Friday, July 31, 2026
Home Blog Page 143

ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ಲಿಫ್ಟ್ ಅಪಘಾತದಲ್ಲಿ ಸಾವನ್ನಪ್ಪಿದ ಹುಡುಗಿ

ಮುಂಬೈ ಹುಡುಗಿ ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಲಿಫ್ಟ್ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ಹೌಸಿಂಗ್ ಸೊಸೈಟಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರೇಷ್ಮಾ ಖಾರವಿ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರಿಗೂ ದೂರು ನೀಡಿದ್ದಾರೆ.

ಮುಂಬೈನ ಮನ್ಖುರ್ದ್‌ನಲ್ಲಿ 16 ವರ್ಷದ ಬಾಲಕಿಯೊಬ್ಬಳು ಲಿಫ್ಟ್‌ನಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಸಾವನ್ನಪ್ಪಿದ್ದಾಳೆ. ಶುಕ್ರವಾರ ಸಂಜೆ ರೇಷ್ಮಾ ಖಾರವಿ ಅಜ್ಜಿ ಮನೆಗೆ ಭೇಟಿ ನೀಡಿದ ವೇಳೆ ಈ ಘಟನೆ ನಡೆದಿದೆ.

ಆಟದ ಭಾಗವಾಗಿ ಹತ್ತಿರದಲ್ಲಿ ಅಡಗಿಕೊಂಡಿದ್ದ ತನ್ನ ಸ್ನೇಹಿತರನ್ನು ಹುಡುಕುವ ಸರದಿ ಅವಳದಾಗಿತ್ತು. ಅವರನ್ನು ಹುಡುಕುವ ಪ್ರಯತ್ನದಲ್ಲಿ, ಅವಳು ತನ್ನ ಅಜ್ಜಿ ವಾಸಿಸುತ್ತಿದ್ದ ಹೌಸಿಂಗ್ ಸೊಸೈಟಿಯ ಲಿಫ್ಟ್‌ನಲ್ಲಿ ಕಿಟಕಿಯಂತಹ ತೆರೆಯುವಿಕೆಗೆ ತಲೆ ಹಾಕಿದಳು ಮತ್ತು ದುರಂತ ಸಂಭವಿಸಿದಾಗ ಅದು ಸಂಭವಿಸಿತು.

ಲಿಫ್ಟ್ ಕೆಳಗಿಳಿದು ಆಕೆಯ ತಲೆಗೆ ಬಡಿದು ಆಕೆಯ ಸಾವಿಗೆ ಕಾರಣವಾಯಿತು. ಹೌಸಿಂಗ್ ಸೊಸೈಟಿಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ.

ಕುಟುಂಬಸ್ಥರು ಪೊಲೀಸರನ್ನು ಸಂಪರ್ಕಿಸಿದ್ದು, ಅವರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೌಸಿಂಗ್ ಸೊಸೈಟಿ ಅಧ್ಯಕ್ಷ ಮತ್ತು ಕಾರ್ಯದರ್ಶಿಯನ್ನು ಬಂಧಿಸಲಾಗಿದೆ ಎಂದು ಮಂಖುರ್ದ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಮಹಾದೇವ ಕಾಂಬಳೆ ತಿಳಿಸಿದ್ದಾರೆ.

ರೇಷ್ಮಾ ಅವರ ಕುಟುಂಬ ಸಮೀಪದ ಸಾಥೆ ನಗರದಲ್ಲಿ ವಾಸಿಸುತ್ತಿದೆ. ಅವರ ಅಜ್ಜಿ ಮನ್‌ಖುರ್ದ್‌ನಲ್ಲಿರುವ ಹೌಸಿಂಗ್ ಸೊಸೈಟಿಯ ಐದನೇ ಮಹಡಿಯಲ್ಲಿ ವಾಸಿಸುತ್ತಿದ್ದಾರೆ. ಅವರು ದೀಪಾವಳಿಗೆ ಅಜ್ಜಿಯನ್ನು ಭೇಟಿ ಮಾಡಲು ಬಂದಿದ್ದರು.

ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಮಟ್ಟಕ್ಕೆ ಆಯ್ಕೆ.

ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 13, 14ರಂದು ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಣ ರಾಜ್ಯ ವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿ, 14 ಚಿನ್ನ, 8 ಬೆಳ್ಳಿ, ಮತ್ತು 2 ಕಂಚಿನ ಪದಕ ಪಡೆದುಕೊಂಡಿರುತ್ತಾರೆ. 

