Thursday, July 30, 2026
Home Blog Page 158

ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರ ಆತ್ಮಕಥೆಯಲ್ಲಿ ಹೊರಬರುತ್ತಿರುವ ಹೊಸ ಹೊಸ ಕುತೂಹಲಕರ ಸಂಗತಿಗಳು

ತಿರುವನಂತಪುರಂ: ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಆತ್ಮಕಥೆಯಿಂದ ಹೆಚ್ಚಿನ ಮಾಹಿತಿ ಹೊರಬಿದ್ದಿದೆ.

ಐಎಎಸ್ ಅಧಿಕಾರಿ ಶಿವಶಂಕರ್ ಅವರು ಸ್ವಪ್ನಾ ಜೊತೆಗಿನ ಸಂಬಂಧದ ಬಗ್ಗೆ ಪತ್ನಿಗೆ ಹೇಳಿದಾಗ ಅವರು ಯಾವುದೇ ಚಿಂತೆಯಿಲ್ಲದೆ ಶುಭ ಹಾರೈಸಿದರು ಎಂದು ಸ್ವಪ್ನಾ ಬಹಿರಂಗಪಡಿಸಿದ್ದಾರೆ.

‘ನನ್ನ ಜೊತೆಗಿನ ಸಂಬಂಧದ ಬಗ್ಗೆ ಐಎಎಸ್ ಅಧಿಕಾರಿ ಶಿವಶಂಕರ್ ಪತ್ನಿಗೆ ಹೇಳಿದಾಗ ಯಾವುದೇ ಸಮಸ್ಯೆ ಇರಲಿಲ್ಲ. ಅವನು (ಶಿವಶಂಕರ್) ನನ್ನಲ್ಲಿ (ಸ್ವಪ್ನಾ) ಕೆಲವು ಗುಣಗಳನ್ನು ಕಂಡಿರಬಹುದು ಎಂದು ಶಿವಶಂಕರ್ ಪತ್ನಿ ಹೇಳಿದ್ದಳು.

ಇದಾದ ನಂತರ ಐಎಎಸ್ ಅಧಿಕಾರಿ ಶಿವಶಂಕರ್ ಮನೆಯಿಂದ ಹೊರಬಂದು ಹೀದರ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌ಗೆ ಸ್ಥಳಾಂತರಗೊಂಡರು. ನಮ್ಮ ನಂತರದ ಭೇಟಿಗಳೆಲ್ಲಾ ಫ್ಲಾಟ್‌ನಲ್ಲಿಯೇ ನಡೆದವು’ ಎಂದು ಸ್ವಪ್ನಾ ಬರೆದುಕೊಂಡಿದ್ದಾರೆ.

ಆಕಸ್ಮಿಕವಾಗಿ ತಾಯಿ ಚಲಾಯಿಸುತ್ತಿದ್ದ ಕಾರು ಮೇಲೆ ಹರಿದ ಪರಿಣಾಮ 3 ವರ್ಷದ ಬಾಲಕಿ ಸಾವು

ಕೋಯಿಕ್ಕೋಡು: ವಿಲಕ್ಷಣ ಅಪಘಾತದಲ್ಲಿ, ಮೂರು ವರ್ಷದ ಬಾಲಕಿ ತನ್ನ ತಾಯಿ ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾಳೆ.

ಶುಕ್ರವಾರ ಬೆಳಗ್ಗೆ ಇಲ್ಲಿನ ಕೊಡುವಳ್ಳಿಯಲ್ಲಿರುವ ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಬಾಲಕಿ ಅಪಘಾತಕ್ಕೀಡಾಗಿದ್ದಾಳೆ.

ಮೃತರನ್ನು ಈಂಗಪುಳ ಮೂಲದ ನಜೀರ್ ಮತ್ತು ನೆಲ್ಲಂಕಂಡಿ ಮೂಲದ ಲುಬ್ನಾ ಫೆಬಿನಿ ಅವರ ಪುತ್ರಿ ಮರಿಯಂ ನಜೀರ್ ಎಂದು ಗುರುತಿಸಲಾಗಿದೆ.

ವರದಿಗಳ ಪ್ರಕಾರ ಮಗುವಿನ ತಾಯಿ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದಿದೆ. ಕೂಡಲೇ ಬಾಲಕಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ನಂತರ ಮುಂದಿನ ಕ್ರಮಕ್ಕಾಗಿ ಮೃತದೇಹವನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಶವಾಗಾರಕ್ಕೆ ಸ್ಥಳಾಂತರಿಸಲಾಯಿತು.

