ಚಂದ್ರಿ ಎಂಬ ಪಾತ್ರದಲ್ಲಿ ನಾಗೇಂದ್ರ ಮೂರೂರು ಅವರ ಅಭಿನಯವನ್ನು ಕಲಾಭಿಮಾನಿಗಳು ಮೆಚ್ಚಿಕೊಂಡಿದ್ದರು. ಮಲ್ಪೆ ಶ್ರೀ ವಾಸುದೇವ ಸಾಮಗ, ಚಪ್ಪರಮನೆ ಶ್ರೀಧರ ಹೆಗಡೆ, ಶ್ರೀಧರ ಭಟ್ ಕಾಸರಕೋಡ್ ಇವರುಗಳು ತುಕ್ರ ಅಂಬಿಗನ ಪಾತ್ರ ಮಾಡಿದಾಗ ಅವರ ಜತೆಯಲ್ಲಿ ಚಂದ್ರಿಯಾಗಿ ಅಭಿನಯಿಸಿದ್ದರು.
ಈ ಜತೆಗಾರಿಕೆಯನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದರು. ಸೀತಾ ವಿಯೋಗ ಪ್ರಸಂಗದ ವಾಲ್ಮೀಕಿ, ಲವಕುಶರ ಕಾಳಗ ಪ್ರಸಂಗದ ಮಾಣಿ, ದೂತ, ಕೀಚಕ ವಧೆ ಪ್ರಸಂಗದ ವಿಜಯ,ಪಟ್ಟಾಭಿಷೇಕ ಪ್ರಸಂಗದ ಮಂಥರೆ, ಮೊದಲಾದ ಪಾತ್ರಗಳೂ ಇವರಿಗೆ ಹೆಸರನ್ನು ತಂದುಕೊಟ್ಟವು. ವಿದೇಶ ಯಾತ್ರೆಯನ್ನು ಕೈಗೊಂಡು ದುಬಾಯಿ, ಶಾರ್ಜಾ, ಬಹರೈನ್, ಸಿಂಗಾಪುರದಲ್ಲಿ ನಡೆದ ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ. ದೆಹಲಿ, ಉಜ್ಜಯಿನಿ, ಕೇರಳ, ಹೈದರಾಬಾದ್, ಕೋಲ್ಕೊತಾ, ಮುಂಬಯಿ ಮೊದಲಾದ ನಗರಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ರಂಜಿಸುವ ಅವಕಾಶವೂ ಇವರಿಗೆ ಸಿಕ್ಕಿದೆ.
ಶ್ರೀ ನಾಗೇಂದ್ರ ಮೂರೂರು ಅವರು ಪ್ರಸ್ತುತ ಯಾವುದೇ ತಂಡದ ಖಾಯಂ ಸದಸ್ಯನಲ್ಲ. ಕರೆದಲ್ಲಿ ತೆರಳಿ ಪ್ರದರ್ಶನಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಶ್ರೀಯುತರ ಪತ್ನಿ ಶ್ರೀಮತಿ ಜಾಹ್ನವಿ. ಇವರು ಗೃಹಣಿ. ಶ್ರೀ ನಾಗೇಂದ್ರ ಮೂರೂರು ಅವರಿಗೆ ಶ್ರೀ ದೇವರು ಸಕಲ ಭಾಗ್ಯಗಳನ್ನೂ ಅನುಗ್ರಹಿಸಲಿ. ಇನ್ನಷ್ಟು ಕಲಾಸೇವೆಯನ್ನು ಮಾಡುವಲ್ಲಿ ಕಲಾಮಾತೆಯ ಅನುಗ್ರಹವು ಸದಾ ಇರಲಿ ಎಂಬ ಹಾರೈಕಗಳು.
ದೆಹಲಿಯಲ್ಲಿ ಮತ್ತೊಂದು ಶ್ರದ್ಧಾ ವಾಕರ್ ಮಾದರಿಯ ಪ್ರಕರಣ; ವ್ಯಕ್ತಿಯನ್ನು ಬರ್ಬರವಾಗಿ ಕೊಂದು, ಆತನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ ಮಹಿಳೆ ಮತ್ತು ಆಕೆಯ ಮಗನನ್ನು ಬಂಧಿಸಲಾಗಿದೆ.