14ರ ವಯೋಮಾನದ ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಕೃಪಾಲ್.ಪಿ.ಕೆ (ಕೆಮ್ಮಾಯಿ ಪ್ರಕಾಶ್.ಬಿ, ಸುನೀತಾ ಸಿ.ಎಚ್ ದಂಪತಿ ಪುತ್ರ) 600 ಮೀಟರ್-ದ್ವಿತೀಯ, ಅಭಿಶ್ಯಾಮ (ಪರ್ಲಡ್ಕ ಮುರಳೀಧರ್ , ರಾಜೇಶ್ವರಿ ದಂಪತಿ ಪುತ್ರ) ಎತ್ತರ ಜಿಗಿತ -ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

14ರ ವಯೋಮಾನದ ಬಾಲ ವರ್ಗದ ಬಾಲಕಿಯರ ವಿಭಾಗದಲ್ಲಿ ಶ್ರೀವರ್ಣಾ (ಪಾಲೆತ್ತಡಿ ಧರ್ಣಪ್ಪ ಗೌಡ, ಮಮತಾ.ಪಿ. ದಂಪತಿ ಪುತ್ರಿ)-ಎತ್ತರ ಜಿಗಿತ, 80 ಮೀಟರ್ ಹರ್ಡಲ್ಸ್, ಉದ್ದ ಜಿಗಿತ , 4*100 ಮೀಟರ್ ರಿಲೇ -ಪ್ರಥಮ, ಡಿಂಪಲ್ ಶೆಟ್ಟಿ(ಮೆರ್ಲ ನಿವಾಸಿ ಉದಯ ಶೆಟ್ಟಿ ಮತ್ತು ಸುನೀತಾ ಶೆಟ್ಟಿ ದಂಪತಿ ಪುತ್ರಿ) – 100 ಮೀಟರ್ -ದ್ವಿತೀಯ, 4*100 ಮೀಟರ್ ರಿಲೇ -ಪ್ರಥಮ,

ಅಮೃತಾ.ಬಿ.ಎ (ಬನ್ನೂರು ಪಟ್ಟೆ ಅಮರನಾಥ್, ಲತಾ ಕುಮಾರಿ ದಂಪತಿ ಪುತ್ರಿ) 600 ಮೀಟರ್ -ದ್ವಿತೀಯ, 4*100 ಮೀಟರ್ ರಿಲೇ -ಪ್ರಥಮ, ಕೃತಿ,ಕೆ (ಬನ್ನೂರು ಕೊರಗಪ್ಪ ಗೌಡ, ವನಿತಾ.ಎ ದಂಪತಿ ಪುತ್ರಿ) ಕೃತಿ,ಕೆ (ಬನ್ನೂರು ಕೊರಗಪ್ಪ ಗೌಡ, ವನಿತಾ.ಎ ದಂಪತಿ ಪುತ್ರಿ)- 600 ಮೀಟರ್-ಪ್ರಥಮ, 400 ಮೀಟರ್- ದ್ವಿತೀಯ, 4*100 ಮೀಟರ್ ರಿಲೇ -ಪ್ರಥಮ ಸ್ಥಾನ ಗಳಿಸಿದ್ದಾರೆ.

17ರ ವಯೋಮಾನದ ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಚರಣ್ ಕುಮಾರ್ (ಅಳಿಕೆ ದೇವಳಗುಳಿ ಕೃಷ್ಣ ಕುಮಾರ್, ಪ್ರೇಮಾ ದಂಪತಿ ಪುತ್ರ)- 3 ಕಿಲೋಮೀಟರ್ ನಡಿಗೆ -ಪ್ರಥಮ, 3000 ಮೀಟರ್ -ದ್ವಿತೀಯ ಸ್ಥಾನ ಪಡೆದಿರುತ್ತಾನೆ. 

17ರ ವಯೋಮಾನದ ಬಾಲ ವರ್ಗದ ಬಾಲಕರ ವಿಭಾಗದಲ್ಲಿ ವಂಶಿ.ಬಿ.ಕೆ (ಬಪ್ಪಳಿಗೆ ಕಮಲಾಕ್ಷ, ಜಯಲತಾ ದಂಪತಿ ಪುತ್ರಿ): 100 ಮೀಟರ್ ಹರ್ಡಲ್ಸ್ -ದ್ವಿತೀಯ, 4*400 ಮೀಟರ್ ರಿಲೇ -ಪ್ರಥಮ, ಸಾನ್ವಿ.ಎಸ್.ಪಿ. (ಪಳಂಬೆ ಯೋಧ ಡಿ.ಸುಂದರ ಪೂಜಾರಿ, ಶಿಕ್ಷಕಿ ಭವಿತಾ.ಕೆ ದಂಪತಿ ಪುತ್ರಿ) 4*400 ಮೀಟರ್ ರಿಲೇ -ಪ್ರಥಮ, ಅನ್ನಿಕಾ (ಚಾರ್ವಾಕ ಎ.ಎಸ್.ಐ ಕೃಷ್ಣಪ್ಪ.ಎಂ, ಶಿಕ್ಷಕಿ ವಾಣಿಶ್ರೀ ದಂಪತಿ ಪುತ್ರಿ) 3000 ಮೀಟರ್ -ಪ್ರಥಮ,

