Friday, May 15, 2026
Home Blog Page 212

ವಿವೇಕಾನಂದ ವಿದ್ಯಾಸಂಸ್ಥೆಗಳು, ತೆಂಕಿಲ ಇಲ್ಲಿ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಸ್ವಾತಂತ್ರ್ಯ75ನೇ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ದೇಶ ಸೇವೆಗೆ ಬದ್ಧರಾಗಿ ದೇಶದ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸೋಣ ಎಂದು ಭಾರತೀಯ ಸೇನೆಯ ನಿವೃತ್ತ ಸೈನಿಕರಾದ ಶ್ರೀ ಕುಮಾರ್.ಕೆ.ಎ ಇವರು ಹೇಳಿದರು.

ಅವರು ದಿನಾಂಕ 15-08-2022ನೇ ಸೋಮವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ 76ನೇ ವರ್ಷದ ಸ್ವಾತಂತ್ರ್ಯಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣಗೈದು, ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಶಿವಪ್ರಕಾಶ್.ಎಂ, ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ, ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿ0ದ “ಅಮೃತ ನಡಿಗೆ ದೇಶದ ಕಡೆಗೆ” ಎನ್ನುವ ಧ್ಯೇಯ ವಾಕ್ಯದೊಂದಿಗೆ ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆಗಳ 8000 ವಿದ್ಯಾರ್ಥಿಗಳ ಜಾಥಾದ ಮೂಲಕ ವಿವೇಕಾನಂದ ವಿದ್ಯಾವರ್ಧಕ ಸಂಘ ವಿನೂತನವಾಗಿ ಹಮ್ಮಿಕೊಂಡಿತ್ತು. ಇಂದು 75ನೇ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದು, ಮುಂದಿನ 25 ವರ್ಷದಲ್ಲಿ ಶತಮಾನೋತ್ಸವನ್ನು ಅಚರಿಸಲಿದ್ದೇವೆ. ಅಖಂಡವಾಗಿದ್ದ ಭಾರತ ಮತ್ತೆ ಭಾಗವಾಗದಿರಲಿ ಎಂದು ಹಾರೈಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕ, ಶಿಕ್ಷಕೇತರ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿವೇಕಾನಂದ ಬಿ.ಎಡ್ ಕಾಲೇಜಿನ ವಿದ್ಯಾರ್ಥಿಗಳು ರಚಿಸಿದ 75ಸ್ವಾತಂತ್ರ್ಯ ಹೋರಾಟಗಾರರ ಕುರಿತು ಲೇಖನವನ್ನು ಪುಸ್ತಕದ ಮೂಲಕ ಮುಖ್ಯ ಅತಿಥಿಗಳು ಬಿಡುಗಡೆ ಮಾಡಿದರು.

ವಿವೇಕಾನಂದ ಬಿ.ಎಡ್ ಶಿಕ್ಷಕ ವಿದ್ಯಾರ್ಥಿನಿಯರು ವಂದೇಮಾತರಂ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಗೂ ಧ್ವಜಗೀತೆಯನ್ನು ಹಾಡಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಶ್ರೀ ರವಿನಾರಾಯಣ.ಎಂ ಸ್ವಾಗತಿಸಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಾಣಿಶ್ರೀ.ಎನ್ ಕಾರ್ಯಕ್ರಮ ನಿರೂಪಿಸಿದರು.

ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ದೀಪಕ್ ಇವರು ದೇಶಭಕ್ತಿಯ ಘೋಷಣೆಗಳನ್ನು ಹಾಕಿದರು. ಶಾಲೆಯ ಎನ್.ಸಿ.ಸಿ ಹಾಗೂ ಸ್ಕೌಟ್ಸ್ ವಿದ್ಯಾರ್ಥಿಗಳು ಅತಿಥಿಗಳಿಗೆ ಗೌರವ ಸಲ್ಲಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರು ಸಹಕರಿಸಿದರು.

ಸಿರಿಬಾಗಿಲಿನಲ್ಲಿ ಸಾಹಿತ್ಯ ವೈಭವ – ತಾಯಿ ಭಾರತಿಗೆ ಕಾವ್ಯದಾರತಿ

ಸಿರಿಬಾಗಿಲು : ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದಂಗವಾಗಿ ಕಲಾ ಸಾಂಸ್ಕೃತಿಕ ಸಾಹಿತ್ಯ ವೈಭವ ಯಶಸ್ವಿಯಾಗಿ ಜರಗಿತು.

