Sunday, August 30, 2026
Home Blog Page 184

ತನ್ನ ಮಕ್ಕಳಿಗೆ ಡೇಟಿಂಗ್ ಮಾಡಲು ಸಲಹೆ ನೀಡಿದ ಗೌರಿ ಖಾನ್ – ಮಗನಿಗೆ “ಎಷ್ಟು ಹುಡುಗಿಯರೊಂದಿಗೆ ಬೇಕಾದರೂ ಡೇಟ್ ಮಾಡು” ಮತ್ತು ಮಗಳಿಗೆ “ಏಕಕಾಲಕ್ಕೆ ಒಂದಕ್ಕಿಂತ ಹೆಚ್ಚು ಹುಡುಗರೊಂದಿಗೆ ಡೇಟಿಂಗ್ ಮಾಡಬೇಡ”  ಎಂದು ಸಲಹೆ ನೀಡಿದ ಮಹಾತಾಯಿ! ಭಾರತದ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಾಲಿವುಡ್ ಸಿನಿಮಾ ಮಂದಿ ಮತ್ತು ಶೋಗಳು 

0

ಗೌರಿ ಖಾನ್ ಅವರು ಪುತ್ರ ಆರ್ಯನ್ ಖಾನ್ ಅವರಿಗೆ ನೀಡಲಿರುವ ಡೇಟಿಂಗ್ ಸಲಹೆಯನ್ನು ಬಹಿರಂಗಪಡಿಸಿದ್ದಾರೆ:

‘ನೀವು ನಿರ್ಧರಿಸುವವರೆಗೆ ನಿಮಗೆ ಎಷ್ಟು ಹುಡುಗಿಯರನ್ನು ಬೇಕಾದರೂ ಡೇಟ್ ಮಾಡಿ…’ ಗೌರಿ ಖಾನ್ ಅವರು ತಮ್ಮ ಮಗ ಆರ್ಯನ್ ಖಾನ್ ಮತ್ತು ಮಗಳು ಸುಹಾನಾ ಖಾನ್ ಅವರಿಗೆ ನೀಡುವ ಡೇಟಿಂಗ್ ಸಲಹೆಯನ್ನು ಬಹಿರಂಗಪಡಿಸಿದ್ದಾರೆ.

ನಿರ್ಮಾಪಕಿ ಮತ್ತು ಸೆಲೆಬ್ರಿಟಿ ಇಂಟೀರಿಯರ್ ಡಿಸೈನರ್, ನಟ ಶಾರುಖ್ ಖಾನ್ ಅವರ ಪತ್ನಿ ಗೌರಿ ಖಾನ್ ಅವರು 18 ವರ್ಷಗಳ ನಂತರ ಕಾಫಿ ವಿತ್ ಕರಣ್ ಸೀಸನ್ 7 ರಲ್ಲಿ ಕಾಣಿಸಿಕೊಂಡಿದ್ದಾರೆ.

ವಿವಾದಾತ್ಮಕ ಚಾಟ್ ಶೋನಲ್ಲಿ ಕಾಣಿಸಿಕೊಂಡಾಗ, ಗೌರಿ ಶಾರುಖ್ ಖಾನ್ ಮತ್ತು ಅವರ ಮಕ್ಕಳಾದ ಆರ್ಯನ್, ಸುಹಾನಾ ಅವರ ಕುರಿತು ತಮ್ಮ ಮಾತುಗಳನ್ನು ಹೇಳಿದರು. ಕರಣ್ ಜೋಹರ್ ಅವರು ಆರ್ಯನ್ ಖಾನ್ ಅವರಿಗೆ ನೀಡಲು ಬಯಸುವ ಡೇಟಿಂಗ್ ಸಲಹೆಯ ಬಗ್ಗೆ ಗೌರಿ ಅವರನ್ನು ಕೇಳಿದರು.

ಅವಳು ಉತ್ತರಿಸಿದಳು, ತಮ್ಮ ಮಗ ಆರ್ಯನ್ ಗೆ “ನೀವು ಮದುವೆಯಾಗಲು ನಿರ್ಧರಿಸುವವರೆಗೆ ನಿಮಗೆ ಬೇಕಾದಷ್ಟು ಹುಡುಗಿಯರನ್ನು ಡೇಟ್ ಮಾಡಿ. ತದನಂತರ ಪೂರ್ಣ ವಿರಾಮ. ” ಮಗಳು ಸುಹಾನಾಗೆ ಗೌರಿ ಹೇಳಿದರು, “ಒಂದೇ ಸಮಯದಲ್ಲಿ ಇಬ್ಬರು ಹುಡುಗರೊಂದಿಗೆ ಎಂದಿಗೂ ಡೇಟಿಂಗ್ ಮಾಡಬೇಡಿ.”

ಪಿಎಫ್‌ಐ ಕಚೇರಿಗಳು ಮತ್ತು ನಾಯಕರ ನಿವಾಸಗಳ ಮೇಲೆ ಎನ್​ಐಎ ದಾಳಿ – ರಾಹುಲ್​ ಗಾಂಧಿ ಪರೋಕ್ಷ ಬೆಂಬಲ   

0

ಮಂಗಳೂರು ಸೇರಿದಂತೆ ಇಂದು ದೇಶಾದ್ಯಂತ ಎಸ್‌ಡಿಪಿಐ (SDPI) ಮತ್ತು ಪಿಎಫ್‌ಐ(PFI) ಕಚೇರಿಗಳ ಮೇಲೆ ಎನ್‌ಐಎ (NIA) ಮಿಂಚಿನ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿ ಕೆಲವರನ್ನು ಬಂಧಿಸಿದೆ ಎಂದು ವರದಿಯಾಗಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಈ ಕುರಿತು ಪ್ರಶ್ನೆ ಕೇಳಲಾಯಿತು. 