ರಿದ್ಧಿ.ಸಿ.ಶೆಟ್ಟಿ ( ಪುಂಡಿಕಾಯಿ ಚಿದಾನಂದ ಶೆಟ್ಟಿ, ಸತ್ಯವತಿ.ಸಿ.ಶೆಟ್ಟಿ ದಂಪತಿ ಪುತ್ರಿ) 4*400 ಮೀಟರ್ ರಿಲೇ -ಪ್ರಥಮ, ಬಿ.ಲಿಖಿತಾ ರೈ (ಚಣಿಲ ಬಿ.ಜಗನ್ನಾಥ್ ರೈ, ಗೀತಾ.ಜೆ.ರೈ ದಂಪತಿ ಪುತ್ರಿ) – 400 ಮೀಟರ್-ಪ್ರಥಮ, 4*400 ಮೀಟರ್ ರಿಲೇ -ಪ್ರಥಮ, ಸಮೃದ್ಧಿ.ಜೆ.ಶೆಟ್ಟಿ (ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಹರಿಣಾಕ್ಷಿ.ಜೆ.ಶೆಟ್ಟಿ ದಂಪತಿ ಪುತ್ರಿ) -ಉದ್ದ ಜಿಗಿತ -ದ್ವಿತೀಯ, ಶ್ರದ್ಧಾ ಲಕ್ಷ್ಮೀ (ತಾರಿಗುಡ್ಡೆ ರವಿಶಂಕರ್ , ಅನುಪಮಾ ದಂಪತಿ ಪುತ್ರಿ) ಟ್ರಿಪಲ್ ಜಂಪ್ -ತೃತೀಯ ಸ್ಥಾನ ಗಳಿಸಿರುತ್ತಾರೆ. 

ಒಟ್ಟು 8 ವಿದ್ಯಾರ್ಥಿಗಳು ನವೆಂಬರ್ 19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾಗಿರುತ್ತಾರೆ.

ದೈಹಿಕ ಶಿಕ್ಷಣ ವಿಭಾಗ ಮುಖ್ಯಸ್ಥರಾದ ಶ್ರೀ ಭಾಸ್ಕರ ಗೌಡ ಮುಂಗ್ಲಿಮನೆಯವರ ಮಾರ್ಗದರ್ಶನದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಆಶಾಲತಾ, ಶ್ರೀಮತಿ ನಮಿತಾ, ಶ್ರೀ ದೀಪಕ್, ಶ್ರೀಮತಿ ರಶ್ಮಿ, ಶ್ರೀ ಪವನ್ ಕುಮಾರ್ ಇವರ ಸಹಕಾರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಗಿರೀಶ್ ಕಣಿಯಾರು ಮತ್ತು ಶ್ರೀಮತಿ ವಾಣಿಶ್ರೀ ಇವರುಗಳು ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ತರಬೇತುಗೊಳಿಸಿರುತ್ತಾರೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪುತ್ತೂರಿನ ಪುರಭವನದಲ್ಲಿ ಜರಗಿದ 67ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ

ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವತಿಯಿಂದ ಪುತ್ತೂರಿನ ಪುರಭವನದಲ್ಲಿ  ಜರಗಿದ 67ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ

ಸಾಹಿತಿ, ಅಂಕಣಕಾರ ವಿ.ಬಿ ಅರ್ತಿಕಜೆ, ದೈವ ನರ್ತಕ ಹರೀಶ್ ಪರವ ಕೆಯ್ಯೂರ್, ಡಾ. ಎ.ಕೆ.ರೈ ಪುತ್ತೂರು, ಕೃಷಿ ತಜ್ಞ ಸುರೇಶ್ ಬಲ್ನಾಡು, ಕ್ರೀಡಾ ಸಾಧಕಿ ಕುಮಾರಿ ಅನಘ.ಕೆ ತೆಂಕಿಲ ಇವರನ್ನು ಶಾಸಕ ಸಂಜೀವ  ಮಠಂದೂರು ಸನ್ಮಾನಿಸಿದರು.