ಪ್ರತಿಷ್ಠಾನದ ನೂತನ ಸಾಂಸ್ಕೃತಿಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಸರಗೋಡಿನ ಹಿರಿಯ ಕಿರಿಯ ಕವಿಗಳು ‘ ತಾಯಿ ಭಾರತಿಗೆ ಕಾವ್ಯದಾರತಿ ‘ ಬೆಳಗಿದರು.


ಹಿರಿಯ ಕವಿ, ಪತ್ರಕರ್ತ, ಸಂಘಟಕ ರಾಧಾಕೃಷ್ಣ.ಕೆ. ಉಳಿಯತ್ತಡ್ಕ ಅವರ ಅಧ್ಯಕ್ಷತೆಯಲ್ಲಿ ಮಧೂರು ಗ್ರಾಮ ಪಂಚಾಯತು ಅಧ್ಯಕ್ಷ ಗೋಪಾಲಕೃಷ್ಣ ಕೂಡ್ಲು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನ್ಯಾಯವಾದಿ ಪದ್ಮನಾಭ ಹೊಳ್ಳ ಮುಖ್ಯ ಅತಿಥಿಯಾಗಿ ಭಾಗವಹಿಸಿ ದೇಶ ರಕ್ಷಣೆಯ ಕುರಿತಾದ ಕವನ ವಾಚಿಸಿ ಕಾವ್ಯದ ಸಾರ್ವಕಾಲಿಕ ಮೌಲ್ಯದ ಬಗ್ಗೆ ಮಾತನಾಡಿದರು.

ವಿ.ಬಿ. ಕುಳಮರ್ವ ,ಬಾಲ ಮಧುರಕಾನನ, ನರಸಿಂಹ ಭಟ್ ಏತಡ್ಕ, ಪ್ರಭಾವತಿ ಕೆದಿಲಾಯ, ಪ್ರಮೀಳಾ ಚುಳ್ಳಿಕಾನ, ನಿರ್ಮಲಾ ಶೇಷಪ್ಪ ಖಂಡಿಗೆ, ವಿರಾಜ್ ಅಡೂರು, ವನಜಾಕ್ಷಿ ಚೆಂಬ್ರಕಾನ, ಶ್ರಧ್ಧಾ ಹೊಳ್ಳ , ಚಂದ್ರಕಲಾ ನೀರಾಳ , ಸುಭಾಷ್ ಪೆರ್ಲ ಸ್ವರಚಿತ ಕವನಗಳನ್ನು ವಾಚಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ಸಿರಿಬಾಗಿಲು ರಾಮಕೃಷ್ಣ ಮಯ್ಯ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ವನಜಾಕ್ಷಿ ಚೆಂಬ್ರಕಾನ ಕಾರ್ಯಕ್ರಮ ನಿರೂಪಿಸಿದರು.

ಭಾಗವಹಿಸಿದ ಕವಿಗಳಿಗೆ ಸ್ಮರಣಿಕೆ, ಪ್ರಮಾಣ ಪತ್ರವನ್ನು ಪ್ರತಿಷ್ಠಾನದ ಅಧ್ಯಕ್ಷರು ನೀಡಿ ಗೌರವಿಸಿದರು.

ಈಜು ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಪ್ರಶಸ್ತಿ

ಪುತ್ತೂರು, ಅ 14 : ಪದವಿಪೂರ್ವ ಶಿಕ್ಷಣ ಇಲಾಖೆ ದ.ಕ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಪರ್ಲಡ್ಕ ಡಾ| ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ಜರಗಿದ ಪದವಿಪೂರ್ವ ಕಾಲೇಜಿಗಳ ದ.ಕ ಜಿಲ್ಲಾ ಮಟ್ಟದ ಈಜು ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಎರಡು ಕಂಚಿನ ಪದಕವನ್ನು ಪಡೆದಿದೆ.

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಶಾಲ್ 50 ಮೀಟರ್ ಬಟರ್ ಫ್ಲೈ ನಲ್ಲಿ ಕಂಚಿನ ಪದಕ ಪಡೆದಿದ್ದಾರೆ.

