Monday, May 11, 2026
Home Blog Page 165

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ವಿದ್ಯಾರ್ಥಿಗಳು ವಿದ್ಯಾಭಾರತಿ ಕರ್ನಾಟಕ ಕ್ಷೇತ್ರಿಯ ಮಟ್ಟದ ಜ್ಞಾನ-ವಿಜ್ಞಾನ ಮೇಳಕ್ಕೆ ಆಯ್ಕೆ 

ವಿದ್ಯಾಭಾರತಿ ಕರ್ನಾಟಕ ಪ್ರಾಂತೀಯ ಮಟ್ಟದ ಜ್ಞಾನ-ವಿಜ್ಞಾನ ಮೇಳವು ಹುಣಸೂರಿನ ಶಾಸ್ತ್ರಿ ಪಬ್ಲಿಕ್ ಸ್ಕೂಲ್ ನಲ್ಲಿ 30 ಸಪ್ಟೆಂಬರ್ 2022 ಹಾಗೂ 1 ಅಕ್ಟೋಬರ್ 2022ರಂದು ನಡೆಯಿತು. ಈ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಗಣಿತ ಮಾದರಿ ತಯಾರಿಯಲ್ಲಿ 7ನೇ ತರಗತಿಯ ಶಮನ್ (ಶ್ರೀ ನಿತ್ಯಾನಂದ.ಕೆ ಮತ್ತು ಶ್ರೀಮತಿ ಸಂಧ್ಯಾ.ಕೆ ಇವರ ಪುತ್ರ) ಪ್ರಥಮ ಸ್ಥಾನ ಹಾಗೂ 7ನೇ ತರಗತಿಯ ಪ್ರೀತಿ.ಪಿ.ಪ್ರಭು(ಶ್ರೀ ಪುಂಡಲೀಕ ಪ್ರಭು ಮತ್ತು ನಾಗಾಮಣಿ ಪ್ರಭು ಇವರ ಪುತ್ರಿ) ಗಣಿತ ಪ್ರಯೋಗದಲ್ಲಿ ಪ್ರಥಮ ಸ್ಥಾನ ಪಡೆದು ಹೈದರಾಬಾದಿನಲ್ಲಿ ನಡೆಯುವ ಕ್ಷೇತ್ರಿಯ ಮಟ್ಟದ ಸ್ಪರ್ಧೆಗೆ  ಆಯ್ಕೆಯಾಗಿರುತ್ತಾರೆ. 

ಬಾಲ ವರ್ಗದ ವೇದಗಣಿತ ರಸಪ್ರಶ್ನೆಯಲ್ಲಿ 7ನೇ ತರಗತಿಯ ನಿರೀಕ್ಷಿತ್ ಹೆಗ್ಡೆ (ಶ್ರೀ ನಿಶ್ಚಯ್ ಕುಮಾರ್ ಹೆಗ್ಡೆ ಮತ್ತು ನಾಗರತ್ನ ಇವರ ಪುತ್ರ), 8ನೇ ತರಗತಿಯ ಶ್ರೇಯಸ್ ವರಂಬಳ್ಳಿತ್ತಾಯ(ಶ್ರೀ ಎಂ.ಶ್ರೀನಿವಾಸ ವರಂಬಳ್ಳಿತ್ತಾಯ ಮತ್ತು ಸಂಧ್ಯಾ ವರಂಬಳ್ಳಿತ್ತಾಯ ಇವರ ಪುತ್ರ) ಮತ್ತು 6ನೇ ತರಗತಿಯ ಶುಶಾಂತ್.ಎ(ಶ್ರೀ ದಾಮೋದರ ಮತ್ತು ಸುನೀತಾ ಇವರ ಪುತ್ರ) ಅವರ ತಂಡ ಪ್ರಾಂತ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ. 

