Friday, May 15, 2026
Home Blog Page 213

ಸಿರಿಬಾಗಿಲು ಪ್ರತಿಷ್ಠಾನದ ಕಲಾ ಸಾಂಸ್ಕೃತಿಕ ಸಾಹಿತ್ಯ ವೈಭವ

ಯಕ್ಷಗಾನ ಎಂದೂ ಅಳಿಯುವುದಿಲ್ಲ. ಕೋವಿಡ್ ಕಾಲದಲ್ಲಿ ಮುಗಿಯಿತು ಎಂದು ಭಾವಿಸಿದರೂ ಕೋವಿಡ್ ನಂತರ ಯಕ್ಷಗಾನ ಮತ್ತೂ ಹೆಚ್ಚು ಮೆರೆಯುತ್ತಿದೆ. ಹಲವಾರು ಯುವ ಪ್ರತಿಭೆಗಳು ಮಿಂಚುತ್ತಿದ್ದಾರೆ. ಯಾವನೇ ಕಲಾವಿದ ತಾನು ಕಲಾವಿದನಾಗಿ ರೂಪುಗೊಳ್ಳಲು ಸಮಗ್ರ ಅದ್ಯಯನ ಅಗತ್ಯ.

ಅದ್ಯಯನದ ಕೊರತೆ ಯುವ ಕಲಾವಿದರಲ್ಲಿ ಕಾಣುತ್ತದೆ. ಪುರಾಣ ಕಥೆಗಳನ್ನು ಓದಿ ಅದರ ಎಲ್ಲಾ ವಿಚಾರಗಳನ್ನು ಮನದಟ್ಟು ಮಾಡುವುದು ಅಗತ್ಯ. ಇಂದಿನ ಯುವ ಪೀಳಿಗೆ ಮೌಲ್ಯವರಿತು ಮುನ್ನಡೆಯ ಬೇಕು.

ಯಕ್ಷಗಾನವನ್ನು ಬೆಳೆಸುವ ಯೋಚನೆಯಲ್ಲಿ ಸಿರಿಬಾಗಿಲು ಪ್ರತಿಷ್ಠಾನವು ಹಲವಾರು ಯೋಜನೆ ಯೋಚನೆಯಿಂದ ಬೃಹತ್ ಸಾಂಸ್ಕೃತಿಕ ಭವನ ನಿರ್ಮಾಣಮಾಡಿ ಪ್ರಯತ್ನಿಸುತ್ತಿದೆ. ಸಂಪೂರ್ಣ ಯಶಸ್ವಿ ಗೊಳಿಸುವ ಭರವಸೆ ಮೂಡಿಸಿದ್ದಾರೆ ಶ್ರೀಯುತ ಮಯ್ಯರು. ಇನ್ನೂ ಬೆಳಗಲಿ ಎಂದು ಯಕ್ಷಗಾನ ಸಂಘಟಕರು- ಕಲಾವಿದರೂ ಆದ ಶ್ರೀ ಯಸ್.ಯನ್.ಪಂಜಾಜೆ ಯವರು ಪ್ರತಿಷ್ಠಾನದ ಕಲಾ ಸಾಂಸ್ಕೃತಿಕ ಸಾಹಿತ್ಯ ವೈಭವ ದ ನಾಲ್ಕನೇ ಕಾರ್ಯಕ್ರಮ ದೀಪ ಬೆಳಗಿಸಿ ಶುಭ ಹಾರೈಸಿದರು.

ವಿಶ್ವ ಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಇದರ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಹೊಳ್ಳ ವೇದಿಕೆಲ್ಲಿ ಟ್ರಸ್ಟ್ ನ 680 ತಾಳಮದ್ದಳೆ ಕುರಿತಾಗಿಮಾತನಾಡಿದರು. ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಸ್ವಾಗತಿಸಿ, ವಕೀಲರಾದ ಶ್ರೀ ಪದ್ಮನಾಭ ಹೊಳ್ಳ ನೀರಾಳ, ಸಿರಿಬಾಗಿಲು ನಿರೂಪಿಸಿದರು.


ವಿಶ್ವ ಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಇವರಿಂದ ಪಾರ್ಥ ಸಾರದ್ಯ ತಾಳಮದ್ದಳೆ ನಡೆಯಿತು. ರವಿಶಂಕರ್ ಮಧೂರು, ರಾಮ ಹೊಳ್ಳ ಸುರತ್ಕಲ್, ಸುದರ್ಶನ ಕಲ್ಲೂರಾಯ ಹಿಮ್ಮೇಳ ದಲ್ಲಿ ಸಹಕರಿಸಿದರೆ, ಕೃಷ್ಣ ನಾಗಿ ಪ್ರಶಾಂತ್ ಹೊಳ್ಳ,
ಕೌರವ -ಕಾಸರಗೋಡು ಸುಬ್ರಾಯ ಹೊಳ್ಳ.
ಬಲರಾಮ-ಗುಂಡ್ಯಡ್ಕ ಈಶ್ವರ ಭಟ್

ಅರ್ಜುನ-ಕುಶಲಾಕ್ಷಿ ಮುಡಿಪು ಭಾಗವಹಿಸಿದರು.

ತುಳಸಿ ಜಲಂಧರ ಮತ್ತು ಮಕರಾಕ್ಷ ಕಾಳಗ
ಯಕ್ಷಗಾನ ಪ್ರದರ್ಶನ

ಯಕ್ಷ ಭಾರತಿ ಕನ್ಯಾಡಿ 8ನೇಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ ಮಂಗಳೂರು ಪ್ರಾಯೋಜಕತ್ವದಲ್ಲಿ


ಶ್ರೀ ಮಹಾಲಿಂಗೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿಯಿಂದ
ತುಳಸಿ ಜಲಂಧರ ಮತ್ತು ಮಕರಾಕ್ಷ ಕಾಳಗ
ಯಕ್ಷಗಾನ ಪ್ರದರ್ಶನ ಉಜಿರೆ ಶ್ರಿ ರಾಮಕೃಷ್ಣ ಮಂಟಪದಲ್ಲಿ ಜರಗಿತು.

ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸಮೂಹಗಾನ ಸ್ಪರ್ಧೆಯಲ್ಲಿ ಬಹುಮಾನ

ಸಂಸ್ಕಾರ ಭಾರತಿ, ಪುತ್ತೂರು ಜಿಲ್ಲೆ ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ “ಆಜ್ಹಾದಿ ಕಾ ಅಮೃತ್ ಮಹೋತ್ಸವ್” ಅಂಗವಾಗಿ

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸಮೂಹಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ಕಜೆ (10ನೇ), ವಿದಿತಾ ಭಟ್ (10ನೇ), ಶ್ವೇತಾ ಪೂರ್ಣಿಮಾ (10ನೇ) ಮತ್ತು ಭಾನವಿ ಕಜೆ (8ನೇ ತರಗತಿ)

ಇವರ ತಂಡ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ, ಪ್ರತಿಭೆ ಅಂಕಗಳಿಗೆ ಮಾತ್ರ ಸೀಮಿತವಲ್ಲ- ಡಾ. ಪ್ರಭಾಕರ ಭಟ್

ಪುತ್ತೂರು, ಅ 13: ಪ್ರತಿಭಾನ್ವಿತರಾಗಲು ನಿತ್ಯ ನಿರಂತರ ಸಾಧನೆ ಅತ್ಯಗತ್ಯ. ಪ್ರತಿಭೆಗಳು ಸಮಾಜದ ಬೇರ ಬೇರೆ ಕ್ಷೇತ್ರದಲ್ಲಿ ರೂಪುಗೊಂಡು ದೇಶದ ಪರಮ ವೈಭವವನ್ನು ತೋರಿಸುವ ಕೆಲಸವನ್ನು ಕೈಗೊಳ್ಳಬೇಕು.

