ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಇಂದಿನ(01.122021) ಯಕ್ಷಗಾನ ಪ್ರದರ್ಶನ ಶ್ರೀ ಕ್ಷೇತ್ರ ಧರ್ಮಸ್ಥಳದ ಯೂಟ್ಯೂಬ್ ಚಾನೆಲಿನಲ್ಲಿ ನೇರಪ್ರಸಾರ ಆಗುತ್ತಿದೆ. ಲಿಂಕ್ ಕೆಳಗಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟ ಆರಂಭವಾಗಿವೆ. ಈ ಬಾರಿಯೂ ಮೇಳಗಳ ಕಲಾವಿದರ ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳು, ಸ್ಥಾನಪಲ್ಲಟಗಳು ಗೋಚರಿಸಿವೆ. ಎಲ್ಲಾ ಆರು ಮೇಳಗಳ ಕಲಾವಿದರ ವಿವರಗಳು ಈ ಕೆಳಗಿನಂತಿದೆ.
(ವಿ.ಸೂ. ಕೊನೆಯ ಕ್ಷಣದ ಬದಲಾವಣೆಗಳನ್ನು ಹೊರತುಪಡಿಸಿ. ಇತ್ತೀಚೆಗಿನ ಬದಲಾವಣೆಗಳನ್ನು ಅಪ್ ಡೇಟ್ ಮಾಡಲಾಗುವುದು)
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಇಂದಿನ(30.112021) ಯಕ್ಷಗಾನ ಪ್ರದರ್ಶನ ಶ್ರೀ ಕ್ಷೇತ್ರ ಧರ್ಮಸ್ಥಳದ ಯೂಟ್ಯೂಬ್ ಚಾನೆಲಿನಲ್ಲಿ ನೇರಪ್ರಸಾರ ಆಗುತ್ತಿದೆ. ಲಿಂಕ್ ಕೆಳಗಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಇಂದಿನ(29.112021) ಯಕ್ಷಗಾನ ಪ್ರದರ್ಶನ ಶ್ರೀ ಕ್ಷೇತ್ರ ಧರ್ಮಸ್ಥಳದ ಯೂಟ್ಯೂಬ್ ಚಾನೆಲಿನಲ್ಲಿ ನೇರಪ್ರಸಾರ ಆಗುತ್ತಿದೆ. ಲಿಂಕ್ ಕೆಳಗಿದೆ.
ಕಲಾಸಂಗಮ ಚಾರಿಟೇಬಲ್ ಟ್ರಸ್ಟಿನ ಅಂಗಸಂಸ್ಥೆಯಾದ ಶ್ರೀ ಯಕ್ಷಗಾನ ಕಲಾಮೇಳ, ಶಿರಸಿಯು ತನ್ನ ಈ ವರ್ಷದ ತಿರುಗಾಟವನ್ನು ಆರಂಭಿಸಲು ಅಣಿಯಾಗಿದೆ. ಈ ವರ್ಷದ ಪ್ರಥಮ ಪ್ರದರ್ಶನ ‘ಮಾಳವಿಕಾ ಪರಿಣಯ’ ಎಂಬ ನೂತನ ಪ್ರಸಂಗದೊಂದಿಗೆ ದಿನಾಂಕ 05.12.2021ರ ಭಾನುವಾರದಂದು ಶಿರಸಿಯ ಲಯನ್ಸ್ ಸಭಾಂಗಣದಲ್ಲಿ (ಸಂಜೆ ಘಂಟೆ 5ರಿಂದ 10ರ ವರೆಗೆ) ಆರಂಭವಾಗಲಿದೆ ಎಂದು ಮೇಳದ ವ್ಯವಸ್ಥಾಪಕರೂ ಕಲಾಸಂಗಮ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರೂ ಆಗಿರುವ ಶ್ರೀ ಕೇಶವ ಹೆಗಡೆ ಮಂಗಳೂರು (ನಾಗರಕುರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವರ್ಷದ ಹೊಸ ಪ್ರಸಂಗ ‘ಮಾಳವಿಕಾ ಪರಿಣಯ’ ಎಂಬ ಕಥಾನಕವು ಮಹಾಕವಿ ಕಾಳಿದಾಸ ವಿರಚಿತ “ಮಾಳವಿಕಾಗ್ನಿಮಿತ್ರಮ್” ಎಂಬ ಸಂಸ್ಕೃತ ನಾಟಕದ ಕಥಾ ಭಾಗವಾಗಿದೆ. ಈ ಕತೆಯನ್ನು ಯಕ್ಷಗಾನಕ್ಕೆ ಅಳವಡಿಸಿದವರು ಶ್ರೀ ಕೇಶವ ಹೆಗಡೆ ಮಂಗಳೂರು (ನಾಗರಕುರ). ಪ್ರಸಂಗದ ಪದ್ಯ ರಚನೆಯನ್ನು ತೆಂಕು ಬಡಗಿನ ಕಲಾವಿದ ಎಂ.ಕೆ. ರಮೇಶ ಆಚಾರ್ಯ ಅವರು ಮಾಡಿದ್ದಾರೆ. ಶ್ರೀ ಯಕ್ಷಗಾನ ಕಲಾಮೇಳ, ಶಿರಸಿಯು ಉತ್ಸಾಹಿ ಕಲಾವಿದರನ್ನೊಳಗೊಂಡ ತಂಡವಾಗಿದೆ. ಶ್ರೀ ಕೇಶವ ಹೆಗಡೆ ಮಂಗಳೂರು ಅವರ ಸಾರಥ್ಯದಲ್ಲಿ ತಿರುಗಾಟಕ್ಕೆ ಹೊರಟು ನಿಂತಿರುವ ಮೇಳಕ್ಕೆ ಕಲಾಭಿಮಾನಿಗಳು ಶುಭ ಹಾರೈಸಿದ್ದಾರೆ.
ಇಂದು ಶ್ರೀ ಕ್ಷೇತ್ರ ಕಟೀಲಿನಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಆರೂ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಪ್ರಥಮ ಸೇವೆಯಾಟ ನಡೆಯುತ್ತಿದೆ. ಇದು ನಮ್ಮ ಕುಡ್ಲ ಚಾನೆಲಿನಲ್ಲಿ ನೇರ ಪ್ರಸಾರಗೊಳ್ಳುತ್ತಿದೆ. ಈ ಕಾರ್ಯಕ್ರಮದ ಯೂಟ್ಯೂಬ್ ಲಿಂಕ್ ಇಲ್ಲಿದೆ.