Saturday, August 29, 2026
Home Blog Page 143

ವಿಡಿಯೋ – ತನ್ನ ಕಾರಿನ ಮೇಲೆ ಒರಗಿದ್ದಕ್ಕಾಗಿ 6 ​​ವರ್ಷದ ಮಗುವನ್ನು ಝಾಡಿಸಿ ಎದೆಗೆ ಒದ್ದ ವ್ಯಕ್ತಿ, ಆರೋಪಿಯ ಬಂಧನ

ತನ್ನ ಕಾರಿನ ಮೇಲೆ ಒರಗಿ ನಿಂತಿದ್ದ ಆರು ವರ್ಷದ ಬಾಲಕನಿಗೆ ಒದೆಯುವ ಮೂಲಕ ಕೇರಳದ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆಯ ಸಿಸಿಟಿವಿ ಫೂಟೇಜ್‌ನಲ್ಲಿ ಚಾಲಕನು ಹೊರಬಂದಾಗ, ಹುಡುಗನೊಬ್ಬ ನಿಂತಿದ್ದ ಬಿಳಿ ಕಾರಿನ ಮೇಲೆ ಒರಗಿ ನಿಂತಿರುವುದನ್ನು ತೋರಿಸಿದೆ,  ಚಾಲಕ ಹೊರಬಂದಾಗ ಹುಡುಗನಿಗೆ ಏನೋ ಹೇಳಿ ಅವನ ಎದೆಗೆ ಒದೆಯುತ್ತಾನೆ.

ರಾಜಸ್ಥಾನದ ವಲಸೆ ಕಾರ್ಮಿಕ ಕುಟುಂಬದಿಂದ ಬಂದ ಹುಡುಗ ಸದ್ದಿಲ್ಲದೆ ದೂರ ಹೋಗುತ್ತಾನೆ ಮತ್ತು ಆ ವ್ಯಕ್ತಿ ಮತ್ತೆ ತನ್ನ ವಾಹನದೊಳಗೆ ಬರುತ್ತಾನೆ. ಸ್ವಲ್ಪ ಸಮಯದ ನಂತರ, ಕೆಲವು ಸ್ಥಳೀಯರು ಕಾರಿನ ಸುತ್ತಲೂ ಜಮಾಯಿಸಿ ಚಾಲಕನನ್ನು ಪ್ರಶ್ನಿಸುತ್ತಿರುವುದನ್ನು ಕಾಣಬಹುದು. ಅವರನ್ನೆಲ್ಲಾ ಎದುರಿಸಿದ ನಂತರ, ಆ ಮನುಷ್ಯನು ತನ್ನ ಓಡಿಸುತ್ತಾನೆ,

ಪೊನ್ನಿಯಂಪಾಲಂ ನಿವಾಸಿ ಶಿಹಶಾದ್ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ರಾತ್ರಿ 8:30ರ ಸುಮಾರಿಗೆ ನಡೆದ ಘಟನೆಯ ಕುರಿತು ಪ್ರತ್ಯಕ್ಷದರ್ಶಿ ಯುವ ವಕೀಲರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಿಹಶಾದ್ ನನ್ನು ಠಾಣೆಗೆ ಕರೆಸಿದರೂ ಬಿಡುಗಡೆ ಮಾಡಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಆದರೆ, ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸುದ್ದಿ ವಾಹಿನಿಗಳು ಕೂಡ ಕೈಗೆತ್ತಿಕೊಂಡ ನಂತರ ಪೊಲೀಸರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಆಮೇಲೆ ಪುನಃ ಪೊಲೀಸರು ಕಾರ್ಯಾಚರಣೆ ನಡೆಸಿ ಶುಕ್ರವಾರ ಬೆಳಗ್ಗೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಶೀಘ್ರವೇ ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭಾಧ್ಯಕ್ಷ ಹಾಗೂ ತಲಶ್ಶೇರಿ ಶಾಸಕ ಎಎನ್ ಶಂಸೀರ್ ಹೇಳಿದ್ದಾರೆ. ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ರಾಜ್ಯ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ, ಮಾನವೀಯತೆ ಎಂದರೆ ಅಂಗಡಿಯಿಂದ ಖರೀದಿಸುವ ವಸ್ತುವಲ್ಲ ಎಂದು ಹೇಳಿದ್ದಾರೆ.

