Thursday, July 30, 2026
Home Blog Page 159

ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್‌ ಯಕ್ಷಗಾನ ಬೊಂಬೆಯಾಟ ಟ್ರಸ್ಟ್ (ರಿ.)ಗೆ ಈ ಬಾರಿಯ ಯಕ್ಷಗಾನ ಕಲಾರಂಗದ ‘ಶ್ರೀವಿಶ್ವೇಶತೀರ್ಥ’ ಪ್ರಶಸ್ತಿ

ಉಡುಪಿ :ಆರು ತಲೆಮಾರುಗಳಿಂದ ಯಕ್ಷಗಾನ ಗೊಂಬೆಯಾಟವನ್ನು ನಡೆಸಿಕೊಂಡು ಬಂದಿರುವ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್‌ ಯಕ್ಷಗಾನ ಬೊಂಬೆಯಾಟ ಟ್ರಸ್ಟ್ ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಈ ಬಾರಿ ಉಡುಪಿಯ ಯಕ್ಷಗಾನ ಕಲಾರಂಗ ನೀಡುವ ‘ಶ್ರೀವಿಶ್ವೇಶತೀರ್ಥ’ ಪ್ರಶಸ್ತಿಗೆ ಆಯ್ಕೆಯಾಗಿದೆ.


ಕೇವಲ ಈ ಪ್ರದೇಶದಲ್ಲಷ್ಟೇ ಅಲ್ಲದೆ ರಾಷ್ಟ್ರದಾದ್ಯಂತ ಅನ್ಯಾನ್ಯ ದೇಶಗಳಲ್ಲಿ ಈ ಕಲೆಯನ್ನು ಪ್ರದರ್ಶಿಸಿದ ಹೆಗ್ಗಳಿಕೆಗೆ ಸಂಸ್ಥೆ ಭಾಜನವಾಗಿದೆ. ಪರಂಪರೆಯ ಹಾಡುಗಾರಿಕೆ ಮತ್ತು ಅರ್ಥಗಾರಿಕೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದೆ.

ಪ್ರಸಕ್ತ ಭಾಸ್ಕರ ಕೊಗ್ಗ ಕಾಮತರು ಇದರ ನಿರ್ದೇಶಕರಾಗಿದ್ದು, ಉಪ್ಪಿನಕುದ್ರುವಿನಲ್ಲಿ ಎಲ್ಲ ಮೂಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ರಂಗಮಂದಿರವನ್ನು ನಿರ್ಮಿಸಿ ಅದನ್ನು ಬೇರೆ ಬೇರೆ ಕಲಾಪ್ರಕಾರಗಳಿಗೂ ಉಚಿತವಾಗಿ ನೀಡುತ್ತಾ ವಿವಿಧ ಕಲಾ ಸಂವರ್ಧನೆಗೆ ಅನುವು ಮಾಡಿಕೊಟ್ಟಿದ್ದಾರೆ.


ಪ್ರಶಸ್ತಿಯು 50,000/-  ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್  13, 2022 ಭಾನುವಾರ ಮಂಗಳೂರಿನ ಟೌನ್‌ಹಾಲ್‌ನಲ್ಲಿ ಜರಗಲಿದೆ ಎಂಬದಾಗಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ

ದಿನಾಂಕ 12-10-2022ನೇ ಬುಧವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿ ಶಾಲಾ ಶಿಕ್ಷಕರಿಗೆ “ಪರಿಣಾಮಕಾರಿ ಬೋಧನೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ -2022” ವಿಷಯದ ಕುರಿತು ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವು ನಡೆಯಿತು.