ಪಿಎಫ್‌ಐ ಕಚೇರಿಗಳು ಮತ್ತು ನಾಯಕರ ನಿವಾಸಗಳ ಮೇಲೆ ದಾಳಿ ನಡೆಸಿರುವ ಕುರಿತು ಕೇಳಲಾದ ಪ್ರಶ್ನೆಗೆ, “ಎಲ್ಲಾ ರೀತಿಯ ಕೋಮುವಾದ ಮತ್ತು ಹಿಂಸಾಚಾರಗಳು ಎಲ್ಲಿಂದ ಬಂದರೂ ಒಂದೇ ಆಗಿರುತ್ತವೆ ಮತ್ತು ಹೋರಾಡಬೇಕು. ಶೂನ್ಯ ಸಹಿಷ್ಣುತೆ ಇರಬೇಕು” ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದರು.

ಪಿಎಫ್​ಐ ಕಚೇರಿಗಳು ಮತ್ತು ಅದರ ನಾಯಕರ ಮೇಲೆ ಎನ್​ಐಎ ದಾಳಿ ಕುರಿತಾದ ಪ್ರಶ್ನೆಗೆ ರಾಹುಲ್ ಗಾಂಧಿ​ ಹೀಗೆ ಹೇಳುವ ಮೂಲಕ ಪರೋಕ್ಷವಾಗಿ ಎನ್​ಐಎ ದಾಳಿಯನ್ನು ಬೆಂಬಲಿಸಿದ್ದಾರೆ.

21ನೆಯ ತಾಲೂಕು ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ – “ಪುತ್ತೂರು ಅನೇಕ ಕಾರ್ಯಚಟುವಟಿಕೆಗಳ ತವರೂರು” : ಡಾ.ಎಂ.ಪಿ.ಶ್ರೀನಾಥ್

0

ಪುತ್ತೂರು: ಪುತ್ತೂರು ಅನೇಕ ಕಾರ್ಯಚಟುವಟಿಕೆಗಳ ತವರೂರು. ಈ ಪ್ರದೇಶದಲ್ಲಿ ಸೆಪ್ಟೆಂಬರ್ 29 ಹಾಗೂ 30ರಂದು ಆಯೋಜನೆಗೊಳ್ಳಲಿರುವ ತಾಲೂಕು ಸಾಹಿತ್ಯ ಸಮ್ಮೇಳನ ಹಲವು ಆಯಾಮಗಳಿಂದ ಪ್ರಸ್ತುತಗೊಳ್ಳುತ್ತಿದೆ ಮಾತ್ರವಲ್ಲದೆ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಮುಂದೆ ಸಾಹಿತ್ಯ ಸಮ್ಮೇಳನ ಆಯೋಜಿಸುವವರಿಗೆ ಮಾದರಿಯಾಗಿ ಮೂಡಿಬಂದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ 21ನೆಯ ತಾಲೂಕು ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಬಿ.ಪುರಂದರ ಭಟ್ ಮಾತನಾಡಿ ಇಂದು ಅಕ್ಷರ ಕ್ಷರವಾಗುತ್ತಿರುವ ಕಾಲಘಟ್ಟದಲ್ಲಿದ್ದೇವೆ. ಹಾಗಾಗಿ ಅಕ್ಷರಗಳನ್ನು ಹೆಚ್ಚು ಹೆಚ್ಚು ಬಿಡುಗಡೆ ಮಾಡಬೇಕಿದೆ. ಮುಚ್ಚಿಡುವ ಪ್ರಕ್ರಿಯೆಗಿಂತ ತೆರೆದಿಡುವ ಪ್ರಕ್ರಿಯೆ ಸಮಾಜಕ್ಕಿಂದು ಬೇಕಾಗಿದೆ ಎಂದು ಹೇಳಿದರು.


ವೇದಿಕೆಯಲ್ಲಿ ಈ ಬಾರಿಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಶ್ರೀಧರ ಎಚ್.ಜಿ, ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್, ಸಮ್ಮೇಳನ ಆಯೋಜಕರಾದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ವಿಶ್ರಾಂತ ಪ್ರಾಚಾರ್ಯ ಪ್ರೊ.ಎ.ವಿ.ನಾರಾಯಣ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ವಿ.ಬಿ.ಅರ್ತಿಕಜೆ ಉಪಸ್ಥಿತರಿದ್ದರು.

ಪುತ್ತೂರು ಸಾಹಿತ್ಯ ಪರಿಷತ್‌ನ ಗೌರವ ಕೋಶಾಧ್ಯಕ್ಷ ಡಾ.ಹರ್ಷಕುಮಾರ್ ರೈ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು.