“ಕಾರಿಗೆ ಒರಗಿದ್ದಕ್ಕಾಗಿ ಆರು ವರ್ಷದ ಮಗುವನ್ನು ಒದೆಯುವುದು ಎಷ್ಟು ಕ್ರೂರವಾಗಿದೆ. ಎಲ್ಲಾ ಕಾನೂನು ಕ್ರಮಗಳನ್ನು ಖಾತ್ರಿಪಡಿಸಲಾಗುವುದು. ಇಂತಹ ಘಟನೆಗಳು ಮರುಕಳಿಸಬಾರದು” ಎಂದು ಸಚಿವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

10 ಅಡಿ ಉದ್ದದ ಬೋವಾ ಹಾವನ್ನು ಹಿಡಿದ ಪೊಲೀಸ್ ಅಧಿಕಾರಿ

ಫ್ಲೋರಿಡಾದ ವಸತಿ ಸಮುಚ್ಛಯದಿಂದ ದೈತ್ಯ ಹಾವನ್ನು ಸೆರೆಹಿಡಿಯಲಾಗಿದೆ.  10 ಅಡಿ ಉದ್ದದ ಬೋವಾ ಹಾವನ್ನು ಪೊಲೀಸ್ ಅಧಿಕಾರಿಯೊಬ್ಬರು ಹಿಡಿದಿದ್ದಾರೆ.

ದೈತ್ಯ, 10-ಅಡಿ ಉದ್ದ, 75-ಪೌಂಡ್ (ಸುಮಾರು 34 ಕೆಜಿ) ಬೋವಾ ಕನ್‌ಸ್ಟ್ರಿಕ್ಟರ್, ಒಂದು ವಿಧದ ದೊಡ್ಡ, ವಿಷಕಾರಿಯಲ್ಲದ, ಭಾರೀ-ದೇಹದ ಹಾವು, ದಕ್ಷಿಣ ಮತ್ತು ಮಧ್ಯ ಅಮೆರಿಕದಲ್ಲಿ ಕಾಣಸಿಗುವ ಸರೀಸೃಪ.

ಸ್ಥಳೀಯ ಮೀನು ಮತ್ತು ವನ್ಯಜೀವಿ ಸಂರಕ್ಷಣಾ ಆಯೋಗದ ಸಹಾಯದಿಂದ, ಫ್ಲೋರಿಡಾದ ವಸತಿ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸೆರೆಹಿಡಿದರು. ಕೆಲವು ತಿರುವುಗಳ ನಡುವೆ ಮಾಡ್ಯುಲರ್ ಟ್ರೈಲರ್‌ನ ಬದಿಯಲ್ಲಿ ಹಾವು ಕಾಣಿಸಿಕೊಂಡ ನಂತರ ಫ್ಲೋರಿಡಾ ಶೆರಿಫ್‌ನ ಡೆಪ್ಯೂಟಿ ಕ್ಲೇ ಮ್ಯಾಂಗ್ರಮ್ ಅವರು ತುರ್ತು 911 ಕರೆಗೆ ಪ್ರತಿಕ್ರಿಯಿಸಿದರು.

“ನಾನು ಹಾವನ್ನು ಅದರ ತಲೆಯ ಹಿಂದೆ ಹಿಡಿಯುವ ಮೂಲಕ ನಿಯಂತ್ರಣ ಸಾಧಿಸಲು ಸಾಧ್ಯವಾಯಿತು” ಎಂದು ಅವರು ಹೇಳಿದರು.

“ನಾನು ಅದನ್ನು ಅಡಗಿದ್ದ ಸ್ಥಳದಿಂದ ಎಳೆದು ಅದರ ದೇಹದ ಮೇಲೆ ಸ್ವಲ್ಪ ನಿಯಂತ್ರಣ ಸಾಧಿಸಿದೆ. ಸ್ಥಳದಲ್ಲಿದ್ದ ಇತರ ಜನಪ್ರತಿನಿಧಿಗಳು ಹಾವಿನ ಚೀಲವನ್ನು ಹಿಡಿದುಕೊಂಡು ಸಹಾಯ ಮಾಡಿದರು” ಎಂದು ಅವರು ಸುದ್ದಿವಾಹಿನಿಗೆ ತಿಳಿಸಿದರು.

