Wednesday, March 18, 2026
Home Blog Page 145

ಧರ್ಮಸ್ಥಳ – ಸುಬ್ರಹ್ಮಣ್ಯ ಮಧ್ಯೆ ಬಿಳಿನೆಲೆಯಲ್ಲಿ ಕಾರು ಮತ್ತು ಜೀಪು ಢಿಕ್ಕಿ, ಚಾಲಕರಿಬ್ಬರಿಗೂ ಗಾಯ 

ಧರ್ಮಸ್ಥಳ – ಸುಬ್ರಹ್ಮಣ್ಯ ಮಧ್ಯೆ ಬಿಳಿನೆಲೆಯಲ್ಲಿ ಕಾರು ಮತ್ತು ಜೀಪು ಢಿಕ್ಕಿ, ಚಾಲಕರಿಬ್ಬರಿಗೂ ಗಾಯ 

ಧರ್ಮಸ್ಥಳ – ಸುಬ್ರಹ್ಮಣ್ಯ ಮಧ್ಯೆ ಬಿಳಿನೆಲೆಯಲ್ಲಿ ಕಾರು ಮತ್ತು ಜೀಪು ಪರಸ್ಪರ ಢಿಕ್ಕಿಯಾಗಿ, ಚಾಲಕರಿಬ್ಬರೂ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಜಿಲ್ಲೆಯ ಎರಡು ಪುಣ್ಯ ತೀರ್ಥಕ್ಷೇತ್ರಗಳನ್ನು ಸಂಪರ್ಕಿಸುವ ರಸ್ತೆಯ ಬಿಳಿನೆಲೆ ಎಂಬಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಇಂದು ಭಾನುವಾರ ಬೆಳಗ್ಗೆ ಈ ಅಪಘಾತ ನಡೆದಿದೆ ಎಂದು ವರದಿಯಾಗಿದೆ. ಜೀಪು ಸುಬ್ರಹ್ಮಣ್ಯ ಕಡೆಯಿಂದ ಕಡಬಕ್ಕೆ ಆಗಮಿಸುತ್ತಿತ್ತು.

ಹುಂಡೈ ಕಾರು ಸುಬ್ರಹ್ಮಣ್ಯಕ್ಕೆ ಹೋಗುತ್ತಿತ್ತು. ಬಿಳಿನೆಲೆ ಸೇತುವೆಯ ಸಮೀಪ ಪರಸ್ಪರ ಢಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಗಾಯಗೊಂಡ ಇಬ್ಬರು ಚಾಲಕರನ್ನೂ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

‘ನನಗೆ ಗಂಡು ಮಗು ಬೇಡ’ ಎಂದು 20 ದಿನಗಳ ಹಸುಳೆಯನ್ನು ಬಾವಿಗೆಸೆದ ತಾಯಿ – ಸುಳ್ಯ ಕೂತ್ಕುಂಜ ಸಮೀಪ ಹೃದಯ ವಿದ್ರಾವಕ ಘಟನೆ

‘ನನಗೆ ಗಂಡು ಮಗು ಬೇಡ’ ಎಂದು 20 ದಿನಗಳ ಹಸುಳೆಯನ್ನು ತಾಯಿಯೊಬ್ಬಳು ಬಾವಿಗೆ ಎಸೆದಿದ್ದಾಳೆ. ಈ ಘಟನೆ ನಡೆದದ್ದು ಸುಳ್ಯ ತಾಲೂಕಿನ ಕೂತ್ಕುಂಜ ಗ್ರಾಮದಲ್ಲಿ.  

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ (Sullia) ತಾಲೂಕಿನ ಕೂತ್ಕುಂಜ (Kuthkunja) ಗ್ರಾಮದ ಬಸ್ತಿಕಾಡು (bastikadu) ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.  ಮಗುವನ್ನು ಬಾವಿಗೆ ಎಸೆದ ಕರುಣೆಯಿಲ್ಲದ ತಾಯಿ ಪವಿತ್ರ (Pavithra) ಎಂದು ಗುರುತಿಸಲಾಗಿದ್ದು, ಆಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ.

ಆಕೆ ಮಗುವನ್ನು ಬಾವಿಗೆಸೆಯುವ ಹೊತ್ತಿನಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ವರದಿಗಳ ಪ್ರಕಾರ ಪವಿತ್ರಾಳಿಗೆ ಮೊದಲೊಂದು ಮದುವೆಯಾಗಿತ್ತು. ನಾಲ್ಕು ವರ್ಷಗಳ ಹಿಂದೆ ಆದ ಮದುವೆ ಪತಿ-ಪತ್ನಿಯರ ನಡುವಿನ ಸಾಮರಸ್ಯದ ಕೊರತೆಯಿಂದ ವಿಚ್ಛೇದನದಲ್ಲಿ ಕೊನೆಗೊಂಡಿತ್ತು.

ಆಮೇಲೆ ಒಂದು ವರ್ಷದ ಹಿಂದೆ ಇನ್ನೊಬ್ಬನನ್ನು ಮದುವೆಯಾಗಿದ್ದರು. ಎರಡು ತಿಂಗಳ ನಂತರ ಗರ್ಭಿಣಿಯಾಗಿದ್ದ ಪವಿತ್ರಾ ತಾಯಿ ಮನೆಗೆ ಬಂದು ವಾಸಿಸುತ್ತಿದ್ದರು. ಆಗಲೇ ಗರ್ಭಿಣಿಯಾಗಿದ್ದ ಸಮಯದಲ್ಲೇ ತನಗೆ ಹೆಣ್ಣು ಮಗುವೆಂದರೆ ಇಷ್ಟ ಎಂದು ಆಕೆ ಹೇಳುತ್ತಿದ್ದಳಂತೆ.

ಆ ಸಮಯದಲ್ಲಿ ಮಾನಸಿಕ ಖಿನ್ನತೆಗಾಗಿ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದರು. ಅಕ್ಟೊಬರ್ 10ರಂದು ಪ್ರಸವಿಸಿದ ಆಕೆ ಗಂಡು ಮಗು ಹುಟ್ಟಿದ ನಿರಾಸೆಯಲ್ಲಿದ್ದರು ಎಂದು ಹೇಳಲಾಗುತ್ತಿದೆ.

ಇಷ್ಟವಿಲ್ಲದ ಗಂಡು ಮಗು ನನಗೆ ಬೇಡ ಎಂದು ಹೇಳಿ ಆಕೆ ಮಗುವನ್ನು ನಿನ್ನೆ ಬಾವಿಗೆಸೆದಿದ್ದಳು. ಸ್ಥಳೀಯರು ಕೂಡಲೇ ಮಗುವನ್ನು ಬಾವಿಯಿಂದ ಮೇಲಕ್ಕೆತ್ತಿ ಪಂಜ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ‘ಮಗು ಈಗಾಗಲೇ ಮೃತಪಟ್ಟಿದೆ’ ಎಂದು ವೈದ್ಯರು ಹೇಳಿದ್ದಾರೆ.

ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಧಾವಿಸಿದ್ದು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. 

ಸಿಯೋಲ್‌ನಲ್ಲಿ ಹ್ಯಾಲೋವೀನ್ ಹಬ್ಬದ ಜನಸಂದಣಿಯಲ್ಲಿ ಭೀಕರ ಕಾಲ್ತುಳಿತ ಮತ್ತು ಹೃದಯಾಘಾತ ಸರಣಿ – ಸುಮಾರು 151 ಮಂದಿ ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ

ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ಹ್ಯಾಲೋವೀನ್ ಹಬ್ಬಗಳ ಸಂದರ್ಭದಲ್ಲಿ ದೊಡ್ಡ ಜನಸಂದಣಿಯಿಂದ ಹತ್ತಿಕ್ಕಲ್ಪಟ್ಟ ನಂತರ ಕನಿಷ್ಠ 151 ಜನರು ಸತ್ತರು ಮತ್ತು 150 ಇತರರು ಗಾಯಗೊಂಡರು.

ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನಲ್ಲಿ ಹ್ಯಾಲೋವೀನ್ ಹಬ್ಬದ ಸಂದರ್ಭದಲ್ಲಿ ಕಿರಿದಾದ ರಸ್ತೆಯಲ್ಲಿ ಮುಂದಕ್ಕೆ ತಳ್ಳುತ್ತಿದ್ದ ದೊಡ್ಡ ಜನಸಮೂಹದಿಂದ ಹತ್ತಿಕ್ಕಲ್ಪಟ್ಟ ನಂತರ ಕನಿಷ್ಠ 151 ಜನರು ಸಾವನ್ನಪ್ಪಿದ್ದಾರೆ ಮತ್ತು 150 ಇತರರು ಗಾಯಗೊಂಡಿದ್ದಾರೆ ಎಂದು ದಕ್ಷಿಣ ಕೊರಿಯಾದ ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ರಾತ್ರಿ ಇಟಾವಾನ್‌ನ ವಿರಾಮ ಜಿಲ್ಲೆಯಲ್ಲಿ ನಡೆದ ಕಾಲ್ತುಳಿತದ ನಂತರ ತುರ್ತು ಕಾರ್ಯಕರ್ತರು ಗಾಯಾಳುಗಳನ್ನು ಸಿಯೋಲ್‌ನಾದ್ಯಂತ ಆಸ್ಪತ್ರೆಗಳಿಗೆ ಸಾಗಿಸುವುದನ್ನು ಮುಂದುವರೆಸುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸಿಯೋಲ್‌ನ ಯೋಂಗ್ಸಾನ್ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಚೋಯ್ ಸಿಯೋಂಗ್-ಬೀಮ್ ಹೇಳಿದ್ದಾರೆ.

ಮೃತ 13 ಮಂದಿಯ ಶವಗಳನ್ನು ಆಸ್ಪತ್ರೆಗಳಿಗೆ ಕಳುಹಿಸಲಾಗಿದ್ದು, ಉಳಿದ ಶವಗಳು ಇನ್ನೂ ಬೀದಿಯಲ್ಲಿವೆ ಎಂದು ಅವರು ಹೇಳಿದರು. ಸಿಯೋಲ್‌ನ ಪ್ರಮುಖ ಪಾರ್ಟಿ ಸ್ಥಳವಾದ ಹ್ಯಾಮಿಲ್ಟನ್ ಹೋಟೆಲ್ ಬಳಿಯ ಕಿರಿದಾದ ಅಲ್ಲೆಯಲ್ಲಿ ದೊಡ್ಡ ಜನಸಮೂಹವು ಮುಂದಕ್ಕೆ ತಳ್ಳಲು ಪ್ರಾರಂಭಿಸಿದ ನಂತರ ಜನರು ಕಾಲ್ತುಳಿತದಿಂದ ಹತ್ತಿಕ್ಕಲ್ಪಟ್ಟರು ಎಂದು ನಂಬಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ಹ್ಯಾಲೋವೀನ್ ಆಚರಣೆಯ ಸಂದರ್ಭದಲ್ಲಿ ಹತ್ತಾರು ಜನರು ನಿಗೂಢ ಹೃದಯ ಸ್ತಂಭನ ಲಕ್ಷಣಗಳಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸಿಯೋಲ್‌ನಲ್ಲಿ ಲಭ್ಯವಿರುವ ಎಲ್ಲಾ ಸಿಬ್ಬಂದಿ ಸೇರಿದಂತೆ ರಾಷ್ಟ್ರದಾದ್ಯಂತ 400 ಕ್ಕೂ ಹೆಚ್ಚು ತುರ್ತು ಕಾರ್ಯಕರ್ತರು ಮತ್ತು 140 ವಾಹನಗಳನ್ನು ಬೀದಿಗೆ ನಿಯೋಜಿಸಲಾಗಿದೆ.

ತುರ್ತು ರೋಗಿಗಳ ನಿಖರ ಸಂಖ್ಯೆಯನ್ನು ನಿರ್ಧರಿಸಲು ಅಧಿಕಾರಿಗಳು ಇನ್ನೂ ಪ್ರಯತ್ನಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ಪ್ರತ್ಯೇಕವಾಗಿ ಹೇಳಿಕೆಯಲ್ಲಿ ತಿಳಿಸಿದೆ. ದೃಶ್ಯದಿಂದ ಟಿವಿ ದೃಶ್ಯಗಳು ಮತ್ತು ಫೋಟೋಗಳು ಭಾರೀ ಪೊಲೀಸ್ ಉಪಸ್ಥಿತಿ ಮತ್ತು ತುರ್ತು ಕೆಲಸಗಾರರನ್ನು ಸ್ಟ್ರೆಚರ್‌ಗಳಲ್ಲಿ ಸ್ಥಳಾಂತರಿಸುವ ನಡುವೆ ಆಂಬ್ಯುಲೆನ್ಸ್ ವಾಹನಗಳು ಬೀದಿಗಳಲ್ಲಿ ಸಾಲುಗಟ್ಟಿ ನಿಂತಿರುವುದನ್ನು ತೋರಿಸಿದೆ.

ತುರ್ತು ಕೆಲಸಗಾರರು ಮತ್ತು ಪಾದಚಾರಿಗಳು ಬೀದಿಗಳಲ್ಲಿ ಬಿದ್ದಿರುವ ಜನರ ಮೇಲೆ ಸಿಪಿಆರ್ ಅನ್ನು ಪ್ರದರ್ಶಿಸುತ್ತಿರುವುದು ಕಂಡುಬಂದಿದೆ. ಒಂದು ವಿಭಾಗದಲ್ಲಿ, ಅರೆವೈದ್ಯರು ನೀಲಿ ಕಂಬಳಿಗಳ ಅಡಿಯಲ್ಲಿ ಚಲನರಹಿತವಾಗಿ ಮಲಗಿರುವ ಒಂದು ಡಜನ್ ಅಥವಾ ಹೆಚ್ಚಿನ ಜನರ ಸ್ಥಿತಿಯನ್ನು ಪರಿಶೀಲಿಸುತ್ತಿರುವುದು ಕಂಡುಬಂದಿದೆ.

ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು, ಹ್ಯಾಲೋವೀನ್ ಹಬ್ಬಗಳಿಗಾಗಿ ಜನರ ಗುಂಪೊಂದು ನೆರೆದಿದ್ದ ಇಟಾವೊನ್‌ನ ಬೀದಿಗಳಲ್ಲಿ ಸೇರಿದಾಗ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿಸಲಾಗಿದೆ ಎಂದು ಹೇಳಿದರು. ಘಟನೆಯ ವಿವರಗಳು ಇನ್ನೂ ತನಿಖೆಯಲ್ಲಿದೆ ಎಂದು ಅಧಿಕಾರಿಯು ಹೇಳಿದರು.

ಅಪರಿಚಿತ ಸೆಲೆಬ್ರಿಟಿಯೊಬ್ಬರು ಅಲ್ಲಿಗೆ ಭೇಟಿ ನೀಡಿರುವುದನ್ನು ಕೇಳಿದ ನಂತರ ಹೆಚ್ಚಿನ ಸಂಖ್ಯೆಯ ಜನರು ಇಟಾವಾನ್ ಬಾರ್‌ಗೆ ಧಾವಿಸಿದ ನಂತರ ಕ್ರಷ್ ಸಂಭವಿಸಿದೆ ಎಂದು ಕೆಲವು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಸ್ಥಳೀಯ ಮಾಧ್ಯಮಗಳು ಹೇಳುವಂತೆ ಸುಮಾರು 100,000 ಜನರು ಹ್ಯಾಲೋವೀನ್ ಹಬ್ಬಗಳಿಗಾಗಿ ಇಟಾವಾನ್ ನ ಸಣ್ಣ ಸಣ್ಣ ಬೀದಿಗಳಲ್ಲಿ ಸೇರಿದ್ದಾರೆ.

ಇಂದು ತಾಳಮದ್ದಳೆಯಲ್ಲಿ ಕರ್ಣಪರ್ವ

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸುತ್ತಿರುವ ವಿಶಿಷ್ಟ ಅರ್ಥಪೂರ್ಣ ಕಾರ್ಯಕ್ರಮ  ‘ಅರ್ಥಾಂತರಂಗ’ 14ನೇ ಸರಣಿಯು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಇಂದು (ದಿನಾಂಕ 30.10.2022ರಂದು) ನಡೆಯಲಿದೆ.

ಇಂದು ದಿನಾಂಕ 30.10.2022ರ ಆದಿತ್ಯವಾರ ಬೆಳಗ್ಗೆ 9 ಘಂಟೆಯಿಂದ ಆರಂಭವಾಗಲಿರುವ ಈ ‘ಅರ್ಥಾಂತರಂಗ – 14’ ಕಾರ್ಯಕ್ರಮದಲ್ಲಿ ‘ತಾಳಮದ್ದಳೆಯಲ್ಲಿ ಕರ್ಣಪರ್ವ’ ಎಂಬ ಬಗ್ಗೆ ಸಂವಾದ ನಡೆಯಲಿದೆ.

ಅರ್ಥಾಂತರಂಗ ಕಾರ್ಯಕ್ರಮವು ಈ ವರೆಗೆ 13 ಭಾಗಗಳನ್ನು ಕಂಡಿದೆ.

14ನೇ ಕಾರ್ಯಕ್ರಮವಾಗಿ ಖ್ಯಾತ ಪ್ರಸಂಗಕರ್ತೃ ಗೇರುಸೊಪ್ಪೆ ಶಾಂತಪ್ಪಯ್ಯ ಅವರ ‘ಕರ್ಣಪರ್ವ’ (ಕರ್ಣಾರ್ಜುನರ ಕಾಳಗ) ಪ್ರಸಂಗದ ಪ್ರಾತ್ಯಕ್ಷಿಕೆ ಸಹಿತ ಕಾರ್ಯಾಗಾರವನ್ನು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಆ ದಿನ ನಡೆಸಲಾಗುವುದು.

ಕಾರ್ಯಕ್ರಮದ ಸಂಪೂರ್ಣ ವಿವರಗಳಿಗೆ ಕಾರ್ಯಕ್ರಮದ ಆಹ್ವಾನಪತ್ರಿಕೆಯ ಚಿತ್ರಗಳನ್ನು ನೋಡಿ 

ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ 1991-92ನೇ ಸಾಲಿನ ಪಿಯುಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ

ಶೈಕ್ಷಣಿಕ ಹಾಗೂ ಕೌಟುಂಬಿಕ ಜೀವನವನ್ನು ಹೊಂದಾಣಿಕೆ ಮಾಡಿಕೊಂಡು ನಡೆಸುವ ಜೀವನ ಮಾನವನ ಬದುಕಿನಲ್ಲಿ ಅತ್ಯಮೂಲ್ಯ ಎಂದು ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಕೆ.ಆರ್. ಗೋಪಾಲಕೃಷ್ಣ ಹೇಳಿದರು.

ಅವರು ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನ 1991-92ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಹಾಗೂ ನಿವೃತ್ತ ಗುರುಗಳ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಮನುಷ್ಯನ ಹೃದಯ ದೇವಾಲಯ ಸಮಾನ. ನಾವು ಮಾಡುವ ಕೆಲಸವನ್ನು ಪ್ರೀತಿಸಿದಾಗ ಸಮಾಜ ಮತ್ತು ಜನರು ನಮ್ಮನ್ನು ಗುರುತಿಸುತ್ತಾರೆ. ಸಮಾಜದಲ್ಲಿ ಗುರು ಮತ್ತು ಶಿಷ್ಯರ ನಡುವೆ ಬಂಧುತ್ವ ಇರಬೇಕು. ಆಗ ಗುರು ಮತ್ತು ಶಿಷ್ಯರ ಜೀವನ ಪರಿಪೂರ್ಣವಾಗುತ್ತದೆ ಎಂದು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ನಿವೃತ್ತ ಶಿಕ್ಷಕಿ ಶ್ರೀಮತಿ ಸರೋಜಿನಿ ನಾಗಪ್ಪಯ್ಯ ಶುಭ ಹಾರೈಸಿ ಹಿರಿಯ ವಿದ್ಯಾರ್ಥಿಗಳು ಮಾಡುತ್ತಿರುವ ಈ  ಕಾರ್ಯ ಸಮಾಜಕ್ಕೆ ಮಾದರಿಯಾಗಲಿ ಎಂದು ಶುಭ ಹಾರೈಸಿದರು. ಸಭಾಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲರಾದ ಶ್ರೀ ಮಂಟಯ್ಯ ಮಾತನಾಡಿ ಕಿರಿಯರು ಹಿರಿಯರ ನಡೆ-ನುಡಿಗಳನ್ನು ನೋಡಿ ಅನುಸರಿಸುತ್ತಾರೆ. ಹಿರಿಯರು ತೋರಿಸಿಕೊಟ್ಟ  ಮಾರ್ಗದಲ್ಲಿ ಮುನ್ನಡೆಯುತ್ತಾರೆ ಎಂದು ನುಡಿದರು.

