ಹಿರಿಯ ಮದ್ದಳೆಗಾರ ಶ್ರೀ ಪೆರುವಾಯಿ ನಾರಾಯಣ ಭಟ್ ಅವರಿಗೆ ‘ಶ್ರೀಹರಿಲೀಲಾ ಯಕ್ಷನಾದ ಪ್ರಶಸ್ತಿ’
ಯಕ್ಷಗಾನದ ಗುರು ದಂಪತಿ ಖ್ಯಾತ ಮದ್ದಳೆಗಾರ ಶ್ರೀ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಖ್ಯಾತ ಭಾಗವತರಾದ ಲೀಲಾವತಿ ಬೈಪಾಡಿತ್ತಾಯರ ಹೆಸರಿನಲ್ಲಿ ಡಿಜಿ ಯಕ್ಷ ಫೌಂಡೇಶನ್ (ರಿ) ಬೆಂಗಳೂರು ಮೂಲಕ ಕೊಡಮಾಡುವ ಶ್ರೀಹರಿಲೀಲಾ ಯಕ್ಷನಾದ 2ನೇ ವರ್ಷದ ಪ್ರಶಸ್ತಿಯನ್ನು ಹಿರಿಯ ಮದ್ದಳೆಗಾರ ಶ್ರೀ ಪೆರುವಾಯಿ ನಾರಾಯಣ ಭಟ್ ಅವರಿಗೆ ನೀಡಿ ಗೌರವಿಸಲಾಯಿತು.
ಮೊನ್ನೆ ಶನಿವಾರ (ನ.12) ಮೂಡುಬಿದಿರೆಯ ಆಲಂಗಾರು ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಕ್ಷಗಾನ ವಿದ್ವಾಂಸ, ವಿಮರ್ಶಕ, ಅರ್ಥಧಾರಿ ಡಾ.ಮಾಳ ಪ್ರಭಾಕರ ಜೋಶಿ,
ಶ್ರೀ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಲೀಲಾವತಿ ಬೈಪಾಡಿತ್ತಾಯ, ಮದ್ದಳೆಗಾರ ಕೃಷ್ಣಪ್ರಕಾಶ ಉಳಿತ್ತಾಯ, ಆರತಿ ಪಟ್ರಮೆ, ಡಾ. ಸಿಬಂತಿ ಪದ್ಮನಾಭ, ಬೈಪಾಡಿತ್ತಾಯ ಗುರುಗಳ ಶಿಷ್ಯರಾದ ಚಂದ್ರಶೇಖರ ಕೊಂಕಣಾಜೆ, ಗಿರೀಶ್ ಕಿನಿಲಕೋಡಿ, ಆನಂದ ಗುಡಿಗಾರ, ಡಿಜಿ ಯಕ್ಷ ಫೌಂಡೇಶನ್ ನಿರ್ದೇಶಕ ಅವಿನಾಶ್ ಬೈಪಾಡಿತ್ತಾಯ ಇದ್ದಾರೆ.
ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ದಿನಾಂಕ 13-11-2022ರಂದು ನೃತ್ಯನಿಕೇತನ ಕೊಡವೂರು ಉಡುಪಿ ಕಲಾವಿದರಿಂದ ‘ನೃತ್ಯ ಸಿಂಚನ’ ಕಾರ್ಯಕ್ರಮ ಜರಗಿತು.
ವಿದ್ವಾನ್ ಶ್ರೀ ಸುಧೀರ್ ರಾವ್ ಕೊಡವೂರು ಮತ್ತು ಕಾಂತಾರ ಕಮಲಕ್ಕ ಖ್ಯಾತಿಯ ವಿದುಷಿ ಶ್ರೀಮತಿ ಮಾನಸಿ ಸುಧೀರ್ ಅವರ ನಿರ್ದೇಶನದಲ್ಲಿ ನಡೆದ ಈ ನೃತ್ಯ ವೈಭವವನ್ನು ವಿಶ್ವವಿನೋದ ಬನಾರಿಯವರ 75ನೇ ಅಭಿನಂದನಾ ಸಮಾರಂಭದ ಪ್ರಯುಕ್ತ ಹಮ್ಮಿಕೊಳ್ಳಲಾಗಿತ್ತು.
ಬಹಳ ಅದ್ಭುತವಾಗಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಕು.ಸಂಜನಾ ಶ್ರೀ, ವಿದುಷಿ ಸಾಧನಾ ಕಾಮತ್, ವಿದುಷಿ ಚೈತನ್ಯ ಆಚಾರ್ಯ, ವಿದುಷಿ ಅನಘ ಶ್ರೀ, ಕು. ಪ್ರಿಯಂವದಾ, ಕು.ಕೀರ್ತನಾ, ಕು. ಸೌಂದರ್ಯ, ಕು. ಪೃಥ್ವಿ, ಕು. ಬಿಂದಿಯ, ಕು. ವರ್ಷಿಣಿ, ಕು. ಮಹಿಮ, ಕು. ಅನಘ, ಕು. ಅರ್ಪಿತ, ಕು.ಶ್ರೇಯಾ, ಕು.ಪ್ರಜ್ಞಾ, ಕು.ಚೈತ್ರ ಶೆಣೈ, ಕು. ವರ್ಷಾ, ಕು.ಸುರಭಿ ಸುಧೀರ್ ಹಾಗೂ ಮಾನಸಿ ಸುಧೀರ್ ಅವರು ಭಾಗವಹಿಸಿದರು. ಶ್ರೀ ಸುಧೀರ್ ರಾವ್ ಕಾರ್ಯಕ್ರಮ ನಿರೂಪಿಸಿದರು.