ಅಂಬಿಕಾ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ನಿವಾಸಕ್ಕೆ ಪ್ರಮೋದ್ ಮುತಾಲಿಕ್ ಭೇಟಿ, ಅಂಬಿಕಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅನುಪಮ ಟಿವಿಗೆ ವಿಶೇಷ ಸಂದರ್ಶನ

0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅವರ ಶ್ರೀಚಕ್ರ ನಿವಾಸಕ್ಕೆ ಶ್ರೀರಾಮ ಸೇನೆಯ ಸ್ಥಾಪಕ, ಹಿಂದೂ ನಾಯಕ ಪ್ರಮೋದ್ ಮುತಾಲಿಕ್ ಸೋಮವಾರ ಭೇಟಿ ನೀಡಿದರು. ಸುಮಾರು ಮೂರುದಶಕಗಳ ಹಿಂದೆ ಸಂಘಟನೆಯ ಕಾರ್ಯದಲ್ಲಿ, ಸುಬ್ರಹ್ಮಣ್ಯ ನಟ್ಟೋಜರನ್ನೊಳಗೊಂಡ0ತೆ ತೊಡಗಿಕೊಂಡದ್ದನ್ನು ಮುತಾಲಿಕ್ ಅವರು ಸ್ಮರಿಸಿಕೊಂಡರು.


ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಮುನ್ನಡೆಸುತ್ತಿರುವ ಅನುಪಮ ಟಿವಿ ಎಂಬ ಯೂಟ್ಯೂಬ್ ವಾಹಿನಿ ಜತೆ ಮಾತನಾಡಿದ ಮುತಾಲಿಕ್ ಅವರು ದೇಶವನ್ನು ಭ್ರಷ್ಟಾಚಾರ ನಿರಂತರವಾಗಿ ಕಾಡುತ್ತಲೇ ಇದೆ. ಭ್ರಷ್ಟಾಚಾರ ಸಮಾಜಕ್ಕೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹೊರತುಪಡಿಸಿ ಮತ್ಯಾರಿಗೂ ದೇಶವನ್ನು ಹೇಗೆ ಮುನ್ನಡೆಸಬೇಕೆಂಬ ಕಲ್ಪನೆಗಳಿಲ್ಲ ಎಂದರಲ್ಲದೆ ಸಂವಿಧಾನದಲ್ಲಿ ಜಾತ್ಯಾತೀಯ ಎಂಬ ಶಬ್ದವನ್ನು ಸೇರಿಸಬಹುದಾದರೆ ಹಿಂದೂ ರಾಷ್ಟ್ರ ಎಂಬ ಶಬ್ದವನ್ನು ಸೇರಿಸುವುದಕ್ಕೆ ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದರು.


ಶ್ರೀರಾಮಸೇನೆಯನ್ನು ರಾಜಕೀಯ ಪಕ್ಷವನ್ನಾಗಿ ಮಾಡುವುದಿಲ್ಲ. ಬದಲಾಗಿ ಬಿಜೆಪಿಯನ್ನೇ ಸರಿದಾರಿಗೆ ತರುವ ಪ್ರಯತ್ನ ಮುಂದುವರಿಯುತ್ತದೆ. ಇದೇ ಬಿಜೆಪಿಯ ಮೂಲಕ ಹಿಂದೂರಾಷ್ಟ್ರದ ಕಲ್ಪನೆಯನ್ನು ಸಾಕಾರಗೊಳಿಸಲಾಗುತ್ತದೆ. ಇಂದು ಕೇವಲ ಕರ್ನಾಟಕಕ್ಕೆ ಮಾತ್ರವಲ್ಲದೆ ಇಡಿಯ ದೇಶಕ್ಕೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತದ ಮಾದರಿ ಬೇಕಾಗಿದೆ.

ಹಿಂದೂಗಳು ಆಲಸ್ಯವನ್ನು ಬಿಟ್ಟು ಜಾಗೃತರಾಗಬೇಕು ಎಂದರಲ್ಲದೆ ಸಂಸ್ಕೃತಿ, ಸಂಸ್ಕಾರ, ದೇಶಪ್ರೇಮದ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಪ್ರಮೋದ್ ಮುತಾಲಿಕ್ ಅವರನ್ನು ಸುಬ್ರಹ್ಮಣ್ಯ ನಟ್ಟೋಜ ಹಾಗೂ ರಾಜಶ್ರೀ ನಟ್ಟೋಜ ದಂಪತಿ ಸನ್ಮಾನಿಸಿ, ಹಿಂದೂ ಜಾಗೃತಿ ಮೂಡಿಸುವ ಮುತಾಲಿಕ್ ಅವರ ಕೈಂಕರ್ಯದಲ್ಲಿ ತಾವೂ ಜತೆಯಾಗಿದ್ದೇವೆ ಎಂಬುದನ್ನು ಶ್ರುತಪಡಿಸಿದರು.