ಭಾರತ ಮಾತೆಗೆ ಸಮಸ್ಯೆ ಬಂದಾಗ ನಮ್ಮ ಪಾತ್ರ ಏನು ಎಂದು ನಮಗೆ ತಿಳಿಯಬೇಕು. ಈ ಮೂಲಕ ಪ್ರತಿಭಾನ್ವಿತರು ಉತ್ತಮ ಸಮಾಜದ ನಿರ್ಮಾಣದ ಕಡೆಗೆ ಗಮನ ಹರಿಸಬೇಕೆಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2021-22 ನೇ ಶೈಕ್ಷಣಿಕ ವರ್ಷದ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಪ್ರತಿಭಾ ಪ್ರದೀಪ್ತಿ-2022 ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಉತ್ತಮ ಅಂಕಗಳನ್ನು ಮತ್ತು ರ‍್ಯಾಂಕ್‌ಗಳನ್ನು ಗಳಿಸುವುದು ವಿದ್ಯಾರ್ಥಿಗಳು ಮಾಡಿದಂತಹ ಸತತ ಪರಿಶ್ರಮದಿಂದಾಗಿದೆ. ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆಯನ್ನು ಗೌರವಿಸಿ, ಪ್ರತಿಭೆಯನ್ನು ಸಮಾಜಕ್ಕೆ ತೋರ್ಪಡಿಸುವಂತಾಗಬೇಕು. ನಮ್ಮ ಭವಿಷ್ಯವನ್ನು ನಾವೇ ನಿರ್ಧರಿಸಬೇಕು. ಪಠ್ಯವನ್ನು ಮೀರಿದ ಜೀವನ ಪಾಠವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು.

ಕಠಿಣ ಪರಿಸ್ಥಿತಿಯನ್ನು ಎದುರಿಸುವ ಇಚ್ಛಾಶಕ್ತಿ, ಆತ್ಮಸ್ಥೈರ್ಯಗಳನ್ನು ಬೆಳೆಸಿಕೊಳ್ಳಬೇಕು. ಉತ್ತಮ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜವು ಗುರುತಿಸುವಂಥಹ ಕಾರ್ಯಗಳನ್ನು ಕೈಗೊಳ್ಳಬೇಕು. ಕಾಲೇಜಿನಲ್ಲಿ ಕಲಿತ ಪ್ರತಿಭಾನ್ವಿತ ಕುಡಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.


ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾಗಿ ಆಗಮಿಸಿದ ಮಂಗಳೂರಿನ ಶಕ್ತಿ ಕಾಲೇಜಿನ ಆಡಳಿತ ಅಧಿಕಾರಿ ರಮೇಶ್ ಭಾಗವಹಿಸಿ ಮಾತನಾಡಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ವಿದ್ಯಾರ್ಥಿಗಳ ಸಾಧನೆಗೆ ಎತ್ತಿ ಹಿಡಿದ ಕನ್ನಡಿ. ವಿದ್ಯಾರ್ಥಿಗಳ ಈ ಪ್ರತಿಭೆಯು ಸಮಾಜದ ಸುಖಕ್ಕೆ ಉಪಯೋಗಬೇಕು. ಸಹಜ ಕಲಿಕೆಯ ಖುಷಿಯನ್ನು ಅನುಭವಿಸಬೇಕು. ಯಾವುದೇ ಕ್ಷೇತ್ರವಾದರೂ ಅದನ್ನು ಆರಿಸಿ ಸಾಧನೆ ಮಾಡುತ್ತಾ ಮುಂದುವರೆಯಬೇಕು. ವಿದ್ಯಾರ್ಥಿಗಳು ಶಿಕ್ಷಣ ಮಾತ್ರವಲ್ಲದೆ ಇನ್ನೀತರ ಕ್ಷೇತ್ರಗಳಲ್ಲಿ ಕೂಡ ಯಶ್ವಸಿಯಾಗಿ ಕಾರ್ಯನಿರ್ವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬಿದರು.


ವಿಶೇಷ ಸನ್ಮಾನ:
ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳು ಸೇರಿದಂತೆ 2021-22 ನೇ ಶೈಕ್ಷಣಿಕ ವರ್ಷದಲ್ಲಿ ವಿಶೇಷ ಶ್ರೇಣಿಯಲ್ಲಿ ಸಾಧನೆಗೈದ 251 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.


ವಾಣಿಜ್ಯ ವಿಭಾಗದಲ್ಲಿ 593 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯದಲ್ಲಿ ನಾಲ್ಕನೇ ರ‍್ಯಾಂಕ್ ಮತ್ತು ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ದೀಪ್ನಾ ಜೆ , ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಗಳಿಸುವುದರ ಮೂಲಕ ರಾಜ್ಯದಲ್ಲಿ ಐದನೇ ರ‍್ಯಾಂಕ್ ಮತ್ತು ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನ ಹಾಗೂ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 177 ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 367 ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 859ನೇ ರ‍್ಯಾಂಕ್ ಪಡೆದ ಮನ್ವಿತ ಎನ್ ಪಿ,

ಕಲಾ ವಿಭಾಗದಲ್ಲಿ 580 ಅಂಕಗಳನ್ನು ಪಡೆಯುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ವಸುದೇವ ತಿಲಕ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 64 ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 184 ನೇ ರ‍್ಯಾಂಕ್, ಇಂಜಿನಿಯರಿಂಗ್‌ ನಲ್ಲಿ 294ನೇ ರ‍್ಯಾಂಕ್ ಮತ್ತು ವೆಟರ್ನರಿಯಲ್ಲಿ 315 ನೇ ರ‍್ಯಾಂಕ್ ಗಳಿಸಿದ ಶ್ರೀನಿಧಿ ಐ, ಇಂಜಿನಿಯರಿಂಗ್ ನಲ್ಲಿ 350ನೇ ರ‍್ಯಾಂಕ್, ಫಾರ್ಮಾದಲ್ಲಿ 1848 ನೇ ರ‍್ಯಾಂಕ್ ಗಳಿಸಿದ ವಿಶಾಖ್ ಕಾಮತ್, ಸಿಪಿಟಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವೈಷ್ಣವಿ ಪೈ ಎ, ಇಂಜಿನಿಯರಿಂಗ್ ನಲ್ಲಿ 658ನೇ ರ‍್ಯಾಂಕ್ ಗಳಿಸಿದ ಕೀರ್ತನ್ ಅಡಿಗ, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 535 ನೇ ರ‍್ಯಾಂಕ್,

ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 768 ನೇ ರ‍್ಯಾಂಕ್ ಗಳಿಸಿದ ವಿನೀತ್ ಜೆ, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 687 ನೇ ರ‍್ಯಾಂಕ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 735 ನೇ ರ‍್ಯಾಂಕ್ ಗಳಿಸಿದ ಸ್ತುತಿ ಎಂ. ಎಸ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 699 ನೇ ರ‍್ಯಾಂಕ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 773 ನೇ ರ‍್ಯಾಂಕ್ ಗಳಿಸಿದ ಸಾತ್ವಿಕ್ ಶಿವಾನಂದ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1245 ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 1277 ನೇ ರ‍್ಯಾಂಕ್ ಗಳಿಸಿದ ಕೆ. ಎ. ಅನನ್ಯ, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 1504 ನೇ ರ‍್ಯಾಂಕ್,

ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1148 ನೇ ರ‍್ಯಾಂಕ್ ಗಳಿಸಿದ ಶ್ರೇಯಸ್ ಕಮಲ್, ಇಂಜಿನಿಯರಿಂಗ ನಲ್ಲಿ 1840ನೇ ರ‍್ಯಾಂಕ್ ಪವನ್ ವೈ.ಡಿ.ಜೆ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1964 ನೇ ರ‍್ಯಾಂಕ್ ಗಳಿಸಿದ ಬಿ ರಿಯಾ ಶೆಟ್ಟಿ, ಕೇಂದ್ರ ಸರಕಾರದ ಲೋಕ ಸೇವಾ ಆಯೋಗ ನಡೆಸಿದ ಎನ್.ಡಿ.ಎ. ಪರೀಕ್ಷೆಯಲ್ಲಿ 237ನೇ ರ‍್ಯಾಂಕ್ ಗಳಿಸಿ ಮುಂದಿನ ಹಂತವಾದ ದೈಹಿಕ ಪರೀಕ್ಷೆಯಲ್ಲೂ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ಪ್ರಸ್ತುತ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ತಿಯಾನಂದ್ ಎಂ , ರಾಷ್ಟç ಮಟ್ಟದ ಎನ್.ಟಿ.ಎಸ್.ಇ ಎರಡನೇ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಆಶ್ರಯ ಪಿ ಇವರನ್ನು ಶಾಲು ಹೊದಿಸಿ ಕಡತ, ಪುಸ್ತಕ ನೀಡಿ ವಿಶೇಷವಾಗಿ ಸನ್ಮಾನಿಸಲಾಯಿತು.