ನಾಳೆ ಸಂಜೆ 6 ಘಂಟೆಗೆ ಮೂಡಲಪಾಯ ಯಕ್ಷಗಾನ – ಶ್ರೀ ದೇವಿ ಮಹಾತ್ಮೆ 

ನಾಳೆ ದಿನಾಂಕ 15.10.2022ರಂದು ಶನಿವಾರ ಸಂಜೆ 6 ಘಂಟೆಗೆ ಸರಿಯಾಗಿ ಮೂಡಲಪಾಯ ಯಕ್ಷಗಾನ – ಶ್ರೀ ದೇವಿ ಮಹಾತ್ಮೆ ಪ್ರದರ್ಶನಗೊಳ್ಳಲಿದೆ.

ಮಂಡ್ಯ, ಹಾಸನ ಮತ್ತು ತುಮುಕೂರು ಉತ್ಸವವು, ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವದ ಅಂಗವಾಗಿ ನಡೆಯಲಿದೆ. 

ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ಎರಡುದಿನ ನಡೆಯಲಿದ್ದು ನಾಳೆ ದಿನಾಂಕ 15.10.2022ರಂದು ಸಂಜೆ 6 ಘಂಟೆಗೆ ಸರಿಯಾಗಿ ಶ್ರೀ ದೇವಿ ಮಹಾತ್ಮೆ ಎಂಬ ಮೂಡಲಪಾಯ ಯಕ್ಷಗಾನ ಪ್ರದರ್ಶನವು ದೆಹಲಿ ಕರ್ನಾಟಕ ಸಭಾಂಗಣದಲ್ಲಿ ನಡೆಯಲಿದೆ.

ವಿವರಗಳಿಗೆ ಕರಪತ್ರ ನೋಡಿ. 

ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳಕ್ಕೆಆಯ್ಕೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ 7ನೇ ತರಗತಿ ವಿದ್ಯಾರ್ಥಿ ಶಮನ್. ಎನ್

ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರಿಯ ವಲಯ ಮತ್ತು ಶ್ರೀವಿದ್ಯಾರಣ್ಯ ಆವಾಸ ವಿದ್ಯಾಲಯ, ಹೈದರಾಬಾದ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಒಳಗೊಂಡ ದಕ್ಷಿಣ ಮಧ್ಯ ಕ್ಷೇತ್ರಿಯ ಮಟ್ಟದ ಗಣಿತ-ವಿಜ್ಞಾನ ಮೇಳವು ಹೈದರಾಬಾದಿನ ಶ್ರೀ ವಿದ್ಯಾರಣ್ಯ ಆವಾಸ ವಿದ್ಯಾಲಯದಲ್ಲಿ ಅಕ್ಟೋಬರ್11ರಿಂದ ಅಕ್ಟೋಬರ್13ರ ವರೆಗೆ ನಡೆಯಿತು.

ಈ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ವಿದ್ಯಾರ್ಥಿಗಳಾದ ಶಮನ್. ಎನ್ ಹಾಗೂ ಪ್ರೀತಿ.ಪಿ.ಪ್ರಭು ಭಾಗವಹಿಸಿರುತ್ತಾರೆ.

14ರ ವಯೋಮಾನದ ಬಾಲವರ್ಗದ ವಿಭಾಗದ ಗಣಿತ ಮಾದರಿ ತಯಾರಿಯಲ್ಲಿ 7ನೇ ತರಗತಿಯ ಶಮನ್. ಎನ್ (ಶ್ರೀ ನಿತ್ಯಾನಂದ.ಕೆ ಮತ್ತು ಶ್ರೀಮತಿ ಸಂಧ್ಯಾ.ಕೆ ಇವರ ಪುತ್ರ) ಪ್ರಥಮ ಸ್ಥಾನ ಪಡೆದು ಉತ್ತರ ಪ್ರದೇಶದ ಪ್ರಯಾಗ್‍ರಾಜ್ ನಲ್ಲಿ ನವೆಂಬರ್ 3ರಂದು ನಡೆಯಲಿರುವ ರಾಷ್ಟ್ರೀಯ ಮಟ್ಟದ ಗಣಿತ ವಿಜ್ಞಾನ ಮೇಳಕ್ಕೆ ಆಯ್ಕೆಯಾಗಿರುತ್ತಾರೆ. 