ಪುತ್ತೂರು ಸರಕಾರಿ ಆಸ್ಪತ್ರೆಗೆ ಶುದ್ಧ ನೀರಿನ ಘಟಕದ ಕೊಡುಗೆ

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಸ್ಥಳೀಯವಾಗಿ ನೀಡುವ ಕೊಡುಗೆಗಳು ಜನಸಾಮಾನ್ಯರ ಅವಶ್ಯಕತೆಗಳನ್ನು ಪೂರೈಸುವಲ್ಲಿ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ   ಪ್ರೌಢಶಾಲಾ ಮತ್ತು ಪ್ರಾಥಮಿಕ  ಶಾಲಾ ಶಿಕ್ಷಕರ ಸಂಘಟನೆಗಳ ಒಕ್ಕೂಟವು ಶುದ್ಧ ನೀರಿನ ಘಟಕವನ್ನು ಸರಕಾರಿ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿರುವುದು ಅತ್ಯಂತ ಶ್ಲಾಘನೀಯವೆಂದು ಪುತ್ತೂರು ಶಾಸಕ ಸಂಜೀವ ಮಠಂದೂರು ತಿಳಿಸಿದರು. 

ಕೋವಿಡ್ 19 ಸಂದರ್ಭದಲ್ಲಿ ಶಿಕ್ಷಕ ವೃಂದವು ಅಂಗನವಾಡಿ ಕಾರ್ಯಕರ್ತರಿಗೆ, ಬಿಸಿ ಊಟದ ಸಿಬ್ಬಂದಿಯವರಿಗೆ ಮತ್ತು ಅನುದಾನ ರಹಿತ ಶಾಲಾ ಶಿಕ್ಷಕರಿಗೆ ವಸ್ತು ರೂಪದಲ್ಲಿ ಮತ್ತು ಆರ್ಥಿಕವಾಗಿ ಸಹಾಯ ನೀಡಿರುವುದನ್ನು ನೆನಪಿಸಿ ಶಿಕ್ಷಕರ ಸಂಘಟನೆಗಳು ಸಾಮಾಜಿಕ ಬದ್ಧತೆಯನ್ನು ವ್ಯಕ್ತಪಡಿಸಿದ ಬಗ್ಗೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಪುತ್ತೂರು ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಪುತ್ತೂರು ಸರ್ಕಾರಿ ಆಸ್ಪತ್ರೆಗೆ  ನೀಡಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್, ವೈದ್ಯಾಧಿಕಾರಿ ಡಾ. ಯದುರಾಜ್, ಆಸ್ಪತ್ರೆಯ ಸಲಹಾ ಸಮಿತಿಯ ರಫೀಕ್, ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಕುಮಾರ ರೈ ಶುಭ ಹಾರೈಸಿದರು.

ಶಿಕ್ಷಕರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ದಿವಾಕರ ಆಚಾರ್ಯ ಗೇರುಕಟ್ಟೆ ಒಂದು ಲಕ್ಷ ರೂಪಾಯಿ ವೆಚ್ಚದ ಈ ಕೊಡುಗೆಗೆ ಸಹಕಾರ ನೀಡಿದ ಇಲಾಖೆಯ ಅಧಿಕಾರಿಗಳನ್ನು ಮತ್ತು ಶಿಕ್ಷಕರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ವಿಷ್ಣು ಪ್ರಸಾದ್, ಸರ್ವೆ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಜಯರಾಮ ಶೆಟ್ಟಿ, ಡಾ. ಸುಶಾಂತ, ನರ್ಸಿಂಗ್ ವಿಭಾಗದ  ಮೆಟ್ರಾನ್ ದೇವಕಿ, ದೈಹಿಕ ಶಿಕ್ಷಣ ಶಿಕ್ಷಕರಾದ ರಾಮಣ್ಣ ರೈ ಕೈಕಾರ ಮತ್ತು ಆಸ್ಪತ್ರೆಯ ವೈದ್ಯಕೀಯ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಪುತ್ತೂರು ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ.ಕೆ ಸ್ವಾಗತಿಸಿ ಶಿಕ್ಷಕರ ಸಂಘಗಳ ಒಕ್ಕೂಟದ ಕಾರ್ಯದರ್ಶಿ ರಾಮಕೃಷ್ಣ.ಎ ವಂದಿಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಾಹಂ ಕಾರ್ಯಕ್ರಮ ನಿರೂಪಿಸಿದರು.

ಕುರಿಯಾಜೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ತಾಳಮದ್ದಳೆ “ಬ್ರಹ್ಮತೇಜೋಬಲಂಬಲಂ” ಮತ್ತು “ಯತಿಪೂಜೆ” 

ಕುರಿಯಾಜೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ತಾಳಮದ್ದಳೆ “ಬ್ರಹ್ಮತೇಜೋಬಲಂಬಲಂ” ಮತ್ತು “ಯತಿಪೂಜೆ” 

ಬೆಳ್ಳಾರೆ ಸಮೀಪದ ಕುರಿಯಾಜೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ  “ಬ್ರಹ್ಮತೇಜೋಬಲಂಬಲಂ” ಮತ್ತು “ಯತಿಪೂಜೆ” ಎಂಬ ಪ್ರಸಂಗಗಳ ಯಕ್ಷಗಾನ ತಾಳಮದ್ದಳೆ ಕೂಟ ನಡೆಯಲಿದೆ.

ದಿನಾಂಕ 13.11.2022ರ ಆದಿತ್ಯವಾರ ಬೆಳಗ್ಗೆ 9.30ಘಂಟೆಗೆ ತಾಳಮದ್ದಳೆ ಆರಂಭವಾಗಲಿದೆ. 

“ಬ್ರಹ್ಮತೇಜೋಬಲಂಬಲಂ” ಪ್ರಸಂಗದಲ್ಲಿ ಕೌಶಿಕನಾಗಿ ಸುಣ್ಣಂಬಳ ವಿಶ್ವೇಶ್ವರ ಭಟ್ ಮತ್ತು ವಸಿಷ್ಠನಾಗಿ ಪೆರ್ಮುದೆ ಜಯಪ್ರಕಾಶ ಶೆಟ್ಟಿ ಅರ್ಥ ಹೇಳಲಿದ್ದಾರೆ.

ಕಲಾಭಿಮಾನಿಗಳನ್ನು ಕುರಿಯಾಜೆ ಮನೆಯವರು ಆದರದಿಂದ ಆಮಂತ್ರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಮತ್ತು ಕಲಾವಿದರ ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ. 

ವೀಡಿಯೋ – ಉದ್ಧಟತನದಿಂದ ವರ್ತಿಸಿದ ಪೊಲೀಸ್ ಸಬ್-ಇನ್ಸ್ಪೆಕ್ಟರ್ ನೇಮಕಾತಿ ಹಗರಣದ ಸಂತ್ರಸ್ತರಿಗೆ ಕಪಾಳಮೋಕ್ಷ ಮಾಡಿದ ತುಮಕೂರು ಡಿವೈಎಸ್ಪಿ ಪಿ ಶ್ರೀನಿವಾಸ್

ತುಮಕೂರು ಡಿವೈಎಸ್ಪಿ ಪಿ ಶ್ರೀನಿವಾಸ್ ಅವರು ಇಂದು ಪಿಎಸ್ಐ (ಪೊಲೀಸ್ ಸಬ್-ಇನ್ಸ್ಪೆಕ್ಟರ್) ನೇಮಕಾತಿ ಹಗರಣದ ಸಂತ್ರಸ್ತರಿಗೆ ಕಪಾಳಮೋಕ್ಷ ಮಾಡಿ ಕಳುಹಿಸಿದ್ದಾರೆ.

ಸಂತ್ರಸ್ತರು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಹಗರಣದಿಂದ ತಾವು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಮಾತನಾಡಲು ಬಂದಿದ್ದರು.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಶ್ರೀನಿವಾಸ್ ಸಂತ್ರಸ್ತರಿಗೆ ಕಪಾಳಮೋಕ್ಷ ಮಾಡಿ ಕಳುಹಿಸುತ್ತಿರುವುದನ್ನು ಕಾಣಬಹುದು.

ವರದಿಗಳ ಪ್ರಕಾರ, ಸಂತ್ರಸ್ತರು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಹಗರಣದಿಂದ ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಮಾತನಾಡಲು ಬಂದಿದ್ದರು. ಆಗ ಅವರಲ್ಲೊಬ್ಬ ಸ್ವಲ್ಪ ಉದ್ಧಟತನದಿಂದ ವರ್ತಿಸಿದಂತೆ ಮೇಲ್ನೋಟಕ್ಕೆ ಕಾಣಿಸುತ್ತಿತ್ತು.

ಇದು ಶ್ರೀನಿವಾಸ್ ಅವರನ್ನು ಕೆರಳಿಸಿತು. ಇದರಿಂದ ಕೋಪಗೊಂಡ ಅವರು ಅವರಲ್ಲೋರ್ವನಿಗೆ ಕಪಾಳಮೋಕ್ಷ ಮಾಡಿ ಕಳುಹಿಸುವುದನ್ನು ಕಾಣಬಹುದು.