ನಂತರ ವಿದ್ಯಾರ್ಥಿಗಳಾದ ಮನ್ವಿತ, ದೀಪ್ನಾ ಜೆ ಮತ್ತು ವಸುದೇವ ತಿಲಕ್ ಮಾತನಾಡಿ ಈ ಕಾಲೇಜಿನಲ್ಲಿ ದೊರೆತ ನಿರಂತರ ಪ್ರೋತ್ಸಾಹವೇ ನಮ್ಮ ಯಶಸ್ಸಿಗೆ ಕಾರಣ. ಉಪನ್ಯಾಸಕರ ಪಠ್ಯಕ್ರಮ, ಸಲಹೆ ಸೂಚನೆಗಳು ನಮ್ಮಲ್ಲಿ ಆತ್ಮವಿಶ್ವಾಸವನ್ನು ಮೂಡಿಸಲು ಸಹಕಾರಿಯಾಗಿವೆ. ಉತ್ತಮ ಶಿಕ್ಷಣವನ್ನು ನೀಡಿದ ವಿದ್ಯಾಸಂಸ್ಥೆ, ಗುರುಹಿರಿಯರು ಮತ್ತು ಪ್ರೋತ್ಸಾಹಿಸಿದ ಹೆತ್ತವರಿಗೆ ಕೃತಜ್ಞರಾಗಿದ್ದೇವೆ ಎಂದು ಅಭಿಪ್ರಾಯಪಟ್ಟರು.


ಕಾಲೇಜಿನ ಉಪನ್ಯಾಸಕ ಶ್ರೀಧರ ಶೆಟ್ಟಿಗಾರ್ ಮಾತನಾಡಿ ಸಾಧಕ ವಿದ್ಯಾರ್ಥಿಗಳಿಗೆ ಮಾಡುವ ಸನ್ಮಾನಗಳು ಎಲ್ಲರ ಪಾಲಿಗೆ ಆಶೀರ್ವಾದವಾಗಿ ಪರಿಣಮಿಸಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆಯಾಗಲಿ. ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಸಮಾಜದ ಕೀರ್ತಿಯನ್ನು ಎತ್ತಿಹಿಡಿಯುವಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳಯಬೇಕು. ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಸುಂದರವಾಗಿರಲಿ ಎಂದು ಹಾರೈಸಿದರು.


ಇದೇ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2021-22 ನೇ ಸಾಲಿನ ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ನೀಡುವ ವೇದಿಕೆಯಾದ ಚಿಗುರು ವಾರ್ಷಿಕ ಸಂಚಿಕೆ ಬಿಡುಗಡೆಯ ಸಮಾರಂಭವು ನಡೆಯಿತು. ವಾರ್ಷಿಕ ಸಂಚಿಕೆಯನ್ನು ಡಾ. ಪ್ರಭಾಕರ ಭಟ್ ಕಲ್ಲಡ್ಕ ಅನಾವರಣಗೊಳಿಸಿದರು.


ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಎಂ. ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕಿ ಭಾಗ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿ ಕವಿತಾ ವಂದಿಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ


ಆಧ್ಯಾತ್ಮಿಕ ವಿಚಾರಗಳನ್ನು ಇಡೀ ಪ್ರಪಂಚಕ್ಕೆ ಪ್ರಸಾರ ಮಾಡಿದಾಗ ಭಾರತ ವಿಶ್ವಗುರುವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ ಹೇಳಿದರು.

ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಪ್ರಧಾನ ಅಭ್ಯಾಗತರಾಗಿ ಭಾಗವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಭಾರತ ಆಧ್ಯಾತ್ಮಿಕ ಹಾಗೂ ಸಂಸ್ಕಾರಯುತ ವಿಷಯಗಳ ತವರು. ಈ ರಕ್ಷಾ ಬಂಧನಕ್ಕೆ ಪೌರಾಣಿಕವಾಗಿ ಹಾಗೂ ಐತಿಹಾಸಿಕವಾಗಿ ಅದರದ್ದೇ ಆದ ಹಿನ್ನೆಲೆಗಳಿವೆ ಎಂದು ಹೇಳಿದ ಅವರು ಶ್ರೀ ಕೃಷ್ಣ ಪರಮಾತ್ಮ ಹಾಗೂ ಶಿವಾಜಿ ಮಹಾರಾಜರ ಉಲ್ಲೇಖ ಮಾಡುತ್ತಾ, ಸಹೋದರ ಭಾವವನ್ನು ಮೈಗೂಡಿಸಿಕೊಂಡು, ಸದೃಢ ಭಾರತದ ನಿರ್ಮಾಣದಲ್ಲಿ ಕೈ ಜೋಡಿಸೋಣ ಎಂದರು.


ಅಭ್ಯಾಗತರು ಭಾರತಮಾತೆಗೆ ರಕ್ಷೆಯನ್ನು ಕಟ್ಟುವುದರ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಪುಷ್ಪಲತಾ ಬಿ.ಕೆ ಹಾಗೂ ಶ್ರೀಮತಿ ನಮಿತಾ ರಕ್ಷಾ ಬಂಧನದ ಮಹತ್ವವನ್ನು ಸಾರುವ ಗೀತೆಯನ್ನು ಹಾಡಿದರು.

10ನೇ ತರಗತಿಯ ಕುಮಾರಿ ಧಾತ್ರಿ ಮತ್ತು 7ನೇ ತರಗತಿಯ ಕುಮಾರಿ ಅನನ್ಯಾ ನಾವಡ ರಕ್ಷಾ ಬಂಧನದ ಕುರಿತು ಮಾತನಾಡಿದರು. ಶಾಲಾ ವಿದ್ಯಾರ್ಥಿನಿಯರು ದೇಶಭಕ್ತಿ ಗೀತೆಗಳನ್ನು ಹಾಡಿದರು. ಬಳಿಕ ವಿದ್ಯಾರ್ಥಿಗಳು ಪರಸ್ಪರ ರಕ್ಷೆ ಕಟ್ಟುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು.


ಶಿಕ್ಷಕಿ ಶ್ರೀಮತಿ ಪದ್ಮಲಕ್ಷ್ಮೀ ವಂದಿಸಿದರು. ಶ್ರೀಮತಿ ಆಶಾ.ಕೆ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿತ್ರಕಲಾ ಶಿಕ್ಷಕ ಶ್ರೀ ಕಾರ್ತಿಕ್ ಕುಮಾರ್ ರಚಿಸಿ, ನಿರ್ದೇಶಿಸಿದ ರಕ್ಷಾ ಬಂಧನದ ಮಹತ್ವವನ್ನು ತಿಳಿಸುವ “ಶ್ರೀರಕ್ಷೆ” ಎಂಬ ಕಿರುಚಿತ್ರದ ಪೋಸ್ಟರ್ ನ್ನು ಅತಿಥಿಗಳು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಧ್ವಜಾರೋಹಣ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹರ್ ಘರ್ ತಿರಂಗಾ ಹಾಗೂ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಆ.13ರಂದು ನಡೆಯಿತು.

ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೃಷ್ಣಪ್ರಸನ್ನ ಕೆ ಧ್ವಜಾರೋಹಣ ನೆರವೇರಿಸಿದರು.

ಸಮಾರಂಭದಲ್ಲಿ ಆಡಳಿತ ಮಂಡಳಿಯ ಕೋಶಾಧಿಕಾರಿ ಸಚಿನ್ ಶೆಣೈ, ಸದಸ್ಯ ಡಾ. ಕೆ.ಎನ್ ಸುಬ್ರಹ್ಮಣ್ಯ, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಉದಯೋನ್ಮುಖ ಅನುಭವೀ ಹಿಮ್ಮೇಳ ಕಲಾವಿದ – ಶ್ರೀ ಆನಂದ ಪಡ್ರೆ 

ಯಕ್ಷಗಾನ ಕಲೆಯ ಹಿಮ್ಮೇಳ ವಿಭಾಗದಲ್ಲಿ ಭಾಗವತ ಮತ್ತು ಮದ್ದಳೆಗಾರ ಎಂಬ ಎರಡು ಶ್ರೇಷ್ಠ ಸ್ಥಾನಗಳು. ಭಾಗವತನಂತೆ ಮದ್ದಳೆಗಾರನೂ ಹೊಣೆಗಾರಿಕೆಯ ಸ್ಥಾನವನ್ನು ಹೊಂದಿ ಪ್ರಸಂಗದ ಯಶಸ್ಸಿಗೆ ಕಾರಣನಾಗುತ್ತಾನೆ. ಭಾಗವತನು ಅನನುಭವಿಯಾಗಿದ್ದರೂ ಮದ್ದಳೆಗಾರನು ಅನುಭವಿಯಾಗಿದ್ದರೆ ಪ್ರಸಂಗವನ್ನು ಮುನ್ನಡೆಸಬಲ್ಲ. ಪ್ರಸಂಗಾನುಭವಗಳನ್ನು ಈ ಸ್ಥಾನದಲ್ಲಿರುವವರು ಹೊಂದಿರಲೇಬೇಕು.

ತೆಂಕುತಿಟ್ಟಿನ ಹಿಮ್ಮೇಳದ ಚೆಂಡೆ ಮದ್ದಳೆವಾದಕರಾಗಿ ಇಂದು ಅನೇಕ ಉದಯೋನ್ಮುಖರು ಮಿಂಚುತ್ತಿದ್ದಾರೆ ಎಂಬುದು ಸಂತೋಷವನ್ನು ನೀಡುವ ವಿಚಾರ. ಇವರೆಲ್ಲರೂ ರಂಗನಡೆ, ಪ್ರಸಂಗಾನುಭವ, ವೇಷಕ್ಕೆ ಸರಿಯಾಗಿ ನುಡಿಸುವುದರಲ್ಲೂ ಪಕ್ವರಾದರೆ ಯಕ್ಷಗಾನಕ್ಕೆ ಬಹುದೊಡ್ಡ ಆಸ್ತಿಯಾಗಬಲ್ಲರು.

ಈ ಎಲ್ಲಾ ವಿಚಾರಗಳಲ್ಲೂ ನಿರಂತರ ಅಭ್ಯಾಸದಿಂದ ಪಕ್ವರಾಗುತ್ತಾ ಬೆಳೆಯುತ್ತಿರುವ ಅನುಭವೀ ಮದ್ದಳೆಗಾರರ ಸಾಲಿನಲ್ಲಿ ಗುರುತಿಸಲ್ಪಡುವವರು ಶ್ರೀ ಆನಂದ ಪಡ್ರೆ ಅವರು. ಇವರು ಪ್ರಸ್ತುತ ಸಸಿಹಿತ್ಲು ಮೇಳದ ಮದ್ದಳೆಗಾರರಾಗಿ ವ್ಯವಸಾಯ ಮಾಡುತ್ತಿದ್ದಾರೆ. 

ತೆಂಕುತಿಟ್ಟಿನ ಮದ್ದಳೆಗಾರ ಶ್ರೀ ಆನಂದ ಪಡ್ರೆ  ಅವರ ಹುಟ್ಟೂರು ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದ ಬದಿ ಎಂಬಲ್ಲಿ. 1976ನೇ ಇಸವಿ ಜನವರಿ 26ರಂದು ಶ್ರೀ ಕೃಷ್ಣ ನಾಯ್ಕ ಮತ್ತು ಶ್ರೀಮತಿ ಸರಸ್ವತಿ ದಂಪತಿಗಳ ಪುತ್ರನಾಗಿ ಜನನ. ಮದ್ದಳೆಗಾರ ಪಡ್ರೆ ಶ್ರೀಧರ ಇವರ ಬಂಧುಗಳು. (ಸಂಬಂಧದಲ್ಲಿ ಇವರಿಗೆ ಮಾವ) ಶ್ರೀ ಆನಂದ ಪಡ್ರೆ ಇವರು ಓದಿದ್ದು ಪಿಯುಸಿ ವರೆಗೆ.

7ನೇ ತರಗತಿ ವರೆಗೆ ಸ್ವರ್ಗದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. ಹತ್ತನೇ ತರಗತಿ ವರೆಗೆ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ. ಪಿಯುಸಿ ವಿದ್ಯಾಭ್ಯಾಸ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ. ಶಾಲಾ ವಿದ್ಯಾರ್ಥಿಯಾಗಿದ್ದಾಗಲೇ ಇವರಿಗೆ ಯಕ್ಷಗಾನ ಕಲಾಸಕ್ತಿ ಇತ್ತು. ಯಕ್ಷಗಾನ ಪ್ರದರ್ಶನಗಳನ್ನು ನೋಡಿ ಮನೆಗೆ ಬಂದು ಹಗಲು ನಿದ್ದೆ ಮಾಡದೆ ಮನೆಯ ಸಮೀಪ ಅಣಕು ಯಕ್ಷಗಾನದಲ್ಲಿ ಭಾಗಿಯಾಗುತ್ತಿದ್ದರು.

ಇವರೂ, ಪಡ್ರೆ ಶ್ರೀಧರ ಅವರೂ ಈ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಕುಳಿತುಕೊಳ್ಳುವ ಮಣೆಯೇ ಚೆಂಡೆಯಾಗುತ್ತಿತ್ತು. ಅಡಿಕೆ ಹಾಳೆಗಳಿಂದ ಕಿರೀಟ ತಯಾರಿ, ಮಹಿಷಾಸುರ ವೇಷಕ್ಕೆ ತೆಂಗಿನ ಗರಿಯೇ ಕೋಡುಗಳಾಗಿ ಸಿದ್ಧವಾಗುತ್ತಿತ್ತು. ಹತ್ತಿರದ ಮನೆಯ ಮಕ್ಕಳನ್ನು ಒತ್ತಾಯಪೂರ್ವಕ ಎಳೆತಂದು ಪ್ರೇಕ್ಷಕರ ಸಾಲಿನಲ್ಲಿ ಕುಳಿತುಕೊಳ್ಳಲು ಆಜ್ಞೆ ಮಾಡುತ್ತಿದ್ದರು. ಹೀಗೆಯೇ ತಾನೂ ಕಲಾವಿದನಾಗಬೇಕೆಂಬ ಆಸೆಯು ಹುಟ್ಟಿಕೊಂಡಿತ್ತು.