4×100 ಮೀಟರ್ ಪ್ರೀ ಸ್ಟೈಲ್ ರೀಲೆ ನಲ್ಲಿ ಭಾಗವಹಿಸಿದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸೃಜನ್, ವಿಶಾಲ್, ಕೀರ್ತನ್ ಮತ್ತು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿಕಾಸ್ ರವರನ್ನು ಒಳಗೊಂಡ ತಂಡವು ಕಂಚಿನ ಪದಕ ಪಡೆದಿದೆ.

ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.

ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

ಆನೆಗಳು ನೀರಿನ ಕೊಳಕ್ಕೆ ಬಿದ್ದ ಮರಿಯಾನೆಯನ್ನು ರಕ್ಷಿಸಿ ಉಳಿಸಿದ ವಿಡಿಯೋ ವೈರಲ್

ನೀರಿನ ಕೊಳಕ್ಕೆ ಬಿದ್ದ ಮರಿಯಾನೆಯನ್ನು ರಕ್ಷಿಸಿದ ಆನೆಗಳ ವೀಡಿಯೋ ವೈರಲ್ ಆಗಿದೆ. ಕೊಳದಲ್ಲಿ ಮುಳುಗುತ್ತಿರುವ ಆನೆಗಳು ತಮ್ಮ ಮರಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಮರಿ ಆನೆ ಕೊಳದಲ್ಲಿ ಮುಳುಗುತ್ತಿರುವುದನ್ನು ಚಿತ್ರ ತೋರಿಸುತ್ತದೆ. ಮಗುವು ಅವರ ತಂದೆ-ತಾಯಿಗಳ ದೊಡ್ಡ ಸಂಪತ್ತು, ಅವರು ಮನುಷ್ಯರಾಗಿರಲಿ ಅಥವಾ ಪ್ರಾಣಿಯಾಗಿರಲಿ. ಮಗುವಿಗೆ ಅಪಾಯವಾದರೆ ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಏನು ಬೇಕಾದರೂ ಮಾಡುತ್ತಾರೆ.

ಕೊಳದಲ್ಲಿ ಮುಳುಗುತ್ತಿರುವ ಆನೆಗಳು ತಮ್ಮ ಮರಿಯನ್ನು ಉಳಿಸಲು ಪ್ರಯತ್ನಿಸುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಶನಿವಾರದಂದು ಟ್ವಿಟರ್‌ನಲ್ಲಿ ಗೇಬ್ರಿಯೆಲ್ ಕಾರ್ನೊ ಎಂಬ ಬಳಕೆದಾರರು ಹಂಚಿಕೊಂಡಿದ್ದಾರೆ,

ವೀಡಿಯೊವು ತಾಯಿ ಮತ್ತು ಮರಿ ಆನೆ ಕೊಳದಿಂದ ನೀರು ಕುಡಿಯುವುದರೊಂದಿಗೆ ಪ್ರಾರಂಭವಾಗುತ್ತದೆ. ಇದ್ದಕ್ಕಿದ್ದಂತೆ ಮರಿ ಆನೆ ನೀರಿಗೆ ಧುಮುಕುತ್ತದೆ. ಪೋಸ್ಟ್ ಪ್ರಕಾರ, ವೀಡಿಯೊವನ್ನು ಸಿಯೋಲ್ ಪಾರ್ಕ್‌ನಲ್ಲಿ ಸೆರೆಹಿಡಿಯಲಾಗಿದೆ.

ಮತ್ತೊಂದು ಆನೆ ತಾಯಿ ಮತ್ತು ಕರುವಿಗೆ ಸಹಾಯ ಮಾಡಲು ಬರುತ್ತದೆ. ಎರಡು ವಯಸ್ಕ ಆನೆಗಳು ಮರಿ ಆನೆಯನ್ನು ಉಳಿಸಲು ಒಟ್ಟಿಗೆ ಕೆಲಸ ಮಾಡುತ್ತವೆ, ಅದು ತನ್ನ ಸೊಂಡಿಲು ನೀರಿನ ಮೇಲೆ ಇಡಲು ಪ್ರಯತ್ನಿಸುತ್ತದೆ. ಬೇಲಿಯ ಹಿಂದೆ, ಮೂರನೇ ಆನೆಯು ಯುವ ಆನೆಯನ್ನು ರಕ್ಷಿಸುವಲ್ಲಿ ಸಹಾಯ ಮಾಡಲು ಇತರ ಎರಡು ಆನೆಗಳನ್ನು ತಲುಪಲು ಪ್ರಯತ್ನಿಸುತ್ತಿರುವಾಗ ತೀವ್ರವಾಗಿ ಮತ್ತು ವೇಗವಾಗಿ ನಡೆದುಕೊಂಡು ಹೋಗುವುದನ್ನು ಕಾಣಬಹುದು.