ನಟ್ಟೋಜ ಫೌಂಡೇಶನ್ ಟ್ರಸ್ಟ್ನ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್, ಸುಬ್ರಹ್ಮಣ್ಯ ನಟ್ಟೋಜ ಅವರ ಪುತ್ರ ಶ್ರೀಕೃಷ್ಣ ನಟ್ಟೋಜ, ಅಂಬಿಕಾ ವಿದ್ಯಾಲಯದ ಸಂಪನ್ಮೂಲ ಉಪನ್ಯಾಸಕ ಶ್ರೀಕೃಷ್ಣ ಉಪಾಧ್ಯಾಯ, ಶ್ರೀರಾಮ ಸೇನೆ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇರಾನ್‌ನಲ್ಲಿ ವ್ಯಾಪಕವಾಗಿ ಹರಡಿದ ಹಿಜಾಬ್ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ – ಹೆಚ್ಚಾಗುತ್ತಿರುವ ಸಾವಿನ ಸಂಖ್ಯೆ

0

ಇರಾನ್‌ನಲ್ಲಿ ವ್ಯಾಪಕವಾಗಿ ಹರಡಿದ ಹಿಜಾಬ್ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಸಾಮಾಜಿಕ ಜಾಲತಾಣ ಮತ್ತು ಇಂಟರ್ನೆಟ್ ನ್ನು ಇರಾನಿನಲ್ಲಿ ಈಗ ನಿರ್ಬಂಧಿಸಲಾಗಿದೆ. 

ಇರಾನ್ ಅಧಿಕಾರಿಗಳು ಮತ್ತು ಕುರ್ದಿಶ್ ಹಕ್ಕುಗಳ ಗುಂಪು ಬುಧವಾರ ಸಾವಿನ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿ ಮಾಡಿದೆ, ನೈತಿಕತೆಯ ಪೊಲೀಸರು ಬಂಧಿಸಿರುವ ಮಹಿಳೆಯ ಸಾವಿನ ಮೇಲಿನ ಜನರ ಕೋಪವು ಐದನೇ ದಿನಕ್ಕೆ ಪ್ರತಿಭಟನೆಯನ್ನು ಹೆಚ್ಚಾಗಿಸಿದೆ.

ಇರಾನಿನಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹೊಸ ನಿರ್ಬಂಧಗಳನ್ನು ಇರಿಸಲಾಗಿದೆ. ಕಳೆದ ಎರಡು ದಿನಗಳಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಮಾಧ್ಯಮಗಳು ಮತ್ತು ಸ್ಥಳೀಯ ಪ್ರಾಸಿಕ್ಯೂಟರ್ ಹೇಳಿದರು,

ಅಧಿಕೃತ ಮೂಲಗಳ ಪ್ರಕಾರ ಒಟ್ಟು ಸಾವಿನ ಸಂಖ್ಯೆಯನ್ನು ಎಂಟಕ್ಕೆ ಏರಿದೆ, ಇದರಲ್ಲಿ ಒಬ್ಬ ಪೊಲೀಸ್ ಸದಸ್ಯ ಮತ್ತು ಸರ್ಕಾರದ ಪರ ಸೇನಾ ಸದಸ್ಯರು ಸೇರಿದ್ದಾರೆ.

ಇರಾನ್‌ನ ಕುರ್ದಿಶ್-ಜನಸಂಖ್ಯೆಯ ವಾಯುವ್ಯ ಪ್ರದೇಶಗಳಲ್ಲಿ ಕೇಂದ್ರೀಕೃತವಾಗಿರುವ ಪ್ರತಿಭಟನೆಗಳು ರಾಷ್ಟ್ರವ್ಯಾಪಿ ಕನಿಷ್ಠ 50 ನಗರಗಳು ಮತ್ತು ಪಟ್ಟಣಗಳಿಗೆ ಹರಡಿವೆ, ಕುರ್ದಿಶ್ ಹಕ್ಕುಗಳ ಗುಂಪು ಹೆಂಗಾವ್‌ನ ವರದಿಗಳು 10 ಪ್ರತಿಭಟನಾಕಾರರು ಕೊಲ್ಲಲ್ಪಟ್ಟರು ಎಂದು ಹೇಳುತ್ತವೆ.

ಆದರೆ ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಕೊಂದಿದ್ದಾರೆ ಎಂದು ಅಧಿಕಾರಿಗಳು ನಿರಾಕರಿಸಿದ್ದಾರೆ, ಅವರು ಸಶಸ್ತ್ರ ಭಿನ್ನಮತೀಯರು ಗುಂಡು ಹಾರಿಸಿರಬಹುದು ಎಂದು ಸೂಚಿಸಿದ್ದಾರೆ.

ಭಾರತದಲ್ಲಿ ನಕಲಿ ನೋಟುಗಳನ್ನು ಅತಿದೊಡ್ಡ ಮಟ್ಟದಲ್ಲಿ ಪೂರೈಸುತ್ತಿದ್ದ ಐಎಸ್ಐ ಏಜೆಂಟ್ ನನ್ನು ನೇಪಾಳದಲ್ಲಿ ಗುಂಡಿಕ್ಕಿ ಹತ್ಯೆ 

0

ಭಾರತದಲ್ಲಿ ನಕಲಿ ಕರೆನ್ಸಿಗಳ ಅತಿದೊಡ್ಡ ಪೂರೈಕೆದಾರನಾಗಿದ್ದ ಐಎಸ್ಐ ಏಜೆಂಟ್ ಅನ್ನು ನೇಪಾಳದ ಕಾಠ್ಮಂಡುವಿನಲ್ಲಿ ಸೆಪ್ಟೆಂಬರ್ 19 ರಂದು ಗುಂಡಿಕ್ಕಿ ಕೊಲ್ಲಲಾಯಿತು. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ನ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ನೇಪಾಳದ ಕಾಠ್ಮಂಡುವಿನಲ್ಲಿ ಅವನ ಅಡಗುತಾಣದ ಹೊರಗೆ ಸೆಪ್ಟೆಂಬರ್ 19 ರಂದು ಗುಂಡಿಕ್ಕಿ ಕೊಲ್ಲಲಾಯಿತು.