ಈ ಸಂದರ್ಭದಲ್ಲಿ ಈ ವರ್ಷ ಉಪನ್ಯಾಸಕ ವೃತ್ತಿಯಿಂದ ನಿವೃತ್ತರಾದ ಸಮಾಜ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಚಂದ್ರಮುಖಿ ಹಾಗೂ ಕಛೇರಿ ಸಹಾಯಕ ಸಿಬ್ಬಂದಿ ಶ್ರೀಮತಿ ಚಿತ್ರಾವತಿ ಇವರನ್ನು ಶಾಲು ಹೊದಿಸಿ, ಹಾರ, ಹಣ್ಣು ಹಂಪಲುಗಳನ್ನು ಸಮರ್ಪಿಸಿ ಗೌರವಿಸಲಾಯಿತು. ಶ್ರೀಮತಿ ತೇಜಕುಮಾರಿ ಮತ್ತು ಶ್ರೀಮತಿ ನಳಿನಿ ರೈ ಸನ್ಮಾನಿತರ ಪರಿಚಯ ಮಾಡಿದರು.

ಈ ಸಂದರ್ಭದಲ್ಲಿ ಸತತವಾಗಿ 47 ಬಾರಿ ರಕ್ತದಾನ ಮಾಡಿದ ಸದ್ರಿ ವಿದ್ಯಾರ್ಥಿ ಬಳಗದ ಶ್ರೀ ಪದ್ಮನಾಭ ರೈ ಅರೆಪ್ಪಾಡಿ, ಹಾಗೂ ಪ್ರಸ್ತುತ ಮೂಡಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ, ಪ್ರಶಸ್ತಿ ಪುರಸ್ಕೃತ ಆರೋಗ್ಯ ಸಹಾಯಕಿ ಶ್ರೀಮತಿ ಸರಸ್ವತಿ ಇವರನ್ನು ಶಾಲು ಹೊದಿಸಿ ಗೌರವಿಸಲಾಯಿತು.

ವಿದ್ಯಾರ್ಥಿ ಬಳಗದ ಪರವಾಗಿ ಶ್ರೀ ದಿನೇಶ್ ಅಡ್ಕಾರು, ಶ್ರೀ ಈಶ್ವರ ಉಳಿತ್ತಾಯ, ಶ್ರೀ ಪುಷ್ಪರಾಜ್, ಶ್ರೀ ರಮೇಶ್ ರಾವ್ ಮತ್ತು ವೆಂಕಟೇಶ್ ಪ್ರಸಾದ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಶ್ರೀ ಪ್ರಕಾಶ್ ವಾಗ್ಲೆ ಪ್ರಾರ್ಥಿಸಿದರು. ಶ್ರೀ ಜಯಪ್ರಕಾಶ್ ಬೈತಡ್ಕ ಸ್ವಾಗತಿಸಿ, ಶ್ರೀ ನವೀನ್ ರೈ ಬಿಜಳ ವಂದಿಸಿದರು. ಶ್ರೀ ಹರೀಶ್ ರಾವ್ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ನಿವೃತ್ತ ಉಪನ್ಯಾಸಕಿ ಶ್ರೀಮತಿ ಸುಕನ್ಯ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಜಾತ ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ 1991-92ನೇ ಸಾಲಿನ ವಿದ್ಯಾರ್ಥಿ ಬಳಗದ ಪರವಾಗಿ ಸಹ ಭೋಜನ ಏರ್ಪಡಿಸಲಾಯಿತು.

ಕಾರ್ಯಕ್ರಮಕ್ಕೆ ಹಾಜರಿದ್ದ ಹಿರಿಯ ವಿದ್ಯಾರ್ಥಿಗಳು ತಮ್ಮ ಕೈಲಾದ ರೀತಿಯಲ್ಲಿ ಸಹಕಾರ ನೀಡುವ ಭರವಸೆಯೊಂದಿಗೆ ಸಂಸ್ಥೆಯ ಅಭಿವೃದ್ಧಿ ನಿಧಿಗೆ ದೇಣಿಗೆಯನ್ನು ಸಂಗ್ರಹಿಸಿ ಪ್ರಾಂಶುಪಾಲರ ಮೂಲಕ ಹಸ್ತಾಂತರಿಸಲಾಯಿತು.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯೊಂದಿಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ : ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು ಇವರ ವತಿಯಿಂದ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ “ಪ್ರತಿಭಾ ಕಾರಂಜಿ”ಯಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ

10ನೇ ತರಗತಿಯ ಸಾನ್ವಿ ಕಜೆ (ಡಾ. ಚರಣ್ ಕಜೆ, ಡಾ.ರಮ್ಯಾ ಕಜೆ ದಂಪತಿ ಪುತ್ರಿ) ಗಝಲ್ ನಲ್ಲಿ ಪ್ರಥಮ, 10ನೇ ತರಗತಿಯ ಶರಣ್  (ಸೀತಾರಾಮ ರೈ, ಸವಿತಾ ರೈ ದಂಪತಿ ಪುತ್ರ) ಹಾಸ್ಯದಲ್ಲಿ ದ್ವಿತೀಯ, 10ನೇ ತರಗತಿಯ ಧನುಷ್ ರಾಮ್(ದಿನೇಶ್ ಪ್ರಸನ್ನ , ಉಮಾ.ಡಿ. ಪ್ರಸನ್ನ ದಂಪತಿ ಪುತ್ರ)

ಮತ್ತು ಹಿಮಾನಿ (ಚಿದಾನಂದ, ಶೋಭಾ ದಂಪತಿ ಪುತ್ರಿ) ಇವರ ತಂಡ ರಸಪ್ರಶ್ನೆಯಲ್ಲಿ ದ್ವಿತೀಯ, 9ನೇ ತರಗತಿಯ ಅಮೋಘಕೃಷ್ಣ (ಬಾಲಕೃಷ್ಣ ಭಟ್, ಸುಮಿತ್ರಾ ಭಟ್ ದಂಪತಿ ಪುತ್ರ) ಜನಪದಗೀತೆಯಲ್ಲಿ  ಪ್ರಥಮ, 