ಆನೆಗಳು ನೀರನ್ನು ಪ್ರವೇಶಿಸುವುದನ್ನು ಮತ್ತು ಮರಿಯಾನೆಯನ್ನು ಆಳವಿಲ್ಲದ ಪ್ರದೇಶದ ದಿಕ್ಕಿನಲ್ಲಿ ನೂಕುತ್ತಿರುವುದನ್ನು ಕಾಣಬಹುದು. ಅವರ ಕ್ಷಿಪ್ರ ಆಲೋಚನೆಯಿಂದ ಮರಿ ಆನೆಯ ಪ್ರಾಣ ರಕ್ಷಣೆಯಾಯಿತು. ಆನೆಗಳು ಹೇಗೆ ಕರುಣಾಮಯಿಗಳಾಗಿರುತ್ತವೆ ಎಂಬುದನ್ನು ವೀಡಿಯೊ ತೋರಿಸುತ್ತದೆ. ಜಾಹೀರಾತು ಹಂಚಿಕೊಂಡಾಗಿನಿಂದ, ವೀಡಿಯೊ 6.7 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 34,000 ಕ್ಕೂ ಹೆಚ್ಚು ಲೈಕ್ ಗಳನ್ನು ಪಡೆದಿದೆ. 

ಒಂಭತ್ತು ವರ್ಷದ ಬಾಲಕನಿಗೆ ಪೋಲೀಸ್ ಮತ್ತು ಇನ್ನೋರ್ವನಿಂದ ಹಲ್ಲೆ – ಸಿಸಿಟಿವಿ ವೀಡಿಯೋ, ಕೇಸ್ ದಾಖಲು 

ಒಂಬತ್ತು ವರ್ಷದ ಬಾಲಕನಿಗೆ ಇಬ್ಬರು ವ್ಯಕ್ತಿಗಳು ಗುದ್ದುವುದು, ಬಾಲಕನನ್ನು ಬೀಳಿಸುವುದು ಮತ್ತು ನಿಷ್ಕರುಣೆಯಿಂದ ಕಪಾಳಮೋಕ್ಷ ಮಾಡುತ್ತಿರುವ ದೃಶ್ಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಮಧ್ಯಪ್ರದೇಶ ಪೊಲೀಸರು ವಿಶೇಷ ಸಶಸ್ತ್ರ ಪಡೆ (ಎಸ್‌ಎಎಫ್) ಕಾನ್‌ಸ್ಟೆಬಲ್ ಸೇರಿದಂತೆ ಪುರುಷರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹುಡುಗ ಜಬಲ್‌ಪುರದಲ್ಲಿ ಸೈಕಲ್ ಕದ್ದಿದ್ದಾನೆ ಎಂದು ಆರೋಪಿಸಿದ್ದರು.

ರಂಝಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಸ್‌ಎಎಫ್ 6ನೇ ಬೆಟಾಲಿಯನ್ ಕಾನ್‌ಸ್ಟೆಬಲ್‌ನನ್ನು ಅಶೋಕ್ ಥಾಪಾ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ದಾರ್ಥ ಬಹುಗುಣ ತಿಳಿಸಿದ್ದಾರೆ.

“ಸೈಕಲ್ ಕಳ್ಳತನದ ಬಗ್ಗೆ ತಿಳಿಸಿದ ನಂತರ ಕಾನ್ಸ್‌ಟೇಬಲ್ ಹುಡುಗನನ್ನು ಮಸ್ತಾನಾ ಚೌಕದ ಬಳಿ ಹಿಡಿದು ಹೊಡೆದನು. ಪೊಲೀಸನ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ), 294 (ಅಶ್ಲೀಲ ಕೃತ್ಯ ಮತ್ತು ಹಾಡು) ಮತ್ತು ಸೆಕ್ಷನ್ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆಯ 75″ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಂಝಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮಕ್ಕಾಗಿ ಕಾನ್‌ಸ್ಟೆಬಲ್‌ಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಿಂದಿ ಚಿತ್ರರಂಗದ ದಂತಕಥೆ ಶ್ರೀದೇವಿಯ 57 ನೇ ಜನ್ಮ ವಾರ್ಷಿಕೋತ್ಸವದಂದು ಶ್ರೀದೇವಿಯನ್ನು ನೆನಪಿಸಿಕೊಂಡ ಜಾನ್ವಿ ಕಪೂರ್