ಪೊಲೀಸರ ಪ್ರಕಾರ, ತಾಯಿ-ಮಗ ವ್ಯಕ್ತಿಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ರೆಫ್ರಿಜರೇಟರ್ನಲ್ಲಿ ಇರಿಸಿದರು ಮತ್ತು ಸುಮಾರು ಆರು ತಿಂಗಳ ಕಾಲ ಹತ್ತಿರದ ಕಸ ಎಸೆಯುವ ಮೈದಾನದಲ್ಲಿ ತುಂಡುಗಳನ್ನು ವಿಲೇವಾರಿ ಮಾಡಿದರು. ಕ್ರೂರ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಬೆಳಕಿಗೆ ಬಂದ ಕೆಲವೇ ದಿನಗಳಲ್ಲಿ, ದಿಲ್ಲಿಯ ಪಾಂಡವನಗರ ಪ್ರದೇಶದಲ್ಲಿ ಅಂತಹುದೇ ಘಟನೆ ವರದಿಯಾಗಿದೆ.
ಆರಂಭಿಕ ವರದಿಗಳ ಪ್ರಕಾರ, ಮಧ್ಯವಯಸ್ಕ ಮಹಿಳೆ ಮತ್ತು ಆಕೆಯ ಮಗನನ್ನು ದೆಹಲಿ ಪೊಲೀಸರ ಅಪರಾಧ ವಿಭಾಗವು ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಬಂಧಿಸಿದೆ. ಆರೋಪಿಗಳನ್ನು ”ಪೂನಂ” ಮತ್ತು ಆಕೆಯ ಮಗ ”ದೀಪಕ್” ಎಂದು ಗುರುತಿಸಲಾಗಿದೆ.
ದೆಹಲಿ ಪೊಲೀಸರ ಅಪರಾಧ ವಿಭಾಗವು ಪಾಂಡವ್ ನಗರದಲ್ಲಿನ ಕಸವನ್ನು ಎಸೆಯುವ ಸ್ಥಳದಲ್ಲಿ ತಾಯಿ ಮತ್ತು ಮಗ ದೇಹದ ಭಾಗಗಳನ್ನು ವಿಲೇವಾರಿ ಮಾಡುತ್ತಿರುವ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದೆ. ಆ ಪ್ರದೇಶದಿಂದ ಪಡೆದ ಆಘಾತಕಾರಿ ದೃಶ್ಯಾವಳಿಗಳು ದೀಪಕ್ ದೇಹದ ತುಂಡುಗಳನ್ನು ಎಸೆಯಲು ತಡರಾತ್ರಿಯಲ್ಲಿ ಕೈಯಲ್ಲಿ ಚೀಲವನ್ನು ಹಿಡಿದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ. ತಾಯಿ ಪೂನಂ ಅವರನ್ನು ಹಿಂಬಾಲಿಸುತ್ತಿರುವುದನ್ನು ಕಾಣಬಹುದು.
ಕ್ರೈಂ ಬ್ರಾಂಚ್ ತಂಡವು ಮೊದಲು ಜೂನ್ನಲ್ಲಿ ಪಾಂಡವ್ ನಗರದಲ್ಲಿ ದೇಹದ ಭಾಗಗಳನ್ನು ಪತ್ತೆ ಮಾಡಿತ್ತು, ಆದರೆ ನಂತರ ಅವು ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಅವುಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ.
ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ಘೋರ ವಿವರಗಳು ಮುನ್ನೆಲೆಗೆ ಬರಲು ಪ್ರಾರಂಭಿಸಿದ ನಂತರ, ಅಪರಿಚಿತ ದೇಹದ ಭಾಗಗಳು ಆಕೆಯದೇ ಎಂಬ ಬಗ್ಗೆಯೂ ತನಿಖೆ ನಡೆಸಲಾಯಿತು. ಆದರೆ, ಅವುಗಳು ಪಾಂಡವನಗರ ಪ್ರದೇಶದ ನಿವಾಸಿ ಅಂಜನ್ ದಾಸ್ ದೇಹದ ತುಂಡುಗಳು ಎಂದು ಪೊಲೀಸರು ಕಂಡುಕೊಂಡಿದ್ದಾರೆ.
ಪೊಲೀಸರ ಪ್ರಕಾರ, ಜೂನ್ನಲ್ಲಿ ಇಬ್ಬರು ದಾಸ್ನನ್ನು ಕೊಂದಿದ್ದಾರೆ. ಮೊದಲು ನಿದ್ರೆ ಮಾತ್ರೆಗಳನ್ನು ನೀಡಿ ನಂತರ ಕೊಲೆ ಮಾಡಲಾಗಿದೆ ಎಂದು ಅವರು ಹೇಳಿದರು. ನಂತರ ಆರೋಪಿಯು ಆತನ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ರೆಫ್ರಿಜರೇಟರ್ನಲ್ಲಿ ಸಂಗ್ರಹಿಸಿ ಪಾಂಡವ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚೆಲ್ಲಾಪಿಲ್ಲಿ ಮಾಡಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ಪಾಂಡವ್ ನಗರದ ಘಟನೆಯು ಶ್ರದ್ಧಾ ವಾಕರ್ ಕೊಲೆ ಪ್ರಕರಣಕ್ಕೆ ಗಮನಾರ್ಹ ಹೋಲಿಕೆಯನ್ನು ಹೊಂದಿದೆ, ಇದರಲ್ಲಿ ಆಕೆಯ ಲೈವ್-ಇನ್ ಪಾಲುದಾರ ಅಫ್ತಾಬ್ ಅಮೀನ್ ಪೂನಾವಾಲಾ ಕೊಲೆ ಮಾಡಿ ನಂತರ ಆಕೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ಆತನನ್ನು ಮರೆಮಾಡಲು ಹಲವಾರು ಸ್ಥಳಗಳಲ್ಲಿ ಎಸೆದಿದ್ದ.