ಕಾರ್ಯಾಗಾರವನ್ನು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಲೋಕೇಶ್.ಎಸ್.ಆರ್ ಇವರು ಉದ್ಘಾಟಿಸಿ, ಮಾತನಾಡುತ್ತಾ ಶಿಕ್ಷಕರಾದವರು ಹೆಚ್ಚಿನ ಪುಸ್ತಕಗಳನ್ನು ಓದಿ ಮಕ್ಕಳಿಗೆ ನೈತಿಕ ಮೌಲ್ಯಗಳನ್ನು ತಿಳಿಸುವುದರೊಂದಿಗೆ ರಾಷ್ಟ್ರ ಕಟ್ಟುವಲ್ಲಿ ಜವಾಬ್ದಾರಿಯುತ ಪಾತ್ರವನ್ನು ವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಆಡಳಿತ ಮಂಡಳಿ ಕೋಶಾಧಿಕಾರಿ ಶ್ರೀ ಕೃಷ್ಣಮೋಹನ್ ಇವರು ಮಾತನಾಡುತ್ತಾ ಪ್ರಜ್ಞಾವಂತ ಸುಸಂಸ್ಕೃತ ಮಕ್ಕಳನ್ನು ದೇಶಕ್ಕೆ ಕೊಡುಗೆಯಾಗಿ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು ಎಂದರು.

ನಿವೃತ್ತ ಪ್ರಾಧ್ಯಾಪಕರು, ಮಾನವ ಸಂಪದಭಿವೃದ್ಧಿ ಪ್ರಶಿಕ್ಷಣ ಪರಿಣತರೂ, ಅಭಿಯಾನಂ ಸಂಸ್ಥೆಯ ನಿರ್ದೇಶಕರೂ ಆಗಿರುವ ಡಾ.ಶಿಕಾರಿಪುರ ಕೃಷ್ಣಮೂರ್ತಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

“ಪರಿಣಾಮಕಾರಿ ಬೋಧನೆ, ತರಗತಿ ನಿರ್ವಹಣೆ, ಸೂಕ್ತ ಕಲಿಕಾ ಚಟುವಟಿಕೆಗಳು ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ-2022: ವಿಷಯದ ಕುರಿತು ಶಿಕ್ಷಕರಿಗೆ ಸಂಪೂರ್ಣ ಮಾಹಿತಿಯನ್ನು ಬಹಳ ಪರಿಣಾಮಕಾರಿಯಾಗಿ ನೀಡಿದರು.

ಯೋಗ ಶಿಕ್ಷಕಿ ಶ್ರೀಮತಿ ಶರಾವತಿ ಶಿಕ್ಷಣದಲ್ಲಿ ಯೋಗದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕಿ ಶ್ರೀಮತಿ ಜ್ಯೋತಿಲಕ್ಷ್ಮೀ ಪ್ರಾರ್ಥಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಸ್ವಾಗತಿಸಿದರು. ಶಿಕ್ಷಕಿ ಕು.ರಮ್ಯ ವಂದಿಸಿ, ಶಿಕ್ಷಕಿಯರಾದ ಶ್ರೀಮತಿ ಸೌಮ್ಯ ಕುಮಾರಿ ಮತ್ತು ಶ್ರೀಮತಿ ಸಹನಾ ಪೈ ಕಾರ್ಯಕ್ರಮ ನಿರೂಪಿಸಿದರು.

8ನೆಯ ವರ್ಷದ ತಲಪಾಡಿ ಯಕ್ಷೋತ್ಸವ, ಅದ್ದೂರಿಯ ಯಕ್ಷಗಾನ ಪ್ರದರ್ಶನ –  ದಿನಾಂಕ 20-11-2022 ಆದಿತ್ಯವಾರ ಮಧ್ಯಾಹ್ನ 12 ರಿಂದ ರಾತ್ರಿ 9 ಗಂಟೆಯ ವರೆಗೆ

ಯಕ್ಷಮಿತ್ರ ಸೇವಾ ಬಳಗ ತಲಪಾಡಿ ಅರ್ಪಿಸುವ ಈ ಬಾರಿಯ ಅಂದರೆ  8 ನೆಯ ವರ್ಷದ ತಲಪಾಡಿ ಯಕ್ಷೋತ್ಸವವು  ದಿನಾಂಕ 20-11-2022 ಆದಿತ್ಯವಾರ ಮಧ್ಯಾಹ್ನ 12 ರಿಂದ ರಾತ್ರಿ 9 ಗಂಟೆಯ ವರೆಗೆ ನಡೆಯಲಿದೆ.

ಈ ಕಾರ್ಯಕ್ರಮವು ಮಂಗಳೂರಿನ  ರಾಮಕೃಷ್ಣ ಮಠದ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ.  ತೆಂಕು-ಬಡಗು ತಿಟ್ಟುಗಳ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಅಪರೂಪದ ಪ್ರಸಂಗಗಳ ಪ್ರದರ್ಶನ ನಡೆಯಲಿದೆ. 