ಭಾಗವಹಿಸಿದ ಕಲಾವಿದೆಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಉತ್ತಮವಾದ ಪ್ರಸಾಧನವನ್ನೊದಗಿಸಿದ ಪ್ರಕಾಶ್ ಕುಂಜೆತೊಟ್ಟು ಇವರಿಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾಂತಾರ ಖ್ಯಾತಿಯ ಮಾನಸಿ ಸುಧೀರ್ ದಂಪತಿಗಳನ್ನು ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ದಿನಾಂಕ 13-11-2022ರಂದು ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಸಭಾಭವನದಲ್ಲಿ ವಿಶ್ವವಿನೋದ ಬನಾರಿಯವರ 75ನೇ ಅಭಿನಂದನಾ ಸಮಾರಂಭದ ಎರಡನೆಯ ಅಂಗವಾಗಿ ಯಕ್ಷಗಾನ ಹಾಡುಗಾರಿಕೆಯ ಸಾಂಪ್ರಾದಾಯಿಕ ಮಟ್ಟುಗಳು – ಒಂದು ಪ್ರಾತ್ಯಕ್ಷಿಕೆ ಎಂಬ ವಿಚಾರವಾಗಿ ಯಕ್ಷಗಾನ ಗೋಷ್ಠಿ ಜರಗಿತು.
ಸುಬ್ರಾಯ ಸಂಪಾಜೆ, ಡಾ. ಪುರುಷೋತ್ತಮ ಭಟ್ ನಿಡುವಾಜೆ, ಭವ್ಯಶ್ರೀ ಕುಲ್ಕುಂದ, ಅವರು ಯಕ್ಷಗಾನದ ವಿವಿಧ ರಾಗ, ತಾಳಗಳಲ್ಲಿ ಪ್ರಸಂಗ ಪದ್ಯಗಳನ್ನು ಪ್ರಸ್ತುತಪಡಿಸಿದರು. ಡಾ. ಶ್ರೀಕೃಷ್ಣ ಸುಣ್ಣಂಗುಳಿ ಕಾರ್ಯಕ್ರಮವನ್ನು ನಿರೂಪಿಸಿದರು. ಚೆಂಡೆ ಮದ್ದಳೆ ವಾದನದಲ್ಲಿ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಚಂದ್ರಶೇಖರ ಗುರುವಾಯನಕೆರೆ ಭಾಗವಹಿಸಿದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಕಾರದಲ್ಲಿ ನಡೆದ ಈ ಗೋಷ್ಠಿಯ ಅಧ್ಯಕ್ಷತೆಯನ್ನು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರು ವಹಿಸಿಕೊಂಡಿದ್ದರು. “ಅಡಿಕೆಯಲ್ಲಿ ವಿವಿಧ ಪ್ರಕಾರಗಳಿದ್ದಂತೆ ಯಕ್ಷಗಾನದಲ್ಲೂ ವಿವಿಧ ಶೈಲಿಗಳಿವೆ . ಬಲಿಪರು, ಅಗರಿಯವರು, ಮಾಂಬಾಡಿಯವರ ವಿಭಿನ್ನ ಶೈಲಿಯನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕಾದ ಅಗತ್ಯವಿದೆ. ಪದ್ಯದಲ್ಲಿ ಅಕಾರವಿದ್ದರೆ ಆಲಾಪನೆಯೂ ಅಕಾರದಲ್ಲಿ ಇರಬೇಕು. ಉಕಾರವಾದರೆ ಉಕಾರ ಹೀಗೆ….” ಯುವಪೀಳಿಗೆಗೆ ಮಾರ್ಗದರ್ಶನ ನೀಡುತ್ತಾ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರು ತಮ್ಮ ಅಧ್ಯಕ್ಷ ಭಾಷಣದಲ್ಲಿ ಮಾತನಾಡಿದರು. ಕಾಲಧರ್ಮಕ್ಕನುಗುಣವಾಗಿ ಕಲೆಯಲ್ಲಿ ಮಾರ್ಪಾಡು ಅಗತ್ಯ. ಆದರೆ ಅದರ ಮೂಲಸತ್ತ್ವ ಕಳೆದುಹೋಗಬಾರದು ಎಂಬುದಾಗಿಯೂ ತಿಳಿಸಿದರು.
ಪ್ರಭಾಕರ ಶಿಶಿಲ, ರಾಜಗೋಪಾಲ ಕನ್ಯಾನ, ರಾಜಶ್ರೀ ಟಿ.ರೈ ಪೆರ್ಲ, ಸದಾಶಿವ ರೈ ಬೆಳ್ಳಿಪ್ಪಾಡಿ, ಸುಂದರ ಕೇನಾಜೆ, ಜಯರಾಮ ಭಟ್ ದೇವಸ್ಯ ಮೊದಲಾದವರು ಗೋಷ್ಠಿಯಲ್ಲಿ ಮಾತನಾಡುತ್ತ ಹಾಡುಗಳು ಹೇಗಿತ್ತು ಹೇಗಾಗಬೇಕು ಎಂಬುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ವಿಕೇಶ್ ರೈ ಶೇಣಿ ಸ್ವಾಗತಿಸಿ ಜಲಜಾಕ್ಷಿ ರೈ ಬೆಳ್ಳಿಪ್ಪಾಡಿ ವಂದಿಸಿದರು.
