Tuesday, September 1, 2026
Home Blog Page 231

ಶೂ ಕಾಲುಚೀಲದೊಳಗೆ ಚಿನ್ನ ಕಳ್ಳಸಾಗಾಣಿಕೆ – ವಾರಣಾಸಿ ವಿಮಾನನಿಲ್ದಾಣದಲ್ಲಿ 27 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ಕಸ್ಟಮ್ಸ್ ವಶಕ್ಕೆ – ವೀಡಿಯೊ 

ಶಾರ್ಜಾದಿಂದ ಆಗಮಿಸಿದ ಪ್ರಯಾಣಿಕರ ಕಾಲುಚೀಲದೊಳಗೆ ಅಕ್ರಮ ಚಿನ್ನ ಪತ್ತೆಯಾಗಿದೆ. 

ಜುಲೈ 27 ರಂದು ವಾರಣಾಸಿಯ ಕಸ್ಟಮ್ಸ್ ಎಲ್‌ಬಿಎಸ್‌ಐ ವಿಮಾನ ನಿಲ್ದಾಣವು ಶಾರ್ಜಾದಿಂದ ಬಂದ ಪ್ಯಾಕ್ಸ್‌ನಿಂದ 27,33,105 ರೂ ಮೌಲ್ಯದ 99.50% ಶುದ್ಧ ವಿದೇಶಿ ಮೂಲದ 530 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ.

ಶಾರ್ಜಾದಿಂದ ಬಂದಿದ್ದ ಪ್ರಯಾಣಿಕರಿಂದ 530 ಗ್ರಾಂ ವಿದೇಶಿ ಮೂಲದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದು ಪ್ರಯಾಣಿಕನ ಕಾಲುಚೀಲದೊಳಗೆ ಮರೆಮಾಡಲಾಗಿತ್ತು. (ವೀಡಿಯೊ ನೋಡಿ)

ಚಿನ್ನವನ್ನು ಕಂದು ಬಣ್ಣದ ಪೇಸ್ಟ್ ರೂಪದಲ್ಲಿ 2 ಕಪ್ಪು ಪ್ಲಾಸ್ಟಿಕ್ ಚೀಲಗಳಲ್ಲಿ ಇರಿಸಲಾಗಿತ್ತು ಮತ್ತು ಅವುಗಳನ್ನು ತನ್ನ ಪಾದಗಳ ಪ್ರತಿ ಅಡಿಭಾಗದಿಂದ ಅಂಟಿಸಿ ಮರೆಮಾಡಲಾಗಿದೆ.

ಉತ್ತರ ಪ್ರದೇಶದ ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ತಂಡವೊಂದು ಪ್ರಯಾಣಿಕರೊಬ್ಬರಿಂದ 530 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಪ್ರಯಾಣಿಕನು ಶಾರ್ಜಾದಿಂದ ಆಗಮಿಸಿದ್ದು, ಎರಡು ಕಪ್ಪು ಪ್ಲಾಸ್ಟಿಕ್ ಪೌಚ್‌ಗಳಲ್ಲಿ ಕಂದು ಬಣ್ಣದ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಇಟ್ಟುಕೊಂಡಿದ್ದ.

ತುಳುನಾಡ ಬೆಡಗಿ ಮಿಸ್ ಇಂಡಿಯಾ ಸಿನಿ ಶೆಟ್ಟಿ ಸೀರೆಯಲ್ಲಿ ಮಿರಿ ಮಿರಿ ಮಿಂಚು   

ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡ ತುಳುನಾಡ ಸುಂದರಿ ಸಿನಿ ಶೆಟ್ಟಿಯವರಿಗೆ ಸೀರೆಗಳು ಅಂದರೆ ಪಂಚಪ್ರಾಣವಂತೆ. 

ಮಿಸ್ ಇಂಡಿಯಾ ಸಿನಿ ಶೆಟ್ಟಿ ಸೀರೆಗಳ ಮೇಲಿನ ತನ್ನ ಆಸಕ್ತಿಯನ್ನು ಪುನರುಜ್ಜೀವನಗೊಳಿಸಿಕೊಂಡು ಬಂದಿದ್ದಾರೆ ಮತ್ತು ಸೀರೆಯನ್ನು ಮದುವೆಗೆ ಮಾತ್ರ ಮೀಸಲಿಡಬಾರದು ಎಂಬುದು ಅವರ ನಿಲುವಾಗಿದೆ.