ಮೊದಲನೇ ಪ್ರಸಂಗ ಸಮರಸೌಗಂಧಿಕಾ ಹಾಗೂ ಎರಡನೇ ಪ್ರಸಂಗ ‘ಬಬ್ರುವಾಹನ  ಮತ್ತು ಶೇಷವಿಜಯ’  ಪಾತ್ರವರ್ಗ ಮತ್ತು ಕಲಾವಿದರ ವಿವರಗಳಿಗೆ ಆಹ್ವಾನಪತ್ರಿಕೆಯ ಚಿತ್ರವನ್ನು ನೋಡಿ.

ಈ ಅಪರೂಪದ ಪ್ರದರ್ಶನಗಳಿಗೆ ಯಕ್ಷಾಭಿಮಾನಿಗಳನ್ನು, ಯಕ್ಷಮಿತ್ರ ಸೇವಾ ಬಳಗದ  ಸಂತೋಷ್ ಅಲಂಕಾರಗುಡ್ಡೆ ಹಾಗೂ ಎಲ್ಲಾ ಸದಸ್ಯರು ಆದರದಿಂದ ಆಮಂತ್ರಿಸಿದ್ದಾರೆ. 

ಸಂತೋಷ್ ಅಲಂಕಾರಗುಡ್ಡೆ (8722369514)

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]

ಎ.ಐ.ಸಿ.ಎಸ್. ಸಾಂಸ್ಕೃತಿಕ ಸ್ಪರ್ಧೆಗಳು 2022 – ವಿದ್ಯೋದಯ ಪಬ್ಲಿಕ್ ಸ್ಕೂಲ್ ಆಯೋಜನೆ

ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗ ಸಂಸ್ಥೆ ಐ.ಸಿ.ಎಸ್.ಇ. ಪಠ್ಯಕ್ರಮ ಅಳವಡಿಸಿಕೊಂಡಿರುವ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನಲ್ಲಿಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಐ.ಸಿ.ಎಸ್.ಇ. ಮತ್ತು ಸಿ.ಬಿ.ಎಸ್.ಇ. ಶಾಲೆಗಳ ಒಕ್ಕೂಟದ ಪ್ರಸ್ತುತ ವರುಷದ ಸಾಂಸ್ಕೃತಿಕ 

ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಅಕ್ಟೋಬರ್ 15, 2022 ರಂದು ನಡೆಯಲಿರುವ ಈ ಸ್ಪರ್ಧೆಗಳಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 28 ಐ.ಸಿ.ಎಸ್.ಇ. ಮತ್ತು ಸಿ.ಬಿ.ಎಸ್.ಇ. ಶಾಲೆಗಳು ಭಾಗವಹಿಸಲಿವೆ. ಜೂನಿಯರ್ ವಿಭಾಗದಲ್ಲಿ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಜಾನಪದ ನೃತ್ಯ, ಅಗ್ನಿರಹಿತ ಅಡುಗೆ, ಛದ್ಮವೇಷ, ಪುಷ್ಪಾಲಂಕಾರ ಮತ್ತು ಆವೆಮಣ್ಣಿನ ಪ್ರತಿಕೃತಿ ರಚನಾ ಸ್ಪರ್ಧೆಗಳನ್ನು ಹಾಗೂ ಸೀನಿಯರ್ ವಿಭಾಗದಲ್ಲಿ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಸ್ತ್ರೀಯ ಸಮೂಹ ನೃತ್ಯ, ರಂಗೋಲಿ, ವರ್ಣಚಿತ್ರ, ಹಣ್ಣು ಮತ್ತು ತರಕಾರಿಗಳಲ್ಲಿ ಕಲಾಕೃತಿ ರಚನೆ ಮತ್ತು ಭಾವಗೀತೆ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.

ಅಂದು ಬೆಳಿಗ್ಗೆ 9.30 ಕ್ಕೆ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯ ಅತಿಥಿ ಶ್ರೀಮತಿ ಎಲಿಜಾ ವಾಜ಼್, ಎ.ಐ.ಸಿ.ಎಸ್.ನ ಉಡುಪಿ ಮತ್ತು ದ.ಕ. ಜಿಲ್ಲೆಯ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲರು, ಕ್ರೈಸ್ಟ್ ಸ್ಕೂಲ್, ಮಣಿಪಾಲ ಇವರು ನೆರವೇರಿಸಲಿದ್ದಾರೆ.

ಅಪರಾಹ್ನ 3.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಶ್ರೀಮತಿ ಗೀತಾ ಶಶಿಧರ್, ಪ್ರಾಂಶುಪಾಲರು, ಆನಂದತೀರ್ಥ ವಿದ್ಯಾಲಯ, ಪಾಜಕ, ಉಡುಪಿ ಇವರು ಭಾಗವಹಿಸುತ್ತಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರು: ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಅನಿತಾ ರಾಜ್, ಸಾಂಸ್ಕೃತಿಕ ಸ್ಪರ್ಧಾ ಸಂಯೋಜಕರಾದ ಶ್ರೀಮತಿ ಶುಭಾ ರಾವ್ ಮತ್ತು ಡಿಸಿಪ್ಲಿನ್ ಇನ್‌ಚಾರ್ಜ್ ಶ್ರೀ ದಾಮೋದರ್

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected] 

ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಸ್ವಾಮಿ ಮಂಗಳನಾಥಾನಂದಜಿ ಭೇಟಿ

ಪುತ್ತೂರು, ಅ 13: ಬೆಂಗಳೂರಿನ ಶಿವನಹಳ್ಳಿಯ ರಾಮಕೃಷ್ಣ ಮಠದ ಸ್ವಾಮಿ ಮಂಗಳನಾಥಾನಂದಜಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರನ್ನುಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಸ್ವಾಮೀಜಿಯವರು ಕಾಲೇಜು ಆವರಣವನ್ನು ಸಂದರ್ಶಿಸಿ ಕಾಲೇಜು ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ವಿವೇಕಾನಂದ  ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿನ್ನಲೆ ಹಾಗೂ ಕಾಲೇಜಿನ ಹಿನ್ನಲೆ, ಸೌಲಭ್ಯಗಳು ಹಾಗೂ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪೂಜ್ಯರು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ವಾಮೀಜಿಯವರು ನಂತರ ವಿವೇಕಾನಂದ ಪತ್ರಿಕೋದ್ಯಮ ವಿಭಾಗದ ವಿಕಸನ ಮಲ್ಟಿಮೀಡಿಯಾ ಸ್ಟುಡಿಯೋ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಪಾಂಚಜನ್ಯಕ್ಕೆ ಭೇಟಿ  ನೀಡಿದರು. ಈ ಸಂದರ್ಭದಲ್ಲಿ ವಿವಿಧ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕ – ಪ್ರಾಧ್ಯಾಪಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected] 

ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸಿದರೆ 82,000 ರೂಪಾಯಿ ದಂಡ ವಿಧಿಸಲು ಸ್ವಿಟ್ಜರ್ಲೆಂಡ್ ಸರ್ಕಾರ ಚಿಂತನೆ

ಬರ್ನ್: ಸ್ವಿಸ್ ಫೆಡರಲ್ ಕೌನ್ಸಿಲ್ ಸಾರ್ವಜನಿಕ ಸ್ಥಳಗಳಲ್ಲಿ ಮುಖಕವಚವನ್ನು ನಿಷೇಧಿಸುವ ಕರಡು ಕಾನೂನಿನ ಪ್ರಸ್ತಾಪವನ್ನು ಪ್ರಕಟಿಸಿದೆ. ಬುರ್ಖಾ, ಮುಸುಕು ಮತ್ತು ನಿಖಾಬ್‌ಗಳನ್ನು ನಿಷೇಧದಲ್ಲಿ ಸೇರಿಸಲಾಗುವುದು, ಆದರೆ ಶಾಸಕಾಂಗವು ಹಸಿರು ನಿಶಾನೆ ತೋರಿದರೆ ಮಾತ್ರ ಕಾನೂನು ಜಾರಿಗೆ ಬರಲಿದೆ.

