Tuesday, September 1, 2026
Home Blog Page 257

ಮಂಗಳೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ – ವೀಡಿಯೊ

ಇಂದು ಮುಂಜಾನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸುತ್ತಿದೆ. ಮಂಗಳೂರು ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ತಾಲೂಕುಗಳ ಹಲವು ಪ್ರದೇಶಗಳ  ನೀರು ನುಗ್ಗಿ ಅಪಾರ  ನಾಶ ನಷ್ಟ ಸಂಭವಿಸಿದೆ.

ರಸ್ತೆ ಸಂಚಾರ ಮೊಟಕುಗೊಂಡಿದೆ. ಆಯ್ದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಸ್ತುತ ಮಂಗಳೂರಿನ ಪರಿಸ್ಥಿತಿಯ ಚಿತ್ರಣಕ್ಕಾಗಿ ಕೆಳಗಿನ ವೀಡಿಯೊ ನೋಡಿ. ವೀಡಿಯೊ ಕೃಪೆ: ವಾಟ್ಸಾಪ್ 

ಸುಳ್ಳು ಹೇಳುತ್ತಿರುವ ಪಿಣರಾಯಿ ವಿಜಯನ್ – ಅವರ ಮನೆಯ ಸಿಸಿಟಿವಿ ಸ್ಕ್ಯಾನ್ ಮಾಡಿ ಎಂದ ಸ್ವಪ್ನಾ ಸುರೇಶ್ ಆರೋಪ

ಕೇರಳ ಚಿನ್ನಾಭರಣ ಹಗರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್, ರಾಜ್ಯ ವಿಧಾನಸಭೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ಹೇಳಿಕೆಗೆ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದು, ಸಿಎಂ ಸುಳ್ಳು ಹೇಳಿದ್ದಾರೆ ಎಂದು ಹೇಳಿದ್ದಾರೆ.

ಗಮನಾರ್ಹವೆಂದರೆ, ಮಂಗಳವಾರ, ಕೇರಳ ಸಿಎಂ ಸ್ವಪ್ನಾ ಸುರೇಶ್ ಅವರ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಸೂಚಿಸುವ ಆರೋಪಗಳನ್ನು ನಿರಾಕರಿಸಿದರು ಮತ್ತು ಸುರೇಶ್ ಈಗ ಸಂಘ ಪರಿವಾರದ ಶಕ್ತಿಗಳಿಂದ ಮಾರ್ಗದರ್ಶನ ಪಡೆದಿದ್ದಾರೆ ಎಂದು ಹೇಳಿದರು.

ಕೇರಳ ವಿಧಾನಸಭೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಸ್ವಪ್ನಾ ಸುರೇಶ್, ನಿನ್ನೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿಧಾನಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದು, ಅವರು ಸಾಕಷ್ಟು ಸುಳ್ಳುಗಳನ್ನು ಹೇಳಿರುವುದು ನನ್ನ ಗಮನಕ್ಕೆ ಬಂದಿದೆ.

ಅತ್ಯಂತ ಪವಿತ್ರ ಸ್ಥಳದಲ್ಲಿ ನಿಂತು ಸಾರ್ವಜನಿಕರನ್ನು ದಾರಿತಪ್ಪಿಸಲು ನನ್ನನ್ನು ಆಗಾಗ ಕಾನ್ಸುಲ್ ಜನರಲ್ ಜೊತೆ ನೋಡಿದ್ದೇನೆ ಎಂದ ಮುಖ್ಯಮಂತ್ರಿಗಳು, ಇಂತಹ ಸಭೆಗಳಿಗೆ ಎಂಇಎ ಅನುಮೋದನೆ ಇಲ್ಲ.ಅವರ ಸಂಪರ್ಕದಿಂದ ನನ್ನ ಮೂಲಕವೇ ಈ ಎಲ್ಲಾ ಸಭೆಗಳನ್ನು ಸುಗಮಗೊಳಿಸಲಾಗಿದೆ. , ಅದು ಶಿವಶಂಕರ್. ಈ ಎಲ್ಲಾ ಸಭೆಗಳು ಪ್ರೋಟೋಕಾಲ್‌ಗೆ ವಿರುದ್ಧವಾಗಿವೆ.”