#UPDATE | Delhi: Accused woman Poonam & son Deepak arrested for killing her husband Anjan Das at Trilokpuri residence, chopping off his body & disposing of pieces in the nearby ground: Delhi Police Crime Branch https://t.co/qRSsepJPzq
ಪುತ್ತೂರು: ಮನುಷ್ಯ ಸಂಘ ಜೀವಿಯಾಗಿದ್ದು, ವಿಶ್ವದಲ್ಲಿರುವ ಇತರ ಜೀವಿಗಳಿಗಿಂತ ಭಿನ್ನವಾಗಿ ಬದುಕುತ್ತಾನೆ. ಹಲವು ಶತಮಾನಗಳು ಉರುಳಿದರೂ ಪ್ರಾಣಿ – ಪಕ್ಷಿಗಳು ಒಂದು ನಿರ್ದಿಷ್ಟ ಸೂತ್ರದೊಂದಿಗೆ ಮಾತ್ರ ಬದುಕುತ್ತಿವೆ. ಆದರೆ ಮನುಷ್ಯ ಮಾತ್ರ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಸಾಧಿಸುತ್ತಾ ಇದೀಗ ತಂತ್ರಜ್ಞಾನದ ಯುಗದಲ್ಲಿ ಜೀವಿಸುತ್ತಿದ್ದಾನೆ. ಈ ಸಂದರ್ಭದಲ್ಲಿ ಮಾನಸಿಕ ಸದೃಢತೆ ಸಾಧಿಸುವುದು ಅತ್ಯವಶ್ಯಕವಾಗಿದೆ ಎಂದು ಲೇಖಕ ಹಾಗೂ ಚಿಂತಕ ತೀರ್ಥರಾಮ ವಳಲಂಬೆ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿರುವ ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಅಂಬಿಕಾ ಮಹಾವಿದ್ಯಾಲಯ ಹಮ್ಮಿಕೊಂಡಿದ್ದ ಪಿ.ಯು. ಹಾಗೂ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ‘ಐಕ್ಯೂ’ ಪರೀಕ್ಷಾ ಸ್ಪರ್ಧೆ ಸೈ- ಫೈಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು.
ತಂತ್ರಜ್ಞಾನದ ಬಳಕೆಯಿಂದ ಜನತೆ ಆರೋಗ್ಯ, ಸಂಬಂಧ ಹಾಗೂ ನೆಮ್ಮದಿ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಆಧುನಿಕತೆಯ ಪ್ರವಾಹದಲ್ಲಿ ಯಾವುದೇ ವಸ್ತು ಅಥವಾ ವಿಚಾರಗಳ ಬಳಕೆಯ ಅವಶ್ಯಕತೆಯ ಬಗ್ಗೆ ಪ್ರತಿಯೊಬ್ಬರೂ ಚಿಂತನೆ ನಡೆಸಬೇಕು. ವಸ್ತುಗಳು ಮನುಷ್ಯನನ್ನು ನಿಯಂತ್ರಿಸುವ ಸ್ಥಿತಿ ಬರಲು ಬಿಡಬಾರದು, ಇದಕ್ಕಾಗಿ ಮನಸ್ಸಿನ ಮೇಲೆ ಹತೋಟಿ ಸಾಧಿಸುವುದು ಅಗತ್ಯ ಎಂದರು.