ಕಿಶೋರ ವರ್ಗದ ಇನ್ನೋವೇಟಿವ್ ಮಾಡೆಲ್ ಸ್ಪರ್ಧೆಯಲ್ಲಿ 10ನೇ ತರಗತಿಯ ಪೃಥ್ವಿರಾಜ್ ಪ್ರಭು(ಶ್ರೀ ಪುಂಡಲೀಕ ಪ್ರಭು ಮತ್ತು ನಾಗಾಮಣಿ ಪ್ರಭು ಇವರ ಪುತ್ರ)  ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಅದರಂತೆ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ 10ನೇ ತರಗತಿಯ ಧನುಷ್ ರಾಮ್ (ಶ್ರೀ ದಿನೇಶ್ ಪ್ರಸನ್ನ ಮತ್ತು ಶ್ರೀಮತಿ ಉಮಾ.ಡಿ.ಪ್ರಸನ್ನ ಇವರ ಪುತ್ರ), 10ನೇ ತರಗತಿಯ ಅಭಿರಾಮ್(ಶ್ರೀ ನಾರಾಯಣ ಪ್ರಸಾದ್.ಪಿ.ಎಸ್ ಮತ್ತು ರಮ್ಯ ಕಾವೇರಿ ಇವರ ಪುತ್ರ) ಹಾಗೂ 9ನೇ ತರಗತಿಯ ಅಜಯ ರಾಮ್(ಶ್ರೀ ಕೇಶವ ಮೂರ್ತಿ ಮತ್ತು ಗೀತಾಲಕ್ಷ್ಮೀ ಇವರ ಪುತ್ರ) ತಂಡ,

ವಿಜ್ಞಾನ ಪತ್ರವಾಚನ ಸ್ಪರ್ಧೆಯಲ್ಲಿ 10ನೇ ತರಗತಿಯ ಅರ್ಚನಾ ಕಿಣಿ (ಶ್ರೀ ಹರೀಶ್ ಕಿಣಿ ಮತ್ತು ವಿನಯ ಕಿಣಿ ಇವರ ಪುತ್ರಿ), ಅಟಲ್ ಟಿಂಕರಿಂಗ್ ಮಾದರಿ ತಯಾರಿಯಲ್ಲಿ 10ನೇ ತರಗತಿಯ ಯುಕ್ತಶ್ರೀ (ಶ್ರೀ.ಪಿ.ಹೇಮಚಂದ್ರ ಮತ್ತು ಹೈಮಿತಾ ಇವರ ಪುತ್ರಿ) ಹಾಗೂ ನೇಹ.ಜಿ.ಹೆಗ್ಡೆ (ಶ್ರೀ ಗಣೇಶ್.ಎಂ.ಹೆಗ್ಡೆ ಮತ್ತು ಪ್ರತಿಭಾ.ಜಿ.ಹೆಗ್ಡೆ ಇವರ ಪುತ್ರಿ) ತಂಡ,

8ನೇ ತರಗತಿಯ ಚಿನ್ಮಯಿ.ಎಲ್(ಶ್ರೀ .ಎಲ್.ಕೃಷ್ಣ ಪ್ರಸಾದ್ ಮತ್ತು ಅಮೃತಾ.ಕೆ.ಪ್ರಸಾದ್ ಇವರ ಪುತ್ರಿ) ಹಾಗೂ ದಿಹರ್ಷ (ಶ್ರೀ ಎಸ್.ಶಿವಕುಮಾರ್ ಮತ್ತು ಎಸ್.ಪೊನ್ನಿ ಇವರ ಪುತ್ರಿ) ಪ್ರಾಂತೀಯ ಮಟ್ಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರತಿನಿಧಿಸಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected] 

Watch – Fierce fight between two women for seat in train, Female policeman who came to stop also got head injury, Two women who came to stop got head and face injuries

A case of a fierce fight between two women in a train for a seat has been reported. The female police officer who came to fight was also hit on the head and bleeding.

Two other women were also injured.

“After a dispute over a seat in Navi Mumbai’s Vashi, some women started hitting each other, injuring a woman police personnel who intervened” Vashi Railway Station Senior Police Inspector S Katare said.