“ನಿಮಗೆ ಬೇಕಾದ ಉಡುಗೆಯನ್ನು ಧರಿಸಿ ಆದರೆ ಸೀರೆ ಮಾತ್ರ ನಿಜವಾದ ಸೌಂದರ್ಯ ಮತ್ತು ಸೊಬಗನ್ನು ಹೊರತರುತ್ತದೆ’ ಎಂದು ಅವರು ಹೇಳುತ್ತಾರೆ.

ಬೆಲೆಬಾಳುವ ಕಾಂಜೀವರಂ ಸೀರೆಯಲ್ಲಿ ಬುಟ್ಟಿ ವರ್ಕ್ ಕೆಂಪು ಕುಪ್ಪಸದೊಂದಿಗೆ

ಬೆಲೆಬಾಳುವ ಕಾಂಜೀವರಂ ಸೀರೆಯಲ್ಲಿ ಬುಟ್ಟಿ ವರ್ಕ್ ಕೆಂಪು ಕುಪ್ಪಸದೊಂದಿಗೆ

ಮಧ್ಯಪ್ರದೇಶದ ಚಂದೇರಿ, ವ್ಯತಿರಿಕ್ತ ಹಳದಿ ತೋಳಿಲ್ಲದ ಕುಪ್ಪಸದೊಂದಿಗೆ.

ಮಧ್ಯಪ್ರದೇಶದ ಚಂದೇರಿ, ವ್ಯತಿರಿಕ್ತ ಹಳದಿ ತೋಳಿಲ್ಲದ ಕುಪ್ಪಸದೊಂದಿಗೆ.

ಭಾರವಾದ ಕಂಜೀವರಂ ರೇಷ್ಮೆ ಸೀರೆಯಲ್ಲಿ

ಭಾರವಾದ ಕಂಜೀವರಂ ರೇಷ್ಮೆ ಸೀರೆಯಲ್ಲಿ

ಚಿನ್ನದಿಂದ ಟ್ರಿಮ್ ಮಾಡಿದ ಅಲಂಕೃತವಾದ ರೇಷ್ಮೆ ಸೀರೆಯಲ್ಲಿ

ಚಿನ್ನದಿಂದ ಟ್ರಿಮ್ ಮಾಡಿದ ಅಲಂಕೃತವಾದ ರೇಷ್ಮೆ ಸೀರೆಯಲ್ಲಿ

‘ಮೋಹಿನಿ ಏಕಾದಶಿ’ – ಇಂದು ಉಜಿರೆಯ ಯಕ್ಷ ಸಪ್ತಾಹದಲ್ಲಿ ತಾಳಮದ್ದಳೆ

ಉಜಿರೆಯಲ್ಲಿ ನಡೆಯುತ್ತಿರುವ ಯಕ್ಷ ಸಪ್ತಾಹದ ಏಳು ದಿನಗಳಲ್ಲಿ ವಿವಿಧ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.

ಕೊನೆಯ ದಿನ ಯಕ್ಷನೃತ್ಯ ಕಾರ್ಯಕ್ರಮವೂ ನಡೆಯಲಿದೆ. ಈ ತಾಳಮದ್ದಳೆ ಜುಲೈ 22ರಿಂದ ಜುಲೈ 29ರ ತನಕ ಪ್ರತಿದಿನ ಸಂಜೆ ಘಂಟೆ 5.45ರಿಂದ ಆರಂಭವಾಗಲಿದೆ.

ಇಂದು ‘ಮೋಹಿನಿ ಏಕಾದಶಿ’ ಎಂಬ ಪ್ರಸಂಗದ ತಾಳಮದ್ದಳೆ  ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳ ಯೂಟ್ಯೂಬ್ ನೇರ ಪ್ರಸಾರ ಲಭ್ಯವಿದೆ. ಬೆಳ್ತಂಗಡಿಯ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದಲ್ಲಿ ಕಾರ್ಯಕ್ರಮ ನಡೆಯಲಿದೆ.