2016 ರಿಂದ 2020 ರವರೆಗಿನ ಕ್ಲಿಫ್ ಹೌಸ್ (ಸಿಎಂ ಅಧಿಕೃತ ನಿವಾಸ) ಮತ್ತು ಸೆಕ್ರೆಟರಿಯೇಟ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಸಿಎಂ ವಿಜಯನ್ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ ಸುರೇಶ್, ”ರಾತ್ರಿ 7 ಗಂಟೆಯ ನಂತರ ಕಾನ್ಸುಲ್ ಜನರಲ್ ಅವರೊಂದಿಗೆ ನಾನು ಕ್ಲಿಫ್ ಹೌಸ್‌ಗೆ ಹೋಗಿದ್ದೆ. ಅವರ ಅಗತ್ಯಗಳಿಗಾಗಿ ರಹಸ್ಯ ಸಭೆಗಳಿಗಾಗಿ. ಅಲ್ಲದೆ, ನಾನು ಮೊದಲು ಅಲ್ಲಿಗೆ ಒಬ್ಬಂಟಿಯಾಗಿ ಹೋಗಿದ್ದೆ. ನಾನು ಅಲ್ಲಿಗೆ ಹೋಗಲು ಯಾವುದೇ ಭದ್ರತಾ ತಪಾಸಣೆ ಇರಲಿಲ್ಲ ಎಂಬುದನ್ನು ನೀವು ಆ ದೃಶ್ಯಗಳಲ್ಲಿ ನೋಡಬಹುದು.”

ಸ್ವಪ್ನಾ ಸುರೇಶ್ ಗೊತ್ತಿಲ್ಲ ಎಂದು ವಿಧಾನಸಭೆಯಲ್ಲಿ ಸುಳ್ಳು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುವುದು ನೈತಿಕವಲ್ಲ ಎಂದು ಚಿನ್ನಾಭರಣ ಹಗರಣದ ಪ್ರಮುಖ ಆರೋಪಿಯಾಗಿರುವ ಕೇರಳ ಸಿಎಂ ಸುರೇಶ್ ಹೇಳಿದ್ದಾರೆ. ಬೋಫೋರ್ಸ್ ಮತ್ತು 2ಜಿ ಗಿಂತ ಹಗರಣ ದೊಡ್ಡದಾಗಿದೆ ಎಂದು ಆರೋಪಿಸಿರುವ ಸುರೇಶ್, ಪ್ರಕರಣದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದಿರುವುದು ಉಲ್ಲೇಖಾರ್ಹ.

ಜೂನ್ 8 ರಂದು, ಸ್ವಪ್ನಾ ಸುರೇಶ್ ಅವರು 2016 ರಲ್ಲಿ ದುಬೈನಲ್ಲಿ ಸಿಎಂ ವಿಜಯನ್ ಅವರಿಗೆ ಕರೆನ್ಸಿಯ ಬ್ಯಾಗ್ ಕಳುಹಿಸಲಾಗಿದೆ ಎಂದು ಹೇಳಿದ್ದರು. ಯುಎಇಯಿಂದ ನಾಪತ್ತೆಯಾಗಿರುವ 17 ಟನ್ ಖರ್ಜೂರಗಳು ಪ್ರಸ್ತುತ ಕೇರಳ ಮುಖ್ಯಮಂತ್ರಿಗೆ ತಿಳಿದಿವೆ ಎಂದು ಆರೋಪಿಸಿದರು.

‘ಸ್ವಾಮಿ ಕೊರಗಜ್ಜ’ ಯಕ್ಷಗಾನ ಪ್ರದರ್ಶನ

ಬೆಂಗಳೂರಿನಲ್ಲಿ ದಿನಾಂಕ 23.07.2022ನೇ ಶನಿವಾರ  ‘ಸ್ವಾಮಿ ಕೊರಗಜ್ಜ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಬೆಂಗಳೂರಿನ ವಿಜಯನಗರ ಅತ್ತಿಗುಪ್ಪೆಯ  ಬಂಟರ ಸಂಘದಲ್ಲಿ ಈ  ‘ಸ್ವಾಮಿ ಕೊರಗಜ್ಜ’ ಎಂಬ  ತುಳು ಯಕ್ಷಗಾನ ಪ್ರದರ್ಶಿಸಲಾಗುವುದು.

ಕಾರ್ಯಕ್ರಮವು ಪ್ರತಿದಿನ ಮಧ್ಯಾಹ್ನ 2.00 ಘಂಟೆಗೆ ಆರಂಭವಾಗಲಿದೆ.

ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ. 