ವಿದ್ಯಾರ್ಥಿಗಳು ಮಾನಸಿಕ ಕೀಳರಿಮೆ ದೂರ ಮಾಡಿಕೊಂಡು ಯಾವುದನ್ನೂ ಸಾಧಿಸಬಲ್ಲೆ ಎಂಬ ದೃಢತೆ ಹೊಂದಿದಾಗ ಎಲ್ಲಾ ಮಿತಿಗಳನ್ನು ಮೀರಿ ಸಾಧನೆ ಮಾಡಲು ಸಾಧ್ಯ. ಕಷ್ಟಗಳೇ ಮನುಷ್ಯನನ್ನು ಸಾಧಕರಾಗಲು ಪ್ರೇರೇಪಣೆ ನೀಡುತ್ತವೆ. ಸರಿಯಾದ ಮಾರ್ಗದರ್ಶನ ಹಾಗೂ ಪರಿಶ್ರಮದಿಂದ ಪ್ರತಿಯೊಬ್ಬರೂ ಗೆಲುವಿನ ಮೆಟ್ಟಿಲು ಏರಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕಾಲೇಜಿನ ಮನಃಶಾಸ್ತ್ರ ವಿಭಾಗದ ಆಶ್ರಯದಲ್ಲಿ ರೂಪಿಸಲಾಗಿರುವ ಆಪ್ತ ಸಮಾಲೋಚನಾ ಕೇಂದ್ರ ‘ಚಿತ್ತ ಚಿಕಿತ್ಸಾ’ವನ್ನು ಉದ್ಘಾಟಿಸಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಬಹುತೇಕರಿಗೆ ತಮ್ಮ ಶಕ್ತಿಯ ಅರಿವು ಇರುವುದಿಲ್ಲ, ಇದು ಅವರ ಸಾಧನೆಗೆ ಅಡ್ಡಿಯಾಗುತ್ತಿರುತ್ತದೆ.
ನಮ್ಮ ಶಕ್ತಿಯನ್ನು ನಾವು ಅರಿತುಕೊಂಡು ನಿರ್ದಿಷ್ಟ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಮಹತ್ತರ ಸಾಧನೆ ಮಾಡಲು ಸಾಧ್ಯ. ಐಕ್ಯೂ ಪರೀಕ್ಷೆಯ ಮೂಲಕ ನಮ್ಮನ್ನು ನಾವು ತಿಳಿದುಕೊಂಡು, ಹೆಚ್ಚಿನ ತರಬೇತಿ ಪಡೆದಾಗ ಯಶಸ್ಸು ಗಳಿಸಬಹುದು. ಭಾರತ ಹಲವು ವಿಚಾರಗಳ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದು, ಉತ್ಕೃಷ್ಟ ಭಾರತೀಯರ ನಿರ್ಮಾಣವಾಗಬೇಕಿದೆ ಎಂದರು.
ತೀರ್ಥರಾಮ ವಳಲಂಬೆ ಅವರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ವಿವಿಧ ಸಂಸ್ಥೆಗಳ 400ಕ್ಕೂ ಹೆಚ್ಚು ಪಿಯು ಹಾಗೂ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಐಕ್ಯೂ ಪರೀಕ್ಷಾ ಸ್ಪರ್ಧೆಯಲ್ಲಿ ಭಾಗವಹಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್. ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ್ ಶೆಟ್ಟಿ, ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ., ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲೆ ಸುಚಿತ್ರಾ ಪ್ರಭು ಉಪಸ್ಥಿತರಿದ್ದರು.
ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ರಾಕೇಶ್ ಕುಮಾರ ಕಮ್ಮಜೆ ಸ್ವಾಗತಿಸಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ವಂದಿಸಿದರು. ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ನಿರೂಪಣೆ ಮಾಡಿದರು. ಐಕ್ಯೂಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ ಐಕ್ಯೂ ಪರೀಕ್ಷೆ ನಡೆಸಿದರು. ಅಂಬಿಕಾ ಮಹಾವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಸ್ಪರ್ಧಾ ವಿವರಗಳನ್ನು ತಿಳಿಸಿದರು.
ವ್ಯಕ್ತಿಯೊಬ್ಬ ಅಪ್ರಾಪ್ತ ವಯಸ್ಕಳನ್ನು ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಅವಳನ್ನು ತುಂಡುಗಳಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕುತ್ತಾನೆ. ಉತ್ತರ ಪ್ರದೇಶದ ಕಾನ್ಪುರದ ವ್ಯಕ್ತಿಯೊಬ್ಬನನ್ನು 17 ವರ್ಷದ ಯುವತಿ ಮದುವೆಯಾಗಲು ನಿರಾಕರಿಸಿದ ಕಾರಣ ಆಕೆಯನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಬಂಧಿಸಲಾಗಿದೆ.
ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಫೈಜ್ ಎಂದು ಗುರುತಿಸಲಾಗಿದ್ದು, ಅಪ್ರಾಪ್ತ ವಯಸ್ಕಳನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಆದರೆ ಅವಳು ಅವನ ಪ್ರಸ್ತಾಪವನ್ನು ತಿರಸ್ಕರಿಸಿದಳು.