10ನೇ ತರಗತಿಯ ಅರ್ಚನಾ ಕಿಣಿ (ಹರೀಶ್ ಕಿಣಿ, ವಿನಯಾ ಕಿಣಿ ದಂಪತಿ ಪುತ್ರಿ) ಸಂಸ್ಕೃತ ಭಾಷಣದಲ್ಲಿ ಪ್ರಥಮ,  10ನೇ ತರಗತಿಯ ತೇಜ ಚಿನ್ಮಯ ಹೊಳ್ಳ (ಹರೀಶ್ ಹೊಳ್ಳ, ಸುಚಿತ್ರಾ ಹೊಳ್ಳ ದಂಪತಿ ಪುತ್ರ)ಭಾವಗೀತೆಯಲ್ಲಿ  ಪ್ರಥಮ,

10ನೇ ತರಗತಿಯ ಧಾತ್ರಿ (ದಿನೇಶ್, ಪದ್ಮಲಕ್ಷ್ಮೀ ದಂಪತಿ ಪುತ್ರಿ) ಸಾಮಾನ್ಯ ಕನ್ನಡ ಭಾಷಣದಲ್ಲಿ ತೃತೀಯ ಬಹುಮಾನ ಪಡೆದುಕೊಂಡು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಿಗೆ ಆಯ್ಕೆಯಾಗಿರುತ್ತಾರೆ.

ಮಾತ್ರವಲ್ಲದೆ, ಶಾಲಾ ತಂಡ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮೊದಲ ಮದುವೆ ಮುಚ್ಚಿಟ್ಟು ಇಂದು ಎರಡನೇ ಮದುವೆಯಾಗಿ, ನಾಳೆಯೇ ಮಾಲ್ಡೀವ್ಸ್ ಗೆ ಹನಿಮೂನಿಗೆ ಟಿಕೆಟ್ – ಇನ್ನೇನು ತಾಳಿಕಟ್ಟಬೇಕು, ಅಷ್ಟರಲ್ಲಿ….

ಅದೊಂದು ಮದುವೆಯ ಸಂಭ್ರಮದ ಸನ್ನಿವೇಶ, ಹುಡುಗಿಯ ಕಡೆಯವರಿಗೆ ಒಳ್ಳೆ ಹುಡುಗ ಸಿಕ್ಕಿದ ಎಂಬ ಸಂತೋಷ. ನಾಳೆಯೇ ಮಾಲ್ಡೀವ್ಸ್ ಗೆ ಹನಿಮೂನಿಗೆ ಟೆಕೆಟ್ ಬೇರೆ  ಬುಕ್ ಆಗಿದೆ.

ಆದರೆ ಮದುಮಗ ವಧುವಿಗೆ ತಾಳಿ ಕಟ್ಟಲು ಮುಂದಾಗಿದ್ದ ವೇಳೆಯಲ್ಲಿ ಬಂದ ಫೋನ್ ಕರೆ ಇಡೀ ಮದುವೆ ಮಂಟಪದಲ್ಲಿ ಕೋಲಾಹಲ ಸೃಷ್ಟಿಸಿದ್ದು, ಹುಡುಗಿಯ ಮನೆಯವರಿಗೆ ಸಿಕ್ಕ ಫೋಟೋ ಇಡೀ ಮದುವೆ ಸಂಭ್ರಮದಲ್ಲಿ ಸಿಡಿಲು ಬಡಿದಂತಾಗಿತ್ತು.

ಹಾಸನ: ಹಾಸನದ ಎಂ.ಜಿ.ರಸ್ತೆ ಬಳಿ ಇರೋ ಮದುವೆ ಮಂಟಪದಲ್ಲಿ ಇಂದು (28.102022) ವಿವಾಹ ಮಹೋತ್ಸವ ನೆರವೇರಿತು. ಅದೂ ಅಲ್ಲದೆ ಮರುದಿನ (ಆ.29) ಬೆಳಗ್ಗೆ ಹನಿಮೂನ್ ಗೆ ಮಾಲ್ಡೀವ್ಸ್ ಗೆ ತೆರಳಲು ವಿಮಾನ ಟಿಕೆಟ್ ಕೂಡ ಬುಕ್ ಮಾಡಲಾಗಿತ್ತು. ಆದರೆ ವಧುವಿನ ಅದೃಷ್ಟವೋ ಅಥವಾ ಹುಡುಗಿಯ ಪೋಷಕರ ಪುಣ್ಯವೋ ಏನೋ, ಕೊನೆಯ ಕ್ಷಣದಲ್ಲಿ ಬಂದ ಫೋಟೋವೊಂದು ವರನ ನಿಜವಾದ ಮುಖವಾಡವನ್ನು ಬಯಲು ಮಾಡಿದೆ.

ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮದುವೆಯಾಗಿದ್ದ ಮಧುಸೂದನ್ ಆಕೆಯಿಂದ ಲಕ್ಷಗಟ್ಟಲೆ ವರದಕ್ಷಿಣೆ ಹಾಗೂ ಚಿನ್ನಾಭರಣ ಪಡೆದು ಮತ್ತೊಂದು ಮದುವೆಯಾಗಲು ಸಿದ್ಧನಾಗಿದ್ದ. ಆದರೆ ಮೊದಲ ಹೆಂಡತಿಯ ಪ್ರಯತ್ನದಿಂದ ವಂಚಕನ ವಿನಾಶಕಾರಿ ಯೋಜನೆ ಬಹಿರಂಗವಾಗಿದೆ.

ವರನು ಈಗಾಗಲೇ ವಿವಾಹಿತ ಎಂದು ತಿಳಿದ ತಕ್ಷಣ, ಹುಡುಗಿಯ ಕಡೆಯವರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆಯಾಗಲು ಯತ್ನಿಸುತ್ತಿದ್ದು, ಕೊನೆ ಗಳಿಗೆಯಲ್ಲಿ ಸಿಕ್ಕ ಫೋಟೋವೊಂದರಿಂದ ಹುಡುಗಿ ಬಚಾವಾಗಿದ್ದಾಳೆ.

ಮಧುಸೂದನ್, ಬೆಂಗಳೂರಿನ ಚಿಕ್ಕಸಂದ್ರದ ಕುವೆಂಪು ಬಡಾವಣೆ ನಿವಾಸಿ. ಖಾಸಗಿ ಕಂಪನಿಯಲ್ಲಿ ಕೆಲಸ, ಕೈತುಂಬಾ ಸಂಬಳವೂ ಇದೆ. ಈತನ ಅಂದವನ್ನು ನೋಡಿದ ಹಾಸನದ ಹುಡುಗಿಯ ಮನೆಯವರು ಮಗಳು ಚೆನ್ನಾಗಿ ಜೀವನ ನಡೆಸಬಹುದೆಂದು ನಂಬಿ ಮಗಳ ಮದುವೆ ಮಾಡಲು ನಿರ್ಧರಿಸಿದರು.

ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ತನ್ನ ಸಂಬಂಧಿಯನ್ನು ಮದುವೆಯಾಗಿದ್ದ ಮಧುಸೂದನ್ ಆಕೆಯಿಂದ ದೂರವಾಗಿ ಹಳೆ ಮದುವೆಯನ್ನು ಮುಚ್ಚಿಟ್ಟು ಹಾಸನದಲ್ಲಿ ಹುಡುಗಿಯೊಬ್ಬಳನ್ನು ನೋಡಿ ಮದುವೆಗೆ ತಯಾರಿ ನಡೆಸಿದ್ದ. ಮೊದಲ ಪತ್ನಿಗೆ ತಿಳಿದಾಗ ಹೇಗೋ ಕೊನೆ ಕ್ಷಣದಲ್ಲಿ ಹುಡುಗಿ ತನ್ನ ಮನೆಯವರನ್ನು ಸಂಪರ್ಕಿಸಿ ಮದುವೆಯ ಫೋಟೋ ಕಳುಹಿಸಿದ್ದಳು. ಈ ವಿಚಾರ ತಿಳಿದ ಕೂಡಲೇ ಮದುವೆ ನಿಲ್ಲಿಸಿದ್ದಾರೆ. ಬಳಿಕ ಮಧುಸೂದನಿಗೆ ಧರ್ಮದೇಟು ನೀಡಿದರು.

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಧುಸೂದನ್ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು, ಕೌಟುಂಬಿಕ ಕಲಹದಿಂದ ಪತ್ನಿಯಿಂದ ಬೇರ್ಪಟ್ಟಿದ್ದರು, ಅವರ ಪ್ರಕಾರ ಇನ್ನೂ ಮೊದಲ ಪತ್ನಿಗೆ ಕಾನೂನು ಬದ್ಧವಾಗಿ ವಿಚ್ಛೇದನ ನೀಡಿಲ್ಲ, ಮೊದಲ ಮದುವೆ ವಿಚಾರ ಮರೆಮಾಚುತ್ತಲೇ ಮತ್ತೊಂದು ಮದುವೆಗೆ ಪ್ಲಾನ್ ಮಾಡಿದ್ದರು.

ದೂರದ ಹಾಸನದಲ್ಲಿ ಹುಡುಗಿ ಹುಡುಕುತ್ತಿದ್ದ ಈತ ಇಲ್ಲಿಯ ಹುಡುಗಿಯನ್ನು ಕಂಡರೆ ಹಳೇ ಮದುವೆಯ ವಿಚಾರ ತಿಳಿಯಬಹುದು ಎಂಬ ಕಾರಣದಿಂದ. ವಧುವಿನ ಪೋಷಕರ ದೂರಿನಂತೆ ಬಡಾವಣೆ ಪೊಲೀಸರು ಆರೋಪಿ ಮಧುಸೂದನ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ.

16 ವರ್ಷದ 3 ಕಾಲೇಜು ಹುಡುಗಿಯರು ಶಾಲೆಯ ಕ್ಲಾಸ್ ಬಂಕ್ ಮಾಡಿ ದೂರಕ್ಕೆ ಪ್ರಯಾಣಿಸಿ ವಿಷ ಸೇವನೆ – ಇಬ್ಬರು ಸಾವು, ಇನ್ನೊಬ್ಬಳ ಸ್ಥಿತಿ ಚಿಂತಾಜನಕ 

ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು 16 ವರ್ಷದ ಬಾಲಕಿಯರು ವಿವಿಧ ಕಾರಣಗಳಿಗಾಗಿ ಒಟ್ಟಿಗೆ ವಿಷ ಸೇವಿಸಿದ ನಂತರ ಸಾವನ್ನಪ್ಪಿದ್ದಾರೆ ಮತ್ತು ಅವರ ಸಹಪಾಠಿ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಾಲಕಿಯರು ಸೆಹೋರ್ ಜಿಲ್ಲೆಯ ಅಷ್ಟಾ ಪಟ್ಟಣದಲ್ಲಿರುವ ತಮ್ಮ ಶಾಲೆಯ ತರಗತಿಯನ್ನು ಬಂಕ್ ಮಾಡಿ 100 ಕಿಮೀ ದೂರದಲ್ಲಿರುವ ಇಂದೋರ್‌ಗೆ ಬಸ್‌ನಲ್ಲಿ ಪ್ರಯಾಣಿಸಿ ಅಲ್ಲಿ ಒಟ್ಟಿಗೆ ವಿಷ ಸೇವಿಸಿದ್ದಾರೆ. ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದರೆ, ಎಂವೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮತ್ತೊಬ್ಬ ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಪ್ರಶಾಂತ್ ಚೌಬೆ ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆ ಮತ್ತು ಬದುಕುಳಿದ ಹುಡುಗಿಯ ಹೇಳಿಕೆಯಿಂದ, ಮೂವರು ಸೆಹೋರ್‌ನ ಅಷ್ಟಾ ಪಟ್ಟಣದ ಒಂದೇ ಶಾಲೆಯಲ್ಲಿ ಓದುತ್ತಿದ್ದರು ಮತ್ತು ತುಂಬಾ ಆತ್ಮೀಯರಾಗಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ ಬೆಳಿಗ್ಗೆ ಇಂದೋರ್‌ಗೆ ಬಸ್ ಹಿಡಿಯಲು ಅವರು ತಮ್ಮ ತರಗತಿಯನ್ನು ತೊರೆದರು, ”ಎಂದು ಅವರು ಹೇಳಿದರು.

ಅವರಲ್ಲಿ ಒಬ್ಬಳು ಹುಡುಗಿಯ ಗೆಳೆಯ ಇಂದೋರಿನಲ್ಲಿ ವಾಸಿಸುತ್ತಿದ್ದರಿಂದ ಹುಡುಗಿಯರು ಇಂದೋರ್ ತಲುಪಿದರು. ಅವನು ತನ್ನ ಕರೆಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದ್ದರಿಂದ ಅವಳು ಅವನನ್ನು ಭೇಟಿಯಾಗಲು ಬಯಸಿದ್ದಳು.

ಆದ್ದರಿಂದ, ಅವರನ್ನು ವೈಯಕ್ತಿಕವಾಗಿ ಭೇಟಿಯಾಗಲು ಇಂದೋರ್‌ಗೆ ಹೋಗಲು ನಿರ್ಧರಿಸಿದ್ದಳು ಎಂದು ಚೌಬೆ ಹೇಳಿದರು. ಬಾಯ್ ಫ್ರೆಂಡ್ ಭೇಟಿಯಾಗದಿದ್ದರೆ ಇಬ್ಬರು ಗೆಳೆಯರ ಜೊತೆ ಸೇರಿ ಜೀವನ ಮುಗಿಸುವುದಾಗಿ ನಿರ್ಧರಿಸಿದ್ದರು. ಮೂವರು ಅಷ್ಟಾದ ಅಂಗಡಿಯಿಂದ ವಿಷವನ್ನು ಸಂಗ್ರಹಿಸಿದ್ದರು ಮತ್ತು ಅವರಲ್ಲಿ ಒಬ್ಬರು ಇಂದೋರ್ ತಲುಪಿದ ನಂತರ ಹುಡುಗನನ್ನು ಸಂಪರ್ಕಿಸಲು ಪ್ರಯತ್ನಿಸಿದರು.