ಕೋಜಿಕೋಡು: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ನನ್ನು ಬಂಧಿಸಲಾಗಿದೆ. ಬಂಧಿತನನ್ನು ಕೋಝಿಕ್ಕೋಡ್ನ ಕರಾವಳಿ ಪೊಲೀಸ್ ಇನ್ಸ್ಪೆಕ್ಟರ್ ಸುನು ಎಂದು ಗುರುತಿಸಲಾಗಿದೆ
ತೃಕ್ಕಾಕರದಲ್ಲಿ ದಾಖಲಾದ ಪ್ರಕರಣದಲ್ಲಿ ಕ್ರಮ ಜರುಗಿಸಲಾಗಿದೆ. ತ್ರಿಕಕ್ಕರ ಪೊಲೀಸರು ವೃತ್ತ ನಿರೀಕ್ಷಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕಳೆದ ಮೇ ತಿಂಗಳಲ್ಲಿ ಘಟನೆ ನಡೆದಿತ್ತು.
ಸುನು ಸೇರಿದಂತೆ ಗುಂಪು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದೆ ಎಂದು ತ್ರಿಕಕ್ಕರದಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ತ್ರಿಕಕ್ಕರ ಪೊಲೀಸರು ಕೋಝಿಕ್ಕೋಡ್ ಪೊಲೀಸ್ ಠಾಣೆಯಿಂದ ಆತನನ್ನು ಬಂಧಿಸಿದ್ದಾರೆ.
ಈ ಮಧ್ಯೆ, ಪೋಕ್ಸೋ ಪ್ರಕರಣದಲ್ಲಿ ಬದುಕುಳಿದ ಹುಡುಗಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದ ಅಂಬಲವ್ಯಾಲ್ ಠಾಣೆಯ ಎಎಸ್ಐ ಟಿ ಜಿ ಬಾಬು ಎಂಬಾತ ಪರಾರಿಯಾಗಿದ್ದಾನೆ.ನಿನ್ನೆ ರಾತ್ರಿ ಪೊಲೀಸರು ಬಾಬು ಮನೆಯಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಟಿ ಜಿ ಬಾಬು ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಜುಲೈ 26 ರಂದು ಪೋಕ್ಸೋ ಪ್ರಕರಣದಲ್ಲಿ ಬದುಕುಳಿದಿರುವ 16 ವರ್ಷದ ಬಾಲಕಿಯನ್ನು ಸಾಕ್ಷ್ಯ ಸಂಗ್ರಹಿಸಲು ಊಟಿಯ ಲಾಡ್ಜ್ಗೆ ಕರೆದೊಯ್ದ ಘಟನೆ ನಡೆದಿದೆ.
ಸಬ್ ಇನ್ಸ್ ಪೆಕ್ಟರ್ ಸೋಬಿನ್, ಗ್ರೇಡ್ ಎಎಸ್ ಐ ಟಿ.ಜಿ.ಬಾಬು, ಸಿವಿಲ್ ಪೊಲೀಸ್ ಅಧಿಕಾರಿ ಪ್ರಜಿಶಾ ತಂಡದಲ್ಲಿದ್ದರು. ಸಾಕ್ಷಿ ಸಂಗ್ರಹ ಮುಗಿಸಿ ಊಟಿಯಿಂದ ವಾಪಸಾಗುತ್ತಿದ್ದಾಗ ನಗರದಲ್ಲಿ ವಾಹನ ನಿಲ್ಲಿಸಿ ಬಾಬು ಆಕೆಯ ಕೈ ಹಿಡಿದು ಮೊಬೈಲ್ನಲ್ಲಿ ಚಿತ್ರ ತೆಗೆದಿದ್ದಾನೆ ಎಂದು ದೂರು ನೀಡಲಾಗಿದೆ.
ಶೆಲ್ಟರ್ ಹೋಮ್ನಲ್ಲಿ ನಡೆದ ಕೌನ್ಸೆಲಿಂಗ್ ವೇಳೆ ಬಾಲಕಿ ಈ ವಿಷಯವನ್ನು ಬಹಿರಂಗಪಡಿಸಿದ್ದಾಳೆ.
ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ 2022 ರ ಜನವರಿಯಿಂದ ಆರಂಭವಾದ ಶ್ರೀರಾಮಾಯಣ ಸರಣಿಯ ತಾಳಮದ್ದಳೆಯು ಶ್ರೀರಾಮ ನಿರ್ಯಾಣ ತಾಳ ಮದ್ದಳೆಯೊಂದಿಗೆ ಮುಕ್ತಾಯಗೊಂಡಿತು.