ಭಾರತದಲ್ಲಿ ISI ನ ನಕಲಿ ನೋಟುಗಳ ಅತಿದೊಡ್ಡ ಪೂರೈಕೆದಾರ ಎಂದು ಇಂಟೆಲ್ ಏಜೆನ್ಸಿಗಳು ತಿಳಿಸಿವೆ. ಈ ಘಟನೆಯು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅಪರಿಚಿತ ದುಷ್ಕರ್ಮಿಗಳು ಐಎಸ್ಐ ಏಜೆಂಟ್ ಮೇಲೆ ಗುಂಡು ಹಾರಿಸಿದ ಸಿಸಿಟಿವಿ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ.

ಐಎಸ್‌ಐ ಏಜೆಂಟ್ ಲಾಲ್ ಮೊಹಮ್ಮದ್ (55) ಅಲಿಯಾಸ್ ಮೊಹಮ್ಮದ್ ದರ್ಜಿ ಎಂದು ಗುರುತಿಸಲಾಗಿದೆ. ಐಎಸ್‌ಐನ ಆಜ್ಞೆಯಂತೆ ಲಾಲ್ ಮೊಹಮ್ಮದ್ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ನೇಪಾಳಕ್ಕೆ ನಕಲಿ ಭಾರತೀಯ ಕರೆನ್ಸಿಯನ್ನು ಪಡೆದು ಅಲ್ಲಿಂದ ಭಾರತಕ್ಕೆ ಸರಬರಾಜು ಮಾಡುತ್ತಿದ್ದ.

ಅಧಿಕಾರಿಗಳ ಪ್ರಕಾರ, ಲಾಲ್ ಮೊಹಮ್ಮದ್ ಐಎಸ್‌ಐಗೆ ಲಾಜಿಸ್ಟಿಕ್ಸ್ ಬೆಂಬಲದೊಂದಿಗೆ ಸಹಾಯ ಮಾಡಿದ್ದಾನೆ ಮತ್ತು ಭೂಗತ ದರೋಡೆಕೋರ ದಾವೂದ್ ಇಬ್ರಾಹಿಂನ ಡಿ-ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದನು. ಇತರ ಐಎಸ್‌ಐ ಏಜೆಂಟ್‌ಗಳಿಗೂ ಆಶ್ರಯ ನೀಡಿದ್ದರು.

ಕಠ್ಮಂಡುವಿನ ಗೊತಾಟರ್ ಪ್ರದೇಶದಲ್ಲಿ ಲಾಲ್ ಮೊಹಮ್ಮದ್ ತನ್ನ ಮನೆಯ ಹೊರಗೆ ಐಷಾರಾಮಿ ಕಾರಿನಿಂದ ಹೇಗೆ ಕೆಳಗಿಳಿದಿದ್ದಾನೆ ಎಂಬುದನ್ನು ಸಿಸಿಟಿವಿ ದೃಶ್ಯಾವಳಿ ತೋರಿಸುತ್ತದೆ. ಸ್ವಲ್ಪ ಸಮಯದ ನಂತರ, ಇಬ್ಬರು ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದರು.

ಲಾಲ್ ಮೊಹಮ್ಮದ್ ತನ್ನ ಕಾರಿನ ಹಿಂದೆ ಅಡಗಿಕೊಳ್ಳಲು ಪ್ರಯತ್ನಿಸಿದರು ಆದರೆ ದಾಳಿಕೋರರು ಗುಂಡಿನ ದಾಳಿಯನ್ನು ಮುಂದುವರೆಸಿದರು. ಲಾಲ್ ಮೊಹಮ್ಮದ್ ಅವರ ಮಗಳು ತನ್ನ ತಂದೆಯನ್ನು ರಕ್ಷಿಸಲು ಮನೆಯ ಮೊದಲ ಮಹಡಿಯಿಂದ ಹೇಗೆ ಜಿಗಿದಿದ್ದಾಳೆ ಎಂಬುದನ್ನು ಸಿಸಿಟಿವಿ ಬಹಿರಂಗಪಡಿಸುತ್ತದೆ.

ಆದರೆ, ಆಕೆ ತನ್ನ ತಂದೆಯನ್ನು ತಲುಪುವಷ್ಟರಲ್ಲಿ ದುಷ್ಕರ್ಮಿಗಳು ಮೊಹಮ್ಮದ್‌ನನ್ನು ಕೊಂದು ಪರಾರಿಯಾಗಿದ್ದರು.

ವೃತ್ತ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯೊಂದಿಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ.