Today 3 women had a fight in a local train running from Thane to Panvel. A fierce fight broke out between women passengers at Turbhe station in Navi Mumbai over a seat in the train.

In the entire case, a lady police official was injured while trying to intervene. After that, both the women filed a complaint each at the police station.

ಬ್ರೇಕಿಂಗ್ ವಿಡಿಯೋ – ಸೀಟಿಗಾಗಿ ಇಬ್ಬರು ಮಹಿಳೆಯರ ನಡುವೆ ರೈಲಿನಲ್ಲಿ ಭೀಕರ ಹೊಡೆದಾಟ – ತಡೆಯಲು ಬಂದ ಮಹಿಳಾ ಪೊಲೀಸ್ ಗೂ ತಲೆಗೆ ಗಾಯ, ತಡೆಯಲು ಬಂದ ಇಬ್ಬರು ಮಹಿಳೆಯರ ತಲೆ, ಮುಖಕ್ಕೆ ಗಾಯ 

ಸೀಟಿಗಾಗಿ ಇಬ್ಬರು ಮಹಿಳೆಯರ ನಡುವೆ ರೈಲಿನಲ್ಲಿ ಭೀಕರ ಹೊಡೆದಾಟ ನಡೆದ ಪ್ರಕರಣ ವರದಿಯಾಗಿದೆ. ತಡೆಯಲು ಬಂದ ಮಹಿಳಾ ಪೊಲೀಸ್ ಗೂ ತಲೆಗೆ ಏಟು ಬಿದ್ದು ರಕ್ತ ಸೋರುತ್ತಿತ್ತು.

ಇನ್ನಿಬ್ಬರು ಮಹಿಳೆಯರಿಗೂ ಗಾಯಗಳಾಗಿವೆ. ನವಿ ಮುಂಬೈಯ ವಾಶಿಯಲ್ಲಿ ಸೀಟಿನ ವಿವಾದದ ನಂತರ ಕೆಲವು ಮಹಿಳೆಯರು ಒಬ್ಬರಿಗೊಬ್ಬರು ಹೊಡೆಯಲು ಪ್ರಾರಂಭಿಸಿದರು.

ಮಧ್ಯಪ್ರವೇಶಿಸಿದ ಮಹಿಳಾ ಪೊಲೀಸ್ ಸಿಬ್ಬಂದಿ ಗಾಯಗೊಂಡರು ಎಂದು ವಾಶಿ ರೈಲು ನಿಲ್ದಾಣದ ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಎಸ್ ಕಟಾರೆ ತಿಳಿಸಿದ್ದಾರೆ.

ಇಂದು ಥಾಣೆಯಿಂದ ಪನ್ವೇಲ್ ಗೆ ಓಡುವ ಸ್ಥಳೀಯ ರೈಲಿನಲ್ಲಿ 3 ಮಹಿಳೆಯರ ಜಗಳ ತಾರಕಕ್ಕೇರಿತ್ತು. ರೈಲಿನಲ್ಲಿ ಸೀಟಿನ ವಿಚಾರವಾಗಿ ನವಿ ಮುಂಬೈನ ತುರ್ಭೆ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ನಡುವೆ ಭೀಕರ ಹೊಡೆದಾಟ ನಡೆಯಿತು.

ಇಡೀ ಪ್ರಕರಣದಲ್ಲಿ, ಮಹಿಳಾ ಪೊಲೀಸರು ಮಧ್ಯಪ್ರವೇಶಿಸಲು ಪ್ರಯತ್ನಿಸುವಾಗ ಗಾಯಗೊಂಡರು. ಆ ನಂತರ ಪೊಲೀಸ್ ಠಾಣೆಯಲ್ಲಿ ಇಬ್ಬರೂ ಮಹಿಳೆಯರೂ ತಲಾ ಒಂದು ದೂರು ದಾಖಲಿಸಿದ್ದಾರೆ.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್‌ ಕೆ.ಜೆ ದ್ವಿತೀಯ

ಪುತ್ತೂರು, ಅ 04: ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಯೋಗ ದಸರಾ ಉಪಸಮಿತಿ ಆಯೋಜಿಸಿದ ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್‌ ಕೆ.ಜೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಈತನು ಪುತ್ತೂರಿನ ನೆಹರೂ ನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್‌ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ.

ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ
ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯ ಮೂವರು ವಿದ್ಯಾರ್ಥಿಗಳು ತೇರ್ಗಡೆ

ಪುತ್ತೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಮೂಡಬಿದಿರೆಯಲ್ಲಿ ನಡೆಸಿದ 2021-22 ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಯ ಮೂವರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಸ್ಕೌಟ್ಸ್ ವಿಭಾಗದಲ್ಲಿ ಪುತ್ತೂರಿನ ಕಲ್ಪವೃಕ್ಷ ಆರ್ಗನಿಕ್ಸ್ ಮಾಲಕ ಸೂರಪ್ಪ ಗೌಡ ಹಾಗೂ ಹರಿಣಾಕ್ಷಿಯವರ ಪುತ್ರ ಸ್ವಸ್ತಿಕ್ ಎ ಎಸ್, ಕಲ್ಲರ್ಪೆಯ ಪಾಪ್ಯುಲರ್ ಸ್ವೀಟ್ಸ್ನ ಉದ್ಯೋಗಿಯಾಗಿರುವ ಸತೀಶ್ ಬಿ ಹಾಗೂ ಜಯಶ್ರೀ ಯವರ ಪುತ್ರ ಮನ್ವಿತ್ ಎಸ್ ಹಾಗೂ ಗೈಡ್ಸ್ ವಿಭಾಗದಲ್ಲಿ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ಸಹಶಿಕ್ಷಕ ಉದಯ ಕುಮಾರ್ ರೈ ಎಸ್ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂಬ್ರ ಉಪನ್ಯಾಸಕಿ ದಿವ್ಯಾ ಆಳ್ವ ಎಸ್ ಆರ್ ಅವರ ಪುತ್ರಿ ಪ್ರಾರ್ಥನಾ ರಾಜ್ಯ ಪುರಸ್ಕಾರ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿರುತ್ತಾರೆ.

ಈ ವಿದ್ಯಾರ್ಥಿಗಳಿಗೆ ವಿದ್ಯಾಲಯದ ಸ್ಕೌಟ್ ಮಾಸ್ಟರ್ ಸತೀಶ್ ಇರ್ದೆ ಹಾಗೂ ಗೈಡ್ಸ್ ಶಿಕ್ಷಕಿ ಚಂದ್ರಕಲಾ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]

ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಪಾರಂಪರಿಕ ದಿನ ಆಚರಣೆ – “ಇಡಿಯ ಜಗತ್ತಿಗೆ ನಮ್ಮ ಸತ್ವವನ್ನು ಸಾರಬೇಕಾಗಿದೆ” : ಆದರ್ಶ ಗೋಖಲೆ