ಶ್ರೀ ಆನಂದ ಅವರಿಗೆ ಹಿಮ್ಮೇಳ ಕಲಾವಿದನಾಗಬೇಕೆಂಬ ಆಸೆ. ಅದಕ್ಕೆ ಅವಕಾಶವೂ ತಾನಾಗಿ ಒಲಿದುಬಂದಿತ್ತು. ಮನೆ ಹತ್ತಿರದಲ್ಲಿ ಬದಿ ಕೇಶವ ಭಟ್ ಎಂಬ ಮಹನೀಯರಿದ್ದರು. ಅವರ ಮನೆಯಲ್ಲಿ ತೆಂಕುತಿಟ್ಟಿನ ಖ್ಯಾತ ಮದ್ದಳೆಗಾರ ಪುಂಡಿಕಾಯಿ ಕೃಷ್ಣ ಭಟ್ಟರು ಹಿಮ್ಮೇಳ ತರಬೇತಿ ನೀಡುತ್ತಿದ್ದರು. ಮಳೆಗಾಲದಲ್ಲಿ ಶ್ರೀ ಆನಂದ ಅವರು ಪುಂಡಿಕಾಯಿ ಕೃಷ್ಣ ಭಟ್ಟರಿಂದ ಚೆಂಡೆ ಮಾಡಲೇ ನುಡಿಸುವಿಕೆಯನ್ನು ಕಲಿತರು. 8ನೇ ಕ್ಲಾಸಿನ ವಿದ್ಯಾರ್ಥಿಯಾಗಿರುವಾಗಲೇ ಸಂಘದ ಆಟವೊಂದರಲ್ಲಿ ಚೆಂಡೆ ಬಾರಿಸುವ ಅವಕಾಶವೂ ಸಿಕ್ಕಿತ್ತು. (ದೇವಿ ಮಹಾತ್ಮ್ಯೆ ಪ್ರಸಂಗ) ಮತ್ತೆ ಪೆರ್ಲ ಶಾಲಾ ಯುವಜನೋತ್ಸವದ ಪ್ರದರ್ಶನಕ್ಕೂ ಚೆಂಡೆ ಬಾರಿಸಿದ್ದರು.

ಗುರುಗಳಾದ ಪುಂಡಿಕಾಯಿ ಕೃಷ್ಣ ಭಟ್ಟರ ಸಹಕಾರ ಮತ್ತು ನಿರ್ದೇಶನದಲ್ಲಿ ಊರ ಪರವೂರ ಪ್ರದರ್ಶನಗಳಲ್ಲಿ ಭಾಗವಹಿಸುವ ಅವಕಾಶವೂ ದೊರೆತಿತ್ತು. ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯಾಗಿರುವಾಗ ಕಾಲೇಜು ಡೇ ಪ್ರದರ್ಶನಗಳಲ್ಲೂ ಚೆಂಡೆ ಬಾರಿಸಿದ್ದರು. ಮಂಗಳೂರು ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜು ತಂಡದ ಮದ್ದಳೆಗಾರನಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮದ್ದಳೆಗಾರರಾದ ಕೊಂಕಣಾಜೆ ಚೆಂದ್ರಶೇಖರ ಭಟ್ ಅವರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯಾಗಿ ವೇಷ ಮಾಡುತ್ತಿದ್ದರು.

ಈ ಸಂದರ್ಭಗಳಲ್ಲಿ ಊರ ಪರವೂರ ಪ್ರದರ್ಶನಗಳಲ್ಲಿ ಭಾಗವಹಿಸಿ ರಂಗಾನುಭವಗಳನ್ನು ಗಳಿಸಿಕೊಂಡರು. ಭಾಗವತರಾದ ತೆಂಕಬೈಲು ಶ್ರೀ ತಿರುಮಲೇಶ್ವರ ಶಾಸ್ತ್ರಿಗಳ ಸಹಕಾರ, ಮಾರ್ಗದರ್ಶನವೂ ದೊರಕಿತ್ತು. ಪಿಯುಸಿ ಶಿಕ್ಷಣದ ನಂತರ ಉಡುಪಿ ಕಲ್ಯಾಣಪುರದಲ್ಲಿ ಖಾಸಗಿ ಉದ್ಯೋಗವನ್ನು ಮಾಡಿದ್ದರು (ಒಂದೂವರೆ ವರ್ಷ) ಈ ಸಂದರ್ಭದಲ್ಲಿ  ಪರಿಸರದಲ್ಲಿ ನಡೆಯುತ್ತಿದ್ದ ಮೇಳಗಳ ಪ್ರದರ್ಶನಗಳನ್ನು ನೋಡುತ್ತಿದ್ದರು. ತಾನೂ ಮೇಳದ ಕಲಾವಿದನಾಗಬೇಕೆಂಬ ಬಯಕೆಯು ಹೆಚ್ಚಾಯಿತು. ಭಾಗವತ ಪೆರ್ಲ ಶ್ರೀ ಸತ್ಯನಾರಾಯಣ ಪುಣಿಂಚತ್ತಾಯ ಅವರ ಮನೆಯಲ್ಲಿ ನವರಾತ್ರಿಯ ಸಂದರ್ಭ ನಡೆಯುತ್ತಿದ್ದ ಕೂಟಗಳಲ್ಲೂ ಭಾಗವಹಿಸುವ ಅವಕಾಶವಾಗಿತ್ತು. 

ಶ್ರೀ ಆನಂದ ಪಡ್ರೆ ಅವರು ತಿರುಗಾಟ ಆರಂಭಿಸಿದ್ದು ಶ್ರೀ ಮಂಗಳಾದೇವಿ ಮೇಳದಲ್ಲಿ. ಸದ್ರಿ ಮೇಳ ಆರಂಭವಾದ ವರ್ಷ. ಭಾಗವತ ಶ್ರೀ ಸತ್ಯನಾರಾಯಣ ಪುಣಿಂಚತ್ತಾಯ ಅವರ ಹೇಳಿಕೆಯಂತೆ ಮೇಳಕ್ಕೆ ಸೇರ್ಪಡೆ. ತಿರುಗಾಟದ ಅನುಭವ ಇಲ್ಲದ ಇವರಿಗೆ ಶ್ರೀ ಪುಣಿಂಚತ್ತಾಯರೂ ಶ್ರೀ ನಾರಾಯಣ ಶಬರಾಯರೂ ಮಾರ್ಗದರ್ಶಕರಾಗಿ ಸಹಕರಿಸಿದ್ದರು. ಆಗ ಕಾಸರಗೋಡು ವೆಂಕಟ್ರಮಣ ಮತ್ತು ಶ್ರೀ ಪದ್ಮನಾಭ ಉಪಾಧ್ಯಾಯರು ಮದ್ದಳೆಗಾರರಾಗಿದ್ದರು. ಅವರ ಸಹಕಾರವೂ ದೊರೆತಿತ್ತು.

ಈ ಮೇಳದಲ್ಲಿ ಹದಿಮೂರು ವರ್ಷಗಳ ತಿರುಗಾಟ. ಈ ಸಂದರ್ಭ ಪ್ರಭಾಕರ ಗೋರೆ, ಲಕ್ಷ್ಮೀಶ ಅಮ್ಮಣ್ಣಾಯ, ಪದ್ಯಾಣ ಜಯರಾಮ ಭಟ್, ಪದ್ಯಾಣ ಗಣಪತಿ ಭಟ್, ದೇಲಂತಮಜಲು ಸುಬ್ರಹ್ಮಣ್ಯ ಭಟ್, ಪೆರುವೋಡಿ ಶ್ಯಾಮ್ ಭಟ್, ರವಿಚಂದ್ರ ಕನ್ನಡಿಕಟ್ಟೆ , ವಿನಯ ಆಚಾರ್ಯ ಕಡಬ, ಕರುಣಾಕರ ಶೆಟ್ಟಿಗಾರ್ ಮೊದಲಾದವರ ಒಡನಾಟವು ದೊರೆತಿತ್ತು. ಇವರ ಕಲಾ ದುಡಿಮೆ ಮುಗಿದ ಮೇಲೆ ನಿದ್ರಿಸದೆ ಬೆಳಗಿನ ವರೆಗೂ ಪ್ರದರ್ಶನ ನೋಡುತ್ತಾ ಕಲಿಯುತ್ತಿದ್ದರು. ಯಾವ ಪದ್ಯಕ್ಕೆ, ಯಾವ ಸಂದರ್ಭಕ್ಕೆ ಹೇಗೆ ಚೆಂಡೆ ಬಾರಿಸಬೇಕು ಎಂದು ಆಟ ನೋಡುತ್ತಾ ಗಮನಿಸುತ್ತಿದ್ದರು. ಮರೆತು ಹೋಗದಂತೆ ಬರೆದಿಟ್ಟುಕೊಳ್ಳುವ ಅಭ್ಯಾಸವನ್ನೂ ರೂಢಿಸಿಕೊಂಡಿದ್ದರು.