ಜುಲೈ 27 ರಂದು ಸಂಜೆ 5.45  ಗಂಟೆಗೆ, ಪ್ರಸಂಗ – ಮೋಹಿನಿ ಏಕಾದಶಿ

ಹಿಮ್ಮೇಳ:  ರಾಘವೇಂದ್ರ ಆಚಾರ್ ಜನ್ಸಾಲೆ, ಸುನಿಲ್ ಭಂಡಾರಿ ಕಡತೋಕ, ಸುಜನ್ ಕುಮಾರ್ ಹಾಲಾಡಿ

ಮುಮ್ಮೇಳ:  ಉಜಿರೆ ಅಶೋಕ ಭಟ್, ಶಶಿಕಾಂತ ಶೆಟ್ಟಿ ಕಾರ್ಕಳ, ವಿಷ್ಣುಶರ್ಮ ವಾಟೆಪಡ್ಪು, ಬಾಲಕೃಷ್ಣ ಭಟ್ ಪುತ್ತಿಗೆ

ನೇರಪ್ರಸಾರ ಯೂಪ್ಲಸ್ ಟಿವಿ, ಯೂಟ್ಯೂಬ್ ಹಾಗೂ ಫೇಸ್ಬುಕ್ ನಲ್ಲಿ ಲಭ್ಯವಿದೆ. 

ಪ್ರವೀಣ್ ನೆಟ್ಟಾರ್ ಅಂತಿಮಯಾತ್ರೆ – ಮೆರವಣಿಗೆಯಲ್ಲಿ ಭಾಗಿಯಾದ ಸಾವಿರಾರು ಜನರ ಕಂಬನಿದುಂಬಿದ ವಿದಾಯ – ಶಂಕಿತರು ಪೊಲೀಸರ ವಶದಲ್ಲಿ, ತೀವ್ರ ವಿಚಾರಣೆ 

ಪುತ್ತೂರು: ನಿನ್ನೆ ಬೆಳ್ಳಾರೆಯಲ್ಲಿ ಅಪರಿಚಿತರಿಂದ ಹತ್ಯೆಗೀಡಾದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು.

ಬಿಜೆಪಿ ಕಾರ್ಯಕರ್ತರು ಹಾಗೂ ವಿವಿಧ ಹಿಂದೂ ಸಂಘಟನೆಗಳ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

ಈಗಾಗಲೇ ಕೆಲವು ಶಂಕಿತರನ್ನು ವಶಕ್ಕೆ ಪಡೆಯಲಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅವರನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ.  

ಇತ್ತೀಚಿಗೆ ನಡೆದ ಬೆಳ್ಳಾರೆಯ ಮಸೂದ್ ಹತ್ಯೆಯ ನಂತರದ ಪ್ರತಿಭಟನೆಯ ಸಂದರ್ಭದಲ್ಲಿ ಕೆಲವು ಯುವಕರು ಪ್ರತೀಕಾರದ, ದ್ವೇಷದ ಮಾತುಗಳನ್ನು ಆಡಿದ್ದರು ಎಂಬುದು ಕೆಲವು ಮೂಲಗಳ ಅಂಬೋಣವಾಗಿತ್ತು.   

ಕೊಲೆಗಡುಕರು ಕೇರಳಕ್ಕೆ ಪರಾರಿ ಶಂಕೆ – ಪ್ರವೀಣ್ ನೆಟ್ಟಾರ್ ಹತ್ಯೆ ಕೇಸ್ 

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಕೊಲೆಗಡುಕರು ಕೇರಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಕುರಿತು ಶಂಕೆ ವ್ಯಕ್ತಪಡಿಸಿದ್ದಾರೆ. 