ಅವರು ಭಾವರ್ಕುವಾನ್ ಪ್ರದೇಶದ ಬಳಿಯ ಉದ್ಯಾನವನದಲ್ಲಿ ಹುಡುಗನಿಗಾಗಿ ಕಾಯುತ್ತಿದ್ದರು, ಆದರೆ ಅವನು ಹಿಂತಿರುಗದ ಕಾರಣ, ಮನನೊಂದ ಹುಡುಗಿ ವಿಷ ಸೇವಿಸಿದ್ದಾಳೆ ಎಂದು ಅವರು ಹೇಳಿದರು.

ಮೊದಲ ಹುಡುಗಿ ವಿಷ ಸೇವಿಸಿದ ಕೂಡಲೇ ಎರಡನೇ ಹುಡುಗಿಯು “ತನಗೆ ತನ್ನ ಕುಟುಂಬದಲ್ಲಿ ಗಂಭೀರ ಸಮಸ್ಯೆಯಾಗುತ್ತಿದೆ” ಎಂದು ತಿಳಿಸಿ ತಾನೂ ವಿಷ ಸೇವಿಸಿದ್ದಳು.

ಕೊನೆಯ ಹುಡುಗಿ ತನ್ನ ಇಬ್ಬರು ಸ್ನೇಹಿತೆಯರಿಗೆ ತುಂಬಾ ಹತ್ತಿರವಾಗಿದ್ದ ಕಾರಣ ಅವರನ್ನು ಅನುಸರಿಸಿ ತಾನೂ ಕೂಡಾ ವಿಷ ಕುಡಿದಳು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಕೊನೆಯ ಬಾಲಕಿ ಬದುಕುಳಿದಿದ್ದಾಳೆ ಎಂದರು.

ಸುತ್ತಮುತ್ತಲಿನವರು ಬಾಲಕಿಯರನ್ನು ಗಮನಿಸಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಎಂವೈ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅವರಲ್ಲಿ ಇಬ್ಬರು ಅಲ್ಲೇ ಸಾವನ್ನಪ್ಪಿದ್ದಾರೆ ಎಂದು ಚೌಬೆ ಹೇಳಿದರು.

”ಬಾಲಕಿಯರಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಹೇಳಿಕೆಯ ಮೇಲೆ ನಾವು ಅವಲಂಬಿತರಾಗಿದ್ದೇವೆ, ಇದು ನಮ್ಮ ತನಿಖೆಯ ಆಧಾರವಾಗಿದೆ ಎಂದು ಅವರು ಹೇಳಿದರು.

ಬಾಲಕಿಯರ ಪೋಷಕರು ಇಂದೋರ್ ತಲುಪಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

7 ತಿಂಗಳ ಕಾಲ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೂ ಮಹಿಳೆಗೆ ಇಂದು ಹೆರಿಗೆ – ಸುಂದರವಾದ ಹೆಣ್ಣುಮಗುವನ್ನು ಹೆತ್ತ ಪ್ರಜ್ಞಾಹೀನ ಮಹಿಳೆ

ಆಸ್ಪತ್ರೆಯಲ್ಲಿ 7 ತಿಂಗಳ ಕಾಲ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಹೊಸದಿಲ್ಲಿ: ರಸ್ತೆ ಅಪಘಾತದಲ್ಲಿ ತಲೆಗೆ ಗಾಯವಾಗಿ ಹಲವು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಕಳೆದ ಏಳು ತಿಂಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬುಲಂದ್‌ಶಹರ್‌ನ 23 ವರ್ಷದ ಮಹಿಳೆಯೊಬ್ಬರು ಕಳೆದ ವಾರ ಏಮ್ಸ್‌ನಲ್ಲಿ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ವೈದ್ಯರ ಪ್ರಕಾರ, ಈ ವರ್ಷ ಮಾರ್ಚ್ 31 ರಂದು ಮಹಿಳೆ ತನ್ನ ಪತಿಯೊಂದಿಗೆ ಸವಾರಿ ಮಾಡುತ್ತಿದ್ದ ದ್ವಿಚಕ್ರ ವಾಹನ ಅಪಘಾತಕ್ಕೀಡಾದಾಗ ಹೆಲ್ಮೆಟ್ ಧರಿಸಿರಲಿಲ್ಲ. ಆಕೆಯ ತಲೆಗೆ ಹಲವು ಗಂಭೀರ ಗಾಯಗಳಾಗಿದ್ದು, ಬದುಕುಳಿದಿದ್ದರೂ ಆಕೆ ಪ್ರಜ್ಞಾಹೀನಳಾಗಿದ್ದಾಳೆ.

“ಅವಳು ತನ್ನ ಕಣ್ಣುಗಳನ್ನು ತೆರೆಯುತ್ತಾಳೆ ಆದರೆ ಯಾವುದೇ ಆಜ್ಞೆಗಳನ್ನು ಅನುಸರಿಸುವುದಿಲ್ಲ” ಎಂದು ನ್ಯೂರೋಸರ್ಜರಿ ವಿಭಾಗದ ಪ್ರೊ.ದೀಪಕ್ ಗುಪ್ತಾ ಹೇಳಿದರು, ಪ್ರತಿಯೊಬ್ಬ ವ್ಯಕ್ತಿಯೂ ಹೆಲ್ಮೆಟ್ ಧರಿಸಬೇಕು ಎಂದು ಸಲಹೆ ನೀಡಿದರು. “ಮಹಿಳೆ ಹೆಲ್ಮೆಟ್ ಧರಿಸಿದ್ದರೆ ಆಕೆಯ ಜೀವನವೇ ಬೇರೆಯಾಗುತ್ತಿತ್ತು” ಎಂದು ಡಾ.ಗುಪ್ತಾ ಹೇಳಿದ್ದಾರೆ.

ಖಾಸಗಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ, ಗರ್ಭಿಣಿ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕಾರಣ ಆಕೆಯನ್ನು ನೋಡಿಕೊಳ್ಳಲು ಕೆಲಸ ಬಿಟ್ಟಿದ್ದಾನೆ. “ಅವಳು ತನ್ನ ಕಣ್ಣುಗಳನ್ನು ತೆರೆಯುತ್ತಾಳೆ ಆದರೆ ಯಾವುದೇ ಆಜ್ಞೆಗಳನ್ನು ಅನುಸರಿಸುವುದಿಲ್ಲ” ಎಂದು ಟೈಮ್ಸ್ ಆಫ್ ಇಂಡಿಯಾ AIIMS ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ವಿಭಾಗದ ಡಾ ದೀಪಕ್ ಗುಪ್ತಾ ಹೇಳಿದ್ದಾರೆ.