7ನೇ ತರಗತಿಯ ಪ್ರೀತಿ.ಪಿ.ಪ್ರಭು (ಶ್ರೀ ಪುಂಡಲೀಕ ಪ್ರಭು ಮತ್ತು ನಾಗಮಣಿ ಪ್ರಭು ಇವರ ಪುತ್ರಿ) ಗಣಿತ ಪ್ರಯೋಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ವಿದ್ಯಾರ್ಥಿಗಳು ತಮ್ಮ ಮಾದರಿಗಳನ್ನು ಶಾಲಾ ಗಣಿತ ಮತ್ತು ವಿಜ್ಞಾನ ಶಿಕ್ಷಕಿಯರ ಮಾರ್ಗದರ್ಶನದಲ್ಲಿ ತಯಾರಿಸಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಖಾಸಗಿ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ, ಹನಿಟ್ರಾಪ್, ಬ್ಲಾಕ್ ಮೇಲ್ – ನಾಲ್ಕು ವರ್ಷಗಳಲ್ಲಿ 30 ಕೋಟಿ ಸಂಪಾದಿಸಿ ಗುಡಿಸಲಿನಿಂದ ಅರಮನೆಗೆ ಏರಿದ ಅರ್ಚನಾ ನಾಗ್ ಎಂಬ ಯುವತಿಯ ಬಂಧನ 

ಒಡಿಶಾದ ಕಲಹಂಡಿ ಜಿಲ್ಲೆಯ ಅರ್ಚನಾ ನಾಗ್ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ತಮ್ಮ ಖಾಸಗಿ ಚಿತ್ರಗಳನ್ನು ಬಹಿರಂಗಪಡಿಸುವುದಾಗಿ ಗಣ್ಯ ವ್ಯಕ್ತಿಗಳನ್ನು ಬೆದರಿಸಿ ಸುಲಿಗೆ ಮಾಡಿದ ಆರೋಪ ಹೊರಿಸಿದ್ದಾರೆ. ಒಡಿಶಾದ ಕಲಹಂಡಿ ಜಿಲ್ಲೆಯ ಮಹಿಳೆಯನ್ನು ಅಕ್ಟೋಬರ್ 6 ರಂದು ಬಂಧಿಸಲಾಯಿತು ಮತ್ತು ಸುಲಿಗೆ ಆರೋಪ ಹೊರಿಸಲಾಯಿತು.

ಅರ್ಚನಾ ನಾಗ್ (26) ಅವರು ರಾಜಕಾರಣಿಗಳು, ಉದ್ಯಮಿಗಳು ಮತ್ತು ಚಲನಚಿತ್ರ ನಿರ್ಮಾಪಕರು ಸೇರಿದಂತೆ ರಾಜ್ಯದ ಶ್ರೀಮಂತ ಮತ್ತು ಪ್ರಭಾವಿ ವ್ಯಕ್ತಿಗಳಿಂದ ತಮ್ಮ ಆತ್ಮೀಯ ಕ್ಷಣಗಳ ಫೋಟೋಗಳು ಮತ್ತು ವೀಡಿಯೊಗಳನ್ನು ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾಳೆ.

‘ಬ್ಲ್ಯಾಕ್‌ಮೇಲರ್’ ಯಾರು?:

ಅರ್ಚನಾ ಕಲಹಂಡಿಯ ಲಾಂಜಿಗಢದಲ್ಲಿ ಜನಿಸಿದರು ಮತ್ತು ಕೆಸಿಂಗದಲ್ಲಿ ಬೆಳೆದರು. 2015ರಲ್ಲಿ ಭುವನೇಶ್ವರಕ್ಕೆ ಬಂದಿದ್ದಳು. ಪೊಲೀಸರ ಪ್ರಕಾರ, ಅರ್ಚನಾ ಆರಂಭದಲ್ಲಿ ಖಾಸಗಿ ಭದ್ರತಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ನಂತರ ಬ್ಯೂಟಿ ಪಾರ್ಲರ್‌ಗೆ ಸೇರಿಕೊಂಡರು ಅಲ್ಲಿ ಅವರು ಜಗಬಂಧು ಚಂದ್ ಅವರನ್ನು ಭೇಟಿಯಾಗಿ 2018 ರಲ್ಲಿ ಅವರನ್ನು ವಿವಾಹವಾದರು.

ಅವರು ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುವಾಗ ಸೆಕ್ಸ್ ರಾಕೆಟ್ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆಕೆಯ ಪತಿ ಜಗಬಂಧು ಅವರು ಹೊಟೇಲ್ ಶೋ ರೂಂ ನಡೆಸುತ್ತಿದ್ದರು ಮತ್ತು ಶ್ರೀಮಂತ ವ್ಯಕ್ತಿಗಳ ಪರಿಚಯವಿದ್ದರು. ಕೆಲವು ಶಾಸಕರು ಸೇರಿದಂತೆ ಪ್ರಭಾವಿ ವ್ಯಕ್ತಿಗಳೊಂದಿಗೆ ದಂಪತಿಗಳ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿವಾದಕ್ಕೆ ಕಾರಣವಾಗಿವೆ.

