ಅಂಬಲಪಾಡಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿಯ ಆಶ್ರಯದಲ್ಲಿ 18 ದಿನಗಳಿಂದ ಜರಗಿದ ಯಕ್ಷಗಾನ ಶಿಬಿರದ ಸಮಾರೋಪ ಮೇ 1ರಂದು ಶ್ರೀ ಜನಾರ್ದನ ಮಂಟಪದಲ್ಲಿ ಎಲ್.ಐ.ಸಿ.ಅಧಿಕಾರಿಗಳಾದ ಎಸ್.ಕೆ.ಆನಂದ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಅಭ್ಯಾಗತರಾಗಿ ರಂಗಭೂಮಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ಚಂದ್ರ ಕುತ್ಪಾಡಿ,ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್.ಗಂಗಾಧರ ರಾವ್,ಉದ್ಯಮಿ ವಿಶ್ವನಾಥ ಶೆಣೈ,ನಾರಾಯಣ ಎಮ್.ಹೆಗಡೆ ಭಾಗವಹಿದರು.
ಮಂಡಳಿಯ ಅಧ್ಯಕ್ಷ ಕೆ.ಅಜಿತ್ ಕುಮಾರ್ ಸ್ವಾಗತಿದರು.ನಟರಾಜ ಉಪಾಧ್ಯಾಯ ನಿರ್ವಹಿದ ಕಾರ್ಯಕ್ರಮದಲ್ಲಿ ಮುರಲಿ ಕಡೆಕಾರ್ ಪ್ರಸ್ತಾವನೆಗೈದರು.
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಳದ ಸಭಾಭವನದಲ್ಲಿ ಜರಗಿದ ಶ್ರೀ ಅನುಗ್ರಹ ಪಾರೆಂಕಿ ಪ್ರಾಯೋಜಕತ್ವದ ಕಲಾವಿದರ ಸನ್ಮಾನ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಅಧ್ಯಕ್ಷರಾದ ದಿವಾಕರ ಆಚಾರ್ಯ ಗೇರುಕಟ್ಟೆ ವಹಿಸಿದರು.
ಕುಂಬ್ಳೆ ಶ್ರೀಧರ ರಾವ್, ಪಾತಾಳ ಅಂಬಾಪ್ರಸಾದ್, ಜಿನೇಂದ್ರ ಜೈನ್, ಮಹಾಲಿಂಗೇಶ್ವರ ಭಟ್, ಹರೀಶ್ ಆಚಾರ್ಯ, ಶ್ರೀಪತಿ ಭಟ್ ಮತ್ತು ಗಂಗಾಧರ ಟೈಲರ್ ಇವರನ್ನು ಸನ್ಮಾನಿಸಲಾಯಿತು.
ಬಿ.ಸುಬ್ರಮಣ್ಯ ರಾವ್, ಪ್ರಭಾಕರ ಆಳ್ವ, ಪದ್ಮನಾಭ ಕುಲಾಲ್, ಗುರುಮೂರ್ತಿ ಅಮ್ಮಣ್ಣಾಯ ತಿಲಕಾಕ್ಷ, ವಿಜಯಕುಮಾರ್ ಕೊಯ್ಯೂರು, ಶಿವರಾಂ, ಕಿಶೋರ್, ದೇವಿಪ್ರಸಾದ್, ಕಾರ್ತಿಕ್ ಬಳ್ಳಮಂಜ ಇವರನ್ನು ಕಲಾ ಸೇವೆಗಾಗಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಕುಂಬ್ಳೆ ಶ್ರೀಧರ ರಾವ್ ಉದ್ಘಾಟಿಸಿದರು. ಸೌಹಾರ್ದ ಯಕ್ಷಗಾನ ಸಮಿತಿಯ ಅಧ್ಯಕ್ಷ ಉಮೇಶ ಶೆಣೈ ಎನ್, ಗೋಪಾಲ್ ಶೆಟ್ಟಿ ಕಳೆಂಜ, ಗುಡ್ಡಪ್ಪ ಬಲ್ಯ ಉಪಸ್ಥಿತರಿದ್ದರು.
ಶ್ರೀ ಅನುಗ್ರಹ ಸಂಜೀವ ಸ್ವಾಗತಿಸಿ ಹರೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬಳಿಕ “ಶ್ರೀ ಕದಂಬ ಕೌಶಿಕೆ” ತಾಳಮದ್ದಲೆ ಜರಗಿತು.