ನಾಪತ್ತೆಯಾಗಿದ್ದ ಹುಡುಗಿ, ಯುವಕ ಶವ ಪತ್ತೆ

ಚೇರ್ತಾಲ: ಇಲ್ಲಿಗೆ ಸಮೀಪದ ಆಲಪ್ಪುಳ ಜಿಲ್ಲೆಯ ಪಲ್ಲಿಪುರಂನಲ್ಲಿ ಏಕಾಂತ ಪ್ಲಾಟ್‌ನಲ್ಲಿನ ಶೆಡ್‌ನಲ್ಲಿ ಯುವಕ ಮತ್ತು ಹದಿಹರೆಯದ ಹುಡುಗಿ ಶವವಾಗಿ ಪತ್ತೆಯಾಗಿದ್ದಾರೆ.

ಮೃತರನ್ನು ಚೆರ್ತಾಲದ ಚೆಂಗಂಡಕರಿ ಪ್ರದೇಶದ ನಿವಾಸಿಗಳಾದ ತಿಲಕನ್ ಮತ್ತು ಜೀಜಾ ದಂಪತಿಯ ಪುತ್ರ ಅನಂತಕೃಷ್ಣನ್ ಅಕಾ ಕಿಚ್ಚು (23) ಎಂದು ಗುರುತಿಸಲಾಗಿದೆ; ಮತ್ತು ಪಾಲಾ ಮೂಲದ ಶಿಬು ಮತ್ತು ದಿವಂಗತ ಬಿಂದು ಅವರ ಪುತ್ರಿ ಎಲಿಜಬೆತ್ (17).

ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸಗಾರ ಅನಂತಕೃಷ್ಣನ್ ಸೀಲಿಂಗ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಎಲಿಜಬೆತ್ ನೆಲದ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇಬ್ಬರೂ ನೆರೆಹೊರೆಯವರಾಗಿದ್ದರು.

ಬಾಲಕಿಯ ಕುಟುಂಬ ಅನಂತಕೃಷ್ಣನ ಮನೆಯ ಬಳಿ ಬಾಡಿಗೆಗೆ ನೆಲೆಸಿತ್ತು. ಸೋಮವಾರ ಸಂಜೆ ಬಾಲಕಿಯ ಹುಡುಕಾಟದ ವೇಳೆ ಶವಗಳು ಪತ್ತೆಯಾಗಿವೆ. ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದ ಎಲಿಜೆಬೆತ್ ಬೆಳಗ್ಗೆ ಪೂಚಕ್ಕಲ್‌ನಲ್ಲಿರುವ ತನ್ನ ಶಾಲೆಗೆ ಹೋಗುವುದಾಗಿ ಕುಟುಂಬಸ್ಥರಿಗೆ ಹೇಳಿ ಮನೆಯಿಂದ ಹೊರಟಿದ್ದಳು. ಆದರೆ, ಸಂಜೆಯಾದರೂ ಮನೆಗೆ ಹಿಂತಿರುಗದ ಕಾರಣ ಸಂಬಂಧಿಕರು ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾರೆ.

ನಂತರ ಹುಡುಕಾಟ ನಡೆಸಲಾಯಿತು, ಮತ್ತು ಅಂತಿಮವಾಗಿ, ಇಬ್ಬರೂ ಖಾಲಿ ನಿವೇಶನದಲ್ಲಿನ ಶೆಡ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ಚೇರ್ತಲ ತಾಲೂಕು ಆಸ್ಪತ್ರೆಯಲ್ಲಿ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ತನಿಖೆ ಆರಂಭವಾಗಿದೆ.

ವೀಡಿಯೊ – ರಸ್ತೆ ದಾಟಲು ಯತ್ನಿಸುತ್ತಿದ್ದ ಮಹಿಳೆಯೊಬ್ಬರು ಬಸ್‌ಗೆ ಸಿಲುಕಿ ಸ್ಥಳದಲ್ಲೇ ಮೃತ್ಯುವಶ – ಬಸ್ ಚಾಲಕ ಮತ್ತು ನಿರ್ವಾಹಕ ಪರಾರಿ