ವೈರಲ್ ವೀಡಿಯೊವೊಂದರಲ್ಲಿ, ಹೈದರಾಬಾದ್ನ ಖಾಸಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಹಿಮಾಂಕ್ ಬನ್ಸಾಲ್ ಎಂದು ಗುರುತಿಸಲಾದ ಇನ್ನೊಬ್ಬ ವಿದ್ಯಾರ್ಥಿಯನ್ನು ಥಳಿಸುತ್ತಿರುವುದನ್ನು ಕಾಣಬಹುದು. ವಿದ್ಯಾರ್ಥಿಗಳು “ಅಲ್ಲಾ ಹು ಅಕ್ಬರ್” ಎಂದು ಹೇಳುವಂತೆ ಒತ್ತಾಯಿಸುವುದನ್ನು ವೀಡಿಯೊದಲ್ಲಿ ಕೇಳಬಹುದು. ವಿದ್ಯಾರ್ಥಿಗಳು “ಅವರ ಸಿದ್ಧಾಂತವನ್ನು ಸರಿಪಡಿಸುತ್ತೇನೆ, ಹೊಡೆಯೋಣ” ಎಂದು ಹೇಳುವುದನ್ನು ಕೇಳಬಹುದು. ಅವನು ಕೋಮಾಗೆ ಹೋಗಿದ್ದಾನೆ” ಎಂದು ವೀಡಿಯೊದಲ್ಲಿ ಹೇಳಲಾಗಿದೆ.
ಸಂತ್ರಸ್ತನ ದೂರಿನ ಪ್ರಕಾರ ಈ ಘಟನೆ ನವೆಂಬರ್ 1 ರಂದು ಶಂಕರಪಲ್ಲಿಯ ICFAI ಬಿಸಿನೆಸ್ ಸ್ಕೂಲ್ನಲ್ಲಿ ನಡೆದಿದೆ. ನಿನ್ನೆ ಪ್ರಕರಣ ದಾಖಲಿಸಿಕೊಂಡಿದ್ದು, ಸಂತ್ರಸ್ತನ ದೂರಿನ ಮೇರೆಗೆ ಪೊಲೀಸರು ಆರೋಪಿಯ ವಿರುದ್ಧ ಕೊಲೆ ಯತ್ನ ಸೆಕ್ಷನ್ 307 ಮತ್ತು ಕ್ರಿಮಿನಲ್ ಬೆದರಿಕೆಗಾಗಿ ಐಪಿಸಿ ಸೆಕ್ಷನ್ 323, 450 ಮತ್ತು 506 ರ ಅಡಿಯಲ್ಲಿ ರ ್ಯಾಗಿಂಗ್ ಆರೋಪವನ್ನು ದಾಖಲಿಸಿದ್ದಾರೆ.
In the incident reported at IBS Institute, A case was registered on 11.11.2022 by Shankarpally PS, agansit the culprits under the provisions of 307, 342, 450, 323, 506, R/W 149, IPC and Sec 4(I),(II), and (III) of the Prohibition of Raising Act of 2011. The action is being taken. https://t.co/uknlITNxbJ
ಕಾಲೇಜು ಆಡಳಿತ ಮಂಡಳಿ ಆರೋಪಿಯನ್ನು ಅಮಾನತು ಮಾಡಿದೆ. ಸಂಸ್ಥೆ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.
ಪೊಲೀಸ್ ವರದಿಯ ಪ್ರಕಾರ, , “ಅವನ ಮುಖದ ಮೇಲೆ ಗುದ್ದುವುದು, ಕಪಾಳಮೋಕ್ಷ ಮಾಡುವುದು, ಕಿಬ್ಬೊಟ್ಟೆಯ ಭಾಗಗಳಲ್ಲಿ ಒದೆಯುವುದು, ಅವನ ಜನನಾಂಗಗಳನ್ನು ಮುಟ್ಟುವುದು ಮತ್ತು ಕೆಲವರು ರಾಸಾಯನಿಕಗಳನ್ನು ತಿನ್ನುವಂತೆ ಒತ್ತಾಯಿಸಿದರು. ಒಬ್ಬ ವಿದ್ಯಾರ್ಥಿ, ರೀವಾ (3ನೇ ವರ್ಷದ ಬಿಬಿಎ ವಿದ್ಯಾರ್ಥಿ, ಐಬಿಎಸ್ ಹೈದರಾಬಾದ್) ಎಂಬಾತ ತನ್ನ ಜನನಾಂಗವನ್ನು ಅವನ ಬಾಯಿಗೆ ಹಾಕಲು ಪ್ರಯತ್ನಿಸಿದನು.
ಅವರ ಬಟ್ಟೆ ಹರಿದು, ಬೆತ್ತಲೆಯಾಗಿಸಲು ಯತ್ನಿಸಿದರು ಮತ್ತು ಸಾಯುವವರೆಗೂ ಸೋಲಿಸಿ ಎಂಬ ಘೋಷಣೆಯೊಂದಿಗೆ ಒಬ್ಬರ ನಂತರ ಒಬ್ಬರಂತೆ ಹೊಡೆಯುತ್ತಿದ್ದರು. ಹಿಮಾಂಕ್ , ಅಪಾರವಾದ ಆಘಾತದಿಂದಾಗಿ ಅವನ ಮನಸ್ಸಿನಲ್ಲಿ ಆತ್ಮಹತ್ಯೆಯ ಆಲೋಚನೆಗಳು ಮತ್ತು ಕಳೆದ ಮೂರು ರಾತ್ರಿಗಳಿಂದ ಅವನು ಸರಿಯಾಗಿ ನಿದ್ದೆ ಮಾಡಲು ಸಾಧ್ಯವಾಗಲಿಲ್ಲ ಮತ್ತು ದುಃಖವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅವರು ಪದವಿ ಕಾರ್ಯಕ್ರಮದ ಅಡಿಯಲ್ಲಿ ತಮ್ಮ ಕಾನೂನಿನ ಮೊದಲ ಸೆಮಿಸ್ಟರ್ನಲ್ಲಿದ್ದಾರೆ ಎಂದು ಅವರು ಹೇಳಿದರು,
ಅವರ ಪೋಷಕರು ಅವನಿಗಾಗಿ ಅಳುವುದನ್ನು ನೋಡಲು ಅಸಹನೀಯವಾಗಿದೆ. ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಎಫ್ಐಆರ್,” ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಏತನ್ಮಧ್ಯೆ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಕಾಲೇಜನ್ನು ಟೀಕಿಸಿದ್ದಾರೆ.