ಯಕ್ಷಗಾನ ರಂಗದ ಸರ್ವಾಂಗ ಸಾಧಕ,ರಾಜ್ಯ- ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮೇರುನಟ ದಿ.ಅಳಿಕೆ ರಾಮಯ್ಯ ರೈ ಅವರ ಹೆಸರಿನಲ್ಲಿ ಬೆಂಗಳೂರಿನ ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ನೀಡುವ ಅಳಿಕೆ ಯಕ್ಷ ಸಹಾಯ ನಿಧಿಗೆ 2020 – 22ನೇ ಸಾಲಿನಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆ ಆಯ್ಕೆಯಾಗಿದ್ದಾರೆ.
ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿ, ಮಾಜಿ ಅಕಾಡೆಮಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಕಲಾವಿದ ಉಮೇಶ ಶೆಟ್ಟಿ ಉಬರಡ್ಕ ಅವರನ್ನೊಳಗೊಂಡ ಸಲಹಾ ಸಮಿತಿಯ ತೀರ್ಮಾನದಂತೆ ಸಂತ್ರಸ್ತ ಕಲಾವಿದರಿಗೆ ಸಹಾಯ ನಿಧಿ ನೀಡಲಾಗುವುದೆಂದು ಟ್ರಸ್ಟ್ ಸಂಚಾಲಕ ಅಳಿಕೆ ದುರ್ಗಾ ಪ್ರಸಾದ್ ರೈ ಹೇಳಿದ್ದಾರೆ.
ಯಕ್ಷ ನಿಧಿಯು ರೂ. 20,000/- ನಗದು ಮತ್ತು ಗೌರವ ಫಲಕಗಗಳನ್ನೊಳಗೊಂಡಿದೆ.
ಮೇ.3ರಂದು ನಿಧಿಪ್ರದಾನ: ಕಟೀಲು,ಕುಂಟಾರು, ಪುತ್ತೂರು, ಹೊಸನಗರ, ಎಡನೀರು, ಹನುಮಗಿರಿ, ಬಪ್ಪನಾಡು ಮುಂತಾದ ತೆಂಕುತಿಟ್ಟಿನ ಪ್ರಸಿದ್ಧ ಮೇಳಗಳಲ್ಲಿ 32ವರ್ಷ ತಿರುಗಾಟ ನಡೆಸಿದ ಜಯಾನಂದ ಸಂಪಾಜೆ ದೇವೇಂದ್ರ, ರಕ್ತಬೀಜ, ಇಂದ್ರಜಿತು , ಹಿರಣ್ಯಾಕ್ಷ ,ಅರುಣಾಸುರ, ಕರ್ಣ, ಅರ್ಜುನ, ಕೃಷ್ಣ, ವಿಷ್ಣು, ಈಶ್ವರ ಇತ್ಯಾದಿ ಧೀರೋದಾತ್ತ ಪಾತ್ರಗಳಿಗೆ ಹೆಸರಾಗಿದ್ದಾರೆ.
ಇತ್ತೀಚೆಗೆ ಬಪ್ಪನಾಡು ಮೇಳದ ರಂಗಸ್ಥಳದಲ್ಲಿ ಪ್ರದರ್ಶನದ ನಡುವೆ ಕುಸಿದು ಕಾಲು ನೋವಿಗೆ ತುತ್ತಾದ ಅವರು ತಿರುಗಾಟ ಮುಂದುವರಿಸಲಾಗದೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ಮೇ 3, 2022 ರಂದು ಮಂಗಳವಾರ ಸುಳ್ಯದ ಕಲ್ಲುಗುಂಡಿಯಲ್ಲಿರುವ ಜಯಾನಂದ ಸಂಪಾಜೆ ಅವರ ನಿವಾಸಕ್ಕೆ ತೆರಳಿ ಗೃಹ ಸನ್ಮಾನದೊಂದಿಗೆ ನಿಧಿ ಸಮರ್ಪಣೆ ಮಾಡಲಾಗುವುದು ಎಂದು ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ಸಂಚಾಲಕ ಅಳಿಕೆ ದುರ್ಗಾಪ್ರಸಾದ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಹೊರನಾಡಿನಲ್ಲಿ ಯಕ್ಷಗಾನ ಕಲೆಯ ವಿವಿಧ ಆಯಾಮಗಳಲ್ಲಿ ಮೌಲಿಕ ಕೆಲಸ ಮಾಡಿದ ಅಜೆಕಾರು ಕಲಾಭಿಮಾನಿ ಬಳಗ ಮುಂಬೈ ಮಹಾನಗರದಲ್ಲಿ ಮನೆಮಾತಾಗಿದೆ. ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ನೇತೃತ್ವದಲ್ಲಿ ಯಕ್ಷಗಾನ ಪ್ರದರ್ಶನ, ಸರಣಿ ತಾಳಮದ್ದಳೆ ಕೂಟಗಳಲ್ಲದೆ ಕಲಾವಿದರ ಸನ್ಮಾನ, ಗ್ರಂಥ ಪ್ರಕಟಣೆ, ಬಡ ಕಲಾವಿದರಿಗೆ ನೆರವು, ಯಕ್ಷರಕ್ಷಾ ಪ್ರಶಸ್ತಿ ಪ್ರದಾನ ಇತ್ಯಾದಿ ಮಾನವೀಯ ಕಾರ್ಯಗಳಿಂದ ಅದು ತುಳುನಾಡಿನ ಸಂಸ್ಕೃತಿಯನ್ನು ಮೆರೆಸಿದೆ.