ಸೋಮವಾರ ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಮಹಿಳೆಯೊಬ್ಬರು ರಸ್ತೆ ದಾಟಲು ಯತ್ನಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದಾರೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ದೆಹಲಿಯ ಕರೋಲ್ ಬಾಗ್‌ನಲ್ಲಿ 27 ವರ್ಷದ ಮಹಿಳೆಯೊಬ್ಬರು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದಾಗ ಬಸ್‌ಗೆ ಡಿಕ್ಕಿ ಹೊಡೆದಿದ್ದಾರೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆರೋಪಿ ಚಾಲಕನನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ. ಮೃತರನ್ನು ದೆಹಲಿಯ ಶಾಸ್ತ್ರಿ ಪಾರ್ಕ್ ನಿವಾಸಿ ಸಪ್ನಾ ಯಾದವ್ ಎಂದು ಗುರುತಿಸಲಾಗಿದ್ದು, ಅವರು ಝಾಂಡೇವಾಲನ್‌ನ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಬೆಳಗ್ಗೆ 9 ಗಂಟೆಗೆ ಸಪ್ನಾ ತನ್ನ ಕೆಲಸದ ಸ್ಥಳಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕರೋಲ್‌ಬಾಗ್‌ನ ಫೈಜ್ ರಸ್ತೆಯಲ್ಲಿ ನಿಂತಿದ್ದ ಸಪ್ನಾ ಖಾಸಗಿ ಬಸ್‌ನ ಎಡಭಾಗದಿಂದ ರಸ್ತೆ ದಾಟಲು ಯತ್ನಿಸಿದರು.

ಆದರೆ ಬಸ್ಸು ಏಕಾಏಕಿ ಚಲಿಸಲು ಆರಂಭಿಸಿ ಆಕೆಯ ಮೇಲೆ ಹರಿದಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತದ ನಂತರ ಆರೋಪಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ಇಬ್ಬರೂ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ.

ಪೊಲೀಸರು ಬಸ್ ವಶಪಡಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ವೀಡಿಯೊ – ಹರ್ಭಜನ್ ಬಾಲನ್ನು ಚಿಂದಿ ಉಡಾಯಿಸಿದ ಕತ್ರಿನಾ – ಕೊನೆಯ ಬಾಲಿಗೆ ಸಿಕ್ಸರ್ ಬಾರಿಸಿದ ಕತ್ರಿನಾ ಕೈಫ್ 

ಬ್ಯಾಟರ್ ಕತ್ರಿನಾ ಕೈಫ್ ಹರ್ಭಜನ್ ಸಿಂಗ್ ಅವರನ್ನು ಎದುರಿಸುತ್ತಾರೆ. ಇದು ಸಂಭವಿಸಿದ್ದು ಪ್ರಚಾರ ಕಾರ್ಯಕ್ರಮದಲ್ಲಿ.

ಕತ್ರಿನಾ ಕೈಫ್ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾರತದ ಶ್ರೇಷ್ಠ ಸ್ಪಿನ್ನರ್‌ಗಳಲ್ಲಿ ಒಬ್ಬರಾದ ಹರ್ಭಜನ್ ಸಿಂಗ್ ಅವರ ಬೌಲಿಂಗ್ ಅನ್ನು ಎದುರಿಸಿದರು.

ಕತ್ರಿನಾ ಕೈಫ್ ಪ್ರಸ್ತುತ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರ ನಟಿಯರಲ್ಲಿ ಒಬ್ಬರು. ಹಿರಿತೆರೆಯಲ್ಲಿ ಈಕೆಯ ಕೈಚಳಕ ಎಲ್ಲರಿಗೂ ಗೊತ್ತಿದ್ದರೂ, ಭಾನುವಾರ ಆಕೆಯ ಕ್ರಿಕೆಟ್ ಕೌಶಲ್ಯಕ್ಕೆ ಅಭಿಮಾನಿಗಳು ಸಾಕ್ಷಿಯಾಗಿದ್ದರು.

ತನ್ನ ಮುಂಬರುವ ಚಿತ್ರ ‘ಫೋನ್ ಭೂತ್’ ಪ್ರಚಾರಕ್ಕಾಗಿ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಭಾರತದ ಗುಂಪು 2 ಪಂದ್ಯದ ಮೊದಲು ಸ್ಟಾರ್ ಸ್ಪೋರ್ಟ್ಸ್ ಸ್ಟುಡಿಯೋಗೆ ಬಂದರು.

ಅಲ್ಲಿ ಅವರು ಭಾರತದ ಶ್ರೇಷ್ಠ ಸ್ಪಿನ್ನರ್‌ಗಳಲ್ಲಿ ಒಬ್ಬರಾದ ಹರ್ಭಜನ್ ಸಿಂಗ್ ಅವರ ಬೌಲಿಂಗ್ ಅನ್ನು ಎದುರಿಸಿದರು. ಇದು ವಿನೋದ ತುಂಬಿದ ಸಂವಾದವಾಗಿದ್ದರೂ, ಕತ್ರಿನಾ ಹರ್ಭಜನ್ ವಿರುದ್ಧ ಚೆಂಡನ್ನು ಚೆನ್ನಾಗಿ ಮಿಡಲ್ ಮಾಡಿದರು.