ಮಂಗಳಾದೇವಿ ತಿರುಗಾಟದ ಬಳಿಕ ಎಡನೀರು ಮೇಳದಲ್ಲಿ 5 ವರ್ಷ ತಿರುಗಾಟ. ಶ್ರೀ ದಿನೇಶ ಅಮ್ಮಣ್ಣಾಯ ಮತ್ತು ಶ್ರೀ ಪದ್ಯಾಣ ಗಣಪತಿ ಭಟ್ ಭಾಗವತರಾಗಿದ್ದರು. ಇಬ್ಬರೂ ಇವರಿಗೆ ಸಹಕಾರ ಪ್ರೋತ್ಸಾಹ ನೀಡಿದ್ದರು. ಅವರ ಕಸುಬಿನ ಬಗೆಗೆ ಭಾಗವತ ಶ್ರೀ ದಿನೇಶ ಅಮ್ಮಣ್ಣಾಯರಿಗೆ ತೃಪ್ತಿಯಿತ್ತು. ಇವರಲ್ಲಿ ನೇರವಾಗಿ ಹೇಳದಿದ್ದರೂ ಮಠದ ಎಲ್ಲರಲ್ಲೂ ಹೇಳುತ್ತಿದ್ದರಂತೆ.

ಪದ್ಯಾಣ ಭಾಗವತರೂ ಇದೆ ಅಭಿಪ್ರಾಯವನ್ನು ಹೊಂದಿದ್ದರಂತೆ. ಕಳೆದ ಆರು ವರ್ಷಗಳಿಂದ ಸಸಿಹಿತ್ತಿಲು ಮೇಳದಲ್ಲಿ ಪಡ್ರೆ ಆನಂದ ಅವರು ವ್ಯವಸಾಯ ಮಾಡುತ್ತಿದ್ದಾರೆ. ಈ ಸಮಯದಲ್ಲಿ ಕಣಿಯೂರು ಸೂರ್ಯನಾರಾಯಣ ಭಟ್, ಪುಣಿಂಚತ್ತಾಯರು, ದಯಾನಂದ ಕೋಡಿಕಲ್, ರವೀಂದ್ರ ಶೆಟ್ಟಿ ಹೊಸಂಗಡಿ, ಚಂದ್ರಶೇಖರ ಕಕ್ಕೆಪದವು, ಶಿವಪ್ರಸಾದ್ ಎಡಪದವು ಮೊದಲಾದವರ ಒಡನಾಟವು ಸಿಕ್ಕಿತ್ತು. 

ಮಳೆಗಾಲದಲ್ಲಿ ಶ್ರೀಧರ ಭಂಡಾರಿ ಅವರ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಮಂಡಳಿಯ ಪ್ರದರ್ಶನಗಳಲ್ಲಿ ಶ್ರೀ ಆನಂದ ಪಡ್ರೆ  ಅವರು ಭಾಗವಹಿಸಿದ್ದರು. ಪುರಾಣ ಪ್ರಸಂಗಗಳ ಜ್ಞಾನ ಗಳಿಸಲು ಅನುಕೂಲವಾಗಿತ್ತು. ಭಾಗವತ ಪದ್ಯಾಣ ಗಣಪತಿ ಭಟ್ಟರಿಂದ ರಂಗನಡೆ, ಪ್ರಸಂಗ ಮೆರೆಸುವ ರೀತಿಯನ್ನು ಕಲಿಯುವಂತಾಗಿತ್ತು. ಈ ಟೂರಿನಲ್ಲಿ ವಿನಯ ಆಚಾರ್ಯ, ಸರಪಾಡಿ ಚಂದ್ರಶೇಖರ ಅವರ ಒಡನಾಟವೂ ದೊರೆತಿತ್ತು. ಖ್ಯಾತ ಮುಮ್ಮೇಳ ಕಲಾವಿದರೂ ಈ ತಂಡದ ಸದಸ್ಯರಾಗಿದ್ದರು.

ಮಂಗಳಾದೇವಿ ಆರಂಭವಾದ ವರ್ಷ ಹರಿದಾಸ ಶ್ರೀ ಮಲ್ಪೆ ರಾಮದಾಸ ಸಾಮಗರೊಂದಿಗೆ ತಿರುಗಾಟ ನಡೆಸುವ ಭಾಗ್ಯವು ದೊರೆತಿತ್ತು. ಬಳಿಕ ಕಿಶನ್ ಹೆಗ್ಡೆ ಅವರ ಕರ್ನಾಟಕ ಮೇಳದಲ್ಲಿ ಶ್ರೀ ವಾಸುದೇವ ಸಾಮಗರ ಜತೆ ವ್ಯವಸಾಯ ಮಾಡುವ ಅವಕಾಶವೂ ದೊರಕಿತ್ತು.

ಅಲ್ಲದೆ ತಿರುಗಾಟದುದ್ದಕ್ಕೂ ಕೊಕ್ಕಡ ಈಶ್ವರ ಭಟ್, ಕಾಂಚನ ಸಂಜೀವ ರೈ, ಮಿಜಾರು ಅಣ್ಣಪ್ಪ, ಅರುವ ಕೊರಗಪ್ಪ ಶೆಟ್ಟಿ, ಅರುವ ನಾರಾಯಣ ಶೆಟ್ಟಿ, ಸಿದ್ದಕಟ್ಟೆ ಚೆನ್ನಪ್ಪ, ಸಿದ್ದಕಟ್ಟೆ ವಿಶ್ವನಾಥ ಶೆಟ್ಟಿ, ಡಿ. ಮನೋಹರ ಕುಮಾರ್, ಕೆ.ಎಚ್ ದಾಸಪ್ಪ ರೈ, ಕೊಳ್ತಿಗೆ ನಾರಾಯಣ ಗೌಡ, ವೇಣೂರು ಸುಂದರ ಆಚಾರ್ಯ, ಸರಪಾಡಿ ಅಶೋಕ ಶೆಟ್ಟಿ, ಮಿಜಾರು ತಿಮ್ಮಪ್ಪ, ಜನಾರ್ದನ ಗುಡಿಗಾರ, ಬಂಟ್ವಾಳ ಜಯರಾಮ ಆಚಾರ್ಯ, ಸೀತಾರಾಮ ಕುಮಾರ್ ಕಟೀಲು, ರಾಧಾಕೃಷ್ಣ ನಾವಡ, ಉದಯ ನಾವಡ, ಕೆದಿಲ ಜಯರಾಮ ಭಟ್, ಧರ್ಮಸ್ಥಳ ಚಂದ್ರಶೇಖರ, ಮವ್ವಾರು ಬಾಲಕೃಷ್ಣ ಮಣಿಯಾಣಿ, ಶಿವರಾಮ ಜೋಗಿ, ತುಂಬೆ ಚಂದ್ರಹಾಸ, ಅಂಬಾ ಪ್ರಸಾದ ಪಾತಾಳ, ಅಲ್ಲದೆ ಮಳೆಗಾಲದ ಟೂರಿನಲ್ಲಿ ಅನೇಖ ಉದಯೋನ್ಮುಖ ಕಲಾವಿದರ ಒಡನಾಟವು ದೊರಕಿತ್ತು. ಇದು ನನ್ನ ಭಾಗ್ಯ ಎಂಬುದು ಪಡ್ರೆ  ಶ್ರೀ ಆನಂದರ ಪ್ರಾಮಾಣಿಕ ಅನಿಸಿಕೆ.