“#ICFAI ಕೂಡ ಜವಾಬ್ದಾರರಾಗಬೇಕಲ್ಲವೇ. ಅವರ ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿ ಇಲ್ಲಿ ಕಾರ್ಯನಿರ್ವಹಿಸಲು ವಿಫಲವಾಗಿದೆ. ನಿರ್ವಹಣೆಯಿಂದ ಯಾವುದೇ ಕ್ರಮವಿಲ್ಲ, ”ಎಂದು ಬಳಕೆದಾರರು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಟ್ವೀಟ್ ಮಾಡಿ, “ಹೈಮಾಂಕ್ ಬನ್ಸಾಲ್ ಹೈದರಾಬಾದಿನಲ್ಲಿ ಕಲಿಯುತ್ತಿರುವಾಗ, ಕ್ಯಾಂಪಸ್ನಲ್ಲಿ ಬೇರೆ ಧರ್ಮದ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿ, “ಅಲ್ಲಾ ಹು ಅಕ್ಬರ್” ಎಂದು ಜಪಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ ಈ ವಿಷಯವನ್ನು ಯಾವುದೇ ಮಾಧ್ಯಮ ವರದಿ ಮಾಡುತ್ತಿಲ್ಲ.”
ಮತ್ತೊಬ್ಬ ಬಳಕೆದಾರರು ಟ್ವೀಟ್ ಮಾಡಿದ್ದಾರೆ, “ಈ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
In the incident reported at IBS Institute, A case was registered on 11.11.2022 by Shankarpally PS, agansit the culprits under the provisions of 307, 342, 450, 323, 506, R/W 149, IPC and Sec 4(I),(II), and (III) of the Prohibition of Raising Act of 2011. The action is being taken. https://t.co/uknlITNxbJ
ಒಮ್ಮೊಮ್ಮೆ ಮೊಬೈಲ್ ಎಂಬ ಗೀಳಿಗೆ ಅಂಟಿಕೊಳ್ಳುವ ಈಗಿನ ಯುವಕ ಯುವತಿಯರು ಆ ಚಟದಿಂದ ಹೊರಬರಲಾರದೆ ಚಡಪಡಿಸುತ್ತಿರುವುದನ್ನು ಕಾಣಬಹುದು.
ಇಲ್ಲೊಂದು ಪ್ರಕರಣ ಅದೇ ರೀತಿ ನಡೆದಿದೆ. ಮಾತ್ತವಲ್ಲದೆ ಈ ಮೊಬೈಲ್ ಚಟ ಯುವತಿಯ ಪ್ರಾಣವನ್ನೇ ಬಲಿ ತೆಗೆದುಕೊಂಡಿದೆ. ಯುವತಿ ತನ್ನ ತಮ್ಮ (ಕಿರಿಯ ಸಹೋದರ) ಮೊಬೈಲ್ ಓಪನ್ ಮಾಡುವ ಪಾಸ್ ವರ್ಡ್ ಬರಲಿಸಿದ್ದಕ್ಕೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಘಟನೆ ನಡೆದದ್ದು ದೊಡ್ಡಬಳ್ಳಾಪುರ ನಗರದ ಗಾಣಿಗರಪೇಟೆಯಲ್ಲಿ. ಇಲ್ಲಿಯ ನಿವಾಸಿ 19 ವರ್ಷದ ಯುವತಿ ರುಚಿತಾ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಹುಡುಗಿ.
ಆಕೆಗೆ ಅತಿಯಾಗಿ ಮೊಬೈಲ್ ಬಳಸುವ ಚಾಳಿ ಅಂಟಿಕೊಂಡಿತ್ತು. ಅದನ್ಮು ಬಿಡಿಸಲು ಆಕೆಯ ತಮ್ಮ ಆಕೆಗೆ ಪ್ರತಿದಿನ ಬುದ್ಧಿ ಹೇಳುತ್ತಿದ್ದ. ಆದರೆ ಆಕೆ ಕೇಳಿರಲಿಲ್ಲ.
ಕೊನೆಗೆ ಆಕೆಯ ಅಭ್ಯಾಸವನ್ನು ಬಿಡಿಸಲು ಮೊಬೈಲ್ ತೆರೆಯುವ ಪಾಸ್ ವರ್ಡ್ ಕೋಡನ್ನು ಬದಲಾವಣೆ ಮಾಡಿದ್ದ. ಇದನ್ನು ತಿಳಿದ ಆಕೆ ಹೊಸ ಪಾಸ್ ವರ್ಡ್ ಹೇಳುವಂತೆ ತಮ್ಮನನ್ನು ಒತ್ತಾಯಿಸಿದಳು. ಆದರೆ ಆತ ಹೇಳಿರಲಿಲ್ಲ.