ಇದು ದೊಡ್ಡ ಹಾವು ಎಂದು ತಿಳಿದಿತ್ತು ಆದರೆ ನಿಜವಾದ ಗಾತ್ರವನ್ನು ತಿಳಿದಿರಲಿಲ್ಲ ಎಂದು ಅವರು ಹೇಳಿದರು. “ದಕ್ಷಿಣ ಫ್ಲೋರಿಡಾದಲ್ಲಿ ವಾಸಿಸುತ್ತಿರುವ ಮತ್ತು ಬೆಳೆಯುತ್ತಿರುವ ನಾನು ನನ್ನ ಇಡೀ ಜೀವನದಲ್ಲಿ ಹಾವುಗಳ ಸುತ್ತಲೂ ಇದ್ದೇನೆ. ನಾನು ಮಗುವಾಗಿದ್ದಾಗ ನಾನು ಹಾವುಗಳನ್ನು ಹಿಡಿದಿದ್ದೇನೆ,” ಎಂದು ಅವರು ಹೇಳಿದ್ದಾರೆ.

ಕ್ರೀಡೆಯು ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ – ಡಿವೈಎಸ್‌ಪಿ ಡಾ. ವೀರಯ್ಯ ಹಿರೇಮಠ್

ಪುತ್ತೂರು, ನವೆಂಬರ್ 03: ಕ್ರೀಡೆಗಳು ಮನಸ್ಸಿಗೆ ಮುದ ನೀಡುವಂತೆ ದೈಹಿಕ ಪೋಷಣೆಗಳಿಗೂ ಸಹಾಯಕವಾಗುತ್ತವೆ. ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ, ಶಿಸ್ತು, ಸಹಬಾಳ್ವೆಗಳಲ್ಲದೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಬ0ಧಗಳ ವೃದ್ಧಿಗಳಿಗೂ ಕ್ರೀಡೆಗಳು ಅಗತ್ಯವಾಗಿವೆ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು ಆತ್ಮವಿಶ್ವಾಸದೊ0ದಿಗೆ ದಿಟ್ಟ ಹೆಜ್ಜೆಗಳನ್ನು ಇರಿಸಬೇಕು.

ಆಲೋಚನೆಗಳು, ನಿರ್ಧಾರಗಳು ಅಚಲವಾಗಿದ್ದಾಗ ಸಾಧನೆಯ ಉತ್ತುಂಗಕ್ಕೆ ಏರಲು ಸಾಧ್ಯ ಎಂದು ಪುತ್ತೂರಿನ ಡಿವೈಎಸ್‌ಪಿ ಡಾ. ವೀರಯ್ಯ ಹಿರೇಮಠ್‌ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಾಯ ಮಾಡುತ್ತದೆ. ಶಾಲಾ ಕಾಲೇಜು ಮಟ್ಟದ ಕ್ರೀಡಾ ಕೂಟಗಳಿಂದ ಸ್ನೇಹ ಸೌಹಾರ್ದತೆಗಳು ಏರ್ಪಡುತ್ತವೆ. ಕ್ರೀಡಾಪಟುಗಳಿಗೆ ದೇಶ ವಿದೇಶ ಮಟ್ಟದಲ್ಲಿ ವಿಶೇಷ ಮನ್ನಣೆಯಿದೆ. ರಾಷ್ಟ್ರೀಯ ಸಂಬ0ಧಗಳ ವೃದ್ಧಿಗೆ ಕ್ರೀಡೆಗಳ ಕೊಡುಗೆ ಅಪಾರವಾಗಿದೆ. ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ ಎಂದರು.


ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳಾದ ರಿತೇಶ್, ಅಖಿಲೇಶ್, ವಿಘ್ನೇಶ್, ರಜತ್, ನಿತೀನ್ ಖುಷಿ, ಪವಿತ್ರ, ಜೈಶೀಲ್ ರೈ, ಧನುಷ್, ಲೋಹಿತ್, ಗಗನ್, ಕೃಪೇಶ್, ಪವನ್ ಮತ್ತು ಪ್ರಣವ್‌ ಕ್ರೀಡಾಜ್ಯೋತಿಯನ್ನು ತರುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಆಕರ್ಷಕ ಪಥಸಂಚಲನ:
ಸುಮಾರು 25 ತರಗತಿಗಳ ಶಿಸ್ತುಬದ್ಧ ಪಥ ಸಂಚಲನ ನಡೆಯಿತು. ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಕ್ರೀಡಾ ಮೈದಾನಕ್ಕೆ ಆಕರ್ಷಕವಾಗಿ ಹೊತ್ತು ಸಾಗಿ ಬಂದರು.