“ಈ ಘಟನೆ ಕೇರಳ ಗಡಿಯ ಸಮೀಪ ನಡೆದಿರುವುದರಿಂದ ನಮ್ಮ ಪೊಲೀಸರು ಕೇರಳ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ. ಕರ್ನಾಟಕ ಡಿಜಿಪಿ ಅವರು ಕೇರಳ ಸಹೋದ್ಯೋಗಿಯೊಂದಿಗೆ ಮಾತನಾಡಲಿದ್ದು, ಮಂಗಳೂರು ಎಸ್ಪಿ ಕಾಸರಗೋಡು ಎಸ್ಪಿ ಅವರೊಂದಿಗೆ ಮಾತನಾಡಿದ್ದಾರೆ. ಇದು ಪೂರ್ವ ಯೋಜಿತ ಘಟನೆಯಂತೆ ಕಾಣುತ್ತಿದ್ದು ಇತರ ಪ್ರಕರಣಗಳಿಗೆ ಹೋಲಿಕೆಯಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

 “ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಕೇರಳಕ್ಕೆ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಅಲ್ಲಿನ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ. ಹತ್ಯೆ ರಾಜಕೀಯ ಪ್ರೇರಿತವೇ ಅಥವಾ ಬೇರೆ ಕಾರಣವೇ ಎಂಬುದನ್ನು ತನಿಖೆಯಿಂದ ಬಹಿರಂಗಪಡಿಸಬೇಕು” ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಇಂದು ಎಡನೀರು ಮಠದಲ್ಲಿ ‘ನಾಗೋದ್ಧರಣ’ ಯಕ್ಷಗಾನ ಪ್ರದರ್ಶನ –  ಲೈವ್

ಇಂದು ಎಡನೀರು ಮಠದಲ್ಲಿ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಈ ಯಕ್ಷಗಾನ ಪ್ರದರ್ಶನ ಜರಗಲಿದೆ.

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಇವರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ನಡೆಯಲಿದೆ. 

ಇಂದು ದಿನಾಂಕ 27.07.2022ರ ಬುಧವಾರ ಘಂಟೆ 6ಕ್ಕೆ ಸರಿಯಾಗಿ ಪ್ರದರ್ಶನ ಆರಂಭವಾಗಲಿದೆ. ವಿವರಗಳಿಗೆ ಕರಪತ್ರ ನೋಡಿ. 

ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ – ಹಿಂದೂ ನಾಯಕರ ಅಭಿಮತ – ವೀಡಿಯೊ 

ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರ್  ಹತ್ಯೆಯ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ ಎಂದು ಹಿಂದೂ ಸಂಘಟನೆಯ ನಾಯಕರು  ಆರೋಪಿಸಿದ್ದಾರೆ. 

ನಿನ್ನೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆಗೆ ಹಿಂದೂ ಕಾರ್ಯಕರ್ತರು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ರಾತ್ರಿ ಪುತ್ತೂರಿನ ಪ್ರಗತಿ ಆಸ್ಪತ್ರೆಯ ಮುಂದೆ ಸಾಕಷ್ಟು ಜನರು ಸೇರಿ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತ್ತು.

ಇಂದು ಪ್ರವೀಣ್ ನೆಟ್ಟಾರ್ ಅವರ ಮೃತದೇಹವನ್ನು ಇರಿಸಿರುವ ಪುತ್ತೂರು ಸರಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಮತ್ತು ಜನಪ್ರಿಯ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ  ಮತ್ತು ಭಜರಂಗದಳದ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರು ಪ್ರವೀಣ್ ನೆಟ್ಟಾರ್  ಹತ್ಯೆಯ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ ಎಂದು ಹೇಳಿದರು.

ಇತ್ತೀಚಿಗೆ ನಡೆದ ಬೆಳ್ಳಾರೆಯ ಮಸೂದ್ ಹತ್ಯೆಯ ನಂತರದ ಪ್ರತಿಭಟನೆಯ ಸಂದರ್ಭದಲ್ಲಿ ಕೆಲವು ಯುವಕರು ಪ್ರತೀಕಾರದ, ದ್ವೇಷದ ಮಾತುಗಳನ್ನು ಆಡಿದ್ದರು ಎಂಬುದು ಕೆಲವು ಮೂಲಗಳ ಅಂಬೋಣವಾಗಿತ್ತು. 