ಪುತ್ತೂರು: ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಮೌಲ್ಯಗಳನ್ನು ಕೊಟ್ಟ ಪರಂಪರೆ ನಮ್ಮದು. ಬೆಳಗೆದ್ದು ದೇವರ ಸ್ತುತಿಯೊಂದಿಗೆ ನಮ್ಮ ದಿನಾಚರಣೆಯನ್ನು ಆರಂಬಿಸುವಾಗ ಈ ಜಗತ್ತಿನಲ್ಲಿರುವ ಎಲ್ಲರಿಗೂ ಶುಭವಾಗಲಿ ಎಂದು ದಿನವನ್ನು ಆರಂಭಿಸುತ್ತೇವೆ. ಇಂತಹ ಆದರ್ಶಮಯ ಪರಂಪರೆಯನ್ನು ಹೊಂದಿರುವ ನಾವು ಎಂದಿಗೂ ನಮ್ಮತನವನ್ನು ತೊರೆಯದೆ ಇಡೀ ಜಗತ್ತಿಗೆ ನಮ್ಮ ಸತ್ವವನ್ನು ಸಾರಬೇಕಾಗಿದೆ ವಾಗ್ಮಿ ಆದರ್ಶ ಗೋಖಲೆ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಸಂಸ್ಥೆಗಳಲ್ಲಿ ಒಂದಾದ ಬಪ್ಪಳಿಗೆಯ ಪದವಿ ಪೂರ್ವ ವಿದ್ಯಾಲಯದಲ್ಲಿ ಬುಧವಾರ ಆಯೋಜಿಸಲಾದ ಪಾರಂಪರಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ನಾವು ಪ್ರಾಚೀನ ಕಾಲದ ಜನರ ಜೀವನ ಪದ್ದತಿಯನ್ನು ಪುನಃ ಅನುಸರಿಸಬೇಕಾದ ಅಗತ್ಯತೆ ಇದೆ. ಇಂದಿನ ಆಧುನಿಕ ಜಗತ್ತಿನ ಫ್ಯಾಶನ್ ಹಾಗೂ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ನಮ್ಮ ದೇಶದ ಸಂಸ್ಕಾರ ಸಂಸ್ಕೃತಿ ಪರಂಪರೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪಾರಂಪರಿಕ ದಿನವನ್ನು ಒಂದೇ ದಿನಕ್ಕೆ ಸೀಮಿತವಾಗಿಸದೆ ನಮ್ಮ ಜೀವನಶೈಲಿಯಾಗಿ ಅಳವಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳೇ ನಮ್ಮ ಸಂಸ್ಕೃತಿಯ ರಾಯಭಾರಿಗಳಾಗಬೇಕೆಂದು ಕರೆನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯ ವಹಿಸಿದ್ದ ಅಂಬಿಕಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ವಿದೇಶಿಯರು ನಮ್ಮ ಸಂಸ್ಕೃತಿ, ಸಂಸ್ಕಾರಗಳನ್ನು ಅಳವಡಿಸಿಕೊಂಡು ರೋಗಮುಕ್ತ ಹಾಗೂ ಸುಖಮಯ ಜೀವನವನ್ನು ನಡೆಸಲು ಮುಂದಾಗುತ್ತಿರುವಾಗ ನಮ್ಮ ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಯತ್ತ ಒಲವು ತೋರಿಸುತ್ತಿರುವುದು ದುಃಖಕರ ಸಂಗತಿ.

ನಮ್ಮ ಭಾರತೀಯ ಶ್ರೇಷ್ಠ ಸಂಸ್ಕೃತಿಯನ್ನು ಉಳಿಸಿ ಬೆಳೆಸುವತ್ತ ವಿದ್ಯಾರ್ಥಿಗಳು ಗಮನಹರಿಸಬೇಕಾಗಿದೆ. ಇಂದಿನ ಯುವಜನತೆ ನಮ್ಮ ಪಾರಂಪರಿಕ ಉಡುಗೆ ತೊಡುಗೆಗಳನ್ನು ತೊಟ್ಟು ನಮ್ಮ ಸಂಸ್ಕೃತಿಯನ್ನು ಅನುಸರಿಸಿಕೊಂಡು ಬಂದರೆ ಮಾತ್ರ ಮುಂದಿನ ಪೀಳಿಗೆಗೆ ಇದು ವರ್ಗಾವಣೆಯಾಗಲು ಸಾಧ್ಯ ಎಂದರು.


ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ , ಪ್ರಾಂಶುಪಾಲೆ ಸುಚಿತ್ರಾ ಪ್ರಭು, ಉಪಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ ಎಸ್ ಹಾಗು ಎಲ್ಲಾ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಉಪನ್ಯಾಸಕಿ ಗೀತಾ ಸಿ ಕೆ ನಿರೂಪಿಸಿ ವಂದನಾರ್ಪಣೆಗೈದರು.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected] 

ಉಪ್ಪಿನಂಗಡಿ ರಾಮನಗರದಲ್ಲಿ ತಾಳಮದ್ದಳೆ – ‘ತರಣಿಸೇನ ಕಾಳಗ’

ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ 28ನೇ ವರ್ಷದ ಸಾರ್ವಜನಿಕ ಶಾರದೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಸದಸ್ಯರಿಂದ ‘ತರಣಿಸೇನ ಕಾಳಗ’ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ಧಕಟ್ಟೆ ಹಿಮ್ಮೇಳದಲ್ಲಿ  ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಗುರುಮೂರ್ತಿ ಅಮ್ಮಣ್ಣಾಯ, ಅರ್ಥಧಾರಿಗಳಾಗಿ ಅಂಬಾಪ್ರಸಾದ್ ಪಾತಾಳ(ತರಣಿಸೇನ) ಗುಡ್ಡಪ್ಪ ಬಲ್ಯ(ರಾವಣ) ತಿಲಕಾಕ್ಷ(ರಾವಣದೂತ) ಶ್ರೀಮತಿ ಪುಷ್ಪಲತಾ .ಎಂ(ಸರಮೆ) ವಿಜಯಕುಮಾರ್ ಕೊಯ್ಯುರು(ಸುಪಾಶ್ವಕ) ಸಂಜೀವ ಪಾರೆಂಕಿ(ವಿಭೀಷಣ) ದಿವಾಕರ ಆಚಾರ್ಯ ನೇರೆಂಕಿ (ತರಣಿಸೇನ) ದಿವಾಕರ್ ಆಚಾರ್ಯ ಗೇರುಕಟ್ಟೆ(ಶ್ರೀರಾಮ) ಭಾಗವಹಿಸಿದ್ದರು. 

ಶ್ರೀ ಶಾರದೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಉಮೇಶ ಶೆಣೈ .ಯನ್, ಸಮಿತಿಯ ಪದಾಧಿಕಾರಿಗಳಾದ ವಿಶ್ವನಾಥ ಶೆಟ್ಟಿ ಕಂಗ್ವೆ ಪುಷ್ಪರಾಜ ಶೆಟ್ಟಿ, ಜಯಂತ ಪುರೋಳಿ, ಶ್ರೀಮತಿ ಶಾಮಲಾ ಶೆಣೈ ಕಲಾವಿದರನ್ನು ಗೌರವಿಸಿದರು. ಸಂಘದ ಹಿರಿಯ ಸದಸ್ಯ ಬಿ. ಸುಬ್ರಹ್ಮಣ್ಯರಾವ್ ಉಪಸ್ಥಿತರಿದ್ದರು.

ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಅಧ್ಯಕ್ಷರಾದ ದಿವಾಕರ್ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ವಂದಿಸಿದರು.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688

ನರ್ಸರಿಯಲ್ಲಿ ಸಾಮೂಹಿಕ ಗುಂಡಿನ ದಾಳಿಯಲ್ಲಿ 23 ನರ್ಸರಿ ಮಕ್ಕಳು ಸೇರಿದಂತೆ 30 ಮಂದಿ ಸಾವು – ಹತ್ಯೆ ಮಾಡಿದ ನಂತರ ತನ್ನ ಕುಟುಂಬವನ್ನೂ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ಮಾಜಿ ಪೊಲೀಸ್ ಅಧಿಕಾರಿ – ವೀಡಿಯೊ

ಥಾಯ್ಲೆಂಡ್‌ನ ಈಶಾನ್ಯ ಪ್ರಾಂತ್ಯದಲ್ಲಿ ಗುರುವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ಕನಿಷ್ಠ 30 ಮಂದಿ ಸತ್ತಿದ್ದಾರೆ ಆದರೆ ವಿವರಗಳು ಇನ್ನೂ ಬರುತ್ತಿವೆ” ಎಂದು ಉಪ ಪೊಲೀಸ್ ವಕ್ತಾರ ಅರ್ಚನ್ ಕ್ರೈಟಾಂಗ್ ತಿಳಿಸಿದರು.