ದ್ವಿತೀಯ ಪಿಯುಸಿ ವಿಜ್ಞಾನದ‘ಎ’ ವಿಭಾಗವು ಪ್ರಥಮ ಸ್ಥಾನವನ್ನೂ ದ್ವಿತೀಯ ಪಿಯುಸಿ ವಿಜ್ಞಾನದ ‘ಡಿ’ ವಿಭಾಗವು ದ್ವಿತೀಯ ಸ್ಥಾನವನ್ನೂ ದ್ವಿತೀಯ ಪಿಯುಸಿ ವಾಣಿಜ್ಯದ ‘ಎ’ ವಿಭಾಗವು ತೃತೀಯ ಬಹುಮಾನವನ್ನೂ ಪಡೆದುಕೊಂಡಿತು.

ವಿವೇಕಾನಂದ ಪದವಿ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್‌ ಪಥಸಂಚಲನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.
ರಕ್ಷಕ-ಶಿಕ್ಷಕ ಸಂಘದ ಕೋಶಾಧಿಕಾರಿ ಕೃಷ್ಣಪ್ರಕಾಶ್ ಬಳ್ಳಂಬೆಟ್ಟು ಮಾತನಾಡಿ ಕ್ರೀಡೆಯು ದೇಹಕ್ಕೆ ವ್ಯಾಯಾಮ ನೀಡುವುದರ ಜೊತೆಗೆ ಮಾನಸಿಕ ಏಕಾಗ್ರತೆಗೂ ಸಹಕಾರಿಯಾಗುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಧೃತಿಗೆಡದೆ ಆತ್ಮವಿಶ್ವಾಸದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶುಭಾಶಯದ ನುಡಿಗಳನ್ನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೃಷ್ಣಪ್ರಸನ್ನ ಮಾತನಾಡಿ ಕ್ರೀಡಾಕೂಟವು ಗುರಿಯನ್ನು ನಿಶ್ಚಯ ಮಾಡುವ ಪಾಠ. ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ. ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ. ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ. ಸಂಯಮ, ಇಚ್ಛಾಶಕ್ತಿ, ಸ್ವಾಭಿಮಾನ, ಏಕಾಗ್ರತೆಗಳನ್ನು ಬೆಳೆಸುತ್ತದೆ. ಸೋಲೇ ಗೆಲುವಿನ ಸೋಪಾನ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಕೂಡ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗುತ್ತವೆ ಎಂದರು.


ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಎಂ. ಗೋಪಾಲಕೃಷ್ಣ ಭಟ್, ಕೋಶಾಧಿಕಾರಿ ಸಚಿನ್ ಶೆಣ್ಯೆ ಕೆ, ಸದಸ್ಯ ಡಾ. ಕೆ. ಎನ್ ಸುಬ್ರಹ್ಮಣ್ಯ, ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ, ಯತೀಶ್,ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುದತ್ ನಾಯಕ್‌ ಕ್ರೀಡಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಕ್ರೀಡಾ ಪ್ರತಿನಿಧಿ ಗಣಪತಿ ಭಟ್‌ ಸ್ವಾಗತಿಸಿ ಕ್ರೀಡಾ ಸಂಘದ ಕಾರ್ಯದರ್ಶಿ ರಜತ್‌ ಆರ್ ಭಟ್‌ ವಂದಿಸಿದರು.ಕಾಲೇಜಿನ ಆ0ಗ್ಲ ವಿಭಾಗದ ಮುಖ್ಯಸ್ಥ ಪಿ.ಕೆ. ಪರಮೇಶ್ವರ ಶರ್ಮ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ವಿವಿಧ ರೀತಿಯ ಕ್ರೀಡಾ ಸ್ಪರ್ಧೆಗಳು ನಡೆದವು.

ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆಆಯ್ಕೆ

ಪುತ್ತೂರು, ನ 03: ಉಡುಪಿಯ ಹೆಬ್ರಿಯಲ್ಲಿ ನಡೆದ ವಿದ್ಯಾ ಭಾರತಿ ಪ್ರಾಂತ ಹಾಗು ಕ್ಷೇತ್ರ ಮಟ್ಟದ ಚೆಸ್ ಪಂದ್ಯಾಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೈಝೆನ್‌ ಎಸ್(ಬಂಟ್ವಾಳದ ದೇವಸ್ಯ ಸೂರ್ಯನಾರಾಯಣ ಎನ್ ಕೆ ಮತ್ತು ಸುಮನ ಎಸ್‌ಎನ್‌ ದಂಪತಿ ಪುತ್ರ)

ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಋತ್ವಿಕ್ ಸಾಯಿ ಗಣೇಶ್ (ಕುಂದಾಪುರದ ತಾಲೂಕಿನ ಸಿದ್ದಾಪುರದ ಜನಾರ್ಧನ ಎಂ.ಆರ್ ಮತ್ತು ಜ್ಯೋತಿ ಕೆ.ಸಿ ದಂಪತಿ ಪುತ್ರ) ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಆಗಿರುತ್ತಾರೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದರ ವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಈ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಮಾರ್ಕೆಟ್ ಫೆಸ್ಟ್ ಉದ್ಘಾಟನೆ

ಪುತ್ತೂರು : ನಮ್ಮ ಸುತ್ತಮುತ್ತಲು ಇರುವ ಪ್ರತಿಯೊಂದು ವಸ್ತುವಿಗೂ ಕೂಡ ಮೌಲ್ಯವಿದೆ. ಆದ್ದರಿಂದ ನಮ್ಮ ಪರಿಸರವನ್ನು ಸೂಕ್ಷ್ಮವಾಗಿ ವೀಕ್ಷಿಸಿ ಅಲ್ಲಿ ದೊರೆತ ವಸ್ತುವನ್ನು ಮಾರಾಟಮಾಡಿ ಅದರಿಂದ ನಾವು ಸಣ್ಣ ಮೊತ್ತವನ್ನು ಪಡೆದಾಗ ಆಗುವ ಖುಷಿ ಅಪರಿಮಿತವಾದದ್ದು. ಹಾಗೆ ದೊರಕುವ ಮೊತ್ತ ತನ್ನ ಸ್ವಂತ ಸಂಪಾದನೆ ಎಂಬ ಮನೋಭಾವ ಮೂಡುತ್ತದೆ ಎಂದು ಕೋಡಿಬೈಲ್ ಇಂಪೋರ್ಟ್ ಅಂಡ್ ಎಕ್ಸ್ಪೋರ್ಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅಜಯ್ ರಾಮ್ ಕೋಡಿಬೈಲ್ ಹೇಳಿದರು.


ಅವರು ನಗರದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯ ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಬುಧವಾರ ಆಯೋಜಿಸಲಾದ ‘ಮಾರ್ಕೆಟ್ ಮೇಳ’ವನ್ನು ಉದ್ಘಾಟಿಸಿ ಮಾತನಾಡಿದರು.


ನಾವು ಯಾವುದೇ ಹುದ್ದೆಗೆ ಹೋದರೂ ಕಾರ್ಯವನ್ನು ಇತರರಿಗೆ ಮನವರಿಕೆ ಮಾಡಿಸುವ ಕೌಶಲ ಅತ್ಯಂತ ಮುಖ್ಯವಾಗಿರುತ್ತದೆ. ವ್ಯವಹಾರದ ಕೌಶಲ ಮೂಡಬೇಕಾದರೆ ಶಾಲಾ ಕಾಲೇಜುಗಳಲ್ಲಿ ದೊರಕುವ ಅನುಭವ ಮುಖ್ಯವಾಗುತ್ತದೆ. ವ್ಯವಹಾರದಲ್ಲಿ ಲಾಭ ನಷ್ಟಗಳು ಸಹಜ. ಆದರೆ ನಾವು ಯಾವಾಗಲೂ ಧನಾತ್ಮಕವಾಗಿ ಚಿಂತನೆಯನ್ನು ಮಾಡಬೇಕು.

ಯಾವುದೇ ಕಾರಣಕ್ಕೂ ಕುಗ್ಗಬಾರದು. ವ್ಯವಹಾರದಲ್ಲಿ ನಾವು ಎಷ್ಟು ಜನರನ್ನು ತಲುಪುತ್ತೇವೆ ಎನ್ನುವುದು ಮುಖ್ಯ. ಯಾವುದೇ ಹುದ್ದೆಗೆ ಹೋದರೂ ಪ್ರಾಮಾಣಿಕವಾಗಿರುವುದು ಹಾಗೂ ವಿನಯದಿಂದಿರುವುದು ಅಗತ್ಯ ಎಂದು ಕಿವಿ ಮಾತು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ವಿದ್ಯಾರ್ಥಿಯೊಬ್ಬ ತನ್ನ ಕಾಲಮೇಲೆ ನಿಲ್ಲುವ ಅಡಿಗಲ್ಲನ್ನು ಶಿಕ್ಷಣ ಸಂಸ್ಥೆ ರೂಪಿಸಿಕೊಡಬೇಕಿದೆ. ಇದುವೇ ನಿಜವಾದ ಶಿಕ್ಷಣದ ಸಾರ್ಥಕತೆಯಾಗಿದೆ.