ಮಂಗಳೂರಿನಲ್ಲಿ 12 ದಿನಗಳ ತುಳು ಯಕ್ಷಗಾನ ಜಾತ್ರೆ

ಮಂಗಳೂರಿನಲ್ಲಿ ದಿನಾಂಕ 30.07.2022ರಿಂದ 10.08.2022 ವರೆಗೆ ತುಳು ಯಕ್ಷ ಜಾತ್ರೆ ನಡೆಯಲಿದೆ.

ಮಂಗಳೂರಿನ ಅಶೋಕನಗರದ ತುಳು ಭವನದಲ್ಲಿ ನಡೆಯುವ 12 ದಿನಗಳ  ತುಳು ಯಕ್ಷಗಾನ ಜಾತ್ರೆಯಲ್ಲಿ ಪ್ರತಿದಿನವೂ ಒಂದೊಂದು ತುಳು ಯಕ್ಷಗಾನ ಪ್ರದರ್ಶನಗಳನ್ನು ಪ್ರದರ್ಶಿಸಲಾಗುವುದು.

ಕಾರ್ಯಕ್ರಮವು ಪ್ರತಿದಿನ ಮಧ್ಯಾಹ್ನ 2.30 ಘಂಟೆಗೆ ಆರಂಭವಾಗಲಿದೆ.

ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ. 

ಸಿರಿಬಾಗಿಲು ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಕಲಾ- ಸಾಂಸ್ಕೃತಿಕ- ಸಾಹಿತ್ಯ ವೈಭವಕ್ಕೆ ಪುನರೂರು ಅವರಿಂದ ಚಾಲನೆ

ಸಿರಿಬಾಗಿಲು- ಗಡಿನಾಡು ಕಾಸರಗೋಡಿನ ಪ್ರಸಿದ್ಧ ಸಂಸ್ಥೆಯಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಮುಂದಿನ ಸಾರ್ವಜನಿಕ ಲೋಕಾರ್ಪಣೆಯ ವರೇಗೆ ತಿಂಗಳ ಎರಡನೇ ಶನಿವಾರ ಮತ್ತು ಭಾನುವಾರ ಕಲಾ- ಸಾಂಸ್ಕೃತಿಕ- ಸಾಹಿತ್ಯ ವೈಭವ ಕಾರ್ಯಕ್ರಮಗಳನ್ನು ಧರ್ಮದರ್ಶಿಗಳಾದ ಶ್ರೀ ಹರಿಕೃಷ್ಣ ಪುನರೂರು ಅವರು ತಾರೀಖು 26 ಭಾನುವಾರ (26.06.2022) ಉದ್ಘಾಟಿಸಿದರು.

ಕರಾವಳಿಯ ಗಂಡು ಕಲೆ ಯಕ್ಷಗಾನವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ, ಆ ನಿಟ್ಟಿನಲ್ಲಿ ಧರ್ಮಸ್ಥಳ ಮೇಳದ ಪ್ರಧಾನ ಭಾಗವತರಾದ ರಾಮಕೃಷ್ಣ ಮಯ್ಯ ಸಿರಿಬಾಗಿಲು ಪ್ರಯತ್ನಿಸುತ್ತಿರುವು ಶ್ಲಾಘನೀಯ ವಿಷಯ ಅಂದರು. ಪ್ರತಿಯೊಬ್ಬರೂ ಈ ಮಹತ್ಕಾರ್ಯಕ್ಕೆ ಸಹಕರಿಸಬೇಕೆಂದರು. 

ಅಧ್ಯಕ್ಷತೆ ವಹಿಸಿದ ಡಾ. ತಲ್ಲೂರು ಶಿವರಾಮ ಶೆಟ್ಟಿ ಯವರು ಮಾತನಾಡಿ ಯಕ್ಷಗಾನ ಕಲೆಯ ಸಂರಕ್ಷಣೆ ಚಿಂತನೆ ಪ್ರತಿಷ್ಠಾನ ನಡೆಸುತ್ತಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದರು. ನಮ್ಮಲ್ಲಿ ಸಾಧಕರಿಗೆ ಬರವಿಲ್ಲ ,ಆದರೆ ಹೆಚ್ಚಿನ ಕಲಾವಿದರ ಬಗ್ಗೆ ಅವರ ಸಾಧನೆಯ ಬಗ್ಗೆ ಮಾಹಿತಿ ಲಭ್ಯವಿಲ್ಲ. ಹೀಗಾಗಿ ಕಲಾವಿದರ ಜೀವನ ಸಾಧನೆ ಬಗ್ಗೆ ದಾಖಲಾತಿ ಅತಿ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಗಡಿನಾಡು ಕಾಸರಗೋಡಿನಲ್ಲಿ ಕನ್ನಡಪರ ಸಾಂಸ್ಕೃತಿಕ ಚಟುವಟಿಕೆ ನಡೆಸುವರೆ ಸಿರಿಬಾಗಿಲು ಪ್ರತಿಷ್ಠಾನವು ಕೈಗೊಂಡ ಕಾರ್ಯ ಮೆಚ್ಚುವಂತದ್ದು.