ಅಂತರಾಷ್ಟ್ರೀಯ ಮಾಧ್ಯಮಗಳ ಪ್ರಕಾರ, ಕಾನೂನನ್ನು ಉಲ್ಲಂಘಿಸುವವರು 1,000 ಫ್ರಾಂಕ್ (ರೂ. 82,000) ವರೆಗೆ ದಂಡವನ್ನು ಎದುರಿಸಬೇಕಾಗುತ್ತದೆ.

ಏತನ್ಮಧ್ಯೆ, ಆರೋಗ್ಯ ಸಮಸ್ಯೆಗಳು, ಭದ್ರತಾ ಸಮಸ್ಯೆಗಳು, ಹವಾಮಾನ ಬದಲಾವಣೆಗಳಿಂದ ಉಂಟಾಗುವ ಸಮಸ್ಯೆಗಳು ಮತ್ತು ಸ್ಥಳೀಯ ಸಂಪ್ರದಾಯಗಳನ್ನು ಅಭ್ಯಾಸ ಮಾಡುವವರಿಗೆ ಮುಖದ ಹೊದಿಕೆಗಳನ್ನು ಅನುಮತಿಸಲಾಗುತ್ತದೆ.

ಈ ನಿಷೇಧವು ರಾಜತಾಂತ್ರಿಕ ಮತ್ತು ಕಾನ್ಸುಲರ್ ಕಚೇರಿಗಳು, ವಿಮಾನಗಳು ಮತ್ತು ಪೂಜಾ ಸ್ಥಳಗಳಿಗೆ ಅನ್ವಯಿಸುವುದಿಲ್ಲ. ಕೋವಿಡ್‌ನಿಂದ ರಕ್ಷಣೆಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ಗಳನ್ನು ಮಾತ್ರ ಧರಿಸಲು ಅನುಮತಿಸಲಾಗಿದೆ.

ಸಾರ್ವಜನಿಕವಾಗಿ ಮುಖಕವಚವನ್ನು ನಿಷೇಧಿಸುವ ಪ್ರಸ್ತಾಪವನ್ನು ಮೊದಲು 2021 ರಲ್ಲಿ ಜನಾಭಿಪ್ರಾಯ ಸಂಗ್ರಹಣೆಯಲ್ಲಿ ಅಂಗೀಕರಿಸಲಾಯಿತು. ಮಾರ್ಚ್ 2021 ರಲ್ಲಿ, ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಸಮೀಕ್ಷೆಯನ್ನು ನಡೆಸಲಾಯಿತು. 51.21 ಪ್ರತಿಶತದಷ್ಟು ಜನರು ನಿಷೇಧದ ಪರವಾಗಿ ಮತ ಚಲಾಯಿಸಿದ್ದಾರೆ.

ಸ್ವಿಟ್ಜರ್ಲೆಂಡ್‌ನ ಜನಸಂಖ್ಯೆಯ ಐದು ಪ್ರತಿಶತದಷ್ಟು ಮುಸ್ಲಿಮರು. ಸ್ ಕ್ಯಾಬಿನೆಟ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸಾರ್ವಜನಿಕ ಸುರಕ್ಷತೆ ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಮುಖದ ಹೊದಿಕೆಯನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಡೆನ್ಮಾರ್ಕ್, ಆಸ್ಟ್ರಿಯಾ, ನೆದರ್ಲ್ಯಾಂಡ್ಸ್ ಮತ್ತು ಬಲ್ಗೇರಿಯಾದಂತಹ ಯುರೋಪ್ ದೇಶಗಳು ಸಾರ್ವಜನಿಕವಾಗಿ ಮುಖದ ಹೊದಿಕೆಯ ಮೇಲೆ ಭಾಗಶಃ ಅಥವಾ ಸಂಪೂರ್ಣ ನಿಷೇಧವನ್ನು ಪರಿಚಯಿಸಿವೆ.