ಅರ್ಚನಾ ಅವರು ಶ್ರೀಮಂತ ಮತ್ತು ಪ್ರಭಾವಿ ವ್ಯಕ್ತಿಗಳೊಂದಿಗೆ ಸ್ನೇಹ ಬೆಳೆಸಿದರು ಮತ್ತು ಅವರಿಗೆ ಸ್ತ್ರೀಯರನ್ನು ಒದಗಿಸಿದರು. ಆಮೇಲೆ ಹುಡುಗಿಯರೊಂದಿಗಿನ ಈ ಜನರ ಚಿತ್ರಗಳನ್ನು ತೆಗೆದುಕೊಂಡು ನಂತರ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಚಿತ್ರ ನಿರ್ಮಾಪಕರೊಬ್ಬರು ನಯಾಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅರ್ಚನಾ ಅವರು ಕೆಲವು ಹುಡುಗಿಯರೊಂದಿಗೆ ತನ್ನ ಚಿತ್ರವನ್ನು ತೋರಿಸಿದ ನಂತರ ಆತನಿಂದ 3 ಕೋಟಿ ರೂ. ಗೆ ಬೇಡಿಕೆಯಿಟ್ಟಿದ್ದಳು.

ಅರ್ಚನಾ ತನ್ನನ್ನು ತನ್ನ ದಂಧೆಗೆ ಬಳಸಿಕೊಂಡಿದ್ದಾಳೆ ಎಂದು ಹುಡುಗಿಯೊಬ್ಬಳು ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. 2018 ರಿಂದ 2022 ರವರೆಗಿನ ನಾಲ್ಕು ವರ್ಷಗಳ ಅವಧಿಯಲ್ಲಿ ದಂಪತಿಗಳು 30 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸಿನ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಲು ಪೊಲೀಸರು ಆರ್ಥಿಕ ಅಪರಾಧ ವಿಭಾಗವನ್ನು ಕೋರಿದ್ದಾರೆ. ಅರ್ಚನಾ ನಾಗ್ ಆಸ್ತಿಗಳಲ್ಲಿ ಆಮದು ಮಾಡಿದ ಒಳಾಂಗಣ ಅಲಂಕಾರಗಳು, ಐಷಾರಾಮಿ ಕಾರುಗಳು, ನಾಲ್ಕು ಉನ್ನತ ತಳಿ ನಾಯಿಗಳು ಮತ್ತು ಬಿಳಿ ಕುದುರೆಯೊಂದಿಗೆ ಅರಮನೆಯ ಮನೆ ಸೇರಿವೆ.

ಭುವನೇಶ್ವರ್ ಡಿಸಿಪಿ ಪ್ರತೀಕ್ ಸಿಂಗ್, ಈ ಸಂಬಂಧ ಅರ್ಚನಾ ವಿರುದ್ಧ ಕೇವಲ ಎರಡು ಪ್ರಕರಣಗಳನ್ನು ಮಾತ್ರ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇತರ ಸಂತ್ರಸ್ತರು ಆಕೆಯ ವಿರುದ್ಧ ದೂರು ನೀಡಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು. ಸದ್ಯ ಅರ್ಚನಾ ಅವರ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಬ್ಲ್ಯಾಕ್‌ಮೇಲ್ ಪ್ರಕರಣವು ರಾಜಕೀಯ ಕೋನವನ್ನು ಸಹ ಹೊಂದಿದೆ ಎಂದು ಬಿಜೆಪಿ ಭುವನೇಶ್ವರ ಘಟಕದ ಅಧ್ಯಕ್ಷ ಬಾಬು ಸಿಂಗ್ ಅವರು 18 ಶಾಸಕರು ಮತ್ತು ಸಚಿವರು ಸೇರಿದಂತೆ 25 ರಾಜಕೀಯ ನಾಯಕರು, ಬಿಜೆಡಿಗೆ ಸೇರಿದ ಹೆಚ್ಚಿನವರು ಅರ್ಚನಾ ಜಾಲದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಆಡಳಿತಾರೂಢ ಬಿಜೆಡಿ ಶಾಸಕರು ಮತ್ತು ಸಚಿವರೊಂದಿಗಿನ ಅವರ ಸಂಪರ್ಕವನ್ನು ಬಹಿರಂಗಪಡಿಸಿದರೆ, ಒಡಿಶಾದಲ್ಲಿ 22 ವರ್ಷದ ನವೀನ್ ಪಟ್ನಾಯಕ್ ಸರ್ಕಾರ ಪತನಕ್ಕೆ ಕಾರಣವಾಗಬಹುದು ಎಂದು ಕಾಂಗ್ರೆಸ್ ಶಾಸಕಿ ಎಸ್ ಎಸ್ ಸಲೂಜಾ ಹೇಳಿದ್ದಾರೆ. ಏತನ್ಮಧ್ಯೆ, ಆಡಳಿತಾರೂಢ ಬಿಜೆಡಿ ಆರೋಪಗಳಿಗೆ ಪ್ರತಿಕ್ರಿಯಿಸಿದೆ ಮತ್ತು ಈ ವಿಷಯದಲ್ಲಿ ತನ್ನ ನಾಯಕರು ಭಾಗಿಯಾಗಿದ್ದಾರೆ ಎಂಬುದಕ್ಕೆ ಪುರಾವೆಗಳನ್ನು ನೀಡುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಕೇಳಿದೆ.