ಒಂದು ವಿಷಯದಲ್ಲಿ ನೂರಕ್ಕೆ ನೂರು ಅಂಕ ಗಳಿಸುವುದು, ದೊಡ್ಡ ಸಂಗತಿ ಅಲ್ಲ. ತನ್ನ ಕಾಲ ಮೇಲೆ ತಾನೇ ನಿಲ್ಲುವುದು ಜೀವನದ ನಿಜವಾದ ಗೆಲುವು. ಸೊನ್ನೆಯಿಂದ ಮನುಷ್ಯ ಹೇಗೆ ಬೆಳೆಯುತ್ತಾನೆ ಎಂಬುದೇ ನಿಜವಾದ ಕೌಶಲ. ವ್ಯಕ್ತಿ ದುಡಿಯುವುದು ಮಾತ್ರವಲ್ಲ ಆತ ದೇಶಪ್ರೇಮಿಯಾಗಿಯೂ ಕೂಡ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.


ಹಣ ಒಂದು ಬೆಂಕಿಯ ಹಾಗೆ. ಹೇಗೆ ಹಣದೊಂದಿಗೆ ವ್ಯವಹರಿಸುವುದು ಎಂಬುವುದನ್ನು ಮಾರ್ಕೆಟ್ ಫೆಸ್ಟ್ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಿದೆ. ಹಣವನ್ನು ಸಂಪಾದಿಸಿ ತನ್ನ ಸ್ವಂತ ಉಪಯೋಗಕ್ಕಾಗಿ ಬಳಸುವುದು ಮಾತ್ರವಲ್ಲ, ಸಮಾಜಮುಖಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ ಎಂದು ಸಂಸ್ಥೆಯ ಪ್ರಾಂಶುಪಾಲೆ ಮಾಲತಿ.ಡಿ ಭಟ್ ಹೇಳಿದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.


ವಿದ್ಯಾರ್ಥಿ ಅದ್ವೈತ ಕೃಷ್ಣ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ನಿಯತಿ ಭಟ್ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಇಂದು ‘ಸುಧನ್ವ ಮೋಕ್ಷ’ ಯಕ್ಷಗಾನ ಪ್ರದರ್ಶನ – ತೆಂಕುತಿಟ್ಟು ಮತ್ತು ಬಡಗುತಿಟ್ಟು ಕಲಾವಿದರಿಂದ

ಇಂದು ಶುಕ್ರವಾರ ಪುತ್ತೂರಿನಲ್ಲಿ ವಿಜಯಕರ್ನಾಟಕ ಪತ್ರಿಕೆ ಪ್ರಸ್ತುತಪಡಿಸುವ ತೆಂಕುತಿಟ್ಟು ಮತ್ತು ಬಡಗುತಿಟ್ಟು ಕಲಾವಿದರಿಂದ ಗಾನ ನಾಟ್ಯ ವೈಭವ ಮತ್ತು ‘ಸುಧನ್ವ ಮೋಕ್ಷ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಇಂದು ದಿನಾಂಕ 04.11.2022ರ ಶುಕ್ರವಾರ 4 ಘಂಟೆಗೆ ಪುತ್ತೂರು ಪುರಭವನದಲ್ಲಿ ತೆಂಕುತಿಟ್ಟು ಮತ್ತು ಬಡಗುತಿಟ್ಟು ಕಲಾವಿದರಿಂದ ಗಾನ ನಾಟ್ಯ ವೈಭವ ಮತ್ತು ‘ಸುಧನ್ವ ಮೋಕ್ಷ’ ಯಕ್ಷಗಾನ ಪ್ರದರ್ಶನ ಜರಗಲಿದೆ.

ಕಾರ್ಯಕ್ರಮವು ಸಂಜೆ 4 ಘಂಟೆಗೆ ಸರಿಯಾಗಿ ಆರಂಭವಾಗಲಿದೆ.