ಐದು ವರ್ಷಗಳಲ್ಲಿ ಪತ್ತನಂತಿಟ್ಟದಿಂದ 12 ಮಹಿಳೆಯರು ನಾಪತ್ತೆ, ನರಬಲಿ ಘಟನೆಗೆ ಸಂಬಂಧ? ನಾಪತ್ತೆ ಪ್ರಕರಣಗಳ ಮರು ತನಿಖೆ

ಪತ್ತನಂತಿಟ್ಟದಲ್ಲಿ ಐದು ವರ್ಷಗಳಲ್ಲಿ ಜಿಲ್ಲೆಯಿಂದ 12 ಮಹಿಳೆಯರು ನಾಪತ್ತೆಯಾಗಿದ್ದಾರೆ. ಮಹಿಳೆಯರ ನಾಪತ್ತೆ ಪ್ರಕರಣಗಳ ಮರು ತನಿಖೆ ನಡೆಯಲಿದೆ.

ಅವರ ನಾಪತ್ತೆ ಪ್ರಕರಣಕ್ಕೂ ನರಬಲಿ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು.

ನರಬಲಿ ನಡೆದ ಎಳಂತೂರ್ ಸೇರಿದಂತೆ ಅರನ್ಮುಲಾ ಸ್ಟೇಷನ್ ಮಿತಿಯಿಂದ ಮೂವರು ಮಹಿಳೆಯರು ನಾಪತ್ತೆಯಾಗಿದ್ದಾರೆ. ಅದರಲ್ಲಿ ಒಬ್ಬ ಮಹಿಳೆಯ ಶವ ಪತ್ತೆಯಾಗಿದೆ,

ಐದು ವರ್ಷಗಳಲ್ಲಿ ಕೊಚ್ಚಿ ನಗರ ವ್ಯಾಪ್ತಿಯಲ್ಲಿ 13 ನಾಪತ್ತೆ ಪ್ರಕರಣಗಳು ವರದಿಯಾಗಿವೆ. ಪೊಲೀಸರು ಈ ಪ್ರಕರಣಗಳನ್ನು ವಿವರವಾಗಿ ತನಿಖೆ ನಡೆಸಲಿದ್ದಾರೆ.

ಎಳಂತೂರು ನರಬಲಿ ಪ್ರಕರಣದ ಪ್ರಮುಖ ಆರೋಪಿ ಶಫಿ ಆಯುರ್ವೇದ ವೈದ್ಯ ಭಗವಲ್ ಸಿಂಗ್ ಕುಟುಂಬದೊಂದಿಗೆ ಎರಡು ವರ್ಷಗಳಿಂದ ಸಂಪರ್ಕ ಹೊಂದಿದ್ದಾನೆ. ಶಫಿ ಈ ಹಿಂದೆಯೂ ಇದೇ ರೀತಿ ಮಹಿಳೆಯರನ್ನು ಇಲ್ಲಿಗೆ ಕರೆತಂದಿದ್ದನೇ ಎಂಬುದನ್ನು ಪ್ರಮುಖವಾಗಿ ಪರಿಶೀಲಿಸಲಾಗುತ್ತಿದೆ.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected] 

ವಿಟ್ಲದಲ್ಲಿ ಅಂಗಡಿಯ ಶಟರ್ ಮೇಲೆ ಜಿಹಾದ್ ಬರಹ – ವಿಟ್ಲ ಪೊಲೀಸರಿಂದ ಸಿಸಿಟಿವಿ ಪರಿಶೀಲನೆ 

ನಿನ್ನೆ ರಾತ್ರಿ ವಿಟ್ಲದ ಮಧ್ಯಪೇಟೆಯಲ್ಲಿರುವ ಅಂಗಡಿಯಲ್ಲಿ ಜಿಹಾದಿಗಳ ಬರಹ ಗೋಚರಿಸಿತು. ವಿಟ್ಲ ಪೇಟೆಯಲ್ಲಿರುವ ದೀಪಕ್ ವಾಚ್ ವರ್ಕ್ಸ್ ಎಂಬ ಅಂಗಡಿಯ ಶಟರ್ ಮೇಲೆ ಈ ಬರಹ ಕಾಣಿಸಿಕೊಂಡಿದೆ.