ಪ್ರಸಂಗಕರ್ತರಾ ಶ್ರೀಧರ ಡಿ. ಎಸ್. ಮಾತನಾಡಿ, ಕಲಾವಿದ ಸಮಾಜದಿಂದ ಪಡೆದುದನ್ನು ಸಮಾಜಕ್ಕೆ ನೀಡುತ್ತಿರುವುದು ಅವರ ಆತ್ಮ ಸಂತೋಷ ಹೆಚ್ಚಿಸುತ್ತದೆ ಎಂದರು. ಸಿರಿಬಾಗಿಲು ಪ್ರತಿಷ್ಠಾನದ ಯಕ್ಷಾನುಗ್ರಹ ವಾಟ್ಸಾಪ್ ಬಳಗವು ಕಳೆದ ಲಾಕ್ಡೌನ್ ಸಮಯದಲ್ಲಿ ಆರಂಭಿಸಿದ ಕೀರ್ತಿಶೇಷ ಕಲಾವಿದರ ಸಂಸ್ಮರಣೆ ಮರೆಯಲಾಗದ ಮಹಾನುಭಾವರು ಅಂಕಣ 200 ವರೆಗೇ ತಲುಪಿರುವುದು ಬಳಗದ ,ಪ್ರತಿಷ್ಠಾನದ ಮಹಾನ್ ಸಾಧನೆ. ಯಾವ ವಿಶ್ವವಿದ್ಯಾಲಯಕ್ಕೂ ಅಸಾಧ್ಯವಾದ , ಮಾಡದಿರುವ ಮಹತ್ಕಾರ್ಯವನ್ನು ಪ್ರತಿಷ್ಠಾನ ನಡೆಸುತ್ತಿದೆ ಎಂದರು. 


ರಂಗಸ್ಥಳ ಫೌಂಡೇಶನ್ ಪ್ರಸ್ತುತ ಅಧ್ಯಕ್ಷರಾದ ವಿ. ರಾಘವೇಂದ್ರ ಉಡುಪ, ನೇರಳಕಟ್ಟೆ ,ಕುಂದಾಪುರ ಅವರು ಮಾತನಾಡಿ ಪ್ರತಿಷ್ಠಾನವು ಯಕ್ಷಗಾನ ಕಲಾಸಕ್ತರ ವಾಟ್ಸಪ್ ಗ್ರೂಪ್ ರಚಿಸಿ ಇನ್ನೂರಕ್ಕೂ ಅಧಿಕ ಕಲಾವಿದರ ಸಂಪೂರ್ಣ ಮಾಹಿತಿ ಹಾಕಿದ್ದು, ಅದನ್ನು ಪುಸ್ತಕ ರೂಪದಲ್ಲಿ ಸಿರಿಬಾಗಿಲು ಸಾಂಸ್ಕೃತಿಕ ಭವನದ ಲೋಕಾರ್ಪಣೆಗಯ ಸಂದರ್ಭದಲ್ಲಿ ಬಿಡುಗಡೆಗೊಳಿಸಲು ಇದ್ದೇವೆ ಎಂದರು.

ಪ್ರತಿಷ್ಠಾನದ ಅಧ್ಯಕ್ಷರಾದ ರಾಮಕೃಷ್ಣ ಮಯ್ಯ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಮುಂದಿನ ದಿನಗಳಲ್ಲಿ ಯಕ್ಷಗಾನ ಕಲೆಯ ಪ್ರದರ್ಶನ ಜೊತೆಗೆ ಯಕ್ಷಗಾನದ ಗ್ರಂಥಾಲಯ ಹಾಗೂ ಮ್ಯೂಸಿಯಂ ನಿರ್ಮಿಸಲು ಚಿಂತನೆ ನಡೆಸಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು. ಶ್ರೀ ರಾಜರಾಮ ರಾವ್ ಮಿಯಪದವು ಇವರು ನಿರೂಪಿಸಿ, ಜಗದೀಶ ಕೆ. ಕೂಡ್ಲು ವಂದಿಸಿದರು .ಸಂಜೆ 4 ಗಂಟೆಗೆ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದವರಿಂದ ಶ್ರೀರಾಮ ಪಟ್ಟಾಭಿಷೇಕ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು.