ಕಾರ್ಯಕ್ರಮದ ವಿವರ ಮತ್ತು ಕಲಾವಿದರ ವಿವರ ಹಾಗೂ ಪಾತ್ರಪರಿಚಯಕ್ಕಾಗಿ ಮೇಲಿನ ಚಿತ್ರವನ್ನು ನೋಡಿ. 

ಶಾಸಕ ಎಂಪಿ ರೇಣುಕಾಚಾರ್ಯ ಅವರ ಅಣ್ಣನ ಮಗ ಚಂದ್ರಶೇಖರ್ ಶವ ನೀರೊಳಗಿದ್ದ ಕಾರಿನಲ್ಲಿ ಪತ್ತೆ, ಶವ ಕಂಡು ಸಾವಿಗೆ ನಾನೇ ಕಾರಣ ಎಂದು ಗೋಳಾಡಿದ ಶಾಸಕರು, ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಸಲಾಗುವುದು ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ 

ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರ ಅಣ್ಣನ ಮಗ ಚಂದ್ರಶೇಖರ್ ಅವರ ಶವ ನೀರೊಳಗಿದ್ದ ಕಾರಿನಲ್ಲಿ ಪತ್ತೆ,ಯಾಗಿದೆ.

ಐದು ದಿನಗಳ ಬಳಿಕ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಮುಳುಗಿದ್ದ ಕಾರು  ಪತ್ತೆಯಾಗಿದೆ. ನೀರೊಳಗಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿದೆ. 

ಚಂದ್ರಶೇಖರ್‌ ಅವರ ಕ್ರೇಟಾ ಕಾರು ಸೊರಟೂರು ಬಳಿ ಇರುವ ತುಂಗಾಭದ್ರ ಕಾಲುವೆಯಲ್ಲಿ ಸಿಕ್ಕಿದೆ. ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಕಾಲುವೆಯಲ್ಲಿ ಪತ್ತೆಯಾದ ಕಾರನ್ನು ಮೇಲಕ್ಕೆ ಎತ್ತಲಾಗಿದೆ.

ಅಣ್ಣನ ಮಗ ಚಂದ್ರಶೇಖರ್ ನ ಶವ ಕಂಡು ಶಾಸಕ ರೇಣುಕಾಚಾರ್ಯ ಅವರು ತೀವ್ರವಾಗಿ ಗೋಳಾಡಿದ್ದಾರೆ. ಕುಟುಂಬಸ್ಥರ ಆಕ್ರಂದನವನ್ನು ನೋಡಿ ಅಲ್ಲಿದ್ದವರಿಗೆಲ್ಲಾ ಕಣ್ಣು ತುಂಬಾ ನೀರು ತುಂಬಿತ್ತು.  

ಶವ ಕಂಡು ಸಾವಿಗೆ ನಾನೇ ಕಾರಣ ಎಂದು ಗೋಳಾಡಿದ ಶಾಸಕರನ್ನು ಸಮಾಧಾನಪಡಿಸುವುದೇ ಅಲ್ಲಿದ್ದವರಿಗೆ ಒಂದು ಸವಾಲಾಗಿತ್ತು. “ಶವ ಎಂದು ಹೇಳಬೇಡಿ, ಚಂದ್ರು ಎಂದು ಕರೆಯಿರಿ” ಎಂದು ರೇಣುಕಾಚಾರ್ಯ ದುಃಖಿಸಿದ್ದಾರೆ.

ಈ ಮಧ್ಯೆ “ಕಾರಿನಲ್ಲಿ ಶವ ಸಿಕ್ಕಿದೆ, ಉಳಿದದ್ದು ತನಿಖೆಯಿಂದ ಹೊರಬರಬೇಕಿದೆ. ಈ ಬಗ್ಗೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತೇವೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

Video – ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ, ಕೂದಲೆಳೆಯ ಅಂತರದಲ್ಲಿ ಪಾರು, ಕಾಲಿಗೆ ಗಾಯ – ದಾಳಿಕೋರನ ಬಂಧನ 

ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಕ್ರಿಕೆಟ್ ಆಟಗಾರ  ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು ಅವರು ಸ್ವಲ್ಪ  ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. 

ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರ ಕಂಟೈನರ್ ಬಳಿ ಇಂದು ವಜೀರಾಬಾದ್‌ನ ಜಾಫರ್ ಅಲಿ ಖಾನ್ ಚೌಕ್ ಬಳಿ ಗುಂಡಿನ ದಾಳಿ ನಡೆದಿದೆ.