ಈ ವೀಡಿಯೋವನ್ನು ಸ್ಟಾರ್ ಸ್ಪೋರ್ಟ್ಸ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ  ಪೋಸ್ಟ್ ಮಾಡಿದೆ.

ವಿಟ್ಲದಿಂದ ನಾಪತ್ತೆಯಾಗಿದ್ದ 29ರ ವಿವಾಹಿತ ಯುವತಿ ಪತ್ತೆ –  ಒಂದು ದಿನದೊಳಗೆ ಪತ್ತೆ ಹಚ್ಚಿದ ಪೊಲೀಸರು

ಎರಡು ದಿನಗಳ ಹಿಂದೆ ವಿಟ್ಲದಿಂದ  ನಾಪತ್ತೆಯಾಗಿ ಎಲ್ಲರಲ್ಲೂ ಆತಂಕ ಸೃಷ್ಟಿಸಿದ್ದ ಯುವತಿ ಇದೀಗ ನಿನ್ನೆ  ಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ವಿಟ್ಲ ಕಡಂಬು ನಿವಾಸಿಯಾಗಿದ್ದ ನಾಗೇಶ್ ಎಂಬವರ ಪತ್ನಿ ಕವಿತಾ (29) ನಾಪತ್ತೆಯಾಗಿದ್ದ ಯುವತಿ. 

ನಿನ್ನೆ ಸಂಜೆ ಮುಡಿಪು ಎಂಬಲ್ಲಿ ಈ ಯುವತಿಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.  ವಿಟ್ಲ – ಮಂಗಳೂರು ರಸ್ತೆಯಲ್ಲಿರುವ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಕವಿತಾ  ಅಕ್ಟೊಬರ್ 29ರಂದು ಸಂಜೆ ತಾನು ಕೆಲಸ ಮಾಡುತ್ತಿದ್ದ ಬೇಕರಿಯಿಂದ ಕೆಲಸ ಬಿಟ್ಟು ತೆರಳುವಾಗ ತಾನು ಇಂದು ತಾಯಿ ಮನೆಗೆ ಹೋಗುತ್ತಿದ್ದೇನೆಂದು ಸಹೋದ್ಯೋಗಿಗಳಲ್ಲಿ ಹೇಳಿಕೊಂಡಿದ್ದರು.

ತನ್ನ ಪತಿಗೂ ಕರೆ ಮಾಡಿ ತಾನು ತಾಯಿ ಮನೆಗೆ ಹೋಗುತ್ತಿರುವ ವಿಚಾರವನ್ನು ತಿಳಿಸಿದ್ದಳು ಎನ್ನಲಾಗಿದೆ. ಆದರೆ  ಮೀರಿದರೂ ತಾಯಿ ಮನೆಗೆ ತಲುಪಿಲ್ಲದಿದ್ದುದರಿಂದ ಆಕೆಯ ಸಹೋದರ ಗಿರೀಶ್ ಈ ವಿಚಾರವನ್ನು ಆಕೆಯ ಪತಿಗೆ ತಿಳಿಸಿದ್ದರು.

ಆಕೆಯ ಮೊಬೈಲ್ ಗೆ ಮೇಲಿಂದ ಮೇಲೆ ಕರೆಗಳನ್ನು ಮಾಡಿದಾಗ ಮೊಬೈಲ್ ಸ್ವಿಟ್ಚ್ ಆಫ್ ಬರುತ್ತಿತ್ತು. ಇದರಿಂದ ಆತಂಕಗೊಂಡ ಕವಿತಾ ಅವರ ಪತಿ ನಾಗೇಶ್ ಎಲ್ಲೆಡೆ ಹುಡುಕಾಡಿ ಕೊನೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಅದರಂತೆ ದೂರು ದಾಖಲಿಸಿದ ಪೊಲೀಸರು ನಿನ್ನೆ ಕವಿತಾ ಅವರನ್ನು ಮುಡಿಪು ಎಂಬಲ್ಲಿ ಪತ್ತೆಹಚ್ಚಿದ್ದಾರೆ. ಕವಿತಾ ಅವರು ಅಲ್ಲಿಗೆ ಯಾಕೆ ಹೋಗಿದ್ದರು ಯಾರಾದರೂ ಸಂಬಂಧಿಕರ ಮನೆಯಲ್ಲಿದ್ದರೇ ಮೊದಲಾದ ಮಾಹಿತಿಗಳೆಲ್ಲಾ ಇನ್ನಷ್ಟೇ ತಿಳಿದುಬರಬೇಕಾಗಿದೆ.