ಅರ್ಚನಾ ನಾಗ್ ಅವರ ಕಥೆ ಮತ್ತು ಅವರು ಚಿಂದಿ ಬಟ್ಟೆಯಿಂದ ಶ್ರೀಮಂತಿಕೆಗೆ ಹೇಗೆ ಏರಿದರು ಎಂಬುದು ಒಡಿಯಾ ಚಲನಚಿತ್ರ ನಿರ್ಮಾಪಕ ಶ್ರೀಧರ್ ಮಾರ್ಥಾಗೆ ಸ್ಫೂರ್ತಿ ನೀಡಿದೆ. ಶ್ರೀಧರ್ ಅವರ ಜೀವನ ಚರಿತ್ರೆಯನ್ನು ಚಿತ್ರ ಮಾಡುವ ಯೋಜನೆ ಇದೆ ಎಂದರು.

Breaking News: ವಾರಣಾಸಿ ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂಗಳ ಬೇಡಿಕೆಯನ್ನು ತಿರಸ್ಕರಿಸಿದ ನ್ಯಾಯಾಲಯ

ಜ್ಞಾನವಾಪಿ ಮಸೀದಿ ಸಮಸ್ಯೆಯ ಬಗ್ಗೆ ಇದೀಗ ವಾರಣಾಸಿ ನ್ಯಾಯಾಲಯ ತೀರ್ಪು ನೀಡಿದೆ.

ಮಸೀದಿ ಸಂಕೀರ್ಣದಲ್ಲಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆಯನ್ನು ಕೋರಿ ಹಿಂದೂ ಕಡೆಯ ಬೇಡಿಕೆಯನ್ನು ವಾರಣಾಸಿ ನ್ಯಾಯಾಲಯ ತಿರಸ್ಕರಿಸಿದೆ.

ಈ ಬೇಡಿಕೆಯನ್ನು ವಾರಣಾಸಿ ನ್ಯಾಯಾಲಯವು ಅಮಾನ್ಯಗೊಳಿಸಿದೆ. ಈ ಮೊದಲು ಹಿಂದೂ ಮುಖಂಡರು ಸಲ್ಲಿಸಿದ್ದ ಅರ್ಜಿಯ ಮೇಲೆ ವಾರಣಾಸಿ ನ್ಯಾಯಾಲಯವು ವಾದ ಪ್ರತಿವಾದಗಳನ್ನು ಆಲಿಸಿ ತನ್ನ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

ಇದೀಗ ಬಂದ ತೀರ್ಪಿನ ಪ್ರಕಾರ  ಮಸೀದಿ ಸಂಕೀರ್ಣದಲ್ಲಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆಯನ್ನು ಕೋರಿ ಹಿಂದೂ ಕಡೆಯ ಬೇಡಿಕೆಯನ್ನು ವಾರಣಾಸಿ ನ್ಯಾಯಾಲಯ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

Pavitra.G of Vivekananda College of Engineering and Technology, will participate in the Open National Athletic Championship.

Puttur: Pavitra.G, a first year MBA student of Vivekananda College of Engineering and Technology, Puttur will participate in the 61st Open National Athletic Championship.

She will be represent the state of Karnataka in the triple jump event at the National Games which will be held from October 15 to 19 at Kanteerava Stadium, Bangalore.

She won the gold medal in the recently held state level Dussehra sports meet with a new meet record.

Principal of the college Dr. Mahesh Prasanna. K said that she is doing well under the guidance of Balachandra Gowda Bharthikumeru, Director of Physical Education of the college.

ಮುಕ್ತ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪವಿತ್ರ.ಜಿ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ 61ನೇ ಮುಕ್ತ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.


ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಕ್ಟೋಬರ್ 15 ರಿಂದ 19 ರವರೆಗೆ ನಡೆಯುವ ಈ  ರಾಷ್ಟ್ರೀಯ  ಕ್ರೀಡಾಕೂಟದಲ್ಲಿ ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಾರೆ.

ಇವರು ಇತ್ತೀಚಿಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದರು.  


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಇವರು ಉತ್ತಮ ಸಾಧನೆಯನ್ನು ಮಾಡುತ್ತಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected] 

ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 12 ಮತ್ತು 13 ರಂದು ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿ, ಕರ್ನಾಟಕ, ತೆಲಂಗಣ, ಆಂಧ್ರ ಪ್ರದೇಶ ರಾಜ್ಯಗಳನ್ನು ಒಳಗೊಂಡ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

14ರ ವಯೋಮಾನದ ಬಾಲ ವರ್ಗದ ಬಾಲಕಿಯರ ವಿಭಾಗದಲ್ಲಿ ಶ್ರೀವರ್ಣಾ (ಪಾಲೆತ್ತಡಿ ಧರ್ಣಪ್ಪ ಗೌಡ, ಮಮತಾ.ಪಿ. ದಂಪತಿ ಪುತ್ರಿ) ಎತ್ತರ ಜಿಗಿತ (ಪ್ರಥಮ), ಉದ್ದ ಜಿಗಿತ (ಪ್ರಥಮ), 80 ಮೀಟರ್ ಹರ್ಡಲ್ಸ್ (ಪ್ರಥಮ), 4*100 ಮೀಟರ್ ರಿಲೇ (ಪ್ರಥಮ), ಕೃತಿ,ಕೆ (ಬನ್ನೂರು ಕೊರಗಪ್ಪ ಗೌಡ, ವನಿತಾ.ಎ ದಂಪತಿ ಪುತ್ರಿ) 600 ಮೀಟರ್ (ಪ್ರಥಮ), 400 ಮೀಟರ್ (ದ್ವಿತೀಯ), 4*100 ಮೀಟರ್ ರಿಲೇ (ಪ್ರಥಮ), ಡಿಂಪಲ್ ಶೆಟ್ಟಿ 200 ಮೀಟರ್ (ತೃತೀಯ), 100 ಮೀಟರ್ (ದ್ವಿತೀಯ), ಉದ್ದ ಜಿಗಿತ (ತೃತೀಯ), 4*100 ಮೀಟರ್ ರಿಲೇ (ಪ್ರಥಮ),

ಅಮೃತಾ.ಬಿ.ಎ (ಬನ್ನೂರು ಪಟ್ಟೆ ಅಮರನಾಥ್, ಲತಾ ಕುಮಾರಿ ದಂಪತಿ ಪುತ್ರಿ) 600 ಮೀಟರ್ (ತೃತೀಯ), 4*100 ಮೀಟರ್ ರಿಲೇ (ಪ್ರಥಮ), ಬಹುಮಾನ ಗಳಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಕೃಪಾಲ್.ಪಿ.ಕೆ (ಕೆಮ್ಮಾಯಿಯ ಪ್ರಕಾಶ್.ಬಿ, ಸುನೀತಾ ಸಿ.ಎಚ್ ದಂಪತಿ ಪುತ್ರ) 600 ಮೀಟರ್ (ದ್ವಿತೀಯ), 400 ಮೀಟರ್ (ತೃತೀಯ) ಅಭಿಶ್ಯಾಮ (ಪರ್ಲಡ್ಕ ಮುರಳೀಧರ್ , ರಾಜೇಶ್ವರಿ ದಂಪತಿ ಪುತ್ರ) ಎತ್ತರ ಜಿಗಿತ (ದ್ವಿತೀಯ) ಬಹುಮಾನ ಗಳಿಸಿರುತ್ತಾರೆ.

17ರ ವಯೋಮಾನದ ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ ಅನ್ನಿಕಾ. ಕೆ (ಚಾರ್ವಾಕ ಎ.ಎಸ್.ಐ ಕೃಷ್ಣಪ್ಪ.ಎಂ, ಶಿಕ್ಷಕಿ ವಾಣಿಶ್ರೀ ದಂಪತಿ ಪುತ್ರಿ) 3000 ಮೀಟರ್ (ಪ್ರಥಮ), 1500 ಮೀಟರ್ (ತೃತೀಯ), ಬಿ.ಲಿಖಿತಾ ರೈ (ಚಣಿಲ ಬಿ.ಜಗನ್ನಾಥ್ ರೈ, ಗೀತಾ.ಜೆ.ರೈ ದಂಪತಿ ಪುತ್ರಿ) 4*100 ಮೀಟರ್ ರಿಲೇ (ದ್ವಿತೀಯ), 4*400 ಮೀಟರ್ ರಿಲೇ (ಪ್ರಥಮ), 400 ಮೀಟರ್ (ಪ್ರಥಮ),