ಗುರುವಾರ ಈಶಾನ್ಯ ಥೈಲ್ಯಾಂಡ್‌ನ ನರ್ಸರಿಯೊಂದಕ್ಕೆ ಬಂದೂಕು ಮತ್ತು ಚಾಕುವಿನಿಂದ ಶಸ್ತ್ರಸಜ್ಜಿತರಾಗಿ ಬಂದ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ದಾಳಿ ಮಾಡಿ, ಮಕ್ಕಳು ಸೇರಿದಂತೆ ಕನಿಷ್ಠ 30 ಜನರನ್ನು ಗುಂಡಿಕ್ಕಿ ಕೊಂದರು ಮತ್ತು ಆಮೇಲೆ ಅವರ ಕುಟುಂಬದ ಸದಸ್ಯರನ್ನೂ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಟ್‌ಗನ್, ಪಿಸ್ತೂಲ್ ಮತ್ತು ಚಾಕುವಿನಿಂದ ಶಸ್ತ್ರಸಜ್ಜಿತವಾದ ದಾಳಿಕೋರನು ವಾಹನದಲ್ಲಿ ಬಂದು ಮಧ್ಯಾಹ್ನ 12:30 ರ ಸುಮಾರಿಗೆ ಸ್ಥಳದಿಂದ ಪಲಾಯನ ಮಾಡುವ ಮೊದಲು, ನೋಂಗ್ ಬುವಾ ಲಾಮ್ ಫು ಪ್ರಾಂತ್ಯದ ಶಿಶುಪಾಲನಾ ಕೇಂದ್ರದ ಮೇಲೆ ಗುಂಡು ಹಾರಿಸಿದನು. (0530 GMT).

“ಗುಂಡು ಹಾರಾಟದ ಘಟನೆಯಿಂದ ಸತ್ತವರ ಸಂಖ್ಯೆ… ಕನಿಷ್ಠ 30 ಜನರು” ಎಂದು ಥಾಯ್ ಪ್ರಧಾನಿ ಕಚೇರಿಯ ವಕ್ತಾರರಾದ ಅನುಚಾ ಬುರಪಚೈಸ್ರಿ ಹೇಳಿದ್ದಾರೆ.

ದಾಳಿ ನಡೆದ ಪ್ರಾಂತ್ಯದ ಪೊಲೀಸ್ ಕರ್ನಲ್ ಜಕ್ಕಪತ್ ವಿಜಿತ್ರೈತಯಾ, ಬಂದೂಕುಧಾರಿಯನ್ನು ಪನ್ಯಾ ಖಮ್ರಾಬ್ ಎಂದು ಗುರುತಿಸಿದ್ದಾರೆ, ಆರೋಪಿಯನ್ನು ಕಳೆದ ವರ್ಷ ಮಾದಕವಸ್ತು ಬಳಕೆಗಾಗಿ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿತ್ತು ಎಂದು ಹೇಳಿದರು. ಸತ್ತವರಲ್ಲಿ ಎರಡರಿಂದ ಮೂರು ವರ್ಷ ವಯಸ್ಸಿನ 23 ಮಕ್ಕಳಿದ್ದಾರೆ ಎಂದು ಜಕ್ಕಾಪಟ್ ಹೇಳಿದ್ದಾರೆ.