0

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು ಇವರ ವತಿಯಿಂದ ಸುಬೋಧ ಪ್ರೌಢ ಶಾಲೆ, ಪಾಣಾಜೆ ಇಲ್ಲಿ ನಡೆದ ಪುತ್ತೂರು ವೃತ್ತ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಆಂಗಿಕಾ ಶೆಟ್ಟಿ  (ರಾಜ್ ಕುಮಾರ್ ಶೆಟ್ಟಿ, ಸ್ವಸ್ತಿಕಾ. ಆರ್.ಶೆಟ್ಟಿ ದಂಪತಿ ಪುತ್ರಿ) ಭರತನಾಟ್ಯದಲ್ಲಿ ಪ್ರಥಮ,  10ನೇ ತರಗತಿಯ ತನ್ವಿ ಶೆಣೈ ( ವಿಶ್ವಾಸ್ ಶೆಣೈ, ಶಾಂತೇರಿ ಶೆಣೈ ದಂಪತಿ ಪುತ್ರಿ) 

ಇಂಗ್ಲಿಷ್ ಭಾಷಣದಲ್ಲಿ ಪ್ರಥಮ, 10ನೇ ತರಗತಿಯ ಸಾನ್ವಿ ಕಜೆ (ಡಾ. ಚರಣ್ ಕಜೆ, ಡಾ.ರಮ್ಯಾ ಕಜೆ ದಂಪತಿ ಪುತ್ರಿ) ಗಝಲ್ ನಲ್ಲಿ ಪ್ರಥಮ, 10ನೇ ತರಗತಿಯ ಶರಣ್  (ಸೀತಾರಾಮ ರೈ, ಸವಿತಾ ರೈ ದಂಪತಿ ಪುತ್ರ) ಹಾಸ್ಯದಲ್ಲಿ ಪ್ರಥಮ, 10ನೇ ತರಗತಿಯ ಧನುಷ್ ರಾಮ್(ದಿನೇಶ್ ಪ್ರಸನ್ನ , ಉಮಾ.ಡಿ. ಪ್ರಸನ್ನ ದಂಪತಿ ಪುತ್ರ) ಮತ್ತು ಹಿಮಾನಿ (ಚಿದಾನಂದ, ಶೋಭಾ ದಂಪತಿ ಪುತ್ರಿ) ಇವರ ತಂಡ ರಸಪ್ರಶ್ನೆಯಲ್ಲಿ ಪ್ರಥಮ, 9ನೇ ತರಗತಿಯ ಅಮೋಘಕೃಷ್ಣ (ಬಾಲಕೃಷ್ಣ ಭಟ್, ಸುಮಿತ್ರಾ ಭಟ್ ದಂಪತಿ ಪುತ್ರ) ಜನಪದಗೀತೆಯಲ್ಲಿ  ಪ್ರಥಮ, 

10ನೇ ತರಗತಿಯ ಅರ್ಚನಾ ಕಿಣಿ (ಹರೀಶ್ ಕಿಣಿ, ವಿನಯಾ ಕಿಣಿ ದಂಪತಿ ಪುತ್ರಿ) ಸಂಸ್ಕೃತ ಭಾಷಣದಲ್ಲಿ ದ್ವಿತೀಯ, 10ನೇ ತರಗತಿಯ ಪೂರ್ವಿ ರೈ (ಅರುಣ್ ಪ್ರಕಾಶ್ ರೈ, ಸವಿತಾ ರೈ ದಂಪತಿ ಪುತ್ರಿ) ಕನ್ನಡ ಭಾಷಣದಲ್ಲಿ ದ್ವಿತೀಯ,  10ನೇ ತರಗತಿಯ ತೇಜ ಚಿನ್ಮಯ ಹೊಳ್ಳ (ಹರೀಶ್ ಹೊಳ್ಳ, ಸುಚಿತ್ರಾ ಹೊಳ್ಳ ದಂಪತಿ ಪುತ್ರ)ಭಾವಗೀತೆಯಲ್ಲಿ  ದ್ವಿತೀಯ,

10ನೇ ತರಗತಿಯ ಧಾತ್ರಿ (ದಿನೇಶ್, ಪದ್ಮಲಕ್ಷ್ಮೀ ದಂಪತಿ ಪುತ್ರಿ) ಸಾಮಾನ್ಯ ಕನ್ನಡ ಭಾಷಣದಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಿಗೆ ಆಯ್ಕೆಯಾಗಿರುತ್ತಾರೆ. ಮಾತ್ರವಲ್ಲದೇ, ಶಾಲಾ ತಂಡ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮೆಗಾ ಕ್ಯಾಂಪಸ್ ನೇಮಕಾತಿ ಅಭಿಯಾನ – ವಿವೇಕಾನಂದ ಎಂಜಿನಿಯರಿ೦ಗ್ ಕಾಲೇಜಿನಲ್ಲಿ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ೦ಗ್ ಎಂಡ್ ಟೆಕ್ನಾಲಜಿಯಲ್ಲಿ ಮೆಗಾ ಕ್ಯಾಂಪಸ್ ನೇಮಕಾತಿ ಅಭಿಯಾನವನ್ನು ಸೆಪ್ಟೆಂಬರ್ 24 ಮತ್ತು 25 ರಂದು ಆಯೋಜಿಸಲಾಗಿದೆ. ಪ್ರತಿಷ್ಟಿತ ಕ್ಯಾಡೆನ್ಸ್ ಸಂಸ್ಥೆಗಾಗಿ ಈ ಅಭಿಯಾನವನ್ನು ಆಯೋಜಿಸಲಾಗಿದ್ದು. ವಿವಿಧ ಇಂಜಿನಿಯರಿ೦ಗ್ ಕಾಲೇಜುಗಳ 600ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.


ಕೋರ್ ಕಂಪೆನಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಅವಕಾಶವನ್ನು ಕಲ್ಪಿಸುವುದಕ್ಕಾಗಿ ಆಯೋಜಿಸಲ್ಪಟ್ಟಿರುವ ಈ ಅಭಿಯಾನವು ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.