ಪ್ರವೀಣ್ ನೆಟ್ಟಾರು ಭೀಕರ ಹತ್ಯೆ – ಇಂದು ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಬಂದ್ 

ನಿನ್ನೆ ರಾತ್ರಿ ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲ್ಲಲ್ಪಟ್ಟ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಇಡೀ ಕರ್ನಾಟಕವೇ ಬೆಚ್ಚಿ ಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಹಲವಾರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ, ಪುತ್ತೂರು, ಕಡಬ, ಸುಳ್ಯ ತಾಲೂಕುಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. 

ಪ್ರವೀಣ್‌ ನೆಟ್ಟಾರು (32 ) ಹತ್ಯೆಯ ಬಳಿಕ ಕರಾವಳಿಯ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಡಿಜಿ ಐಜಿಪಿ ಪ್ರವೀಣ್‌ ಸೂದ್‌ ಅವರು ದಕ್ಷಿಣ ಕನ್ನಡ ಜಿಲಾ ಎಸ್‌ಪಿ ಸೂಚನೆ ನೀಡಿ ಪುತ್ತೂರಿನಾದ್ಯಂತ ಸೆಕ್ಷನ್‌ 144 ಜಾರಿಗೊಳಿಸಲು ಸೂಚನೆ ನೀಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ.

ಘಟನೆ ನೆಡೆದ ಕೂಡಾಲೇ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ” ಎಂದು ಟ್ವೀಟ್‌ ಮಾಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆಗೆ ಹಿಂದೂ ಕಾರ್ಯಕರ್ತರು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ರಾತ್ರಿ ಪುತ್ತೂರಿನ ಪ್ರಗತಿ ಆಸ್ಪತ್ರೆಯ ಮುಂದೆ ಸಾಕಷ್ಟು ಜನರು ಸೇರಿ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತ್ತು.  

ಜಿಲ್ಲಾಧಿಕಾರಿಗಳು ಬರುವವರೆಗೆ ಮೃತದೇಹ ಕೊಂಡೊಯ್ಯಲು ಬಿಡುವುದಿಲ್ಲವೆಂದು ಬಿಜೆಪಿ ಪಕ್ಷದ ಕಾರ್ಯಕರ್ತರು, ಹಿಂದೂಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. “ಕೇಂದ್ರ ಸರಕಾರವು ನಮ್ಮದೇ, ರಾಜ್ಯ ಸರಕಾರವು ನಮ್ಮದೇ, ಕೊನೆಗೆ ಸಾವು ನಮ್ಮದೇʼʼ ಎಂಬ ಪೋಸ್ಟರ್‌ಗಳೂ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. 

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್‌ ಹತ್ಯೆ ಖಂಡಿಸಿ ಇಂದು (27.07.2022) ಪುತ್ತೂರು, ಕಡಬ, ಸುಳ್ಯ ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ನಾಯಕರು ಕರೆ ನೀಡಿದ್ದಾರೆ. 

ಮಂಗಳೂರು ಪಬ್ ನಲ್ಲಿ ಹುಡುಗ ಹುಡುಗಿಯರ ಬಿಂದಾಸ್ ಮಸ್ತಿ ಪ್ರಕರಣ – ಅಪ್ರಾಪ್ತರಿಗೂ ಮುಕ್ತ ಪ್ರವೇಶ ನೀಡುತ್ತಿರುವ ಪಬ್ ಗಳು 

ಮಂಗಳೂರು ಪಬ್ ನಲ್ಲಿ ಹುಡುಗ ಹುಡುಗಿಯರ ಮೋಜು ಮಸ್ತಿ ನಡೆದ ಪ್ರಕರಣದಲ್ಲಿ ಇನ್ನೂ ಕೆಲವು  ಬರುತ್ತಿವೆ. ಆ ಪಬ್ ನಲ್ಲಿ ಅಪ್ರಾಪ್ತರಿಗೂ ಮುಕ್ತ ಪ್ರವೇಶ ನೀಡಲಾಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ತನಿಖೆಯೂ ಚುರುಕುಗೊಂಡಿದೆ.