ಇದರಿಂದ ಜಗಳ ಮಾಡಿಕೊಂಡ ಆಕೆ ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ದೊಡ್ಡಬಳ್ಳಾಪುರ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಕೃಪಾಲ್.ಪಿ.ಕೆ ರಾಷ್ಟ್ರಮಟ್ಟಕ್ಕೆ ಆಯ್ಕೆ.
ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 13, 14ರಂದು ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಣ ರಾಜ್ಯ ವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಕೃಪಾಲ್.ಪಿ.ಕೆ (ಕೆಮ್ಮಾಯಿ ಪ್ರಕಾಶ್.ಬಿ, ಸುನೀತಾ ಸಿ.ಎಚ್ ದಂಪತಿ ಪುತ್ರ) 600 ಮೀಟರ್-ದ್ವಿತೀಯ ಸ್ಥಾನ ಪಡೆದುಕೊಂಡಿದ್ದು,
ನವೆಂಬರ್ 19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾನೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬದಿಯಡ್ಕದ ಡೆಂಟಲ್ ಕ್ಲಿನಿಕ್ ನ ಡಾ. ಕೃಷ್ಣಮೂರ್ತಿ ಅವರದ್ದು ಆತ್ಮಹತ್ಯೆ ಅಲ್ಲ, ಅದೊಂದು ವ್ಯವಸ್ಥಿತ ಕೊಲೆ ಎಂಬ ಮಾತುಗಳು ಕೇಳಿಬರುವ ಹಿನ್ನೆಲೆಯಲ್ಲಿ ಪೋಲೀಸರು ಆ ನಿಟ್ಟಿನಲ್ಲಿ ತನಿಖೆಯನ್ನು ಕೇಂದ್ರೀಕರಿಸುವ ಅಗತ್ಯವಿದೆ. ನಾಪತ್ತೆ ಪ್ರಕರಣವನ್ನೇ ದಾಖಲಿಸಲು ಮೀನಮೇಷ ಎಣಿಸಿದ್ದ ಪೊಲೀಸರು ಈಗ ಮೈ ಕೊಡವಿ ಕಾರ್ಯತತ್ಪರರಾಗಬೇಕಾಗಿದೆ.
ಘಟನೆಯ ಸೂಕ್ಷ್ಮ ವಿವರ: ನವಂಬರ್ ಎಂಟು ಡಾಕ್ಟರ್ ಪಾಲಿಗೆ ಕರಾಳದಿನವಾಗಿತ್ತು. ಆ ದಿನ ಮುಸ್ಲಿಂ ಮಹಿಳೆ ಹಲ್ಲು ಕೀಳಲು ಬಂದಾಗ ಡಾಕ್ಟರ್ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮುಸ್ಲಿಮ್ ಕುಟುಂಬದ ಆರೋಪ. ಮರುದಿನ ಗೂಂಡಾಗಳ ಗುಂಪು ಕಟ್ಟಿ ಕೊಂಡು ಬಂದ ಅವರು ಡಾಕ್ಟರರ ಬಳಿ 10 ಲಕ್ಷದ ಹಣದ ಬೇಡಿಕೆಯನ್ನು ಇರಿಸಿತು ಎಂದು ಹೇಳಲಾಗುತ್ತಿದೆ.
ಅದಕ್ಕೆ ಡಾಕ್ಟರ್ ಸಮ್ಮತಿಯನ್ನು ನೀಡಲಿಲ್ಲ. ಆಗ ಆ ಗುಂಪು ಪೋಲಿಸ್ ದೂರು ನೀಡುವ ಬೆದರಿಕೆ ಹಾಕಿತು. ಮತ್ತು ಡಾಕ್ಟರ್ ಮೇಲೆ ಹಲ್ಲೆ ನಡೆಸಲು ಮುಂದಾದಾಗ ಸ್ಥಳೀಯರು ತಡೆದರು ಎಂದು ವರದಿಗಳು ಹೇಳುತ್ತವೆ.
ಈ ಘಟನೆಗಳಿಂದ ತೀವ್ರ ಮನನೊಂದ ದಂತವೈದ್ಯರು ತನ್ನ ಬೈಕನ್ನೇರಿ ಹೊರಟಿದ್ದಾರೆ. ಆದರೆ ಆಸ್ಪತ್ರೆಯ ಸಿಬ್ಬಂದಿ ತಿಳಿದುಕೊಂಡಂತೆ ಅವರು ಮನೆಗೆ ಹೋಗಿರಲಿಲ್ಲ. ಆಮೇಲೆ ಡಾಕ್ಟರ್ ಮೃತದೇಹ ಕುಂದಾಪುರ ಸಮೀಪದ ಹಟ್ಟಿಯಂಗಡಿ ತಲ್ಲೂರು ಕಾಡು ಅಜ್ಜಿಮನೆ ಎಂಬಲ್ಲಿ ರೈಲ್ವೆ ಹಳಿಗಳಲ್ಲಿ ಛಿದ್ರಛಿದ್ರವಾದ ಸ್ಥಿತಿಯಲ್ಲಿ ದೊರಕಿತು.