ವಂಶಿ.ಬಿ.ಕೆ (ಬಪ್ಪಳಿಗೆ ಕಮಲಾಕ್ಷ, ಜಯಲತಾ ದಂಪತಿ ಪುತ್ರಿ) 200 ಮೀಟರ್ (ತೃತೀಯ), 100 ಮೀಟರ್ ಹರ್ಡಲ್ಸ್ (ದ್ವಿತೀಯ), 4*100 ಮೀಟರ್ ರಿಲೇ (ದ್ವಿತೀಯ), 4*400 ಮೀಟರ್ ರಿಲೇ (ಪ್ರಥಮ), ರಿದ್ಧಿ.ಸಿ.ಶೆಟ್ಟಿ ( ಪುಂಡಿಕಾಯಿ ಚಿದಾನಂದ ಶೆಟ್ಟಿ, ಸತ್ಯವತಿ.ಸಿ.ಶೆಟ್ಟಿ ದಂಪತಿ ಪುತ್ರಿ) 4*100 ಮೀಟರ್ ರಿಲೇ (ದ್ವಿತೀಯ), 4*400 ಮೀಟರ್ ರಿಲೇ (ಪ್ರಥಮ), ಸಾನ್ವಿ.ಎಸ್.ಪಿ. (ಪಳಂಬೆ ಯೋಧ ಡಿ.ಸುಂದರ ಪೂಜಾರಿ, ಶಿಕ್ಷಕಿ ಭವಿತಾ.ಕೆ ದಂಪತಿ ಪುತ್ರಿ) 100 ಮೀಟರ್ (ತೃತೀಯ), 4*100 ಮೀಟರ್ ರಿಲೇ (ದ್ವಿತೀಯ), 4*400 ಮೀಟರ್ ರಿಲೇ (ಪ್ರಥಮ),

ಸಮೃದ್ಧಿ.ಜೆ.ಶೆಟ್ಟಿ (ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಹರಿಣಾಕ್ಷಿ.ಜೆ.ಶೆಟ್ಟಿ ದಂಪತಿ ಪುತ್ರಿ) ಎತ್ತರ ಜಿಗಿತ (ತೃತೀಯ), ಉದ್ದ ಜಿಗಿತ (ದ್ವಿತೀಯ), ಶ್ರದ್ಧಾಲಕ್ಷ್ಮೀ  (ತಾರಿಗುಡ್ಡೆ ರವಿಶಂಕರ್ , ಅನುಪಮಾ ದಂಪತಿ ಪುತ್ರಿ) ಟ್ರಿಪಲ್ ಜಂಪ್ (ತೃತೀಯ), ಬಹುಮಾನ ಗಳಿಸಿರುತ್ತಾರೆ.

ಬಾಲಕರ ವಿಭಾಗದಲ್ಲಿ ಚರಣ್ ಕುಮಾರ್ (ಅಳಿಕೆ ದೇವಳಗುಳಿ ಕೃಷ್ಣ ಕುಮಾರ್, ಪ್ರೇಮಾ ದಂಪತಿ ಪುತ್ರ) 3000 ಮೀಟರ್ (ದ್ವಿತೀಯ), 5 ಕಿಲೋಮೀಟರ್ ನಡಿಗೆ (ಪ್ರಥಮ), ಸಚಿತ್.ಪಿ.ಕೆ (ಕೆಮ್ಮಾಯಿಯ ಪ್ರಕಾಶ್.ಬಿ, ಸುನೀತಾ ಸಿ.ಎಚ್ ದಂಪತಿ ಪುತ್ರ) 400 ಮೀಟರ್ (ತೃತೀಯ) ಪ್ರಥಮ್.ಎಂ.ಪಿ (ಪಡ್ನೂರು ಪದ್ಮಪ್ಪ ಪೂಜಾರಿ, ಮಾಲತಿ.ಬಿ. ದಂಪತಿ ಪುತ್ರ) ಚಕ್ರ ಎಸೆತ (ದ್ವಿತೀಯ) ಬಹುಮಾನ ಗಳಿಸಿರುತ್ತಾರೆ.