ಚಿತ್ರನಟಿ  ಜಾನ್ವಿ ಕಪೂರ್ ಇಂದು ತಾಯಿ ಶ್ರೀದೇವಿಯವರ ಜನ್ಮದಿನದಂದು ಅವರೊಂದಿಗಿನ ಕಪ್ಪು-ಬಿಳುಪು ಫೋಟೋವನ್ನು ಹಂಚಿಕೊಂಡಿದ್ದಾರೆ.

ಜಾನ್ವಿ ಕಪೂರ್ ಅವರು ತಾಯಿ ಶ್ರೀದೇವಿ ಅವರ 57 ನೇ ಜನ್ಮ ವಾರ್ಷಿಕೋತ್ಸವದಂದು ಶುಭ ಹಾರೈಸಿದ್ದಾರೆ.   ಶ್ರೀದೇವಿ ಜನಿಸಿದ್ದು ಆಗಸ್ಟ್ 13, 1963. ಅವರು ಫೆಬ್ರವರಿ 24, 2018 ರಂದು ಕೊನೆಯುಸಿರೆಳೆದರು.

ಇತ್ತೀಚೆಗೆ ಬಿಡುಗಡೆಯಾದ : ದಿ ಕಾರ್ಗಿಲ್ ಗರ್ಲ್‌ನಲ್ಲಿನ ಅಭಿನಯಕ್ಕಾಗಿ ಮೆಚ್ಚುಗೆಯ ವಿಮರ್ಶೆಗಳನ್ನು ಪಡೆಯುತ್ತಿರುವ ಜಾನ್ವಿ, “ಐ ಲವ್ ಯೂ ಮಮ್ಮಾ” ಎಂದು ಇನ್ಸ್ಟಾ ಗ್ರಾಮ್ ನಲ್ಲಿ ಫೋಟೋ ಶೀರ್ಷಿಕೆ ನೀಡಿದ್ದಾರೆ. ಜಾನ್ವಿ ಅವರ ಪೋಸ್ಟ್ ತಕ್ಷಣವೇ ಕಾಮೆಂಟ್‌ಗಳಿಂದ ತುಂಬಿತ್ತು,

ಲೆಜೆಂಡರಿ ನಟಿ ಶ್ರೀದೇವಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಜಾನ್ವಿ ಅವರ ಪೋಸ್ಟ್‌ಗೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಕಾಮೆಂಟ್ ಮಾಡಿದ್ದಾರೆ.

ಶ್ರೀದೇವಿ ಬೋನಿ ಕಪೂರ್ ಅವರ ಎರಡನೇ ಪತ್ನಿ. ಅವರು 1996 ರಲ್ಲಿ ಮದುವೆಯಾದರು. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ – ಜಾನ್ವಿ ಕಪೂರ್ ಮತ್ತು ಖುಷಿ ಕಪೂರ್.

ಇಶಾನ್ ಖಟ್ಟರ್ ಎದುರು ಧಡಕ್ ಚಿತ್ರದ ಮೂಲಕ ಜಾನ್ವಿ ಬಾಲಿವುಡ್‌ಗೆ ಚಿತ್ರರಂಗಕ್ಕೆ ಕಾಲಿಟ್ಟರು. ಖುಷಿ ಕಪೂರ್ ಅವರು ತಮ್ಮ ತಾಯಿಯಂತೆ ನಟಿಯಾಗಲು ಬಯಸುತ್ತಾರೆಯೇ ಎಂದು ಇನ್ನೂ ನಿರ್ಧರಿಸಿಲ್ಲ.

ರೈಲಿನಡಿಗೆ ಸಿಲುಕಿ ಕಾಲೇಜು ವಿದ್ಯಾರ್ಥಿನಿ ಸಾವು

ಅಂಗಮಾಲಿ ಅಗ್ನಿಶಾಮಕ ಠಾಣೆ ಬಳಿ ಶುಕ್ರವಾರ ರೈಲಿಗೆ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ದಾರುಣ ಘಟನೆ ನಡೆದಿದೆ.