ಇದೀಗ ಎರಡು ದಶಕಗಳ ಬಳಿಕ ಹುಟ್ಟೂರಿನಲ್ಲಿ ಬಳಗದ ಸ್ಥಳೀಯ ಶಾಖೆ ವಿಧ್ಯುಕ್ತವಾಗಿ ಆರಂಭವಾಗುತ್ತಿರುವುದು ಶ್ಲಾಘನೀಯ’ ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಯಕ್ಷಗಾನ ವಿದ್ವಾಂಸ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.
ಅಜೆಕಾರು ಜ್ಯೋತಿ ಪ್ರೌಢಶಾಲಾ ಮೈದಾನದಲ್ಲಿ ಮುಂಬೈ ಅಜೆಕಾರು ಕಲಾಭಿಮಾನಿ ಬಳಗ ವತಿಯಿಂದ ಜರಗಿದ ಅಜೆಕಾರು ಶಾಖೆಯ ವಿಧ್ಯುಕ್ತ ಉದ್ಘಾಟನೆ ಮತ್ತು ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ದೀಪ ಬೆಳಗಿ ಬಳಗವನ್ನು ಉದ್ಘಾಟಿಸಿದರು.
ಕಲಾವಿದರ ಸನ್ಮಾನ – ಬಯಲಾಟ: ಸಮಾರಂಭದಲ್ಲಿ ಪಾವಂಜೆ ಮೇಳದ ಕಲಾವಿದರಾದ ಮೋಹನ ಬೆಳ್ಳಿಪ್ಪಾಡಿ ಮತ್ತು ಪ್ರಶಾಂತ ಶೆಟ್ಟಿ ವಗೆನಾಡು ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಸ್ಟೋನ್ ಕ್ರಷರ್ ಮತ್ತು ಕ್ವಾರಿ ಮಾಲಕರ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ, ಖ್ಯಾತ ಭಾಗವತ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಮತ್ತು ಕಾರ್ಕಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ರತ್ನಾಕರ ಅಮೀನ್ ಅತಿಥಿಗಳಾಗಿ ಶುಭ ಹಾರೈಸಿದರು.
ಯಕ್ಷ ನೃತ್ಯ ಶಿಬಿರ: ಸಭೆಯ ಅಧ್ಯಕ್ಷತೆ ವಹಿಸಿದ ಅಜೆಕಾರು ಕಲಾಭಿಮಾನಿ ಬಳಗ ಅಜೆಕಾರು ಶಾಖೆಯ ಅಧ್ಯಕ್ಷ ವಿಜಯ ಶೆಟ್ಟಿ ಶುಭವಿ ಮಾತನಾಡಿ ‘ಬಳಗದ ವತಿಯಿಂದ ಮೇ 1ರಿಂದ 5ರ ವರೆಗೆ ಅಜೆಕಾರು ಶ್ರೀರಾಮ ಮಂದಿರದಲ್ಲಿ ಪ್ರಥಮ ಹಂತದ ಮಹಿಳೆಯರಿಗಾಗಿ ಉಚಿತ ಯಕ್ಷಗಾನ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು ಆಸಕ್ತರು ಭಾಗವಹಿಸಬಹುದು’ ಎಂದು ತಿಳಿಸಿದರು
ಅಜೆಕಾರು ಕಲಾಭಿಮಾನಿ ಬಳಗ ಮುಂಬೈ ಇದರ ಸಂಸ್ಥಾಪನಾ ಅಧ್ಯಕ್ಷ, ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಹರೀಶ್ ನಾಯಕ ಅಜೆಕಾರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಬಳಿಕ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಕ್ಷೇತ್ರ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಜರಗಿತು.