Monday, August 31, 2026
Home Blog Page 198

ವಿದ್ಯಾಭಾರತಿ ಜ್ಞಾನವಿಜ್ಞಾನ ಮೇಳ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

0

ವಿದ್ಯಾಭಾರತಿ ಜ್ಞಾನವಿಜ್ಞಾನ ಮೇಳ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸ್ಪರ್ಧೆಗಳು ಆಗಸ್ಟ್ 26ರಂದು ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ನಡೆಯಿತು. ಈ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 

ಶಿಶು ವರ್ಗದ ವಿಜ್ಞಾನ ರಸಪ್ರಶ್ನೆಯಲ್ಲಿ ರಚನಾ(4 ನೇ ತರಗತಿ) ಶರಧಿ(5ನೇ ತರಗತಿ) ಸ್ನೀಗ್ಧ (5 ನೇ ತರಗತಿ) ಇವರ ತಂಡ ತೃತೀಯ, ಇನ್ನೋವೇಟಿವ್ ಮಾದರಿಯಲ್ಲಿ  ಶಮಂತ (5 ನೇ ತರಗತಿ) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.  

ಬಾಲವರ್ಗದ ವಿಜ್ಞಾನ ಮಾಡೆಲ್ ಸ್ಪರ್ಧೆಯಲ್ಲಿ 6ನೇ ತರಗತಿಯ ಅಮೃತ ರಶ್ಮಿ ಸೆನ್ಸರ್ ಬೇಸ್ಡ್ ಮಾಡೆಲ್ ವಿಷಯದಲ್ಲಿ ದ್ವಿತೀಯ, ಏಳನೆಯ ಅನನ್ಯ ಹಾಗೂ ನಿಲಿಶ್ಕ ತಂಡ ಲೈಟ್ ಅಂಡ್ ಇಟ್ಸ್ ಅಪ್ಲಿಕೇಶನ್ ವಿಷಯದಲ್ಲಿ ದ್ವಿತೀಯ, ವಿಜ್ಞಾನ ಪ್ರಯೋಗದಲ್ಲಿ ಲಕ್ಷ್ಮಿ ಯು(8ನೇ ತರಗತಿ) ಹಾಗೂ ಜಿ ವೈಷ್ಣವಿ ಪೈ(8ನೇ ತರಗತಿ)ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. 

ಕಿಶೋರ ವರ್ಗದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ 10ನೇ ತರಗತಿಯ ಧನುಶ್ ರಾಮ್, ಅಭಿರಾಮ್ ಹಾಗೂ ಅಜಯ ರಾಮ್ ತಂಡವು ಪ್ರಥಮ, ವಿಜ್ಞಾನ ಪತ್ರವಾಚನ ಸ್ಪರ್ಧೆಯಲ್ಲಿ ಅರ್ಚನಾ ಕಿಣಿ (10ನೇ),ಇನ್ನೋವೇಟಿವ್ ಮಾಡೆಲ್ ಸ್ಪರ್ಧೆಯಲ್ಲಿ ಪೃಥ್ವಿರಾಜ್ ಪ್ರಭು 10ನೇ ಪ್ರಥಮ ಸ್ಥಾನ ಪಡೆದು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಜ್ಞಾನ ಪ್ರಯೋಗದಲ್ಲಿ 10ನೆಯ ಅನ್ವಿತ್ ಎನ್ ತೃತೀಯ, ಅಪ್ಲಿಕೇಶನ್ ಆಫ್ spectrum ಆಫ್ ಲೈಟ್ ವಿಜ್ಞಾನಮಾದರಿಯಲ್ಲಿ ತ್ರಿಶೂಲ್  ಹಾಗೂ ಶ್ರೇಯಸ್ (9ನೇ) ಅವರ ತಂಡ ದ್ವಿತೀಯ, ಮಾನವ ವಿಸರ್ಜನಾಂಗ ಮಾದರಿಯಲ್ಲಿ ಒಂಬತ್ತನೆಯ ಸೃಷ್ಟಿ ತೃತೀಯ ಹಾಗೂ ಅಪ್ಲಿಕೇಶನ್ಸ್ ಆಫ್ ಸೌಂಡ್ ವೇವ್ ಮಾದರಿ ತಯಾರಿಯಲ್ಲಿ ಅಮೋಘ ನಾಯಕ್ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. 

ಶಿಶು ವರ್ಗದ ವೇದಗಣಿತ ರಸಪ್ರಶ್ನೆಯಲ್ಲಿ ಐದನೆ ತರಗತಿ ಯ ಧನಿಶ್, ಗೌರವ್, ಸಾನ್ವಿ ಅವರ ತಂಡ ದ್ವಿತೀಯ, ಗಣಿತ ಮಾದರಿಯಲ್ಲಿ ಲಿಖಿತ (5ನೇ) ಜಿಯೋಮೆಟ್ರಿಕ್ ಶೇಪ್ಸ್ ಮಾದರಿಯಲ್ಲಿ ಪ್ರಥಮ, ಸಿದ್ಧಿ (5 ನೇ) ಮಾಪನ ಮಾದರಿಯಲ್ಲಿ ಪ್ರಥಮ,ಪ್ರಾಪ್ತಿ (5 ನೇ) ಭಿನ್ನ ಮಿತಿಯ ಮಾದರಿಯಲ್ಲಿ ತೃತೀಯ ಹಾಗೂ ಗಣಿತ ಪ್ರಯೋಗದಲ್ಲಿ ಐದನೇ ತರಗತಿಯ ಭವಿಷ್ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. 

ಬಾಲ ವರ್ಗದ ವೇದಗಣಿತ ರಸಪ್ರಶ್ನೆಯಲ್ಲಿ ನಿರೀಕ್ಷಿತ್ ಹೆಗ್ಡೆ7ನೇತರಗತಿ, ಶ್ರೇಯಸ್ ವರಂಬಳಿತಾಯ(8ನೇ) ಸುಶಾಂತ್ ಎ (6ನೇ) ಅವರ ತಂಡ ಪ್ರಥಮ,  ಗಣಿತ ಮಾದರಿಯಲ್ಲಿ 7ನೇ ತರಗತಿಯ ಶಮನ್ ಕ್ಷೇತ್ರಫಲ ಹಾಗೂ ಆಯತನ ಮಿತಿಯ ಮಾದರಿಯಲ್ಲಿ ಪ್ರಥಮ, 8ನೇ ತರಗತಿಯ ವೇದ ವಿ ರೆಗ್ಯುಲರ್ ಪಾಲಿಗನ್ ಆಧಾರಿತ ಮಾದರಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.  ಹಾಗೂ 8 ನೇ ತರಗತಿಯ ಪ್ರೀತಿ ಪಿ ಪೈ ಗಣಿತ ಪ್ರಯೋಗದಲ್ಲಿ ಪ್ರಥಮ ಸ್ಥಾನ ಪಡೆದು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 

ಕಿಶೋರ ವರ್ಗದ ಗಣಿತ ಮಾದರಿ ಸ್ಪರ್ಧೆಯಲ್ಲಿ 10ನೇ ತರಗತಿಯ ವಸುಧ ಪೈಥಾಗರಸ್ ಥಿಯರಮ್ ಆಧಾರಿತ ಮಾದರಿಯಲ್ಲಿ ದ್ವಿತೀಯ, 9ನೇ ತರಗತಿಯ ಹರ್ಷಿಕ ಟ್ರಿಗನಾಮೆಟ್ರಿ ಆಧಾರಿತ ಮಾದರಿಯಲ್ಲಿ ಹಾಗೂ ಧನ್ವಿ (9ನೇ) ಇನ್ನೋವೇಟಿವ್ ಮಾದರಿಯಲ್ಲಿ ದ್ವಿತೀಯ, ಗಣಿತ ಪ್ರಯೋಗದಲ್ಲಿ 10ನೇ ತರಗತಿಯ ಧಾತ್ರಿ ಸಿ.ಹೆಚ್ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. 

ಕಥನ ಸ್ಪರ್ಧೆಯಲ್ಲಿ ಶಿಶು ವಿಭಾಗದ ಕ್ಷಮಾ ಭಟ್ ಹಾಗೂ ಬಾಲ ವರ್ಗದ ದೇವಿ ಪ್ರಣಮ್ಯ ಇವರು ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. 