ತಿರಸ್ಕರಿಸಿದ್ದಕ್ಕೆ ಕೋಪಗೊಂಡ ಆತ, ‘ಮದುವೆ ಆಗದಿದ್ದರೆ ನಿನ್ನನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆ’ ಎಂದು ಬಾಲಕಿಗೆ ಬೆದರಿಕೆ ಹಾಕಿದ್ದಾನೆ. ಫೈಜ್ ಬಾಲಕಿಯನ್ನು ಶಾಲೆಗೆ ಹಿಂಬಾಲಿಸುತ್ತಿದ್ದರು ಮತ್ತು ಪದೇ ಪದೇ ಕಿರುಕುಳ ನೀಡುತ್ತಿದ್ದರು ಎಂದು ಬಾಲಕಿಯ ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ.
ಅವರು ಫೈಜ್ಗೆ ಸಲಹೆ ನೀಡಲು ಪ್ರಯತ್ನಿಸಿದರು ಆದರೆ ಅವನು ಹುಡುಗಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಲಿಲ್ಲ, ತನ್ನನ್ನು ಮದುವೆಯಾಗುವಂತೆ ಕೇಳಿದನು. ಈ ಹಿನ್ನೆಲೆಯಲ್ಲಿ ಬಾಲಕಿಯ ಕುಟುಂಬದವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಬಾಲಕಿಗೆ ಜೀವ ಬೆದರಿಕೆ ಹಾಕಿದ ಫೈಜ್ ವಿರುದ್ಧ ದೂರು ದಾಖಲಿಸಿದ್ದಾರೆ.
ದೂರಿನ ಆಧಾರದ ಮೇಲೆ ನೌಬಸ್ತಾ ಪೊಲೀಸರು ಚಮನ್ ಗಂಜ್ನಲ್ಲಿರುವ ಫೈಜ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಬಂದಾಗ, ಫೈಜ್ ಅವರ ಕುಟುಂಬವು ಪೊಲೀಸರೊಂದಿಗೆ ಘರ್ಷಣೆಗೆ ಇಳಿದರು, ನಂತರ ಹೆಚ್ಚಿನ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಲಾಗಿತ್ತು.
ದೂರಿನ ಪ್ರಕಾರ, ಫೈಜ್ ತನ್ನ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಅಪ್ರಾಪ್ತ ಬಾಲಕಿಗೆ ನಿರಂತರವಾಗಿ ಕೊಲೆ ಬೆದರಿಕೆ ಹಾಕಿದ್ದಾನೆ. ಮೊಹಮ್ಮದ್ ಫೈಜ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಕಿತ್ವಾಡ್ ಜಲಪಾತದಲ್ಲಿ ಕರ್ನಾಟಕದ ನಾಲ್ವರು ಯುವತಿಯರು ಸೆಲ್ಫಿ ತೆಗೆಯುತ್ತಿರುವಾಗ ಕಾಲು ಜಾರಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರು ಬೆಳಗಾವಿಯ ಮದ್ರಸಾದಲ್ಲಿ ವಿದ್ಯಾರ್ಥಿಗಳಾಗಿದ್ದು, ಬೆಳಗಾವಿ ತಾಲೂಕಿನ ಗಡಿಗೆ ಸಮೀಪದಲ್ಲಿರುವ ಕಿತ್ವಾಡ್ ಜಲಪಾತಕ್ಕೆ ಪಿಕ್ ನಿಕ್ ಬಂದಿದ್ದರು.
ಬೆಳಗಾವಿಯ ಉಜ್ವಲ್ ನಗರದ ಆಸಿಯಾ ಮುಜಾವರ್ (17), ಅಂಗೋಲ್ನ ಕುದ್ಶಿಯಾ ಹಸನ್ ಪಟೇಲ್ (20), ರುಖ್ಸಾರ್ ಭಿಸ್ತಿ (20) ಮತ್ತು ಬೆಳಗಾವಿಯ ಝತ್ಪತ್ ಕಾಲೋನಿಯ ತಸ್ಮಿಯಾ ಎಂಬ ಬೆಳಗಾವಿಯ ಕಾಮತ್ ಗಲ್ಲಿಯ ಮದ್ರಸಾ ವಿದ್ಯಾರ್ಥಿನಿಯರು ಜಲಪಾತದಲ್ಲಿ ಸೆಲ್ಫೀ ತೆಗೆಯುತ್ತಿರುವಾಗ ಕಾಲುಜಾರಿ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಶನಿವಾರ ಬೆಳಗ್ಗೆ ಮದರಸಾದ 40 ವಿದ್ಯಾರ್ಥಿಗಳು ಕಿತ್ವಾಡ್ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಜಲಪಾತದ ಸಮೀಪ ಗುಂಪಿನಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.