ಪ್ರಸ್ತುತ ಇವರು ಪತ್ನಿ ಮತ್ತು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಮದ್ದಳೆಗಾರ ಪಡ್ರೆ  ಶ್ರೀ ಆನಂದ ಅವರ ಪತ್ನಿ ಶ್ರೀಮತಿ ನಳಿನಿ ಗೃಹಣಿ. ಈ ದಂಪತಿಗಳಿಗೆ ಇಬ್ಬರು ಮಕ್ಕಳು. ಪುತ್ರ ಚಿ| ದೀಪಕ್ ಹತ್ತನೇ ತರಗತಿಯಲ್ಲಿ ಓದುತ್ತಿದ್ದಾರೆ. ಪುತ್ರಿ ಕು| ದೀಪ್ತಿ 5ನೇ ತರಗತಿಯ ವಿದ್ಯಾರ್ಥಿನಿ. ಮಕ್ಕಳಿಗೆ ಶ್ರೀ ದೇವರ ಅನುಗ್ರಹದಿಂದ ಉಜ್ವಲ ಭವಿಷ್ಯವು ದೊರೆಯಲಿ. ಪಡ್ರೆ ಆನಂದ ಅವರಿಂದ ಕಲಾಮಾತೆಯ ಸೇವೆಯು ನಿರಂತರವಾಗಿ ನಡೆಯಲಿ ಎಂಬ ಹಾರೈಕಗಳು. 

ವಿಳಾಸ: ಶ್ರೀ ಪಡ್ರೆ ಆನಂದ, ಯಕ್ಷಗಾನ ಕಲಾವಿದ, ಮೊಬೈಲ್: 9946620886, ಎಲಿಕ್ಕಳ ಮನೆ, ಆದೂರು ಅಂಚೆ, ಕಾಸರಗೋಡು ಜಿಲ್ಲೆ. 

ಲೇಖಕ: ಶ್ರೀ ರವಿಶಂಕರ್ ವಳಕ್ಕುಂಜ 

 

ಜಮ್ಮು ಕಾಶ್ಮೀರವನ್ನು “ಭಾರತ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ” ಎಂದು ಹೇಳಿದ ಕೇರಳ ಶಾಸಕ: ಮತ್ತೊಮ್ಮೆ ಎಲುಬಿಲ್ಲದ ನಾಲಿಗೆ ಹರಿಬಿಟ್ಟ ಮಾಜಿ ಮಂತ್ರಿ ಕೆ.ಟಿ. ಜಲೀಲ್, ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ ಬಿಜೆಪಿ 

ಕೇರಳದ ಕೆಲವು ಶಾಸಕರು ತಮ್ಮ ನಿಷ್ಠೆ ಯಾವ ದೇಶದ ಕಡೆಗೆ ಎಂದು ತಮ್ಮ ಹೇಳಿಕೆಗಳಿಂದ ಬಯಲು ಮಾಡುತ್ತಿದ್ದಾರೆ. ಕೇರಳದ ಶಾಸಕ ಜಲೀಲ್ ಜಂಕ್ ಮತ್ತು ಕಾಶ್ಮೀರವನ್ನು ‘ಭಾರತ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ’ ಎಂದು ಬಣ್ಣಿಸಿದ್ದಾರೆ.

ಕೇರಳದ ಮಾಜಿ ಸಚಿವ ಮತ್ತು ಆಡಳಿತಾರೂಢ ಎಲ್‌ಡಿಎಫ್ ಶಾಸಕ ಕೆ ಟಿ ಜಲೀಲ್ ಅವರು ಶುಕ್ರವಾರ ಜಮ್ಮು ಮತ್ತು ಕಾಶ್ಮೀರವನ್ನು “ಭಾರತದ ಅಧೀನ ಜಮ್ಮು ಮತ್ತು ಕಾಶ್ಮೀರ” (ಭಾರತ-ಆಕ್ರಮಿತ ಜಮ್ಮು ಮತ್ತು ಕಾಶ್ಮೀರ) ಮತ್ತು ಪಾಕ್ ಆಕ್ರಮಿತ ಕಾಶ್ಮೀರವನ್ನು “ಆಜಾದ್ ಕಾಶ್ಮೀರ” ಎಂದು ಬಣ್ಣಿಸುವ ಮೂಲಕ ಭಾರೀ ವಿವಾದವನ್ನು ಸೃಷ್ಟಿಸಿದ್ದಾರೆ.

ಜಲೀಲ್ ಅವರು ಕಾಶ್ಮೀರ ಭೇಟಿಗೆ ಸಂಬಂಧಿಸಿದಂತೆ ಫೇಸ್ ಬುಕ್ ಪೋಸ್ಟ್ ನಲ್ಲಿ ಟೀಕೆ ಮಾಡಿದ್ದಾರೆ. ಮಲಯಾಳಂನಲ್ಲಿ ಬರೆದಿರುವ ಪೋಸ್ಟ್‌ನಲ್ಲಿ, ಕೇರಳ ಶಾಸಕರು “ಪಾಕಿಸ್ತಾನಕ್ಕೆ ವಿಲೀನವಾದ ಕಾಶ್ಮೀರದ ಭಾಗವನ್ನು ‘ಆಜಾದ್ ಕಾಶ್ಮೀರ’ ಎಂದು ಕರೆಯಲಾಗುತ್ತಿತ್ತು ಮತ್ತು ಇದು ಪಾಕಿಸ್ತಾನ ಸರ್ಕಾರದ ನೇರ ನಿಯಂತ್ರಣವನ್ನು ಹೊಂದಿರದ ಪ್ರದೇಶವಾಗಿದೆ” ಎಂದು ಹೇಳಿದ್ದಾರೆ.

ಹಿಂದಿನ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಸರ್ಕಾರದಲ್ಲಿ ಸಚಿವರಾಗಿದ್ದ ಜಲೀಲ್, “ಭಾರತದ ಅಧೀನ ಜಮ್ಮು ಮತ್ತು ಕಾಶ್ಮೀರ” ಜಮ್ಮು, ಕಾಶ್ಮೀರ ಕಣಿವೆ ಮತ್ತು ಲಡಾಖ್‌ನ ಭಾಗಗಳನ್ನು ಒಳಗೊಂಡಿದೆ ಎಂದು ಜಲೀಲ್ ಹೇಳಿದ್ದಾರೆ, ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ವಿ ಮುರಳೀಧರನ್ ಅವರು ಜಲೀಲ್ ಅವರ ಹೇಳಿಕೆಗಳು “ದೇಶದ್ರೋಹ” ಮತ್ತು ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಇದು ದೇಶದ ಘೋಷಿತ ನೀತಿಯಾಗಿದೆ ಎಂದು ಅವರು ಹೇಳಿದರು. ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಎತ್ತಿದ ಘೋಷಣೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜಲೀಲ್ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿರುವ ಮುರಳೀಧರನ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ನಾಯಕ ಸಂದೀಪ್ ವಾರಿಯರ್ ಕೂಡ ಜಲೀಲ್ ಅವರ ಟೀಕೆಗಳನ್ನು ಟೀಕಿಸಿದರು, ಅವರು “ಗಂಭೀರವಾಗಿದೆ ಮತ್ತು ಅವರ ವಿಷಕಾರಿ ಚಿಂತನೆಯು ಸಾಲುಗಳ ಮೂಲಕ ಗೋಚರಿಸುತ್ತದೆ” ಎಂದು ಹೇಳಿದರು. ಫೇಸ್‌ಬುಕ್ ಪೋಸ್ಟ್ ಓದಿದ ನಂತರ ಪ್ರತಿಕ್ರಿಯಿಸುವುದಾಗಿ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಹೇಳಿದ್ದಾರೆ.

ಟೇಬಲ್ ಟೆನಿಸ್ ಆಟಗಾರ್ತಿ ನೈನಾ ಜೈಸ್ವಾಲ್ ಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ: ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ ನೈನಾ ಜೈಸ್ವಾಲ್ ಅವರ ತಂದೆ  

ಟೇಬಲ್ ಟೆನಿಸ್ ಆಟಗಾರ್ತಿ ನೈನಾ ಜೈಸ್ವಾಲ್ ಅವರ ತಂದೆ ಸಾಮಾಜಿಕ ಜಾಲತಾಣದಲ್ಲಿ ಮಗಳಿಗೆ ಕಿರುಕುಳ ನೀಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಟೇಬಲ್ ಟೆನಿಸ್ ಆಟಗಾರ್ತಿ ನೈನಾ ಜೈಸ್ವಾಲ್ ಗೆ ವ್ಯಕ್ತಿಯೊಬ್ಬ ಆನ್‌ಲೈನ್‌ನಲ್ಲಿ ಕಿರುಕುಳ ನೀಡಿದ್ದು, ಪ್ರಕರಣ ದಾಖಲಾಗಿದೆ. ಆನ್‌ಲೈನ್‌ನಲ್ಲಿ ಕ್ರೀಡಾಪಟುವಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಶುಕ್ರವಾರ ಅಪರಿಚಿತ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

ಟೇಬಲ್ ಟೆನಿಸ್ ಆಟಗಾರ್ತಿ ನೈನಾ ಜೈಸ್ವಾಲ್ ಅವರ ತಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಕಿರುಕುಳ ನೀಡುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಸಂಪರ್ಕಿಸಿದ್ದಾರೆ. ನಿನ್ನೆ ರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದು, ಶೀಘ್ರವೇ ಬಂಧಿಸುತ್ತೇವೆ ಎಂದು ಸೈಬರ್ ಕ್ರೈಂ ಸೆಕ್ಯುರಿಟಿ ಉಪ ಪೊಲೀಸ್ ಆಯುಕ್ತ ಗಜರಾವ್ ಭೂಪಾಲ್ ತಿಳಿಸಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ, ಆಕೆಯ ಫೇಸ್‌ಬುಕ್ ಖಾತೆಯನ್ನು ಸಹ ಹ್ಯಾಕ್ ಮಾಡಲಾಗಿದ್ದು, ಈ ಕಾರಣಕ್ಕಾಗಿ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.

ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ ಆರಂಭಿಕ ಪಂದ್ಯ ಸೆಪ್ಟೆಂಬರ್ 16ಕ್ಕೆ: ವಿಶ್ವ ಇಲೆವೆನ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ನಾಯಕ ಸೌರವ್ ಗಂಗೂಲಿ

ಸೆಪ್ಟೆಂಬರ್ 16 ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ ಆರಂಭಿಕ ಪಂದ್ಯದಲ್ಲಿ ವಿಶ್ವ ಇಲೆವೆನ್ ವಿರುದ್ಧ ಸೌರವ್ ಗಂಗೂಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತದ ಸ್ವಾತಂತ್ರ್ಯದ 75 ವರ್ಷಗಳನ್ನು ಆಚರಿಸುವ ವಿಶೇಷ ಚಾರಿಟಿ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೌರವ್ ಗಂಗೂಲಿ ಮತ್ತು ಇಯಾನ್ ಮಾರ್ಗನ್ ಅವರ ನಾಯಕತ್ವದ ಮುಖಾಮುಖಿಯಾಗಿದೆ.

ಲೆಜೆಂಡ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿಯು ಸೆಪ್ಟೆಂಬರ್ 16 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೌರವ್ ಗಂಗೂಲಿ ನೇತೃತ್ವದ ಇಂಡಿಯಾ ಮಹಾರಾಜಸ್ ಮತ್ತು ವಿಶ್ವ ದೈತ್ಯರ ನಡುವಿನ ವಿಶೇಷ ಚಾರಿಟಿ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ.

ಈ ಪಂದ್ಯಾವಳಿಯು ಭಾರತದ ಸ್ವಾತಂತ್ರ್ಯದ 75 ನೇ ವರ್ಷದ ಪ್ರಯುಕ್ತ ನಡೆಯುತ್ತದೆ. ಭಾರತ ತಂಡಕ್ಕೆ ”ಭಾರತದ ಮಹಾರಾಜರು” ಎಂದು ಹೆಸರಿಡಲಾಗಿದೆ. ವಿಶ್ವ ಇಲೆವೆನ್ ತಂಡಕ್ಕೆ ವಿಶ್ವ ದೈತ್ಯರು (World Giants) ಎಂದು ಹೆಸರಿಸಲಾಗಿದೆ. ಉಭಯ ತಂಡಗಳ ಆಟಗಾರರ ವಿವರ ಈ ರೀತಿ ಇದೆ.

(India Maharajas) ಭಾರತ ಮಹಾರಾಜರು: ಸೌರವ್ ಗಂಗೂಲಿ (c), ವೀರೇಂದ್ರ ಸೆಹ್ವಾಗ್, ಮೊಹಮ್ಮದ್ ಕೈಫ್, ಯೂಸುಫ್ ಪಠಾಣ್, ಸುಬ್ರಮಣ್ಯಂ ಬದರಿನಾಥ್, ಇರ್ಫಾನ್ ಪಠಾಣ್, ಪಾರ್ಥಿವ್ ಪಟೇಲ್ (WK), ಸ್ಟುವರ್ಟ್ ಬಿನ್ನಿ, ಎಸ್ ಶ್ರೀಶಾಂತ್, ಹರ್ಭಂಜನ್ ಸಿಂಗ್, ನಮನ್ ಓಜಾ (ವಿಕೆಟ್ ಕೀಪರ್), ಅಶೋಕ್ ದಿಂಡಾ, ಪ್ರಗ್ಯಾನ್ ಓಜಾ , ಅಜಯ್ ಜಡೇಜಾ, ಆರ್‌ಪಿ ಸಿಂಗ್, ಜೋಗಿಂದರ್ ಶರ್ಮಾ, ರೀತೀಂದರ್ ಸಿಂಗ್ ಸೋಧಿ.

(World Giants) ವಿಶ್ವ ದೈತ್ಯರು: ಇಯಾನ್ ಮಾರ್ಗನ್, ಲೆಂಡ್ಲ್ ಸಿಮನ್ಸ್, ಹರ್ಷಲ್ ಗಿಬ್ಸ್, ಜಾಕ್ವೆಸ್ ಕಾಲಿಸ್, ಸನತ್ ಜಯಸೂರ್ಯ, ಮ್ಯಾಟ್ ಪ್ರಿಯರ್ (ವಾಕ್), ನಾಥನ್ ಮೆಕಲಮ್, ಜಾಂಟಿ ರೋಡ್ಸ್, ಮುತ್ತಯ್ಯ ಮುರಳೀಧರನ್, ಡೇಲ್ ಸ್ಟೇಯ್ನ್, ಹ್ಯಾಮಿಲ್ಟನ್ ಮಸಕಡ್ಜಾ, ಮಶ್ರಫೆ ಜಾನ್ ಮೊರ್ಟಾಜಾ, ಮಶ್ರಫ್ ಜಾನ್ ಮೊರ್ಟಾಜಾ , ಕೆವಿನ್ ಒ’ಬ್ರೇನ್, ದಿನೇಶ್ ರಾಮ್ದಿನ್ (ವಿಕೆಟ್ ಕೀಪರ್).