ಮೃತರನ್ನು ಪುಲಿಯನಂ ಸ್ಥಳೀಯರಾದ ತೇಲಪಲ್ಲಿ ಸಜನ್ ಅವರ ಪುತ್ರಿ ಅನು ಸಜನ್ (21) ಎಂದು ಗುರುತಿಸಲಾಗಿದೆ.

ಅನು ತನ್ನ ಸ್ನೇಹಿತರೊಂದಿಗೆ ರೈಲ್ವೇ ಹಳಿ ದಾಟುತ್ತಿದ್ದಾಗ ರೈಲಿಗೆ ಡಿಕ್ಕಿ ಹೊಡೆದಿದ್ದಾಳೆ.

ಅಂಗಮಾಲಿ ಮಾರ್ನಿಂಗ್ ಸ್ಟಾರ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪ್ರಾಣಿಶಾಸ್ತ್ರ ವಿದ್ಯಾರ್ಥಿಯಾಗಿದ್ದಳು.

‘ನಮೋ ಭಾರತಾಂಬೆ’ ಆಗಸ್ಟ್ 15 ಕ್ಕೆ ಸ್ವಾತಂತ್ರ್ಯ ದಿನದಂದು ಬಿಡುಗಡೆ

ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ) ಪುತ್ತೂರು, ಅರ್ಪಿಸುವ

ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ

ಗುರು ವಿದುಷಿ ಶ್ರೀಮತಿ ರೋಹಿಣಿ ಉದಯ್ ಇವರ ಶಿಷ್ಯೆಯರಿಂದ

ನಮೋ ಭಾರತಾಂಬೆ

ಆಗಸ್ಟ್ 15 ಕ್ಕೆ ಸ್ವಾತಂತ್ರ್ಯ ದಿನದಂದು ಬಿಡುಗಡೆ

ಯಕ್ಷ ಭಾರತಿ ಬೆಳ್ತಂಗಡಿ: ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಯಕ್ಷ ಭಾರತಿ( ರಿ) ಬೆಳ್ತಂಗಡಿ ಇದರ ಎಂಟನೇ ವಾರ್ಷಿಕೋತ್ಸವದ ಅಂಗವಾಗಿ ಉಜಿರೆ, ಶ್ರೀ ಶಾರದಾ ಮಂಟಪದಲ್ಲಿ ಭಾನುವಾರ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಮತ್ತು ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವು ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ .ಆರ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಾಯ, ಧರ್ಮಸ್ಥಳ ಆಸ್ಪತ್ರೆಯ ನಿರ್ದೇಶಕರಾದ ಜನಾರ್ದನ.ಆರ್, ಮ್ಯಾನೇಜಿಂಗ್ ಡೈರೆಕ್ಟರ್ ದೇವೇಂದ್ರ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಮನೋರಮ ಭಟ್, ಉಜಿರೆ ಹವ್ಯಕ ವಲಯದ ಅಧ್ಯಕ್ಷರಾದ ಶ್ಯಾಮ್ ಭಟ್ ಅತ್ತಾಜೆ, ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ತುಕಾರಾಂ, ಭಾ.ಜ.ಪ ಕಲೆ ಮತ್ತು ಸಾಂಸ್ಕೃತಿಕ ಸಹ ಸಂಚಾಲಕ ಕಿಶೋರ್ ಶೆಟ್ಟಿ ಮಡಂತ್ಯಾರ್, ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್ , ಶಿತಿ ಕಂಠ ಭಟ್ ಭಾಗವಹಿಸಿ ಶುಭ ಹಾರೈಸಿದರು.

ಯಕ್ಷ ಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಡಿತ್ತಾಯ ಸ್ವಾಗತಿಸಿ ಕಾರ್ಯದರ್ಶಿ ದಿವಾಕರ್ ಆಚಾರ್ಯ ಗೇರುಕಟ್ಟೆ ವಂದಿಸಿದರು.

ಕು.ಸಮರ್ಥ ಪ್ರಾರ್ಥಿಸಿದರು. ಯಕ್ಷ ಭಾರತಿ ಸಹ ಕಾರ್ಯದರ್ಶಿ ಶ್ರೀಮತಿ ಭವ್ಯಹೊಳ್ಳ ಕಾರ್ಯಕ್ರಮ ನಿರೂಪಿಸಿದರು.