ದೀಪಕ್ ವಾಚ್ ವರ್ಕ್ಸ್ ಎಂಬ ಅಂಗಡಿಯ ಮಾಲಕ ಅಬ್ದುಲ್ಲಾ ಎಂಬವರು. ಇಂದು ಬೆಳಿಗ್ಗೆ ಅಬ್ದುಲ್ಲಾ ಅವರು ತನ್ನ ಅಂಗಡಿಯಾದ ದೀಪಕ್ ವಾಚ್ ವರ್ಕ್ಸ್ ಗೆ ಆಗಮಿಸಿದಾಗ ಈ ಬರಹ ಅವರಿಗೆ ಕಂಡುಬಂದಿದೆ.

ಈ ಅಂಗಡಿಯ ಶಟರ್ ಮೇಲೆ ಇಂಗ್ಲೀಷ್ ಭಾಷೆಯಲ್ಲಿ NAME Jihad ಎಂದು ಬರೆಯಲಾಗಿತ್ತು.  ಕೂಡಲೇ ಅವರು ವಿಟ್ಲ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.

ಪೊಲೀಸರು ಅಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವಾಗ ಒಬ್ಬ ವ್ಯಕ್ತಿ ಬರುತ್ತಿರುವುದು ಕಾಣಿಸಿದೆ. ಆದರೆ ಆ ವ್ಯಕ್ತಿ ಯಾರು ಎಂದು ಸ್ಪಷ್ಟವಾಗಿಲ್ಲ. ಪೊಲೀಸರ ತನಿಖೆ ಪ್ರಗತಿಯಲ್ಲಿದೆ. 

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected] 

ಹಿಜಾಬ್ ನಿಷೇಧ ಪ್ರಕರಣ: ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಿಂದ ವಿಭಜಕ ಭಿನ್ನ ತೀರ್ಪು – ಪ್ರಕರಣ ಮುಖ್ಯ ನ್ಯಾಯಮೂರ್ತಿಗಳ ಅಂಗಣಕ್ಕೆ

ಹಿಜಾಬ್ ನಿಷೇಧ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಿಂದ ವಿಭಜಕ ಭಿನ್ನ ತೀರ್ಪು ಬಂದಿದೆ. ಆದ ಕರಣ ಇದೀಗ ಈ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳ ಅಂಗಣಕ್ಕೆ ಹೋಗಿದೆ.

ಕರ್ನಾಟಕ ಹಿಜಾಬ್ ನಿಷೇಧ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ವಿಭಜಿತ ತೀರ್ಪಿನ ದೃಷ್ಟಿಯಿಂದ, ಕರ್ನಾಟಕ ಹೈಕೋರ್ಟ್‌ನ ಆದೇಶವು ಮಧ್ಯಂತರ ಸಮಯದಲ್ಲಿ ಅನ್ವಯಿಸುತ್ತದೆ ಎಂದು ವಕೀಲರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಹಿಜಾಬ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಗುರುವಾರ ವಿಭಜಿತ ತೀರ್ಪು ನೀಡಿದೆಕರ್ನಾಟಕ ಹಿಜಾಬ್ ನಿಷೇಧ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುವಾರ ವಿಭಜನೆಯ ತೀರ್ಪು ನೀಡಿದೆ.

“ಅಭಿಪ್ರಾಯದಲ್ಲಿನ ಭಿನ್ನಾಭಿಪ್ರಾಯ” ದ ದೃಷ್ಟಿಯಿಂದ, ಸೂಕ್ತ ನಿರ್ದೇಶನಗಳಿಗಾಗಿ ಸುಪ್ರೀಂ ಕೋರ್ಟ್ ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಇರಿಸಲು ನಿರ್ದೇಶಿಸಿತು. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರಿಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಅನುಮತಿ ನೀಡಿದರು.

10 ದಿನಗಳ ಕಾಲ ವಾದವನ್ನು ಆಲಿಸಿದ ನಂತರ ಪೀಠವು ಸೆಪ್ಟೆಂಬರ್ 22 ರಂದು ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿತ್ತು.