ದೈಹಿಕ ಶಿಕ್ಷಣ ವಿಭಾಗ ಮುಖ್ಯಸ್ಥರಾದ ಶ್ರೀ ಭಾಸ್ಕರ ಗೌಡ ಮುಂಗ್ಲಿಮನೆಯವರ ಮಾರ್ಗದರ್ಶನದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಆಶಾಲತಾ, ಶ್ರೀಮತಿ ನಮಿತಾ, ಶ್ರೀ ದೀಪಕ್, ಶ್ರೀಮತಿ ರಶ್ಮಿ, ಶ್ರೀ ಪವನ್ ಕುಮಾರ್ ಇವರ ಸಹಕಾರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಗಿರೀಶ್ ಕಣಿಯಾರು ಮತ್ತು ಶ್ರೀಮತಿ ವಾಣಿಶ್ರೀ ಇವರುಗಳು ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ತರಬೇತುಗೊಳಿಸಿರುತ್ತಾರೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಕಾರನ್ನು ಅಡ್ಡಗಟ್ಟಿ ತಲವಾರು ತೋರಿಸಿ ಜೀವಬೆದರಿಕೆ – ಶಾಸಕರ ಚಾಲಕರು ನೀಡಿದ ದೂರಿನಲ್ಲಿ ಏನಿದೆ?

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಕಾರನ್ನು ಅಡ್ಡಗಟ್ಟಿ ತಲವಾರು ತೋರಿಸಿ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಬಗ್ಗೆ ಶಾಸಕರ ಚಾಲಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 

ನಿನ್ನೆ ರಾತ್ರಿ ಮಂಗಳೂರಿಂದ ಫರಂಗಿಪೇಟೆವರೆಗೆ ಶಾಸಕರ ಕಾರನ್ನು ಹಿಂಬಾಲಿಸಿಕೊಂಡು ಬಂದು ಜೀವ ಬೆದರಿಕೆ ಹಾಕಿದ್ದಾರೆ. ಸ್ಕಾರ್ಪಿಯೋ ಕಾರಿನಲ್ಲಿ ಬಂದಿದ್ದ ಕೆಲವರಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.  

ವೈಟ್ ಸ್ಕಾರ್ಪಿಯೋ ಕಾರೊಂದು ನಿನ್ನೆ ರಾತ್ರಿ ಮಂಗಳೂರಿನಿಂದ ಫರಂಗಿಪೇಟೆವರೆಗೆ ಶಾಸಕರ ಕಾರನ್ನು ಹಿಂಬಾಲಿಸಿಕೊಂಡು ಬಂದಿದೆ. ನಿನ್ನೆ ರಾತ್ರಿ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಶಾಸಕ ಹರೀಶ್ ಪೂಂಜಾರವರು ಆಮೇಲೆ ತನ್ನ ಕಾರನ್ನು ಬಿಟ್ಟು ತನ್ನ ಸಂಬಂಧಿಕರ ಕಾರಿನಲ್ಲಿ ಬೆಳ್ತಂಗಡಿಗೆ ಹಿಂತಿರುಗುತ್ತಿದ್ದರು.

ಮಂಗಳೂರಿನಿಂದ ಫರಂಗಿಪೇಟೆ ವರೆಗೆ ಅವರ ಕಾರನ್ನು ಸ್ಕಾರ್ಫಿಯೋ ಕಾರು ಹಿಂಬಾಲಿಸುತ್ತಿತ್ತು. ಫರಂಗಿಪೇಟೆಯಲ್ಲಿ ಶಾಸಕರ ಕಾರನ್ನು ಅಡ್ಡಕಟ್ಟಿದ ಸ್ಕಾರ್ಫಿಯೋ ಕಾರಿನಲ್ಲಿದ್ದವರು ಶಾಸಕರಿಗೆ ಮತ್ತು ಶಾಸಕರಿದ್ದ ಸಂಬಂಧಿಕರ ಕಾರಿನಲ್ಲಿದ್ದವರಿಗೆ ಮತ್ತು ಹಿಂಬಾಲಿಸಿ ಬರುತ್ತಿದ್ದ ಶಾಸಕರ ಕಾರಿನ ಚಾಲಕ ನವೀನ್ ಎಂಬವರಿಗೆ ತಲವಾರು ತೋರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ ಹಾಕಿದ್ದಾರೆ.

ಕೂಡಲೇ ಶಾಸಕರಿದ್ದ ಕಾರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಸ್ಟೇಷನ್ ನತ್ತ ತಿರುಗಿಸಿಲಾಯಿತು. ಅದನ್ನು ಕಂಡ ಸ್ಕಾರ್ಫಿಯೋ ಕಾರು ಬಿ. ಸಿ. ರೋಡಿನತ್ತ ಪರಾರಿಯಾಯಿತು. 

ಈ ಬಗ್ಗೆ ಶಾಸಕರ ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, (ದೂರಿನ ಪ್ರತಿಯ ಚಿತ್ರ ನೋಡಿ)