ಐವರು ವಿದ್ಯಾರ್ಥಿಗಳು ಸಮತೋಲನ ತಪ್ಪಿ ನೀರಿಗೆ ಬಿದ್ದಿದ್ದಾರೆ. ನೀರಿನ ದಡದಲ್ಲಿ ನಿಂತವರು ಸೇರಿದಂತೆ ಯಾರಿಗೂ ಈಜು ತಿಳಿದಿಲ್ಲದ ಕಾರಣ, ಬಾಲಕಿಯನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.
ಓರ್ವ ಬಾಲಕಿಯನ್ನು ಸ್ಥಳೀಯರೊಬ್ಬರು ಹೇಗಾದರೂ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದ್ದರೆ, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ದುರಂತದ ಸುದ್ದಿ ತಿಳಿದ ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆವರಣದ ಸುತ್ತ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಯಿತು.
ಉಪ ಪೊಲೀಸ್ ಆಯುಕ್ತ ರವೀಂದ್ರ ಗಡಾಡಿ ಮತ್ತು ಬಿಮ್ಸ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಅಣ್ಣಾಸಾಹೇಬ ಪಾಟೀಲ ಆಸ್ಪತ್ರೆಗೆ ಧಾವಿಸಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದರು.
ಯಕ್ಷಲೋಕದ ಗಾನದೇವತೆಯ ಕಾಳಿಂಗ ನಾವಡರ ನೆನಪಿನಲ್ಲಿ ಕಲಾಕದಂಬ ಆರ್ಟ್ ಸೆಂಟರ್ ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡುತ್ತಿದೆ.
ಹತ್ತು ಸಾವಿರ ನಗದು, ಬೆಳ್ಳಿ ತಟ್ಟೆ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಕಾಳಿಂಗ ನಾವಡ ಪ್ರಶಸ್ತಿ ಒಳಗೊಂಡಿರುತ್ತದೆ.
ಗುಂಡ್ಮಿ ಸದಾನಂದ ಐತಾಳ್, ಸುಬ್ರಹ್ಮಣ್ಯ ಧಾರೇಶ್ವರ್, ಕೆಪ್ಪೆಕೆರೆ ಸುಬ್ರಾಯ ಹೆಗಡೆ, ಎಳ್ಳಾರೆ ವೆಂಕಟ್ರಾಯ ನಾಯಕ್, ನೆಬ್ಬೂರು ನಾರಾಯಣ ಹೆಗಡೆ,ಕರ್ಕಿ ಪ್ರಭಾಕರ ಭಂಡಾರಿ, ಕೆ.ಪಿ ಹೆಗ್ಡೆ, ಟಿ ಜಯಂತ್ ಕುಮಾರ್, ಮಂದಾರ್ತಿ ರಾಮಕೃಷ್ಣ, ಶ್ರೀಧರ ಹೆಬ್ಬಾರ್, ಗೋವಿಂದ ಉರಾಳ ಹಾಗೂ ಶಂಕರ ಭಾಗವತ ಯಲ್ಲಾಪುರ ಅವರು ಈಗಾಗಲೇ ಕಾಳಿಂಗ ನಾವಡ ಪ್ರಶಸ್ತಿಗೆ ಬಾಜನರಾಗಿದ್ದಾರೆ.
ಈ ಸಾಲಿನ “ಕಾಳಿಂಗ ನಾವಡ ಪ್ರಶಸ್ತಿ” ಯನ್ನು ಖ್ಯಾತ ಭಾಗವತರು, ಮದ್ದಳೆವಾದಕರು ಹಾಗೂ ಚಂಡೆ ವಾದಕರೂ ಆಗಿ ಈಗಲೂ ತಮ್ಮ ಪಾರಮ್ಯ ಮೆರೆಯುತ್ತಿರುವ “ಬಿದ್ಕಲ್ಕಟ್ಟೆ ಕೃಷ್ಣಯ್ಯ ಆಚಾರ್ಯರಿಗೆ” ಬೆಂಗಳೂರಿನ ಚಾಮರಾಜಪೇಟೆಯ ಉದಯಭಾನು ಕಲಾಸಂಘದ ಸಭಾ ಭವನದಲ್ಲಿ
25-12-22 ರ ಸಂಜೆ 5 ಘಂಟೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ನೀಡಲಾಗುವುದೆಂದು ಕಲಾಕದಂಬ ಆರ್ಟ್ ಸೆಂಟರ್ ನ ನಿರ್ದೇಶಕರಾದ ಡಾ.ರಾಧಾಕೃಷ್ಣ ಉರಾಳರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-9448510582,9886066732
ಬಿಜೆಪಿ ಮುಖಂಡ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಕರ್ನಾಟಕದ ಮೈಸೂರಿನ ಬಸ್ ನಿಲ್ದಾಣದಲ್ಲಿ ಹಾಕಲಾಗಿರುವ ಎರಡು ಗುಮ್ಮಟಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ನಂತರ, ಎರಡು ಗುಮ್ಮಟಗಳು ರಾತ್ರೋರಾತ್ರಿ ಕಣ್ಮರೆಯಾಗಿವೆ.