ಅಟಲ್ ಟಿಂಕರಿಂಗ್ ಮಾದರಿ ತಯಾರಿಯಲ್ಲಿ ಹತ್ತನೇ ತರಗತಿಯ ಯುಕ್ತ ಶ್ರೀ ಹಾಗೂ ನೇಹ ಇವರ ತಂಡ ಪ್ರಥಮ, ಎಂಟನೇ ತರಗತಿಯ ಚಿನ್ಮಯಿ ಎಲ್ ಹಾಗೂ ಹರ್ಷ ಇವರ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಶಿಶುವರ್ಗದಲ್ಲಿ ಐದನೇ ತರಗತಿಯ ಅನಿಶ್ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅಕ್ರಮ ಪನೀರ್ ಕಾರ್ಖಾನೆಯೊಂದರ ಮೇಲೆ ದಾಳಿ, 1.98 ಲಕ್ಷ ರೂಪಾಯಿ ಮೌಲ್ಯದ ಸುಮಾರು 900 ಕೆಜಿ ಕಲಬೆರಕೆ ಪನೀರ್ ವಶ – ನಾವು, ನೀವು ತಿನ್ನುತ್ತಿರುವುದು ಶುದ್ಧ ಪನೀರ್ ಅಲ್ಲ !?

0

ಅಕ್ರಮ ಪನೀರ್ ಕಾರ್ಖಾನೆಯೊಂದರ ಮೇಲೆ ದಾಳಿ ನಡೆಸಿ 1.98 ಲಕ್ಷ ರೂಪಾಯಿ ಮೌಲ್ಯದ ಸುಮಾರು 900 ಕೆಜಿ ಕಲಬೆರಕೆ ಪನೀರ್ ವಶಪಡಿಸಿಕೊಳ್ಳಲಾಗಿದೆ.

ಭಾರತದಲ್ಲಿ ಆಹಾರದಲ್ಲಿ ವ್ಯಾಪಕವಾದ ಕಲಬೆರಕೆ ಮಾಡಲಾಗುತ್ತದೆ ಎಂದು ಇದರಿಂದ ಮತ್ತೊಮ್ಮೆ ಸಾಬೀತಾಗಿದೆ. ಹಾಗಾದರೆ  ನಾವು, ನೀವು ತಿನ್ನುತ್ತಿರುವುದು ಶುದ್ಧ ಪನೀರ್ ಅಲ್ಲವೇ ಎಂಬ ಸಂಶವು ಎಲ್ಲರಲ್ಲಿಯೂ ಮೂಡಿದರೆ ಅದರಲ್ಲೇನೂ ಆಶ್ಚರ್ಯವಿಲ್ಲ.

ಪುಣೆಯ ಮಂಜರಿ ಖುರ್ದ್‌ನಲ್ಲಿರುವ ಅಕ್ರಮ ಕಾರ್ಖಾನೆಯೊಂದರ ಮೇಲೆ ಪುಣೆ ಎಫ್‌ಡಿಎ (ಆಹಾರ ಮತ್ತು ಔಷಧ ಆಡಳಿತ) ದಾಳಿ ನಡೆಸಿ 1.98 ಲಕ್ಷ ರೂಪಾಯಿ ಮೌಲ್ಯದ ಸುಮಾರು 900 ಕೆಜಿ ಕಲಬೆರಕೆ ಪನೀರ್ ಅನ್ನು ವಶಪಡಿಸಿಕೊಂಡಿದೆ.

2.24 ಲಕ್ಷ ಮೌಲ್ಯದ ಕೆನೆ ತೆಗೆದ ಹಾಲಿನ ಪುಡಿ ಮತ್ತು ಆರ್‌ಬಿಡಿ ಪ್ಯಾಮೊಲಿನ್ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪುಣೆಯ ಆಹಾರ ಮತ್ತು ಔಷಧ ಆಡಳಿತದ ಸಹಾಯಕ ಆಯುಕ್ತ ಸಂಜಯ್ ನರಗುಡೆ ತಿಳಿಸಿದ್ದಾರೆ. ಹೆಚ್ಚಿನ ವಿವರವನ್ನು ನಿರೀಕ್ಷಿಸಲಾಗುತ್ತದೆ.

ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ – ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ 

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ  ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ ನಡೆಯಲಿದೆ.  ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದ ಮುಂದಿನ ಲೋಕಾರ್ಪಣೆಯ ವರೆಗೆ ವಿವಿಧ ಕಲಾ ಸಾಂಸ್ಕೃತಿಕ, ಸಾಹಿತ್ಯ ವೈಭವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಇದರ ಅಂಗವಾಗಿ ಈ ಶನಿವಾರ ಅಂದರೆ ದಿನಾಂಕ 10.09.2022ನೇ ಶನಿವಾರ ಬೆಳಗ್ಗೆ 10ರಿಂದ  ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ಶ್ರೀಪತಿ ಕಲ್ಲೂರಾಯ ಉದ್ಘಾಟಿಸಲಿರುವ ಕಾರ್ಯಕ್ರಮದಲ್ಲಿ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಶ್ರೀ ಮುಕೇಶ್, ಶ್ರೀ ಎಸ್. ಎನ್. ರಾಮ ಶೆಟ್ಟಿ, ಶ್ರೀ ಜಯರಾಮ ರೈ, ಯಕ್ಷಗಾನ ತರಬೇತಿಯ ಮುಖ್ಯ ಶಿಕ್ಷಕರಾದ ಶ್ರೀ ಲಕ್ಷ್ಮಣ ಕುಮಾರ್ ಮರಕಡ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ. 

ನೀರು ರಸ್ತೆಯ ನೆಲೆ ಸ್ಕೂಟಿ ಬಿದ್ದು ನೀರಿನಲ್ಲಿದ್ದ ವಿದ್ಯುತ್ ತಂತಿ ಸ್ಪರ್ಶದಿಂದ ಬೆಂಗಳೂರಿನಲ್ಲಿ 23 ವರ್ಷದ ಯುವತಿ ಸಾವು – ಬೆಂಗಳೂರಿನ ಮಳೆಗೆ ಬಲಿಯಾದ ಅಖಿಲಾ 

0

ನೀರು ರಸ್ತೆಯ ನೆಲೆ ಸ್ಕೂಟಿ ಬಿದ್ದು ನೀರಿನಲ್ಲಿದ್ದ ವಿದ್ಯುತ್ ತಂತಿ ಸ್ಪರ್ಶದಿಂದ ಬೆಂಗಳೂರಿನಲ್ಲಿ 23 ವರ್ಷದ ಯುವತಿ ಸಾವು – ಬೆಂಗಳೂರಿನ ಮಳೆಗೆ ಬಲಿಯಾದ ಅಖಿಲಾ 

ಬೆಂಗಳೂರಿನ ವೈಟ್‌ಫೀಲ್ಡ್ ಪಿಎಸ್ ವ್ಯಾಪ್ತಿಯ ಜಲಾವೃತ ರಸ್ತೆಯ ಮೇಲೆ ಸ್ಕೂಟಿ ಬಿದ್ದಿದ್ದರಿಂದ 23 ವರ್ಷದ ಅಖಿಲಾ ಎಂಬ ಯುವತಿ ವಿದ್ಯುತ್ ಕಂಬದ ಸ್ಪರ್ಶದಿಂದ ಸಾವನ್ನಪ್ಪಿದ್ದಾಳೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ನಿನ್ನೆ ರಾತ್ರಿ ಅಖಿಲಾ ಕೆಲಸ ಮುಗಿಸಿ ಸ್ಕೂಟಿಯಲ್ಲಿ ಬರುತ್ತಿದ್ದಾಗ ರಸ್ತೆಯಲ್ಲಿ ತುಂಬಿದ ಮಳೆಯ ನೀರಿನಿಂದಾಗಿ ಸ್ಕೂಟಿ ಆಫ್ ಆಗಿತ್ತು. ರಸ್ತೆಯ ಬದಿಯಲ್ಲಿ ಸ್ಕೂಟಿ ಸ್ಟಾರ್ಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಅಕಸ್ಮಾತ್ ವಿದ್ಯುತ್ ಕಂಬದ ತಂತಿ ಮುಟ್ಟಿದ್ದಾಳೆ.

ಕೂಡಲೇ ವಿದ್ಯುತ್ ಶಾಕ್ ಹೊಡೆದು ಅಖಿಲಾ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.  ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ವೀಡಿಯೊ – ಅದ್ಭುತ ಜಾದೂ ಪ್ರದರ್ಶನ,  ಮಾಯವಾದ ಜಾದೂಗಾರನನ್ನು ಹುಡುಕಿದಾಗ ಕಂಡ ದೃಶ್ಯವನ್ನು ನೋಡಿ ಬೆಚ್ಚಿಬಿದ್ದ ಯುವತಿಯರು!

0

ಅದ್ಭುತ ಜಾದೂ ಪ್ರದರ್ಶನವನ್ನು ವ್ಯಕ್ತಿಯೊಬ್ಬರು ನೀಡಿ ನೋಡುಗರನ್ನು ಬೆಚ್ಚಿಬೀಳುವಂತೆ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

ಜಾದೂಗಾರರೊಬ್ಬರು ಸಾರ್ವಜನಿಕವಾಗಿ ಒಂದು ಪ್ರದರ್ಶನವನ್ನು ನೀಡಿದ್ದಾರೆ. ಅಲ್ಲಿ ಇಬ್ಬರು ಸುಂದರವಾದ ಯುವತಿಯರನ್ನು ತನ್ನ ಬಳಿಗೆ ಬಂದು ನಿಲ್ಲುವಂತೆ ಹೇಳುತ್ತಾರೆ.

ಅವರು ಒಂದು ದೊಡ್ಡ ಕಪ್ಪು ವಸ್ತ್ರವನ್ನು ಅಡ್ಡವಾಗಿ ಹಿಡಿದು ವಸ್ತ್ರ ಕೆಳಕ್ಕೆ ಬೀಳುವಾಗ ತಾನೂ ಅಲ್ಲಿಂದ ಮರೆಯಾಗುತ್ತಾರೆ. ಯುವತಿಯರು ಆ ಜಾದೂಗಾರನಿಗಾಗಿ ಹುಡುಕಾಡುತ್ತಾರೆ.

ಆಗ ನಡೆದ ಘಟನೆಯನ್ನು ನೋಡಿ ಯುವತಿಯರು ಬೆಚ್ಚಿಬಿದ್ದು ಕಿರುಚಿಕೊಳ್ಳುತ್ತಾರೆ. ವೀಡಿಯೊ ನೋಡಿ. 

ವೀಡಿಯೊ – ಬೆಂಗಳೂರಿನಲ್ಲಿ ಭಾರೀ ಮಳೆ – ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡಚಣೆ 

0

ವೀಡಿಯೊ – ಬೆಂಗಳೂರಿನಲ್ಲಿ ಭಾರೀ ಮಳೆ – ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡಚಣೆ 

ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡಚಣೆ ಅಡಚಣೆಯುಂಟಾಗಿದೆ.  

ಭಾರೀ ಮಳೆಯಿಂದಾಗಿ ಬೆಂಗಳೂರಿನ ಮಾರತ್ತಹಳ್ಳಿ-ಸಿಲ್ಕ್ ಬೋರ್ಡ್ ರಸ್ತೆಯ ಹೊರವರ್ತುಲ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತು ಸಂಚಾರ ದಟ್ಟಣೆ ಮುಂದುವರಿದಿದೆ. ವೀಡಿಯೊ ನೋಡಿ.

ತೈಕೊಂಡೊ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ತಲಪಾಡಿಯ ಶಾರದಾ ವಿದ್ಯಾನಿಕೇತನ ಸಂಸ್ಥೆಯಲ್ಲಿ ನಡೆದ ನಡೆದ ಜಿಲ್ಲಾ ಮಟ್ಟದ ತೈಕೊಂಡೊ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದೆ.


ಬಾಲಕರ ವಿಭಾಗದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿನಿಶ್ ಕುಮಾರ್, ಪ್ರೀತಂ ಎಸ್‌. ಎನ್‌. ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಂದನ್‌ ಗೌಡ ಬಿ. ಎಸ್‌ ಭಾಗವಹಿಸಿದ್ದರು.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಶಟಲ್ ಬ್ಯಾಡ್ಮಿಂಟನ್‌  ಪಂದ್ಯಾಟದಲ್ಲಿ  ವಿವೇಕಾನಂದ  ಪ.ಪೂ ಕಾಲೇಜಿನ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

0

ತೆಂಕಿಲದ ವಿವೇಕಾನಂದ ಆಂಗ್ಲ  ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ   ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆಆಯ್ಕೆಯಾಗಿದೆ ಮತ್ತು ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.