ಚೆಸ್ ಟೂರ್ನಿ – ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಧನುಷ್ ರಾಮ್ ಚಾಂಪಿಯನ್

ಪುತ್ತೂರು ತಾಲೂಕು ಚೆಸ್ ಅಸೋಸಿಯೇಷನ್ (ರಿ) ಮತ್ತು ಒಕ್ಕಲಿಗ ಗೌಡ ಸೇವಾ ಸಂಘ(ರಿ)  ಇವರ ಜಂಟಿ ಆಶ್ರಯದಲ್ಲಿ  ತೆಂಕಿಲ ಒಕ್ಕಲಿಗ ಸಭಾಭವನದಲ್ಲಿ ಜೂನ್ 24ರಿಂದ 26ರ ವರೆಗೆ ನಡೆದ 17ರ ವಯೋಮಾನದ ಕರ್ನಾಟಕ ರಾಜ್ಯ ಮುಕ್ತ ಫಿಡೆ ರೇಟೆಡ್ ಚೆಸ್ ಟೂರ್ನಿ ನಡೆದಿತ್ತು.

ಇದರಲ್ಲಿ 162 ಸ್ಪರ್ಧಿಗಳು ಭಾಗವಹಿಸಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಧನುಷ್ ರಾಮ್. ಎಂ ( ಶ್ರೀ ದಿನೇಶ್ ಪ್ರಸನ್ನ ಮತ್ತು ಶ್ರೀಮತಿ ಉಮಾ.ಡಿ. ಪ್ರಸನ್ನ ಇವರ ಪುತ್ರ) ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಇವರು ಜುಲೈ ತಿಂಗಳ 1ರಿಂದ 9ರವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾನೆ.

ಮನೆ-ಮನೆಗಳಲ್ಲಿ ಭಜನಾ ಸೇವೆ

ಯುವವಾಹಿನಿ (ರಿ) ಬಜಪೆ ಘಟಕವು ಈ ಸಾಲಿನಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ತತ್ವವನ್ನು ಅನುಷ್ಠಾನಕ್ಕೆ ತರುವರೇ ಮನೆ-ಮನೆಗಳಲ್ಲಿ ಭಜನಾ ಸೇವೆಯನ್ನು ಆಯೋಜಿಸಲು ನಿರ್ಧರಿಸಿರುವ ಪ್ರಕಾರ, ನಮ್ಮ ಘಟಕದ ಸದಸ್ಯರಿಂದ ಪ್ರಥಮ ಭಜನಾ ಸೇವೆಯು ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀಯುತ ವಿನೋದರ ಪೂಜಾರಿಯವರ ಮನೆಯಲ್ಲಿ ನೇರವೆರಿಸಲಾಯಿತು. 


ಶ್ರೀ ನಾರಾಯಣ ಪೂಜಾರಿ, ಮೊಕ್ತೇಸರರು, ಶ್ರೀ ಕ್ಷೇತ್ರ ಸುಂಕದಕಟ್ಟೆ ಇವರು ದೀಪ ಬೆಳಗಿಸುವುದರ ಮೂಲಕ ಭಜನಾ ಸೇವೆಗೆ ಚಾಲನೆ ನೀಡಿದರು. 


ಘಟಕದ ಅಧ್ಯಕ್ಷರಾದ ಶ್ರೀಮತಿ ಉಷಾ ಶಿವಾನಂದ್, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀ ನಿರಂಜನ್ ಕರ್ಕೇರ ಹಾಗೂ ಮಾಜಿ ಅಧ್ಯಕ್ಷರುಗಳ ಮತ್ತು ಸದಸ್ಯರ ಉಪಸ್ಥಿತಿಯೊಂದಿಗೆ ಅತ್ಯಂತ ಅರ್ಥಪೂರ್ಣವಾಗಿ ನಡೆದ ಭಜನಾ ಸೇವೆಯು ಶ್ರೀ ಗುರುವರ್ಯರಿಗೆ ಪೂಜೆಯನ್ನು ನೆರವೇರಿಸಿ ಮಂಗಳ ಹಾಡಿನೊಂದಿಗೆ ಸಂಪನ್ನಗೊಂಡಿತು. 