2023ರಲ್ಲಿ ಅತ್ಯುತ್ತಮ ಶೈಕ್ಷಣಿಕ ದಾಖಲೆಗಳೊಂದಿಗೆ ಇಂಜಿನಿಯರಿ೦ಗ್ ಕೋರ್ಸನ್ನು ಪೂರ್ಣಗೊಳಿಸುವ  ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳುತ್ತಾರೆ.


ಕಾಲೇಜಿನ ಸೌಲಭ್ಯಗಳನ್ನು ಪರಿಶೀಲಿಸಿ ತೃಪ್ತಿ ವ್ಯಕ್ತಪಡಿಸಿರುವ ಕ್ಯಾಡೆನ್ಸ್ ಸಂಸ್ಥೆಯು ಈ ಮೆಗಾ ಅಭಿಯಾನವನ್ನು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ೦ಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಸುವಂತೆ ವಿನಂತಿಸಿಕೊ೦ಡಿತ್ತು. ಹಾಗಾಗಿ ಸುತ್ತಮುತ್ತಲ ಕಾಲೇಜುಗಳನ್ನು ಜತೆಗೆ ಸೇರಿಸಿಕೊಂಡು ಇದನ್ನು ಸಂಘಟಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಿಟ್ಟೆ, ಸೈಂಟ್ ಜೋಸೆಫ್ ಎಂಜಿನಿಯರಿ೦ಗ್ ಕಾಲೇಜು, ಸಹ್ಯಾದ್ರಿ ಎಂಜಿನಿಯರಿ೦ಗ್ ಕಾಲೇಜು ಮುಂತಾದ 12 ಎಂಜಿನಿಯರಿ೦ಗ್ ಕಾಲೇಜುಗಳ ವಿದ್ಯಾರ್ಥಿಗಳು ಈ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದು ಸುಮಾರು 600 ವಿದ್ಯಾರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊ೦ಡಿದ್ದಾರೆ. ಇದಕ್ಕೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ.


ಒಂದೇ ಸಲಕ್ಕೆ 600 ಉದ್ಯೋಗಾಕಾಂಕ್ಷಿಗಳಿಗೆ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವುದಕ್ಕೆ ಬೇಕಾದ ಸೌಲಭ್ಯಗಳ ಜತೆಗೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸಲು ಸಕಲ ಸಿದ್ದತೆಗಳನ್ನು ಮಾಡಲಾಗಿದೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ

ಬಸ್​ನಿಂದ ಕೆಳಗೆ ಬಿದ್ದ ರಕ್ಷಿತಾ ಮೆದುಳು ಸಂಪೂರ್ಣ ನಿಷ್ಕ್ರಿಯ – ಮಗಳ ಎಲ್ಲಾ  ಒಂಬತ್ತು ಅಂಗಾಂಗಳನ್ನು ದಾನ ಮಾಡಿ ಸಾವಿನ ನೋವಿನಲ್ಲೂ ಸಾರ್ಥಕತೆ ಮರೆದ ಆಕೆಯ ಹೆತ್ತವರು 

0

ಚಿಕ್ಕಮಗಳೂರಿನಲ್ಲಿ ಸಾರಿಗೆ ಬಸ್ ಒಂದರಿಂದ ಕೆಳಗೆ ಬಿದ್ದು ಯುವತಿ ಬಲಿಯಾಗಿದ್ದಾಳೆ.  ಸೋಮನಹಳ್ಳಿ ತಾಂಡ್ಯದ ರಕ್ಷಿತಾ ಮೃತ ಯುವತಿ. ಬಸ್​ನಿಂದ ಕೆಳಗೆ ಬಿದ್ದು ರಕ್ಷಿತಾ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು. 

ರಕ್ಷಿತಾ  ಚಿಕ್ಕಮಗಳೂರಿನ ಬಸವನಹಳ್ಳಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದಳು.  ಸೋಮನಹಳ್ಳಿ ತಾಂಡ್ಯಾದ ಶೇಖರ್ ನಾಯ್ಕ್, ಲಕ್ಷ್ಮಿಬಾಯಿ ದಂಪತಿಯ ಪುತ್ರಿ ರಕ್ಷಿತಾ ಚಿಕ್ಕಮಗಳೂರು ನಗರದ ಬಸವನಹಳ್ಳಿಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದಳು.  

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‍ನಲ್ಲಿ ಇದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದಳು. ಮನೆಗೆ ಹೋಗಲೆಂದು ಸರ್ಕಾರಿ ಬಸ್‍ನಲ್ಲಿ ಪ್ರಯಾಣಿಸುತ್ತಿರುವಾಗ ಅಕಾಸ್ಮಾತ್ ಕೆಳಗೆ ಬಿದಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.  