ನಿನ್ನೆ ನಡೆದ ಪ್ರಕರಣದಲ್ಲಿ 21 ವಯಸ್ಸಿನ ಒಳಗಿನ ಹುಡುಗ ಹುಡುಗಿಯರೂ ಇದ್ದರು ಎಂಬ ಮಾಹಿತಿ ಹರಿದಾಡುತ್ತಾ ಇದೆ. ನಗರದಲ್ಲಿ ಜುಲೈ 25ರ ಸೋಮವಾರ ರಾತ್ರಿ ನಡೆದ ಪಬ್ ದಾಳಿಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇನ್ನು ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ಭರವಸೆ ನೀಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಆಯುಕ್ತರು, ಬಲ್ಮಟ್ಟದಲ್ಲಿ ರೀಸೈಕಲ್ ರೆಸ್ಟೋರೆಂಟ್ ಕಮ್ ಪಬ್ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಸೋಮವಾರ ರಾತ್ರಿ 9 ಗಂಟೆಗೆ ಹಿಂದೂ ಸಂಘಟನೆಯ ಐದರಿಂದ ಆರು ಯುವಕರು ಪಬ್‌ಗೆ ಭೇಟಿ ನೀಡಿದ್ದರು. ಅವರು ಪಬ್‌ನಲ್ಲಿ ಬೌನ್ಸರ್ ದಿನೇಶ್‌ಗೆ ಪಬ್‌ನಲ್ಲಿ ಅಪ್ರಾಪ್ತ ಹುಡುಗರು ಮತ್ತು ಹುಡುಗಿಯರಿದ್ದಾರೆ ಎಂದು ಹೇಳಿದರು.

ದಿನೇಶ್ ಮ್ಯಾನೇಜರ್ ಗೆ ವಿಷಯ ತಿಳಿಸಿದ್ದು, ಮ್ಯಾನೇಜರ್ ಒಳಗೆ ಹೋಗಿ ಪರಿಶೀಲಿಸಿದ್ದಾರೆ. “ಸ್ಥಳೀಯ ಕಾಲೇಜಿನ ಕೆಲವು ವಿದ್ಯಾರ್ಥಿಗಳಿದ್ದರು. ವಿದ್ಯಾರ್ಥಿಗಳನ್ನು ಹೊರಗೆ ಹೋಗುವಂತೆ ಮ್ಯಾನೇಜರ್ ಕೇಳಿದಾಗ, ಅವರು ಪಬ್ ತೊರೆದರು. ಬೌನ್ಸರ್ ಹೇಳಿಕೆ ಪ್ರಕಾರ ಹಿಂದೂ ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ. ಅವರು ಪಬ್‌ನ ಹೊರಗಿನ ಬೌನ್ಸರ್‌ನೊಂದಿಗೆ ಮಾತ್ರ ಮಾತನಾಡಿ ಹೊರಟುಹೋದರು.

“ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತೇವೆ ಮತ್ತು ಅದರ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ. ನಾವು ಪಬ್‌ನ ಮ್ಯಾನೇಜರ್ ಮತ್ತು ಬೌನ್ಸರ್ ಹೇಳಿಕೆಗಳನ್ನು ತೆಗೆದುಕೊಂಡಿದ್ದೇವೆ. ಹೊರಗಿನವರು ಪಬ್ ಆವರಣಕ್ಕೆ ಪ್ರವೇಶಿಸಿ ವಿಷಯಗಳನ್ನು ಪ್ರಶ್ನಿಸಲು ಅವಕಾಶವಿಲ್ಲ. ಸಂಬಂಧಪಟ್ಟ ಅಧಿಕಾರಿಯನ್ನು ಹೊರತುಪಡಿಸಿ ಯಾರಿಗೂ ಗುರುತಿನ ಚೀಟಿ ಮತ್ತು ಪರವಾನಗಿ ಕೇಳುವ ಹಕ್ಕು ಇಲ್ಲ. ಎಲ್ಲಾ ಅಂಶಗಳನ್ನು ಪರಿಗಣಿಸಿ ಕ್ರಮ ಕೈಗೊಳ್ಳುತ್ತೇವೆ.

“ಇತ್ತೀಚೆಗೆ ಕಾಲೇಜು ವಿದ್ಯಾರ್ಥಿಗಳ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರ ಈ ಕೃತ್ಯ ನಡೆದಿದೆ. ಆದರೆ ಆ ವಿಡಿಯೋದಲ್ಲಿರುವ ವಿದ್ಯಾರ್ಥಿಗಳಿಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ.

“ಪಬ್‌ನಲ್ಲಿದ್ದ ವಿದ್ಯಾರ್ಥಿಗಳು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು. ಪಬ್‌ನ ನಿಯಮಗಳ ಪ್ರಕಾರ, 21 ವರ್ಷಕ್ಕಿಂತ ಮೇಲ್ಪಟ್ಟ ಯಾರಾದರೂ ಪ್ರವೇಶಿಸಬಹುದು. ಆದರೆ 21 ವರ್ಷಕ್ಕಿಂತ ಕೆಳಗಿನವರು ಪಬ್ ನಲ್ಲಿ ಇದ್ದ ಮಾಹಿತಿ ಇದೆ ಎಂದು ಅವರು ಹೇಳಿದರು. ಹೀಗಾಗಿ ಮಾಹಿತಿ ಸಂಗ್ರಹಿಸಿ ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು ಆಯುಕ್ತರು ತಿಳಿಸಿದರು.

ನಿಟ್ಟೂರು ಪ್ರೌಢಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

ಉಡುಪಿ:- ನಿಟ್ಟೂರು ಪ್ರೌಢ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ ದಿನಾಂಕ 22-07-22 ಶಾಲೆಯ ಸಭಾಂಗಣದಲ್ಲಿ ಜರಗಿತು.

ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮುರಲಿ ಕಡೆಕಾರ್ ಪೋಷಕರನ್ನು ಕುರಿತು ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಶಿಕ್ಷಕರಷ್ಟೇ ಪೋಷಕರ ಪಾತ್ರ ಮಹತ್ತರವಾದದ್ದು, ಪ್ರತಿ ದಿನವೂ ಹೆತ್ತವರು ತಮ್ಮ ಮಕ್ಕಳ ಜೊತೆಯಲ್ಲಿ ಒಂದಿಷ್ಟು ಹೊತ್ತು ಸಮಯ ಮೀಸಲಿಡಬೇಕು. ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕು. ಆಗ ಮಾತ್ರ ವಿದ್ಯಾರ್ಥಿಗಳ ಕಲಿಕಾ ಸಾಧನೆ ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಶಾಲೆ ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡಿದೆ ಎಂದರು.

ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗಿಶ್ಚಂದ್ರಾಧರ್, ಹಳೆವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ದಿನೇಶ್ ಪಿ. ಪೂಜಾರಿ ಶಾಲೆ ವಿದ್ಯಾರ್ಥಿಗಳ ಸರ್ವೊತೋಮುಖ ಏಳಿಗೆಗಾಗಿ ಹಮ್ಮಿಕೊಳ್ಳುತ್ತಿರುವ ಚಟುವಟಿಕೆಗಳ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಜೊತೆ ಕಾರ್ಯದರ್ಶಿ ದಿನೇಶ್ ಪಿ. ಪೂಜಾರಿ 8ನೇ ತರಗತಿಯ 77 ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ ಬಟ್ಟಲುಗಳನ್ನು ವಿತರಿಸಲಾಯಿತು. ಶಾಲೆಯ ಹಳೆವಿದ್ಯಾರ್ಥಿಗಳಾದ ಶಶಿಧರ ಮೆಲಂಟಾ ಸಹೋದರರ ಧನ ಸಹಾಯದಿಂದ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ಉಚಿತ ಸಮವಸ್ತç ನೀಡಲಾಯಿತು.

ಶಾಲಾ ಹಳೆವಿದ್ಯಾರ್ಥಿ ಪರಶುರಾಮ ಶೆಟ್ಟಿ ಹಾಗೂ ನಿವೃತ ಶಿಕ್ಷಕ ಎಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಅನಸೂಯ ಸ್ವಾಗತಿಸಿದರು. ಶಿಕ್ಷಕ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ-ರಕ್ಷಕ ಸಂಘದ ಸಂಯೋಜಕರಾದ ರಾಮದಾಸ್ ನಾಯ್ಕ್ ವಂದಿಸಿದರು.