ಮಾರ್ಚ್ 15 ರಂದು, ಕರ್ನಾಟಕದ ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ವಿಭಾಗವು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು, ಇದು ಇಸ್ಲಾಮಿಕ್ ನಂಬಿಕೆಯಲ್ಲಿ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ತೀರ್ಪು ನೀಡಿತು.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]

ಅಬ್ಬಬ್ಬಾ.. 2500 ಹಿಂದಿ ಥಿಯೇಟರ್ ನಲ್ಲಿ ಓಡಲಿರುವ ‘ಕಾಂತಾರ’ ಸಿನಿಮಾದ ಹಿಂದಿ ಅವತರಣಿಕೆ! – ನಾಳೆ ಹಿಂದಿಯಲ್ಲಿ ಬಿಡುಗಡೆಯಾಗುತ್ತಿರುವ ಕನ್ನಡದ ‘ಕಾಂತಾರ’ ಸಿನಿಮಾ 

ಕನ್ನಡ ಮಾತ್ರವಲ್ಲದೆ ಇತರ ಭಾಷಿಕರಿಂದಲೂ ವ್ಯಾಪಕವಾಗಿ ಪ್ರಶಂಶಿಸಲ್ಪಟ್ಟ ‘ಕಾಂತಾರ’ ಕನ್ನಡ ಸಿನಿಮಾ ಇದೀಗ ಬಾಲಿವುಡ್ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ. 

ಯಶಸ್ಸನ್ನು ಕಂಡು ಇದೀಗ ಕನ್ನಡದ ಕಾಂತಾರವನ್ನ (Bollywood) ಬಾಲಿವುಡ್​ ನಲ್ಲೂ ರಿಲೀಸ್ ಮಾಡಲು ಹೊಂಬಾಳೆ ಪ್ರೋಡಕ್ಷನ್ ನಿರ್ಧರಿಸಿದೆ. ಹಿಂದಿ ಭಾಷೆಯಲ್ಲಿ ಸುಮಾರು 2500 ಥೀಯೇಟರ್ ಗಳಲ್ಲಿ ನಾಳೆ ಶುಕ್ರವಾರ ಕಾಂತಾರ ಸಿನಿಮಾದ ಹಿಂದಿ ಆವೃತ್ತಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.  

 ಕಾಂತಾರ (Kantara) ಕನ್ನಡ ಸಿನಿಮಾ ನಾಳೆ ಶುಕ್ರವಾರದಿಂದ ಹಿಂದಿಯಲ್ಲಿ (Hindi) 2500 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ಕೆಜಿಎಫ್ ನಂತರ ಕನ್ನಡ ಮತ್ತೊಂದು ಸಿನಿಮಾ ಈ ಪ್ರಮಾಣದ ಸಂಖ್ಯೆಯಲ್ಲಿ ರಿಲೀಸ್ ಆಗುತ್ತಿರುವುದು ಸಹಜವಾಗಿಯೇ ಬಾಲಿವುಡ್ ಮಂದಿಯ ಆತಂಕ, ಅಸೂಯೆಗೆ ಕಾರಣವಾಗಿದೆ.

ಪ್ಲಾಫ್ ಸಿನಿಮಾಗಳಿಂದ ಕಂಗೆಟ್ಟಿರುವ ಬಾಲಿವುಡ್ ನಿರ್ಮಾಪಕರು ದಕ್ಷಿಣದ ಸಿನಿಮಾಗಳ ಆರ್ಭಟಕ್ಕೆ ಹೆದರಿದ್ದಾರೆ. 

ಈಗಾಗಲೇ ಕೆಜಿಎಫ್ ಸಿನಿಮಾದ ಮೂಲಕ ಯಶಸ್ಸು ಗಳಿಸಿದ್ದ ಹೊಂಬಾಳೆ ಫಿಲ್ಮಸ್, ಕಾಂತಾರದ ಮೂಲಕ ಮತ್ತೊಂದು ಗೆಲುವಿನ ನಾಗಾಲೋಟಕ್ಕೆ ತಯಾರಾಗಿದೆ. 

ಕನ್ನಡದಲ್ಲಿ ಕಾಂತಾರ ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಆಗಿದ್ದರೂ  ಇಂದಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಹಿಂದಿ ಅಲ್ಲದೆ ತೆಲುಗು, ಮಲಯಾಳ ಮತ್ತು ತಮಿಳು ಭಾಷೆಗಳಲ್ಲಿಯೂ ಕಾಂತಾರ  ಬಿಡುಗಡೆಯಾಗಲಿದೆ. 

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]