ತಲೆಗೆ ಗಂಭೀರ ಗಾಯವಾಗಿ ಮೆದುಳು  ಸಂಪೂರ್ಣ ನಿಷ್ಕ್ರಿಯವಾಗಿತ್ತು.  ವೈದ್ಯರು ಬದುಕಿಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದರು ಹಾಗೂ ಬೇರೆಲ್ಲಾ ಅಂಗಾಂಗಳಿಗೆ ಯಾವುದೇ ತೊಂದರೆಯಾಗದ ಕಾರಣ ಅವುಗಳ ದಾನ ಮಾಡುವ ಸಾಧ್ಯತೆ ಇದೆ ಎಂದು ಸೂಚಿಸಿದ್ದರು. ಕೂಡಲೇ ಇದಕ್ಕೆ ಒಪ್ಪಿದ ಹೆತ್ತವರಾದ ಶೇಖರ್ ನಾಯ್ಕ್- ಲಕ್ಷ್ಮಿ ಬಾಯಿ ದಂಪತಿ ರಕ್ಷಿತಾಳ ಎಲ್ಲಾ ಅಂಗಾಂಗಗಳ ದಾನಕ್ಕೆ ಮುಂದಾಗಿ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಕೂಡುಕುಟುಂಬದಲ್ಲಿ ಬದುಕುತ್ತಿದ್ದ ರಕ್ಷಿತಾಳ ಒಟ್ಟು 14 ಜನ ಅಣ್ಣಂದಿರು ಒಬ್ಬಳೇ ತಂಗಿಯ ಸಾವಿಗೆ ದುಃಖಿಸುತ್ತಿದ್ದಾರೆ. “ನಮ್ಮ ತಂಗಿಯನ್ನು ನಾವಿನ್ನು ನೋಡಲಾರೆವು. ಆದರೆ ಅವಳ ಕಣ್ಣುಗಳಿಂದ ಯಾರಾದರೂ ನಮ್ಮನ್ನು ನೋಡಬಹುದು’ ಎಂದು ರಕ್ಷಿತಾಳ ಅಣ್ಣನೊಬ್ಬನು ಹೇಳುತ್ತಿದ್ದ ಮಾತುಗಳು ನೆರೆದಿದ್ದವರಲ್ಲಿ ಕಣ್ಣೀರು ತರಿಸಿತ್ತು.

ಅಂಗಾಂಗ ದಾನಕ್ಕೆ ಈಗಾಗಲೇ  ಬೆಂಗಳೂರು, ಚೆನ್ನೈನಿಂದ ನುರಿತ ವೈದ್ಯರ ತಂಡವೂ ಆಗಮಿಸಿದೆ. ಇಂದು ಅಂದರೆ ಗುರುವಾರ 22.09.2022 ಬೆಳಗ್ಗೆ  11 ಘಂಟೆ ಸುಮಾರಿಗೆ ರಕ್ಷಿತಾ ಅಂಗಾಂಗ ತೆಗೆಯುವ ಪ್ರಕ್ರಿಯೆ ನಡೆಯಲಿದೆ. ಕೂಡಲೇ ಹೆಲಿಕಾಪ್ಟರ್ ಮೂಲಕ ಅಂಗಾಂಗಗಳನ್ನು ಸಂಬಂಧಪಟ್ಟ ಸ್ಥಳಗಳಿಗೆ ರವಾನೆ ಮಾಡಲಾಗುವುದು. 

ಮಂಗಳೂರಿನಲ್ಲಿ ಎಸ್‌ಡಿಪಿಐ (SDPI) ಮತ್ತು ಪಿಎಫ್‌ಐ(PFI) ಕಚೇರಿಗಳ ಮೇಲೆ ಎನ್‌ಐಎ (NIA) ಮಿಂಚಿನ ದಾಳಿ – ಮಹತ್ವದ ದಾಖಲೆ ವಶ, ಬಂಧನ

0

ಮಂಗಳೂರು ಸೇರಿದಂತೆ ಇಂದು ದೇಶಾದ್ಯಂತ ಎಸ್‌ಡಿಪಿಐ (SDPI) ಮತ್ತು ಪಿಎಫ್‌ಐ(PFI) ಕಚೇರಿಗಳ ಮೇಲೆ ಎನ್‌ಐಎ (NIA) ಮಿಂಚಿನ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿ ಕೆಲವರನ್ನು ಬಂಧಿಸಿದೆ ಎಂದು ವರದಿಯಾಗಿದೆ.  

ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 22 ರಂದು ಗುರುವಾರ ಮುಂಜಾನೆ ಎನ್‌ಐಎ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿತು. ಮಂಗಳೂರು ನಗರದ ಸುತ್ತಮುತ್ತಲಿನ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

ನೆಲ್ಲಿಕಾಯಿ ರಸ್ತೆ, ಬಜ್ಪೆ, ಕುಳಾಯಿ ಮತ್ತು ಕಾವೂರು ಕಚೇರಿಗಳ ಮೇಲೆ ಎನ್‌ಐಎ ಶೋಧಕರು ತಂಡಗಳಲ್ಲಿ ದಾಳಿ ನಡೆಸಿದ್ದಾರೆ. ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಇಂದು ನಸುಕಿನ ಜಾವವೇ ಎನ್‌ಐಎ ದಾಳಿ ನಡೆಸಿದೆ.

ಮಂಗಳೂರು ನಗರದಲ್ಲಿನ ಪಿಎಫ್ಐ ಹಾಗೂ ಎಸ್‌​ಡಿಪಿಐ ಜಿಲ್ಲಾ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದೆ. ಇಂದು ನಸುಕಿನ ಜಾವ 3.30ರ ಸುಮಾರಿಗೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

 ಮಂಗಳೂರಿನಲ್ಲಿ ಎನ್‌ಐಎ ದಾಳಿ ಖಂಡಿಸಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.