ಶ್ರೀಯುತ ವಿನೋದರ ಪೂಜಾರಿ ಮತ್ತು ಮನೆಯವರು ಸದಸ್ಯರಿಗೆ ಊಟೋಪಚಾರದ ವ್ಯವಸ್ಥೆ ಮಾಡಿದ್ದರು.

ವೇದಾಂತ ತರಬೇತಿ ಶಿಬಿರ – ಕನ್ನಡ ಭಾಷೆಯಲ್ಲಿ

ಕೋಲಾರದ ಚಿನ್ಮಯ ಸಾಂದೀಪನಿ ಆಯೋಜಿಸುತ್ತಿರುವ ಎರಡು ವರ್ಷಗಳ ಕೋರ್ಸ್ ‘ವೇದಾಂತ ತರಬೇತಿ ಶಿಬಿರ’ ಅಧ್ಯಯನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವೇದಾಂತದಲ್ಲಿ ಆಸಕ್ತಿಯಿರುವ 21ರಿಂದ 32 ವರ್ಷದ ವರೆಗಿನ ಕಲಿಕಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31.08.2022. ವಿವರಗಳಿಗೆ ಚಿತ್ರ ನೋಡಿ 

ಯಕ್ಷಗಾನ ಗಾನಸಂಹಿತೆ ಪುಸ್ತಕ ಬಿಡುಗಡೆ

ಉಡುಪಿ : ಪೂರ್ಣಪ್ರಜ್ಷಾ ಅಡಿಟೋರಿಯಂನಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿದ್ದ ಬಡಗು ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಹಿರಿಯ ಭಾಗವತ ವಿದ್ವಾನ್ ಗಣಪತಿ ಭಟ್ ಅವರು ರಚಿಸಿದ ಕೃತಿ ಯಕ್ಷಗಾನ ‘ಗಾನಸಂಹಿತೆ’ಯನ್ನು ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿ ಮಾತನಾಡುತ್ತಾ ಇದೊಂದು ಅಪೂರ್ವ ಕೃತಿಯಾಗಿದೆ, ಯಕ್ಷಗಾನ ಗುರುಗಳಿಗೆ, ಕಲಾವಿದರಿಗೆ ತುಂಬಾ ಉಪಯುಕ್ತ ಗ್ರಂಥ ಎಂದು ಅಭಿಪ್ರಾಯ ಪಟ್ಟರು.

ಸ್ವಾಮೀಜಿಯವರು ವಿದ್ವಾನ್ ಗಣಪತಿ ದಂಪತಿಗಳಿಗೆ ಅನುಗ್ರಹ ಮಂತ್ರಾಕ್ಷತೆ ನೀಡಿ ಹರಸಿದರು. ಕಲಾರಂಗದ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾರಾಯಣ ಎಮ್. ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

ಮಾಳವಿಕಾ ಪರಿಣಯ – ಜುಲೈ 8ಕ್ಕೆ ಮಂಗಳೂರಿನಲ್ಲಿ ಯಕ್ಷಗಾನ

ದಿನಾಂಕ 08.07.2022ರಂದು ಮಂಗಳೂರಿನ ಶ್ರೀ ಮಂಗಳಾದೇವಿ  ದೇವಸ್ಥಾನದಲ್ಲಿ ಶ್ರೀ ಯಕ್ಷಗಾನ ಕಲಾಮೇಳ ಶಿರಸಿ ಇವರಿಂದ ‘ಮಾಳವಿಕಾ ಪರಿಣಯ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಪ್ರದರ್ಶನ ಸಂಜೆ ಘಂಟೆ 6ರಿಂದ ರಾತ್ರಿ ಘಂಟೆ 10ರ ತನಕ ನಡೆಯಲಿದೆ. ಪ್ರದರ್ಶನದಲ್ಲಿ ಬಡಗುತಿಟ್ಟಿನ ಹೆಸರಾಂತ ಕಲಾವಿದರು ಭಾಗವಹಿಸಲಿದ್ದಾರೆ.

ವಿವರಗಳಿಗೆ ಕರಪತ್ರದ ಚಿತ್ರ ನೋಡಿ