ರಾಜಧಾನಿ ಬ್ಯಾಂಕಾಕ್‌ನ ಮಿಲಿಟರಿ ತರಬೇತಿ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇನಾಧಿಕಾರಿಯೊಬ್ಬರು ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಒಂದು ತಿಂಗಳ ನಂತರ ಈ ಸಾಮೂಹಿಕ ಹತ್ಯೆ ನಡೆದಿದೆ.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688

ತೆಂಕುತಿಟ್ಟಿನ ಯುವ ಮದ್ದಳೆಗಾರ ಚಿದಾನಂದ ಅನಾರೋಗ್ಯದಿಂದ ನಿಧನ 

ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಮಂಡಳಿಯಲ್ಲಿ ಹಿಮ್ಮೇಳ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ಯುವ ಮದ್ದಳೆಗಾರ ಚಿದಾನಂದ (31) ಅಕಾಲಿಕವಾಗಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಚಿದಾನಂದ ಅವರು ಕಳೆದ ಕೆಲವು ದಿನಗಳಿಂದ ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಸಂಜೆ ಕಾಯಿಲೆ ಉಲ್ಬಣಗೊಂಡು ಚಿಕಿತ್ಸೆ ಫಲಕಾರಿಯಾಗದೆ ದೈವಾಧೀನರಾದರು.

ಚಿದಾನಂದರವರು ಜನಿಸಿದ್ದು ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಕುದ್ಕುಳಿಯಲ್ಲಿ. ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ವಾಸವಾಗಿದ್ದರು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಲ್ಲಿ 15 ವರ್ಷಕ್ಕೂ ಹೆಚ್ಚು ವರ್ಷಗಳ ಕಾಲ ಮದ್ದಳೆಗಾರರಾಗಿ ಸೇವೆ ಸಲ್ಲಿಸಿದ್ದ ಇವರು ಭಾಗವತಿಕೆ, ನಾಟ್ಯವನ್ನೂ ಬಲ್ಲವರು.

ಖ್ಯಾತ ಮದ್ದಳೆಗಾರರಾದ ಕುಮಾರ ಸುಬ್ರಹ್ಮಣ್ಯ ಭಟ್ ವಳಕ್ಕುಂಜ ಇವರ ಗರಡಿಯಲ್ಲಿ ಪಳಗಿದ್ದ ಚಿದಾನಂದ ಅವರು ಭರವಸೆಯ ಉದಯೋನ್ಮುಖ ಕಲಾವಿದರಾಗಿದ್ದರು.

ಅಕಾಲ ಮೃತ್ಯುವಶರಾದ ಚಿದಾನಂದ ಅವರು ಸಹೋದರ, ಸಹೋದರಿ ಮತ್ತು ಅನೇಕ ಯಕ್ಷಗಾನ ಅಭಿಮಾನಿಗಳನ್ನು ಅಗಲಿದ್ದಾರೆ. 

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ –  ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ,  ಕಾಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅರೆಸ್ಟ್

ನೇಪಾಳ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ, (ಚಿತ್ರದಲ್ಲಿ ಬಿಳಿ ಉಡುಪು ಧರಿಸಿದವರು) ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.

ಇಂದು ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಆತನನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ಅವರು ಅಂತಿಮವಾಗಿ ನೇಪಾಳಕ್ಕೆ ಆಗಮಿಸಿದ್ದಾರೆ ಮತ್ತು ಅಪ್ರಾಪ್ತ ವಯಸ್ಕ ಹುಡುಗಿಯ ಮೇಲೆ ಅತ್ಯಾಚಾರದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಸಂತ್ರಸ್ತೆ ಹುಡುಗಿ ಕಾಠ್ಮಂಡು ಪೊಲೀಸ್ ಠಾಣೆಯಲ್ಲಿ ಸ್ಟಾರ್ ಕ್ರಿಕೆಟಿಗನ ವಿರುದ್ಧ ಪೊಲೀಸ್ ದೂರು ನೀಡಿದ ನಂತರ ಆಪಾದಿತ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ.

ಸುದ್ದಿ ಸಂಸ್ಥೆ ANI ಪ್ರಕಾರ, ಅಕ್ಟೋಬರ್ 6, ಗುರುವಾರದಂದು ಕಾಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಲಾಮಿಚಾನೆಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.