ಗರ್ಭಿಣಿ ಹೆಂಡತಿಯನ್ನು ನೋಡಿಕೊಳ್ಳಲು ಮಹಿಳೆಯ ಪತಿ ತನ್ನ ಕೆಲಸವನ್ನು ತ್ಯಜಿಸಬೇಕಾಯಿತು. ವ್ಯಕ್ತಿ ಖಾಸಗಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆತನು “ಎಲ್ಲವೂ ನಿಂತು ಹೋಗಿದೆ” ಎಂದು ತನ್ನ ದುಃಖವನ್ನು ವ್ಯಕ್ತಪಡಿಸಿದನು.

ಆಸ್ಪತ್ರೆಗೆ ದಾಖಲಿಸಿದಾಗ ಮಹಿಳೆ 40 ದಿನಗಳ ಗರ್ಭಿಣಿಯಾಗಿದ್ದಳು ಎಂದು ಗುಪ್ತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ರೋಗಿಯನ್ನು ಪರಿಶೀಲಿಸಿದ ಸ್ತ್ರೀರೋಗತಜ್ಞರು ಮಗು ಚೆನ್ನಾಗಿದೆ ಮತ್ತು ಗರ್ಭಧಾರಣೆಯನ್ನು ಕೊನೆಗೊಳಿಸಬಾರದು ಎಂದು ಹೇಳಿದರು.

ಪತಿಗೆ ನಿರ್ಧರಿಸಲು ಬಿಡಲಾಯಿತು ಮತ್ತು ಅವನು “ಮಗುವನ್ನು ಉಳಿಸಿಕೊಳ್ಳಲು ನಿರ್ಧರಿಸಿದನು”. ಮಹಿಳೆ ಐದು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಳೆ ಮತ್ತು ಪ್ರಜ್ಞಾಹೀನಳಾಗಿದ್ದಾಳೆ. ಆದುದರಿಂದ ಮಗುವಿಗೆ ಸ್ತನ್ಯಪಾನ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಪ್ರಯಾಣಿಕನ ಜೀವವುಳಿಸಿದ ಶಿಕ್ಷಕಿಗೆ ಸನ್ಮಾನ – ದೀಪಾವಳಿ ಹಬ್ಬವನ್ನು ವಿನೂತನವಾಗಿ ಆಚರಿಸಿದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ದೀಪಾವಳಿ ಹಬ್ಬವನ್ನು ವಿನೂತನವಾಗಿ ಆಚರಿಸಲಾಯಿತು.

ತನ್ನ ರೈಲು ಪಯಣದ ವೇಳೆ ಹೃದಯಾಘಾತದಿಂದ ಬಸವಳಿದ ಸಹಪ್ರಯಾಣಿಕನ ಜೀವವುಳಿಸಿದ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಪ್ರೊ. ಹೇಮಾವತಿಯವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಅವರು ರೈಲು ನಿಲ್ದಾಣದ ಅಂದಿನ ಘಟನೆಯನ್ನು ನೆನಪಿಸಿಕೊಂಡರು. ಅನಾರೋಗ್ಯಕ್ಕೊಳಗಾದ ವ್ಯಕ್ತಿಯ ರಕ್ಷಣೆಗೆ ಬರಲು ಯಾರೂ ತಯಾರಿರರಿಲ್ಲ. ಎಲ್ಲರೂ ಪ್ರಯಾಣದ ಧಾವಂತದಲ್ಲೇ ಇದ್ದರು. ಒಂದು ವೇಳೆ ನಮ್ಮ ಮನೆಯವರಿಗೆ ಈ ರೀತಿ ಆದರೆ ನಾವು ಮುಂದೆ ಸಾಗುತ್ತಿದ್ದೆವಾ ಎನ್ನುವ ಯೋಚನೆಯನ್ನು ಮಾಡಬೇಕು ಎಂದರು.

ಈಗಿನ ಮೊಬೈಲ್ ಯುಗದಲ್ಲಿ ಪಕ್ಕದಲ್ಲಿಯೇ ಏನಾದರೂ ಘಟನೆ ನಡೆದರೆ ನಮಗೆ ಅರಿವಾಗುವುದಿಲ್ಲ ಮನುಷ್ಯ ಎಲ್ಲವನ್ನೂ ಕಲಿತಿದ್ದಾನೆ ಆದರೆ ಮಾನವೀಯತೆಯನ್ನು ಮರೆತಿದ್ದಾನೆ ಎಂದರು. ವಿದ್ಯಾರ್ಥಿಗಳೆಲ್ಲರೂ ಮಾನವೀಯ ಗುಣಗಳನ್ನು ಮೈಗೂಡಿಸಿಕೊಂಡು ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ನುಡಿದರು.


ಕಾಲೇಜಿನ ಮುಂಭಾಗದ ತೆರೆದ ವೇದಿಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದೀಪಾವಳಿಯ ಸಂದೇಶವನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು. ಸುಮಾರು 2000 ಕ್ಕೂ ಮಿಕ್ಕಿ ಹಣತೆಗಳನ್ನು ಉರಿಸಿ ಸಂಭ್ರಮಿಸಿದರು.
ಈ ಸಂಬಂಧ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್, ಡಾ.ಯಶೋಧಾ ರಾಮಚಂದ್ರ, ಸಂತೋಷ್ ಕುತ್ತಮೊಟ್ಟೆ, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸಹಸಂಸ್ಥೆಗಳ ಪ್ರಾಂಶುಪಾಲರುಗಳಾದ ಪ್ರೊ.ವಿ.ಜಿ.ಭಟ್, ಪ್ರೊ.ಮಹೇಶ್ ನಿಟಿಲಾಪುರ, ಪ್ರೊ.ಚಂದ್ರಕುಮಾರ್, ಪ್ರೊ.ಎಚ್.ಕೆ.ಪ್ರಕಾಶ್, ಉಪನ್ಯಾಸಕರುಗಳಾದ ಪ್ರೊ.ಪ್ರಕಾಶ್ ಪೆಲ್ತಾಜೆ, ಪ್ರೊ.ಹರೀಶ್ ಶಾಸ್ತ್ರಿ, ವಿದ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಾದ ಭಾವನಾ.ಎಂ.ಆರ್ ಸ್ವಾಗತಿಸಿ, ಸಿಬಿನ್ ರವೀಂದ್ರನ್ ವಂದಿಸಿದರು. ವರುಣ್.ರೈ ಮತ್ತು ಭಾವನಾ ಕಾರ್ಯಕ್ರಮ ನಿರ್ವಹಿಸಿದರು.