ಉತ್ತಮ ಆದರ್ಶದ ಪರಂಪರೆ ಮುಂದುವರಿಯಬೇಕು: ಕಮಲಾದೇವಿ ಪ್ರಸಾದ ಆಸ್ರಣ್ಣ

ಭಾರತೀಯ ಸಂಸ್ಕೃತಿಯು ಅತ್ಯಂತ ಪ್ರಾಚೀನ ವಾಗಿದ್ದು ಶ್ರೀರಾಮ, ಶ್ರೀ ಕೃಷ್ಣರಂತಹ ವ್ಯಕ್ತಿತ್ವಗಳ ಆದರ್ಶದ ಪರಂಪರೆಯು ನಮಗೆ ದಾರಿದೀಪವಾಗಿದೆ. ಅದೇ ರೀತಿ ಮುಂದಿನ ಪೀಳಿಗೆಗಾಗಿ ಉತ್ತಮ ಆದರ್ಶಗಳನ್ನು ಆಚರಿಸಿ ತೋರಿಸುವ ಬದ್ಧತೆ ನಮಗಿದೆಯೆಂದು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕರಾದ
ಶ್ರೀ ಕಮಲಾದೇವಿ ಪ್ರಸಾದ ಆಸ್ರಣ್ಣ ತಿಳಿಸಿದರು.

ಕಟೀಲು ಸೌಂದರ್ಯ ಪ್ಯಾಲೇಸಿನಲ್ಲಿ ದಿನಾಂಕ 13. 8.2022 ರಂದು ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆ ಮತ್ತು ಶ್ರೀ ದುರ್ಗಾ ನಮಸ್ಕಾರ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಸತ್ಸಂಗವನ್ನು ನಡೆಸಿಕೊಟ್ಟರು. ಗೌರವಾಧ್ಯಕ್ಷ ಎ. ವಿ. ನಾರಾಯಣ ಪ್ರತಿಷ್ಠಾನದ ಕಾರ್ಯ ವಿಸ್ತರಣೆಯ ಮಾಹಿತಿ ನೀಡಿದರು.

ಬಂಟ್ವಾಳ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ, ಮಂಗಳೂರು ದಕ್ಷಿಣ ಘಟಕದ ಅಧ್ಯಕ್ಷ ಭರತ್ ಮೂಡಬಿದ್ರೆ ಘಟಕದ ಕಾರ್ಯದರ್ಶಿ ಸದಾನಂದ ನಾರಾವಿ ,ಪುತ್ತೂರು ಘಟಕದ ಚಂದ್ರಶೇಖರ್ ಆಳ್ವ ಪಡುಮಲೆ ಪ್ರಗತಿಯ ವಿವರ ನೀಡಿದರು.

ರಾಮಕೃಷ್ಣ ನಾಯಕ್ ಕೋಕಳ ಆಸ್ರಣ್ರರನ್ನು ಫಲ ಕಾಣಿಕೆ ಸಮರ್ಪಿಸಿ ಪ್ರತಿಷ್ಠಾನದ ವತಿಯಿಂದ ಗೌರವಿಸಿದರು.

ಸದಸ್ಯರಾದ ಪ್ರೊ .ಶ್ರೀರಾಮ ಕಾರಂತ್ ಮಂಗಳೂರು, ಸುಮಿತ್ರ ಕಾರಂತ್, ಬಾಲಕೃಷ್ಣ ಶೆಟ್ಟಿ, ಗಣೇಶ್ ಆಚಾರ್ಯ ಜೆಪ್ಪು ,ಭವಾನಿ ಶಂಕರ್ ಪುತ್ತೂರು, ಉದಯ ಶಂಕರ ರೈ ಪುಣಚ, ಸೀತಾರಾಮ ಶೆಟ್ಟಿ. ಕೆ ಉಜಿರೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಪ್ರತಿಷ್ಠಾನದ ಉಪಾಧ್ಯಕ್ಷ ಜಯರಾಮ ಭಂಡಾರಿ.ಎಂ ಧರ್ಮಸ್ಥಳ ಸ್ವಾಗತಿಸಿ ಮಹಿಳಾ ವಿಭಾಗದ ಜಿಲ್ಲಾ ಸಂಚಾಲಕಿ ಪ್ರೊ. ವತ್ಸಲಾರಾಜ್ಞಿ ವಂದಿಸಿದರು. ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.