ಬಾಲಕಿಯರ ವಿಭಾಗದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ, ವಿಜ್ಞಾನ ವಿಭಾಗದ ನೇಹಾಲ್ ಮತ್ತು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶ್ರೇಯಾ ಭಾಗವಹಿಸಿದ್ದರು.


ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಲವಿತ್ ಎಂ, ಸುಮಂತ್ ಮತ್ತು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಯಶ್ವಿನ್ ಭಾಗವಹಿಸಿದ್ದರು.

ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್‌ಇ ವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಉಡುಪಿ : ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾವೇಶ

0

ಉಡುಪಿ : ಪದವಿ ಮತ್ತು ಸ್ನಾತಕೋತ್ತರ ತರಗತಿಗಳಲ್ಲಿ ಓದುತ್ತಿರುವ ವಿದ್ಯಾಪೋಷಕ್ ಪಲಾನುಭವಿ ವಿದ್ಯಾರ್ಥಿಗಳ ಅರ್ಧ ದಿನದ ಶೈಕ್ಷಣಿಕ ಸಮಾವೇಶ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸಪ್ಟಂಬರ್ 4, 2022 ಭಾನುವಾರದಂದು ಸಂಪನ್ನಗೊ೦ಡಿತು.

ಹುಬ್ಬಳ್ಳಿಯ ಮೈಲೈಫ್ ಸಂಸ್ಥೆಯ ಸ್ಥಾಪಕ ಪ್ರವೀಣ ಗುಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಭಾಗವಹಿಸಿದ 300 ವಿದ್ಯಾರ್ಥಿಗಳಿಗೆ ನವೀಕರಣದ ಅರ್ಜಿ ನಮೂನೆ ವಿತರಿಸಲಾಯಿತು.

ಅಧ್ಯಕ್ಷ ಎಂ. ಗಂಗಾಧರ ರಾವ್ ಪ್ರಸ್ಥಾವನೆಯ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಮಾವೇಶದ ಉದ್ದೇಶ ಅಗತ್ಯ ವಿವರಿಸಿದರು. ನಾರಾಯಣ ಎಂ.ಹೆಗಡೆ ವಿದ್ಯಾರ್ಥಿಗಳಿಗೆ ಅಗತ್ಯದ ಸೂಚನೆ ನೀಡಿದರು.

ರಾಜಗೋಪಾಲ ಆಚಾರ್ಯ, ಎಚ್.ಎನ್.ಶೃಂಗೇಶ್ವರ್, ಭುವನ ಪ್ರಸಾದ ಹೆಗ್ಡೆ, ಸಂತೋಷ್ ಕುಮಾರ್ ಶೆಟ್ಟಿ, ಅಶೋಕ ಎಂ, ಎಚ್ .ಎನ್.ವೆಂಕಟೇಶ್, ಗಣೇಶ ಬ್ರಹ್ಮಾವರ ಹಾಗೂ ಮಂಜುನಾಥ ಉಪಸ್ಥತರಿದ್ದರು.

ಪುತ್ತೂರು ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ತಾಳಮದ್ದಳೆ – ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ “ಸೂರ್ಯಮಣಿ”

ಪುತ್ತೂರು ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ತಾಳಮದ್ದಳೆ

ದಿನಾಂಕ 05.09.2022ನೇ ಸೋಮವಾರ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ “ಸೂರ್ಯಮಣಿ” ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು.

ಹಾಡುಗಾರಿಕೆಯಲ್ಲಿ ಪ್ರಶಾಂತ ರೈ ಪುತ್ತೂರು, ಮದ್ದಳೆಯಲ್ಲಿ ಸತ್ಯಜಿತ್ ರಾವ್ ಮೂಡಬಿದ್ರೆ, ಚೆಂಡೆಯಲ್ಲಿ ತಾರಾನಾಥ ಸವಣೂರು,

ಶ್ರೀಕೃಷ್ಣನಾಗಿ -ದಿವಾಕರ ಆಚಾರ್ಯ ಗೇರುಕಟ್ಟೆ, ಜಾoಬವನಾಗಿ ಗುಡ್ಡಪ್ಪ ಬಲ್ಯ, ಬಲರಾಮನಾಗಿ ಹರಿಕಿರಣ ಕೊಯಿಲ, ನಾರದನಾಗಿ ತಾರಾನಾಥ ಸವಣೂರು ಭಾಗವಹಿಸಿದರು.