ಇಮ್ರಾನ್ ಖಾನ್ ಅವರ ಕಾಲಿಗೆ ಗಾಯಗಳಾಗಿವೆ; ಗುಂಡು ಹಾರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

ವಿವಾದಾತ್ಮಕ ಸಾಹಿತಿ ಕೆ.ಸಿ ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ ನ್ಯಾಯಾಲಯ 

ಸಾಗರ:  ಸದಾ ಒಂದಲ್ಲ ಒಂದು ವಿವಾದಗಳಿಂದ ಹಿಂದೂ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸಲು ಯತ್ನಿಸುತ್ತಿರುವ  ವಿವಾದಾತ್ಮಕ ಸಾಹಿತಿ ಕೆ.ಸಿ ಭಗವಾನ್ ವಿರುದ್ಧ ನ್ಯಾಯಾಲವು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.  

ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿದ್ದಾರೆ ಎಂಬುದು ಅವರ ಮೇಲಿರುವ ಆರೋಪವಾಗಿದೆ. ಈ  ಪ್ರಕರಣಕ್ಕೆ ಸಂಬಂಧಿಸಿ  ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಬುಧವಾರ ಜಾಮೀನು ರಹಿತ ವಾರಂಟ್‌  ಹೊರಡಿಸಿದೆ.  

ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು.  

ಪ್ರಕರಣದ ವಿಚಾರಣೆಗೆ ಇಂದು ಭಗವಾನ್ ಖುದ್ದು‌ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು‌ ಸಮನ್ಸ್ ಜಾರಿ‌ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದರೂ ಸಹ ಇಂದು ಸಾಹಿತಿ ಭಗವಾನ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

ಆದ ಕಾರಣ  ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಬುಧವಾರ ಜಾಮೀನು ರಹಿತ ವಾರಂಟ್‌  ಹೊರಡಿಸಿದೆ.

ಕಾಸರಗೋಡಿನಲ್ಲಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಖಾಸಗಿ ಚಿತ್ರಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ ಯುವಕ ಅಬ್ದುಲ್‌ ಶುಹೈಬ್‌ ಬಂಧನ

ಕಾಸರಗೋಡು: ಕಾಞಂಗಾಡ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಬಂಧಿಸಲಾಗಿದೆ. ಕಾಞಂಗಾಡ್‌ನ ಕಾಲೇಜು ವಿದ್ಯಾರ್ಥಿನಿ ನಂದಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ನಂದಾ ಅವರು ಕಾಞಂಗಾಡ್ ಸಿ ಕೆ ನಾಯರ್ ಕಲಾ ಕಾಲೇಜಿನ ವಿದ್ಯಾರ್ಥಿನಿ. ಸೋಮವಾರ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಆಕೆ ತನ್ನ ಜೀವನವನ್ನು ಅಂತ್ಯಗೊಳಿಸುವ ಮೊದಲು ಶುಹೈಬ್‌ಗೆ ವೀಡಿಯೊ ಕರೆ ಮಾಡಿದ್ದಳು ಎಂದು ತಿಳಿದುಬಂದಿದೆ. ತನಿಖೆಯ ನಂತರ ಆತನನ್ನು ಬಂಧಿಸಲಾಯಿತು.

ಕಾಸರಗೋಡು ನಂದಾವರ ಸಿಕೆ ನಾಯರ್ ಕಲಾ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಸೋಮವಾರ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಲಮಿಪಲ್ಲಿ ಮೂಲದ ಅಬ್ದುಲ್ ಶುಹೈಬ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇದರ ಬೆನ್ನಲ್ಲೇ ನಂದಾ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅಬ್ದುಲ್ ಶುಹೈಬ್‌ಗೆ ವಿಡಿಯೋ ಕರೆ ಮಾಡಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿಯ ಬೆದರಿಕೆಯಿಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಬಾಲಕಿಯೊಂದಿಗೆ ಸಂಬಂಧ ಹೊಂದಿದ್ದು, ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರಿಬ್ಬರು ಸಂಬಂಧದಲ್ಲಿದ್ದರು ಮತ್ತು ಇತ್ತೀಚೆಗೆ ಅವರ ಸಂಬಂಧದಲ್ಲಿ ಕೆಲವು ಸಮಸ್ಯೆಗಳಿದ್ದುವು.

ಆಕೆಯ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಅದರ ನಂತರ ಆಕೆ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