ಒಂದು ವರದಿಯ ಪ್ರಕಾರ ಡಾಕ್ಟರ್ ಕೃಷ್ಣಮೂರ್ತಿ ಅವರು ಬೈಕ್ ಹತ್ತಿ ಹೋದ ದಿನವೇ ಅಂದರೆ ನವೆಂಬರ್ 8ರಂದು ಅವರ ಪತ್ನಿ ದೂರು ನೀಡಲು ಬದಿಯಡ್ಕ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ಹೇಳಲಾಗುತ್ತಿದೆ. ಆಗ ಪೋಲಿಸರು ದೂರು ಸ್ವೀಕರಿಸಿರಲಿಲ್ಲ. ಪೋಲೀಸರಿಗೆ ಅದಕ್ಕೆ ಕಾರಣಗಳಿರಬಹುದು.
ಆ ದಿನವೇ ದೂರು ಸ್ವೀಕರಿಸಿ ಹುಡುಕಿದ್ದರೆ ಡಾಕ್ಟರ್ ಜೀವಂತವಾಗಿರುವ ಸಾಧ್ಯತೆಗಳು ಇದ್ದುವು.
ಮುಸ್ಲಿಂ ಗೂಂಡಾಗಳು ಡಾಕ್ಟರ್ ಕ್ಲಿನಿಕ್ ಒಳಗೆ ನುಗ್ಗಿ ಅವರ ಮೈಮೇಲೆ ಕೈಹಾಕಿದ್ದು ಪೋಲೀಸರಿಗೆ ಆದಿನ ಗೊತ್ತೇ ಇರಲಿಲ್ಲ ಎಂಬುದು ಸತ್ಯವಲ್ಲ. ನೂರಿನ್ನೂರು ಮೀಟರ್ ಗಳ ಪಕ್ಕವೇ ಪೊಲೀಸ್ ಠಾಣೆ ಇರುವಾಗ ಇದು ಖಂಡಿತಾ ಅವರ ಗಮನಕ್ಕೆ ಬಂದಿರುತ್ತದೆ.
ಆದರೆ ಅವರು ಯಾರಾದರೂ ದೂರು ಕೊಡುವ ವರೆಗೆ ಕಾಯುವ ಬದಲು ಸ್ಥಳಕ್ಕೆ ತಾವೇ ಆಗಮಿಸಿ ತನಿಖೆ ಮಾಡಬೇಕಾಗಿತ್ತು. ಸ್ವಯಂಪ್ರೇರಿತ ಕೇಸು ದಾಖಲಿಸಿ ಡಾಕ್ಟರ್ ಹೆಚ್ಚು ದೂರ ಹೋಗುವ ಮೊದಲೇ ಅವರನ್ನು ಕರೆತರುವ ಸಾಧ್ಯತೆ ಇತ್ತು. ಹೋಗಲಿ, ಅದೇ ದಿನ ಕಾಣೆಯಾದ ಬಗ್ಗೆ ಕೊಟ್ಟ ದೂರನ್ನಾದರೂ ಸ್ವೀಕರಿಸಬಹುದಿತ್ತು.
ಮುಸ್ಲಿಂ ಗೂಂಡಾಗಳು ಮೈಮೇಲೆ ಕೈಮಾಡಿದ ಮೇಲೆ ಡಾಕ್ಟರ್ ಮಾನಸಿಕವಾಗಿ ಕುಗ್ಗಿದ್ದರು. ಇದರಿಂದಾಗಿ ಅವರು ಸ್ಥಳ ಬಿಟ್ಟು ತೆರಳಿದ್ದರು.
ಇನ್ನು ಡಾಕ್ಟರ್ ಮೇಲೆ ಹಲ್ಲೆ ನಡೆಸಲು ಇರುವ ಕಾರಣಗಳು: ಹಿಂದೂ ಸಂಘಟನೆಗಳು ಇದೊಂದು ವ್ಯವಸ್ಥಿತ ಲ್ಯಾಂಡ್ ಜಿಹಾದ್ ಮಾಫಿಯಾ ಎಂದು ಆರೋಪಿಸಿವೆ. ಡಾಕ್ಟರ್ ನ್ಮು ಸಮಸ್ಯೆಯಲ್ಲಿ ಸಿಲುಕಿಸಲೆಂದೇ ಮುಸ್ಲಿಂ ಮಹಿಳೆಯನ್ನು ಕಳುಹಿಸಿ ದೂರು ಕೊಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಇನ್ನೂ ಕೆಲವು ಸಾಧ್ಯತೆಗಳು ನಿಚ್ಚಳವಾಗಿ ಗೋಚರಿಸುತ್ತವೆ.
1. ಹಣ ದೋಚುವ ಯತ್ನ – ಡಾಕ್ಟರ್ ಬಳಿ ಹಣ ಇರಬಹುದು ಎಂಬ ಭಾವನೆಯಿಂದ ಜಿಹಾದಿಗಳು ಹಣ ದೋಚಲು ಈ ಉಪಾಯವನ್ಮು ಅನುಸರಿಸಿರುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ.
2. ಲ್ಯಾಂಡ್ ಜಿಹಾದ್ – ಮೊದಲೇ ಹೇಳಿದಂತೆ ಡಾಕ್ಟರರ ಜಾಗದ ಅಂದರೆ ಅವರ ಕ್ಲಿನಿಕ್ ಇರುವ ಜಾಗ ಮತ್ತು ಮನೆ ಇರುವ ಜಾಗದ ಮೇಲೆ ಕಾಸರಗೋಡು ಪರಿಸರದ ಭಾರೀ ಕುಳಗಳಿಗೆ ಕಣ್ಣಿತ್ತು. ಇದೇ ಹೌದೆಂದಾದರೆ ಈ ಪ್ರಕರಣಕ್ಕೆ ಭೂಗತ ಜಗತ್ತಿನ ನಂಟಿದ್ದರೆ ಆಶ್ಚರ್ಯ ಪಡಬೇಕಾಗಿಲ್ಲ.
3. ಹನಿಟ್ರ್ಯಾಪ್ – ಆರೋಪಿಗಳಿಗೆ ಈ ಉದ್ದೇಶ ಇದ್ದಿರುವ ಸಾಧ್ಯತೆಯೂ ಅಲ್ಲಗಳೆಯಲಾಗುವುದಿಲ್ಲ. ಡಾಕ್ಟರ್ ಇದಕ್ಕೆ ಅವಕಾಶ ಕೊಡದೆ ಇದ್ದುದರಿಂದ ಅವರಿಗೆ ಬೆದರಿಕೆ ಹಾಕಿರಬಹುದು ಎಂದು ಹೇಳಲಾಗುತ್ತಿದೆ.
4. ಏಳಿಗಯನ್ನು ಸಹಿಸದ ಕೆಲವು ವ್ಯಕ್ತಿಗಳು – ದಂತವೈದ್ಯರಾಗಿ ಕೃಷ್ಣಮೂರ್ತಿ ಯವರ ಏಳಿಗೆ, ಪ್ರಸಿದ್ಧಿಯನ್ನು ಸಹಿಸದೆ ಅವರನ್ಮು ಹಾಗೂ ಅವರ ಹಲ್ಲಿನ ಆಸ್ಪತ್ರೆಯನ್ನು ಹೇಗಾದರೂ ಮಾಡಿ ಬದಿಯಡ್ಕದಿಂದ ಸ್ಥಳಾಂತರಿಸಬೇಕೆಂಬ ಹುನ್ನಾರ ತೆರೆಯ ಮರೆಯಲ್ಲಿ ನಡೆಯುತ್ತಿತ್ತು ಎಂದೂ ಹೇಳಲಾಗುತ್ತಿದೆ. ಅದರಲ್ಲೂ ಅವರ ಡೆಂಟಲ್ ಕ್ಲಿನಿಕ್ ಕೆಲವರಿಗೆ ನುಂಗಲಾರದ ತುತ್ತಾಗಿತ್ತೇ ಎಂಬ ಸಂಶಯ ವ್ಯಕ್ತಪಡಿಸಲಾಗುತ್ತಿದೆ.
ಹೀಗೆ ಹಲವಾರು ಕೋನಗಳಿಂದ ತನಿಖೆ ನಡೆಸಬೇಕಾದ ಅಗತ್ಯವಿದೆ. ಮುಂದಿನ ದಿನಗಳಲ್ಲಿ ತನಿಖೆ ಯಾವ ರೀತಿಯಲ್ಲಿ ಸಾಗುತ್ತದೆ ಎಂದು ಕಾದು ನೋಡಬೇಕಿದೆ.
ಇತ್ತೀಚಿಗೆ ಮೂರು ದಿನಗಳ ಹಿಂದೆ ಮುಸ್ಲಿಂ ಜಿಹಾದಿಗಳ ಸಂಚಿಗೆ ಬಲಿಯಾದ, ಕಾಸರಗೋಡಿನ ಬದಿಯಡ್ಕದಲ್ಲಿ ಸಹಸ್ರಾರು ರೋಗಿಗಳ ಸೇವೆ ಮಾಡಿದ ಜನಾನುರಾಗಿ ದಂತವೈದ್ಯ ಡಾ.ಕೃಷ್ಣಮೂರ್ತಿಯವರಿಗೆ ನಿನ್ನೆ ಗೌರವ ಸಲ್ಲಿಸಲಾಗಿದೆ.
ನಿನ್ನೆ ಅವರ ಅಂತ್ಯಕ್ರಿಯೆ ಬದಿಯಡ್ಕದಲ್ಲಿ ನಡೆಯಿತು. ಅಂತ್ಯಕ್ರಿಯೆಯ ಸಂದರ್ಭದಲ್ಲಿ ಸಾವಿರಾರು ಜನರು ಸೇರಿದ್ದರು
ನಂತರ ನಡೆದ ಪ್ರತಿಭಟನಾ ಸಮಯದಲ್ಲಿ ಕೂಡಾ ವೈದ್ಯರ ಅಭಿಮಾನಿಗಳು ಹೇರಳ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಡಾಕ್ಟರ್ ಕೃಷ್ಣಮೂರ್ತಿಯವರ ಸವಿನೆನಪಿಗಾಗಿ ಡಾಕ್ಟರ್ ಕ್ಲಿನಿಕ್ ಬಳಿಯ ಟ್ಯಾಕ್ಸಿ ಸ್ಟ್ಯಾಂಡ್ ಅನ್ನು ಡಾ.ಕೃಷ್ಣಮೂರ್ತಿ ಸ್ಮಾರಕ ಟ್ಯಾಕ್ಸಿ ಸ್ಟ್ಯಾಂಡ್, ಬದಿಯಡ್ಕ ಎಂದು ಹೆಸರಿಸಲಾಗಿದೆ.
ವೈದ್ಯರನ್ನು ಎಲ್ಲರೂ ಗೌರವಿಸುತ್ತಿದ್ದರು, ಆದರೆ ಅವರು ಜಿಹಾದಿಗಳ ಕುತಂತ್ರಕ್ಕೆ ಬಲಿಯಾಗಿದ್ದರು.