ಕರ್ನಾಟಕದ ಮೈಸೂರಿನ ಬಸ್ ನಿಲ್ದಾಣದಲ್ಲಿ ವಿವಾದಾತ್ಮಕ ಗುಮ್ಮಟವೊಂದು ಭಾನುವಾರ ರಾತ್ರಿ ನಾಪತ್ತೆಯಾಗಿದೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ ಗುಮ್ಮಟಗಳನ್ನು ಕೆಡವುವುದಾಗಿ ಬೆದರಿಕೆ ಹಾಕಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಬಸ್ ನಿಲ್ದಾಣದಲ್ಲಿ ನಿರ್ಮಿಸಲಾದ ಮುಖ್ಯ ಗುಮ್ಮಟದ ಪಕ್ಕದಲ್ಲಿರುವ ಎರಡು ಗುಮ್ಮಟಗಳು ಮಸೀದಿಯಂತೆ ಕಾಣಿಸಿಕೊಂಡಿವೆ ಮತ್ತು ಈ ವಿಷಯದಲ್ಲಿ ಕ್ರಮಕ್ಕೆ ಗಡುವು ವಿಧಿಸಿದೆ ಎಂದು ಸಿಂಹ ಸೂಚಿಸಿದ್ದಾರೆ. ನಂತರ, ಈ ವಿಷಯಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿತು.
ಈ ಕುರಿತು ಮಾತನಾಡಿದ ರಾಮದಾಸ್, ಬಸ್ ನಿಲ್ದಾಣ ವಿವಾದವಾಗಬಾರದು. ಮೈಸೂರಿನಾದ್ಯಂತ 12 ಬಸ್ ನಿಲ್ದಾಣಗಳನ್ನು ಮಾದರಿ ಅರಮನೆಯಾಗಿ ನಿರ್ಮಿಸಿದ್ದೇನೆ. ಆದರೆ ಅದಕ್ಕೆ ಕೋಮು ಬಣ್ಣ ಕೊಟ್ಟಿದ್ದು ನನಗೆ ನೋವುಂಟು ಮಾಡಿದೆ. ಹಿರಿಯರ ಅಭಿಪ್ರಾಯ ಪಡೆದು ಎರಡು ಚಿಕ್ಕ ಗುಂಬಜ್ (ಗುಮ್ಮಟ) ಕೆಡವಿ ದೊಡ್ಡ ಗುಂಬಜ್ ಉಳಿಸಿಕೊಂಡೆ.
ಜನರು ಅದನ್ನು ಅನ್ಯಥಾ ಗ್ರಹಿಸಬಾರದು. ಅಭಿವೃದ್ಧಿಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಎರಡು ಗುಮ್ಮಟಗಳನ್ನು ಕೆಡವಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಎಚ್ಚರಿಕೆ ನೀಡಿದ್ದರು.
ಗುಮ್ಮಟಗಳು ಹಠಾತ್ ಕಣ್ಮರೆಯಾದ ನಂತರ, ಪ್ರತಾಪ್ ಸಿಂಹ ಅವರು ಟ್ವೀಟ್ನಲ್ಲಿ ಹೀಗೆ ಬರೆದಿದ್ದಾರೆ, “ಮಧ್ಯದಲ್ಲಿ ದೊಡ್ಡ ಗುಮ್ಮಟ ಮತ್ತು ಎರಡು ಸಣ್ಣ ಗುಮ್ಮಟಗಳು ಒಂದಕ್ಕೊಂದು ಇದ್ದರೆ, ಅದು ಮಸೀದಿ. ಸಮಯಾವಕಾಶ ಕೇಳಿದ ಮತ್ತು ತಮ್ಮ ಮಾತನ್ನು ಉಳಿಸಿದ ಜಿಲ್ಲಾಧಿಕಾರಿಗಳಿಗೆ ಮತ್ತು ವಾಸ್ತವವನ್ನು ಅರ್ಥಮಾಡಿಕೊಂಡು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜಿ ಅವರಿಗೆ ಧನ್ಯವಾದಗಳು ಎಂದು ಸಿಂಹ ಹೇಳಿದರು.
ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೆ ಅದು ಮಸೀದೀನೇ, ಅದನ್ನು ತೆರವು ಮಾಡಿಸುತ್ತೇನೆ ಎಂದಿದ್ದೆ ಮತ್ತು ಅದರಂತೆ ನಡೆದುಕೊಂಡಿದ್ದೇನೆ. ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ ಹಾಗು ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜಿ ಅವರಿಗೂ ಧನ್ಯವಾದಗಳು. pic.twitter.com/9b1wPLULJ4
ಮಂಗಳೂರು: ‘ಯಕ್ಷಗಾನದಲ್ಲಿ ಪ್ರೌಢ ಮಟ್ಟದ ಮಾತುಗಾರಿಕೆಯಿಂದ ಮೆರೆಯುವ ತಾಳಮದ್ದಳೆ ನಮ್ಮ ಭಾಗದ ಒಂದು ವಿಶಿಷ್ಟ ಕಲಾಪ್ರಕಾರ. ಅದನ್ನು ಹತ್ತು ವರ್ಷಗಳಿಂದ ಸಪ್ತಾಹ ರೂಪದಲ್ಲಿ ನಡೆಸುತ್ತಿರುವ ಯಕ್ಷಾಂಗಣದ ಕಾರ್ಯ ಶ್ಲಾಘನೀಯ’ ಎಂದು ಬೊಂಡಾಳ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮತ್ತು ಉದ್ಯಮಿ ಸಚ್ಚಿದಾನಂದ ಶೆಟ್ಟಿ ಬೊಂಡಾಳ ಹೇಳಿದ್ದಾರೆ.
ಯಕ್ಷಾಂಗಣ ಮಂಗಳೂರು ವತಿಯಿಂದ ನಗರದ ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2022’ ಹತ್ತನೇ ವರ್ಷದ ನುಡಿ ಹಬ್ಬದ ಮೂರನೇ ದಿನ ದಿ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆ ಮಾಡಿ ಅವರು ಮಾತನಾಡಿದರು
ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಮತ್ತು ಸಂಘಟಕ ಪಟ್ಲಗುತ್ತು ಮಹಾಬಲ ಶೆಟ್ಟಿ ಅವರಿಗೆ ಸನ್ಮಾನ ನೆರವೇರಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ನ್ಯಾಯವಾದಿ ಪದ್ಮರಾಜ್ ಆರ್, ಲಯನ್ಸ್ ಮಾಜಿ ರಾಜ್ಯಪಾಲ ದೇವದಾಸ ಭಂಡಾರಿ,ಸಂಸ್ಕಾರ ಭಾರತಿ ಮಂಗಳೂರು ಅಧ್ಯಕ್ಷ ಪುರುಷೋತ್ತಮ ಭಂಡಾರಿ ಅಡ್ಯಾರ್ ಮುಖ್ಯ ಅತಿಥಿಗಳಾಗಿದ್ದರು.
ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಯಕ್ಷ ಪ್ರತಿಷ್ಠಾನದ ಅಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ ಪ್ರಸ್ತಾವನೆಗೈದರು. ಶ್ಯಾಮಲಾ ಪದ್ಮನಾಭ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಸಂಚಾಲಕ ರವೀಂದ್ರ ರೈ ಕಲ್ಲಿಮಾರು ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ವಂದಿಸಿದರು.
ಪ್ರಧಾನ ಸಂಚಾಲಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಕಾರ್ಯದರ್ಶಿ ಲಕ್ಷ್ಮೀನಾರಾಯಣ ರೈ ಹರೇಕಳ, ಉಮೇಶ ಆಚಾರ್ಯ ಗೇರುಕಟ್ಟೆ, ಸುಧಾಕರ ರಾವ್ ಪೇಜಾವರ, ಸಿದ್ಧಾರ್ಥ ಆಜ್ರಿ , ಪದ್ಮನಾಭ ಶೆಟ್ಟಿ ಬೆಟ್ಟಂಪಾಡಿ, ಡಾ.ಸೂರಜ್ ಶೆಟ್ಟಿ, ಸುಮಾ ಪ್ರಸಾದ್ ಉಪಸ್ಥಿತರಿದ್ದರು.
‘ವೀರಾಂಜನೇಯ ವಿಜಯ’ ತಾಳಮದ್ದಳೆ:
. ‘ಸಪ್ತ ವಿಜಯ’ ಸರಣಿಯಲ್ಲಿ ಹೆಬ್ರಿ ಗಣೇಶ ಕುಮಾರ್ ಭಾಗವತಿಕೆಯಲ್ಲಿ ‘ವೀರಾಂಜನೇಯ ವಿಜಯ’ ಯಕ್ಷಗಾನ ತಾಳಮದ್ದಳೆ ಜರಗಿತು.